AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಗಲಭೆ: ಈ ವ್ಯಕ್ತಿಯಿಂದ ಜೆಎನ್​ಯು ವಿದ್ಯಾರ್ಥಿಗೆ ಹೋಗಿತ್ತು ಒಂದು ಸೂಚನೆ..ಪೊಲೀಸರು ಬಿಚ್ಚಿಟ್ಟ ಸ್ಫೋಟಕ ಮಾಹಿತಿ

ಗಲಭೆಯನ್ನು ಹೆಚ್ಚಿಸಲು ಈ ರಸ್ತೆ ತಡೆ ಪ್ರತಿಭಟನೆ ಒಂದು ಪೂರ್ವ ಯೋಜಿತ ಪಿತೂರಿಯಾಗಿತ್ತು. ಅದಕ್ಕಾಗಿ ಯಾದವ್​, ಇಮಾಮ್​ ಮತ್ತು ಜೆಎನ್​ಯುದ ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್​ ಸೇರಿ ಸಾಮಾಜಿಕ ಜಾಲತಾಣಗಳ ಮೂಲಕ ಮೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ದೆಹಲಿ ಗಲಭೆ: ಈ ವ್ಯಕ್ತಿಯಿಂದ ಜೆಎನ್​ಯು ವಿದ್ಯಾರ್ಥಿಗೆ ಹೋಗಿತ್ತು ಒಂದು ಸೂಚನೆ..ಪೊಲೀಸರು ಬಿಚ್ಚಿಟ್ಟ ಸ್ಫೋಟಕ ಮಾಹಿತಿ
ಯೋಗೇಂದ್ರ ಯಾದವ್
Lakshmi Hegde
|

Updated on: Nov 28, 2020 | 8:27 PM

Share

ದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ ಈಶಾನ್ಯ ದೆಹಲಿಯಲ್ಲಿ ಫೆಬ್ರವರಿಯಲ್ಲಿ ಅದೆಷ್ಟು ಹಿಂಸಾತ್ಮಕ ರೂಪ ಪಡೆದುಕೊಂಡಿತ್ತು ಎಂಬುದು ಗೊತ್ತೇ ಇದೆ. ಇದಕ್ಕೆ ಸಂಬಂಧಪಟ್ಟಂತೆ ಮತ್ತೊಂದು ಹೊಸ ವಿಚಾರವನ್ನು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ಪೂರಕ ಚಾರ್ಜ್​ಶೀಟ್​​ನಲ್ಲಿ ಬಹಿರಂಗಪಡಿಸಿದ್ದಾರೆ.

ಅಂದು ನಡೆದ ರಸ್ತೆ ತಡೆಯ ಹಿಂದೆ ಸ್ವರಾಜ್​ ಅಭಿಯಾನ ಮುಖಂಡ ಯೋಗೇಂದ್ರ ಯಾದವ್​ ಕೈವಾಡವಿದೆ. ರೋಡ್​ ಜಾಮ್​ ಮಾಡಲು ಜಾಮಿಯಾ ಮಿಲಿಯಾ ಇಸ್ಲಾಮಿಯಾ, ಅಲಿಘಡ್​ ಮುಸ್ಲಿಂ ಯೂನಿವರ್ಸಿಟಿ ಮತ್ತು ದಹಲಿ ಯೂನಿವರ್ಸಿಟಿಯ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಲು ಯೋಗೇಂದ್ರ ಯಾದವ್, ಜವಾಹರ್​ಲಾಲ್​ ನೆಹರೂ ವಿಶ್ವವಿದ್ಯಾಲಯದ ಪಿಎಚ್​ಡಿ ವಿದ್ಯಾರ್ಥಿ ಶಾರ್ಜೀಲ್​ ಇಮಾಮ್​ಗೆ ಸೂಚನೆ ನೀಡಿದ್ದರು ಎಂದು ಪೊಲೀಸರು, ಹೆಚ್ಚುವರಿ ಸೆಷನ್ಸ್​ ನ್ಯಾಯಾಧೀಶ ಅಮಿತಾಬ್​ ರಾವತ್​ ಗೆ ಸಲ್ಲಿಸಿದ ಚಾರ್ಜ್​ಶೀಟ್​ನಲ್ಲಿ ಸ್ಪಷ್ಟಪಡಿಸಿದ್ದಾರೆ.

ಗಲಭೆಯನ್ನು ಹೆಚ್ಚಿಸಲು ಈ ರಸ್ತೆ ತಡೆ ಪ್ರತಿಭಟನೆ ಒಂದು ಪೂರ್ವ ಯೋಜಿತ ಪಿತೂರಿಯಾಗಿತ್ತು. ಅದಕ್ಕಾಗಿ ಯಾದವ್​, ಇಮಾಮ್​ ಮತ್ತು ಜೆಎನ್​ಯುದ ಮಾಜಿ ವಿದ್ಯಾರ್ಥಿ ನಾಯಕ ಉಮರ್ ಖಾಲಿದ್​ ಸೇರಿ ಸಾಮಾಜಿಕ ಜಾಲತಾಣಗಳ ಮೂಲಕ ಮೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿದ್ದರು. ಈ ರಸ್ತೆ ತಡೆ ಪ್ರತಿಭಟನೆ ಮುಂದೆ ಗಲಭೆ ಹಿಂಸಾತ್ಮಕ ರೂಪ ಪಡೆದುಕೊಳ್ಳಲು ಪ್ರಮುಖ ಕಾರಣವಾಯಿತು ಎಂದು ಪೊಲೀಸರು ಹೇಳಿದ್ದಾರೆ.

ಇಮಾಮ್​ ಹಾಗೂ ಖಾಲಿದ್​ ಸದ್ಯ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ. ದೆಹಲಿ ಗಲಭೆಗೆ ಸಂಬಂಧಪಟ್ಟ ಇನ್ನೂ ದೊಡ್ಡದೊಡ್ಡ ವ್ಯಕ್ತಿಗಳನ್ನು ಬೆಳಕಿಗೆ ತರಲಾಗುವುದು. ತನಿಖೆ ಮುಂದುವರಿಯುತ್ತಿದೆ ಎಂದು ಪೊಲೀಸರು ಹೇಳಿಕೊಂಡಿದ್ದಾರೆ.

Follow Us
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ