AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh Budget: ಯೋಗಿ ಆದಿತ್ಯನಾಥ್ ಸರ್ಕಾರದಿಂದ 6.1 ಲಕ್ಷ ಕೋಟಿ ಬಜೆಟ್; ಮಹಿಳಾ ಸುರಕ್ಷೆಗೆ 523 ಕೋಟಿ ಮೀಸಲು

ಯೋಗಿ ಆದಿತ್ಯನಾಥ್ ಭಾರೀ ಬಹುಮತದೊಂದಿಗೆ 2ನೇ ಅವಧಿಗೆ ಅಧಿಕಾರಕ್ಕೆ ಮರಳಿದ ನಂತರ ಮಂಡಿಸಿದ ಮೊದಲ ಬಜೆಟ್ ಇದು.

Uttar Pradesh Budget: ಯೋಗಿ ಆದಿತ್ಯನಾಥ್ ಸರ್ಕಾರದಿಂದ 6.1 ಲಕ್ಷ ಕೋಟಿ ಬಜೆಟ್; ಮಹಿಳಾ ಸುರಕ್ಷೆಗೆ 523 ಕೋಟಿ ಮೀಸಲು
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:May 26, 2022 | 1:26 PM

Share

ಲಖನೌ: ಉತ್ತರ ಪ್ರದೇಶ ಸರ್ಕಾರವು (Uttar Pradesh Govt) 2022-23ನೇ ಆರ್ಥಿಕ ವರ್ಷದ ಬಜೆಟ್​ ಮಂಡಿಸಿದೆ. ಯೋಗಿ ಆದಿತ್ಯನಾಥ್ ಭಾರೀ ಬಹುಮತದೊಂದಿಗೆ 2ನೇ ಅವಧಿಗೆ ಅಧಿಕಾರಕ್ಕೆ ಮರಳಿದ ನಂತರ ಮಂಡಿಸಿದ ಮೊದಲ ಬಜೆಟ್ ಇದು. 37 ವರ್ಷಗಳ ನಂತರ ಸತತ 2ನೇ ಅವಧಿಗೆ ಪಕ್ಷವನ್ನು ಅಧಿಕಾರಕ್ಕೆ ತಂದ ಸಾಧನೆಯನ್ನು ಯೋಗಿ ಆದಿತ್ಯನಾಥ್ ಮಾಡಿದ್ದಾರೆ. ಈ ಬಾರಿಯ ಬಜೆಟ್ ಮೊತ್ತವೂ ದಾಖಲೆ ಪ್ರಮಾಣದಲ್ಲಿದೆ. ಪ್ರಧಾನಿ ಮೋದಿ ಅವರ ಆಶಯಕ್ಕೆ ಉತ್ತರ ಪ್ರದೇಶವನ್ನು ರೂಪಿಸುವುದಾಗಿ ಯೋಗಿ ಆದಿತ್ಯನಾಥ್ ಆಶಯ ವ್ಯಕ್ತಪಡಿಸಿದ್ದಾರೆ.

ಬಜೆಟ್ ಭಾಷಣಕ್ಕೂ ಮೊದಲು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ್ದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ‘ಇದು ಸಾರ್ವಜನಿಕರ ಕ್ಷೇಮಕ್ಕಾಗಿ ರೂಪಿಸಿರುವ ಬಜೆಟ್. ಉತ್ತರ ಪ್ರದೇಶದ ಸರ್ವಾಂಗೀಣ ಪ್ರಗತಿ ನಮ್ಮ ಗುರಿ’ ಎಂದು ಹೇಳಿದ್ದರು. ವಿಧಾನಸಭೆಯಲ್ಲಿ ಮಂಡಿಸುವ ಮೊದಲು ಮುಖ್ಯಮಂತ್ರಿ ಅಧಿಕೃತ ನಿವಾಸದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಜೆಟ್​ಗೆ ಅನುಮೋದನೆ ಪಡೆದುಕೊಳ್ಳಲಾಯಿತು.

‘ನಮ್ಮದು ಸಾರ್ವಜನಿಕ ಪ್ರಗತಿಗಾಗಿ ರೂಪಿಸಿದ ಬಜೆಟ್. ಪ್ರಧಾನಿ ನರೇಂದ್ರ ಮೋದಿ ಆಶಯದಂತೆ ಡಬಲ್ ಎಂಜಿನ್ ಸರ್ಕಾರದ ವೇಗವನ್ನು ಇದು ರಾಜ್ಯದ ಅಭಿವೃದ್ಧಿಗೆ ನೀಡಲಿದೆ. ಉತ್ತರ ಪ್ರದೇಶವು ದೇಶದ ಪ್ರಗತಿಯ ಎಂಜಿನ್ ಆಗಲಿದೆ’ ಎಂದು ಯೋಗಿ ಆದಿತ್ಯನಾಥ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದರು.

ಉತ್ತರ ಪ್ರದೇಶದ ಹಣಕಾಸು ಸಚಿವ ಸುರೇಶ್ ಕುಮಾರ್ ಖನ್ನಾ ಮಾತನಾಡಿ, ‘ಬಿಜೆಪಿಯು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯನ್ನು ಸಾಕಾರಗೊಳಿಸುವಂತೆ ಈ ಬಜೆಟ್ ರೂಪಿಸಲಾಗಿದೆ’ ಎಂದು ಹೇಳಿದರು. ಕಳೆದ ಆರ್ಥಿಕ ವರ್ಷದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರವು ₹ 5,50,270.78 ಕೋಟಿ ಮೊತ್ತದ ಬಜೆಟ್ ಮಂಡಿಸಿತ್ತು.

ಉತ್ತರ ಪ್ರದೇಶದಲ್ಲಿ ಇಂದು ಮಂಡನೆಯಾದ ಬಜೆಟ್​ನ 10 ಮುಖ್ಯ ಅಂಶಗಳಿವು…

  1. ವಿಮಾನ ನಿಲ್ದಾಣಗಳು ಮತ್ತು ಐತಿಹಾಸಿಕ ಮಹತ್ವದ ಸ್ಮಾರಕಗಳ ರಕ್ಷಣೆಗಾಗಿ ವಿಶೇಷ ರಕ್ಷಣಾ ಪಡೆಯನ್ನು ರೂಪಿಸಲು ₹ 276.66 ಕೋಟಿ ಮೀಸಲಿಡಲಾಗಿದೆ.
  2. ಪೊಲೀಸ್ ಇಲಾಖೆಯ ಸಂಕಷ್ಟ ನಿರ್ವಹಣಾ ವ್ಯವಸ್ಥೆಯ (Police Emergency Management System) 2ನೇ ಹಂತವು ಈ ವರ್ಷದಿಂದಲೇ ಕಾರ್ಯಾರಂಭ ಮಾಡಲಿದೆ. ಇದಕ್ಕಾಗಿ ₹ 730.88 ಕೋಟಿ ಮೀಸಲಿಡಲಾಗಿದೆ.
  3. ಉತ್ತರ ಪ್ರದೇಶದಲ್ಲಿ ಮಹಿಳೆಯರ ರಕ್ಷಣೆಗಾಗಿ ₹ 523.34 ಕೋಟಿ ಮೀಸಲಿಡಲಾಗಿದೆ.
  4. ದೇಶವನ್ನು 5 ಶತಕೋಟಿ ಡಾಲರ್ ಆರ್ಥಿಕತೆಯಾಗಿ ರೂಪಿಸಬೇಕು ಎನ್ನುವ ಪ್ರಧಾನಿ ನರೇಂದ್ರ ಮೋದಿ ಅವರ ಕನಸು ಸಾಕಾರಗೊಳಿಸುವ ನಿಟ್ಟಿನಲ್ಲಿ ಉತ್ತರ ಪ್ರದೇಶವು 1 ಶತಕೋಟಿ ಡಾಲರ್ ಆರ್ಥಿಕತೆಯಾಗುವ ಗುರಿ ಹೊಂದಿದೆ.
  5. ಮುಂದಿನ ಐದು ವರ್ಷಗಳಲ್ಲಿ ಉತ್ತರ ಪ್ರದೇಶ ಸರ್ಕಾರವು 2 ಕೋಟಿ ಸ್ಮಾರ್ಟ್​ಫೋನ್ ಅಥವಾ ಟ್ಯಾಬ್ಲೆಟ್​ಗಳನ್ನು ವಿತರಿಸಲಿದೆ.
  6. ಕೊವಿಡ್​ನಿಂದ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ‘ಯುಪಿ ಸಿಎಂ ಬಾಲ್ ಸೇವಾ ಯೋಜನೆಯಡಿಯಲ್ಲಿ ₹ 2,500 ನೀಡಲಿದೆ.
  7. ಉತ್ತರ ಪ್ರದೇಶದಲ್ಲಿ ಸ್ಟಾರ್ಟ್​ಅಪ್​ಗಳಿಗೆ ಪ್ರೋತ್ಸಾಹ ನೀಡಲೆಂದು 100 ಇನ್​ಕ್ಯುಬೇಟರ್​ಗಳನ್ನು ಆರಂಭಿಸಲಾಗುವುದು. 10,000 ಸ್ಟಾರ್ಟ್​ಅಪ್​ಗಳನ್ನು ಆರಂಭಿಸುವ ಗುರಿ ಇರಿಸಿಕೊಳ್ಳಲಾಗಿದೆ.
  8. ಮೆಡಿಕಲ್ ಸೀಟ್​ಗಳ ಸಂಖ್ಯೆ ಹೆಚ್ಚಿಸಲು ₹ 500 ಕೋಟಿ ಮೀಸಲಿಡಲಾಗಿದೆ.
  9. ಮೀರತ್, ಬಹ್ರೈಚ್, ಕಾನ್​ಪುರ, ಅಝಂಗಡ ಮತ್ತು ರಾಮ್​ಪುರಗಳಲ್ಲಿ ಎಟಿಎಸ್ ಕೇಂದ್ರಗಳನ್ನು ಆರಂಭಿಸಲಾಗುವುದು.
  10. ಲಖನೌ ನಗರದಲ್ಲಿ ವಿಧಿವಿಜ್ಞಾನ ಪ್ರಯೋಗಾಲಯ ಮತ್ತು ಉತ್ತರ ಪ್ರದೇಶ ವಿಧಿವಿಜ್ಞಾನ ಸಂಸ್ಥೆ ಆರಂಭಿಸಲಾಗುವುದು.

 ಈ ಸುದ್ದಿಯನ್ನು ಇಂಗ್ಲಿಷ್​ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:25 pm, Thu, 26 May 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!