AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಝಾನ್ಸಿ ರೈಲು ನಿಲ್ದಾಣದ ಹೆಸರು ಬದಲಿಸಲು ಪ್ರಸ್ತಾವನೆ ಸಲ್ಲಿಸಿದ ಯೋಗಿ ಆದಿತ್ಯನಾಥ್ ಸರ್ಕಾರ

Jhansi Railway Station: ಯೋಗಿ ಆದಿತ್ಯನಾಥ್ ಸರ್ಕಾರದ ಪ್ರಸ್ತಾವನೆಯನ್ನು ರೈಲ್ವೆ ಸಚಿವಾಲಯವು ಅಂಚೆ ಇಲಾಖೆ ಮತ್ತು ಸರ್ವೆ ಆಫ್‌ ಇಂಡಿಯಾಕ್ಕೆ ರವಾನಿಸಿದೆ. ಅಲ್ಲಿ ದಾಖಲೆಗಳನ್ನು ಪರಿಶೀಲಿಸಿದ ನಂತರ ಈ ಹೆಸರಿನ ಯಾವುದೇ ನಿಲ್ದಾಣ ಅಥವಾ ಊರು ಇಲ್ಲ ಎನ್ನುವುದನ್ನು ಇಲಾಖೆಗಳು ದೃಢೀಕರಿಸಬೇಕಿದೆ.

ಝಾನ್ಸಿ ರೈಲು ನಿಲ್ದಾಣದ ಹೆಸರು ಬದಲಿಸಲು ಪ್ರಸ್ತಾವನೆ ಸಲ್ಲಿಸಿದ ಯೋಗಿ ಆದಿತ್ಯನಾಥ್ ಸರ್ಕಾರ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ (ಸಾಂದರ್ಭಿಕ ಚಿತ್ರ)
TV9 Web
| Edited By: sandhya thejappa|

Updated on:Aug 04, 2021 | 10:34 AM

Share

ಲಕ್ನೋ: ಹೆಸರು ಬದಲಾವಣೆಯ ಮೂಲಕವೇ ಸಾಕಷ್ಟು ಸುದ್ದಿ ಮಾಡಿರುವ ಯೋಗಿ ಆದಿತ್ಯನಾಥ್ ನಾಯಕತ್ವದ ಉತ್ತರ ಪ್ರದೇಶ ರಾಜ್ಯ ಸರ್ಕಾರ ಇದೀಗ ಝಾನ್ಸಿ ರೈಲು ನಿಲ್ದಾಣಕ್ಕೆ (Jhansi Railway Station) ಮರು ನಾಮಕರಣ ಮಾಡಲು ನಿರ್ಧರಿಸಿದೆ. ಝಾನ್ಸಿ ರೈಲು ನಿಲ್ದಾಣದ ಹೆಸರನ್ನು ವೀರಾಂಗನಾ ಲಕ್ಷ್ಮೀಬಾಯಿ ರೈಲುನಿಲ್ದಾಣ (Veerangana Laxmibai Railway Station) ಎಂದು ಬದಲಿಸಲು ತೀರ್ಮಾನಿಸಿರುವ ಯೋಗಿ ಆದಿತ್ಯನಾಥ್ ಸರ್ಕಾರ ಆ ಕುರಿತು ರೈಲ್ವೆ ಸಚಿವಾಲಯಕ್ಕೆ ಅಧಿಕೃತ ಪ್ರಸ್ತಾವನೆಯನ್ನೂ ಸಲ್ಲಿಸಿದೆ. ಆ ಮೂಲಕ 1857ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಬ್ರಿಟೀಷರ ವಿರುದ್ಧ ಹೋರಾಡಿದ, ಝಾನ್ಸಿ ರಾಣಿ ಎಂದೇ ಪ್ರಸಿದ್ಧಳಾಗಿರುವ ಲಕ್ಷ್ಮೀಬಾಯಿ ಹೆಸರನ್ನು ಉಳಿಸಿಕೊಂಡು ಝಾನ್ಸಿ ಹೆಸರಿನ ಬದಲಿಗೆ ವೀರಾಂಗನಾ ಲಕ್ಷ್ಮೀಬಾಯಿ ಎಂದು ಹೆಸರಿಸುವ (Rename) ನಿರ್ಧಾರ ಮಾಡಿದೆ.

ಯೋಗಿ ಆದಿತ್ಯನಾಥ್ ಸರ್ಕಾರದ ಪ್ರಸ್ತಾವನೆಯನ್ನು ರೈಲ್ವೆ ಸಚಿವಾಲಯವು ಅಂಚೆ ಇಲಾಖೆ ಮತ್ತು ಸರ್ವೆ ಆಫ್‌ ಇಂಡಿಯಾಕ್ಕೆ ರವಾನಿಸಿದೆ. ಅಲ್ಲಿ ದಾಖಲೆಗಳನ್ನು ಪರಿಶೀಲಿಸಿದ ನಂತರ ಈ ಹೆಸರಿನ ಯಾವುದೇ ನಿಲ್ದಾಣ ಅಥವಾ ಊರು ಇಲ್ಲ ಎನ್ನುವುದನ್ನು ಇಲಾಖೆಗಳು ದೃಢೀಕರಿಸಬೇಕಿದೆ. ಬಳಿಕ ರೈಲ್ವೆ ಸಚಿವಾಲಯದ ಶಿಫಾರಸು ಆಧರಿಸಿ ಗೃಹ ಸಚಿವಾಲಯವು ಹೆಸರು ಬದಲಾವಣೆ ಸಂಬಂಧ ಅಧಿಕೃತ ಅಧಿಸೂಚನೆ ಹೊರಡಿಸಬೇಕಿದೆ.

ಕೆಲದಿನಗಳ ಹಿಂದೆಯಷ್ಟೇ ವಾರಾಣಸಿಯ ಮಂಡೂದಿಹ್‌ ರೈಲು ನಿಲ್ದಾಣದ ಹೆಸರನ್ನು ಬನಾರಸ್‌ ರೈಲು ನಿಲ್ದಾಣ ಎಂದು ಬದಲಿಸಲಾಗಿದೆ. ಮುಘಲ್‌ಸರಾಯ್‌ ನಿಲ್ದಾಣಕ್ಕೆ 2018ನೇ ಇಸವಿಯಲ್ಲಿ ಪಂಡಿತ ದೀನ್‌ದಯಾಳ್‌ ಉಪಾಧ್ಯಾಯ ರೈಲು ನಿಲ್ದಾಣ ಎಂದು ಮರುನಾಮಕರಣ ಮಾಡಲಾಗಿದೆ. ಅಂತೆಯೇ, ಅಲಹಾಬಾದ್ ರೈಲು ನಿಲ್ದಾಣವನ್ನು ಪ್ರಯಾಗ್​ರಾಜ್​ ರೈಲು ನಿಲ್ದಾಣ ಎಂದು ಹೆಸರಿಸಲಾಗಿದೆ. ಆ ಪಟ್ಟಿಗೆ ಝಾನ್ಸಿ ರೈಲು ನಿಲ್ದಾಣ ಕೂಡಾ ಸೇರಲಿದ್ದು, ಒಪ್ಪಿಗೆ ಸಿಕ್ಕಿದಲ್ಲಿ ವೀರಾಂಗನಾ ಲಕ್ಷ್ಮೀಬಾಯಿ ರೈಲು ನಿಲ್ದಾಣ ಎಂದು ಮರುನಾಮಕರಣ ಆಗಲಿದೆ.

ಯೋಗಿ ಆಡಳಿತಕ್ಕೆ ಮೆಚ್ಚುಗೆ ಇತ್ತೀಚೆಗಷ್ಟೇ ಉತ್ತರಪ್ರದೇಶಕ್ಕೆ ಭೇಟಿ ನೀಡಿದ ಅಮಿತ್ ಶಾ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರನ್ನು ಹೊಗಳಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಉತ್ತರಪ್ರದೇಶವನ್ನು ಯೋಗಿ ಜೀ ಉನ್ನತ ಸ್ಥಾನಕ್ಕೆ ಒಯ್ದಿದ್ದಾರೆ. ನಾನು 2019ಕ್ಕೂ ಮೊದಲು ಸುಮಾರು 6ವರ್ಷ ಅನೇಕ ಬಾರಿ ಉತ್ತರಪ್ರದೇಶಕ್ಕೆ ಬರುತ್ತಿದ್ದೆ. 2019ಕ್ಕೂ ಮೊದಲಿನ ಯುಪಿ ಹೇಗಿತ್ತು ಎಂಬುದು ನನಗೆ ಸ್ಪಷ್ಟವಾಗಿ ಗೊತ್ತು. ಆದರೀಗ ಉತ್ತರ ಪ್ರದೇಶ ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಉನ್ನತ ಸ್ಥಾನದಲ್ಲಿದೆ. ಇದು ಸಿಎಂ ಯೋಗಿ ಆದಿತ್ಯನಾಥ್​ ಮತ್ತು ಅವರ ತಂಡದ ಶ್ರಮ ಎಂದು ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿ ಬರುವ ವರ್ಷ ವಿಧಾನಸಭೆ ಚುನಾವಣೆ ಇದೆ. ಅದರ ಬೆನ್ನಲ್ಲೇ ಅಲ್ಲಿ ನಾಯಕತ್ವ ಬದಲಾವಣೆ ಆಗಲಿದೆ ಎಂಬ ಮಾತುಗಳೂ ಕೇಳಿಬಂದಿದ್ದವು. ಆದರೆ ಇತ್ತೀಚೆಗೆ ಉತ್ತರಪ್ರದೇಶಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿಯವರೂ ಯೋಗಿ ಆದಿತ್ಯನಾಥ್​ರ ಆಡಳಿತವನ್ನು ಮನಸಾರೆ ಹೊಗಳಿದ್ದರು. ಬನಾರಸ್ ಹಿಂದು ವಿಶ್ವವಿದ್ಯಾಲಯದಲ್ಲಿ ಮಾತನಾಡುತ್ತಾ, ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್​ ಅವರು, ಕೊವಿಡ್​ 19 ನಿರ್ವಹಣೆಯನ್ನು ಉತ್ತಮವಾಗಿ ಮಾಡಿದ್ದಾರೆ. ಹಲವಾರು ಮಾಫಿಯಾಗಳು, ಉಗ್ರರ ಹುಟ್ಟಡಗಿಸಿದ್ದಾರೆ. ಈ ರಾಜ್ಯದಲ್ಲಿ ಮಹಿಳೆಯರು ಸುರಕ್ಷಿತವಾಗಿ ಇರುವಂಥ ವಾತಾವರಣ ಸೃಷ್ಟಿಸಲಾಗಿದೆ ಎಂದು ಹೇಳಿದ್ದರು.

ಇದನ್ನೂ ಓದಿ: ಅಮಿತ್​ ಶಾ ಉತ್ತರ ಪ್ರದೇಶ ಭೇಟಿ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ರನ್ನು ಹೊಗಳಿದ ಗೃಹ ಸಚಿವ 

ಗುಜರಾತ್​ನಲ್ಲಿ ಡ್ರ್ಯಾಗನ್​ ಫ್ರೂಟ್​ಗೆ ಮರುನಾಮಕರಣ; ಇನ್ಮುಂದೆ ಈ ಹಣ್ಣು ‘ಕಮಲಂ’ ಎಂದ ಮುಖ್ಯಮಂತ್ರಿ

(Yogi Adityanath Government proposes renaming of Jhansi Railway Station as Veerangana Laxmibai Railway Station)

Published On - 10:28 am, Wed, 4 August 21

Follow Us
Web contact
Web contact

TV9 Kannada

Read More
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ