AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಗಲಭೆ: ಈ ವ್ಯಕ್ತಿಯಿಂದ ಜೆಎನ್​ಯು ವಿದ್ಯಾರ್ಥಿಗೆ ಹೋಗಿತ್ತು ಒಂದು ಸೂಚನೆ..ಪೊಲೀಸರು ಬಿಚ್ಚಿಟ್ಟ ಸ್ಫೋಟಕ ಮಾಹಿತಿ

ಗಲಭೆಯನ್ನು ಹೆಚ್ಚಿಸಲು ಈ ರಸ್ತೆ ತಡೆ ಪ್ರತಿಭಟನೆ ಒಂದು ಪೂರ್ವ ಯೋಜಿತ ಪಿತೂರಿಯಾಗಿತ್ತು. ಅದಕ್ಕಾಗಿ ಯಾದವ್​, ಇಮಾಮ್​ ಮತ್ತು ಜೆಎನ್​ಯುದ ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್​ ಸೇರಿ ಸಾಮಾಜಿಕ ಜಾಲತಾಣಗಳ ಮೂಲಕ ಮೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ ಗಲಭೆ: ಈ ವ್ಯಕ್ತಿಯಿಂದ ಜೆಎನ್​ಯು ವಿದ್ಯಾರ್ಥಿಗೆ ಹೋಗಿತ್ತು ಒಂದು ಸೂಚನೆ..ಪೊಲೀಸರು ಬಿಚ್ಚಿಟ್ಟ ಸ್ಫೋಟಕ ಮಾಹಿತಿ
ಯೋಗೇಂದ್ರ ಯಾದವ್
Lakshmi Hegde
|

Updated on: Nov 28, 2020 | 8:27 PM

Share

ದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ಈಶಾನ್ಯ ದೆಹಲಿಯಲ್ಲಿ ಫೆಬ್ರವರಿಯಲ್ಲಿ ಅದೆಷ್ಟು ಹಿಂಸಾತ್ಮಕ ರೂಪ ಪಡೆದುಕೊಂಡಿತ್ತು ಎಂಬುದು ಗೊತ್ತೇ ಇದೆ. ಇದಕ್ಕೆ ಸಂಬಂಧಪಟ್ಟಂತೆ ಮತ್ತೊಂದು ಹೊಸ ವಿಚಾರವನ್ನು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ಪೂರಕ ಚಾರ್ಜ್​ಶೀಟ್​​ನಲ್ಲಿ ಬಹಿರಂಗಪಡಿಸಿದ್ದಾರೆ.

ಅಂದು ನಡೆದ ರಸ್ತೆ ತಡೆಯ ಹಿಂದೆ ಸ್ವರಾಜ್​ ಅಭಿಯಾನ ಮುಖಂಡ ಯೋಗೇಂದ್ರ ಯಾದವ್​ ಕೈವಾಡವಿದೆ. ರೋಡ್​ ಜಾಮ್​ ಮಾಡಲು ಜಾಮಿಯಾ ಮಿಲಿಯಾ ಇಸ್ಲಾಮಿಯಾ, ಅಲಿಘಡ್​ ಮುಸ್ಲಿಂ ಯೂನಿವರ್ಸಿಟಿ ಮತ್ತು ದಹಲಿ ಯೂನಿವರ್ಸಿಟಿಯ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಯೋಗೇಂದ್ರ ಯಾದವ್, ಜವಾಹರ್​ಲಾಲ್​ ನೆಹರೂ ವಿಶ್ವವಿದ್ಯಾಲಯದ ಪಿಎಚ್​ಡಿ ವಿದ್ಯಾರ್ಥಿ ಶಾರ್ಜೀಲ್​ ಇಮಾಮ್​ಗೆ ಸೂಚನೆ ನೀಡಿದ್ದರು ಎಂದು ಪೊಲೀಸರು, ಹೆಚ್ಚುವರಿ ಸೆಷನ್ಸ್​ ನ್ಯಾಯಾಧೀಶ ಅಮಿತಾಬ್​ ರಾವತ್​ ಗೆ ಸಲ್ಲಿಸಿದ ಚಾರ್ಜ್​ಶೀಟ್​ನಲ್ಲಿ ಸ್ಪಷ್ಟಪಡಿಸಿದ್ದಾರೆ.

ಗಲಭೆಯನ್ನು ಹೆಚ್ಚಿಸಲು ಈ ರಸ್ತೆ ತಡೆ ಪ್ರತಿಭಟನೆ ಒಂದು ಪೂರ್ವ ಯೋಜಿತ ಪಿತೂರಿಯಾಗಿತ್ತು. ಅದಕ್ಕಾಗಿ ಯಾದವ್​, ಇಮಾಮ್​ ಮತ್ತು ಜೆಎನ್​ಯುದ ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್​ ಸೇರಿ ಸಾಮಾಜಿಕ ಜಾಲತಾಣಗಳ ಮೂಲಕ ಮೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿದ್ದರು. ಈ ರಸ್ತೆ ತಡೆ ಪ್ರತಿಭಟನೆ ಮುಂದೆ ಗಲಭೆ ಹಿಂಸಾತ್ಮಕ ರೂಪ ಪಡೆದುಕೊಳ್ಳಲು ಪ್ರಮುಖ ಕಾರಣವಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಇಮಾಮ್​ ಹಾಗೂ ಖಾಲಿದ್​ ಸದ್ಯ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ದೆಹಲಿ ಗಲಭೆಗೆ ಸಂಬಂಧಪಟ್ಟ ಇನ್ನೂ ದೊಡ್ಡದೊಡ್ಡ ವ್ಯಕ್ತಿಗಳನ್ನು ಬೆಳಕಿಗೆ ತರಲಾಗುವುದು. ತನಿಖೆ ಮುಂದುವರಿಯುತ್ತಿದೆ ಎಂದು ಪೊಲೀಸರು ಹೇಳಿಕೊಂಡಿದ್ದಾರೆ.

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ