AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಗಂಗಾನದಿಯಲ್ಲಿ ಪವಿತ್ರ ಸ್ನಾನ ಮಾಡಿದರೂ, ಯೋಗಿ ಆದಿತ್ಯನಾಥ್ ಮಾಡಲಿಲ್ಲ ಯಾಕೆ?-ಅಖಿಲೇಶ್ ಯಾದವ್ ಹೇಳಿದ ಕಾರಣ ಇದು

ಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಸಕಲ ಸಿದ್ಧತೆಯನ್ನೂ ಮಾಡಿಕೊಳ್ಳುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಪದೇಪದೆ ಉತ್ತರ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದು, ಅಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುತ್ತಿದ್ದಾರೆ.

ಪ್ರಧಾನಿ ಮೋದಿ ಗಂಗಾನದಿಯಲ್ಲಿ ಪವಿತ್ರ ಸ್ನಾನ ಮಾಡಿದರೂ, ಯೋಗಿ ಆದಿತ್ಯನಾಥ್ ಮಾಡಲಿಲ್ಲ ಯಾಕೆ?-ಅಖಿಲೇಶ್ ಯಾದವ್ ಹೇಳಿದ ಕಾರಣ ಇದು
ಅಖಿಲೇಶ್ ಯಾದವ್
TV9 Web
| Edited By: |

Updated on: Dec 14, 2021 | 3:34 PM

Share

ನಿನ್ನೆ (ಡಿ.13) ಪ್ರಧಾನಮಂತ್ರಿ ನರೇಂದ್ರ ಮೋದಿಯವರು ವಾರಾಣಸಿಯಲ್ಲಿ ಲಲಿತಾ ಘಾಟ್​ ಬಳಿ ಗಂಗಾನದಿಯಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಕೇಸರಿ ಉಡುಪು ಧರಿಸಿ, ರುದ್ರಾಕ್ಷಿ ಸರ ಕೈಯಲ್ಲಿ ಹಿಡಿದು ನದಿಯಲ್ಲಿ ಮುಳುಗಿ ನಮಸ್ಕರಿಸಿದ್ದಾರೆ. ಹಾಗೇ, ಸೂರ್ಯದೇವನಿಗೆ ಅರ್ಘ್ಯಕೊಟ್ಟು ಪೂಜೆ ಸಲ್ಲಿಸಿ, ಮಂತ್ರಪಠಣ ಮಾಡಿದ್ದಾರೆ. ಆದರೆ ಈಗ ಅಖಿಲೇಶ್​ ಯಾದವ್​ ಒಂದು ಪ್ರಶ್ನೆ ಎತ್ತಿದ್ದಾರೆ ಮತ್ತು ಅವರೇ ಅದಕ್ಕೆ ಉತ್ತರವನ್ನೂ ಕೊಟ್ಟಿದ್ದಾರೆ. ನಿನ್ನೆ ಬೆಳಗ್ಗೆ ಪ್ರಧಾನಿ ಮೋದಿ ವಾರಾಣಸಿ ತಲುಪಿದಾಗಿನಿಂದಲೂ ಮೋದಿಯವರ ಜತೆಗೇ ಇರುವ ಯೋಗಿ ಆದಿತ್ಯನಾಥ್​ ಗಂಗಾನದಿಯಲ್ಲಿ ಪವಿತ್ರ ಸ್ನಾನ ಮಾಡಲಿಲ್ಲ ಎಂಬುದು ಅಖಿಲೇಶ್​ ಯಾದವ್ ಆಕ್ಷೇಪ. 

ಗಂಗಾನದಿಯನ್ನು ಸ್ವಚ್ಛ ಮಾಡಲು ಬಿಜೆಪಿ ನೇತೃತ್ವದ ಸರ್ಕಾರ ಕೋಟಿಗಳಷ್ಟು ಹಣ ಖರ್ಚು ಮಾಡುತ್ತಿದೆ. ಆದರೆ ಯೋಗಿ ಆದಿತ್ಯನಾಥ್​ ಗಂಗಾನದಿಯಲ್ಲಿ ಸ್ನಾನ ಮಾಡಲಿಲ್ಲ. ಯಾಕೆಂದರೆ ಆ ನದಿ ಇನ್ನೂ ಕೊಳಕಾಗಿದೆ..ಮಲಿನಯುಕ್ತವಾಗಿದೆ ಎಂಬುದು ಅವರಿಗೆ ಗೊತ್ತು. ಇದೇ ಕಾರಣಕ್ಕೆ ಯೋಗಿ ಪವಿತ್ರ ಸ್ನಾನ ಮಾಡಲಿಲ್ಲ ಎಂದು ಅಖಿಲೇಶ್ ಯಾದವ್​ ಪ್ರತಿಪಾದಿಸಿದ್ದಾರೆ.  ನಿಜಕ್ಕೂ ಗಂಗಾಮಾತೆ ಸಂಪೂರ್ಣವಾಗಿ ಸ್ವಚ್ಛವಾಗುತ್ತಾಳಾ?  ಗಂಗಾನದಿ ಸ್ವಚ್ಛಗೊಳಿಸಲೆಂದು ನಿಧಿಗಳು ಹರಿದುಬಂದಿವೆ. ಆದರೆ ನದಿ ಮಾತ್ರ ಇನ್ನೂ ಸಂಪೂರ್ಣವಾಗಿ ಸ್ವಚ್ಛವಾಗಿಲ್ಲ ಎಂದು ಹೇಳಿದ್ದಾರೆ.  ಉತ್ತರಪ್ರದೇಶದಲ್ಲಿ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಬಿಜೆಪಿ ಮತ್ತು ಸಮಾಜವಾದಿ ಪಕ್ಷಗಳ ನಡುವೆ ವಾಗ್ದಾಳಿಯೂ ಹೆಚ್ಚಿದೆ.

ಬರುವ ವಿಧಾನಸಭೆ ಚುನಾವಣೆಗೆ ಬಿಜೆಪಿ ಸಕಲ ಸಿದ್ಧತೆಯನ್ನೂ ಮಾಡಿಕೊಳ್ಳುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಪದೇಪದೆ ಉತ್ತರ ಪ್ರದೇಶಕ್ಕೆ ಭೇಟಿ ನೀಡುತ್ತಿದ್ದು, ಅಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುತ್ತಿದ್ದಾರೆ. 339 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಕಾಶಿ ವಿಶ್ವನಾಥ ಕಾರಿಡಾರ್​ ಮೊದಲ ಹಂತವನ್ನು ನಿನ್ನೆ ಉದ್ಘಾಟನೆ ಮಾಡಿದ್ದಾರೆ. ಜತೆಗೆ ಕಾರಿಡಾರ್​ ನಿರ್ಮಾಣ ಮಾಡಿದ ಕಾರ್ಮಿಕ ಮೇಲೆ ಹೂಮಳೆ ಸುರಿಸುವ ಮೂಲಕ ಗೌರವ ಸಲ್ಲಿಸಿ, ಅವರೊಂದಿಗೇ ಕುಳಿತು ಊಟ ಮಾಡಿದ್ದಾರೆ. ಇಂದು ಬಿಜೆಪಿಯ ಎಲ್ಲ ಮುಖ್ಯಮಂತ್ರಿಗಳು, ಪ್ರಮುಖ ಗಣ್ಯರು ಕಾಶಿಯಲ್ಲಿದ್ದಾರೆ.

ಇದನ್ನೂ ಓದಿ: Kangana Ranaut: ಅಂಕಿತಾ- ವಿಕ್ಕಿ ಕಲ್ಯಾಣ; ಸಾಂಪ್ರದಾಯಿಕ ದಿರಿಸಿನಲ್ಲಿ ಕಂಗೊಳಿಸಿದ ಕಂಗನಾ- ಚಿತ್ರಗಳನ್ನು ನೋಡಿ

Follow Us
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ