ಯಮರಾಜ ನಿಮಗಾಗಿ ಕಾಯುತ್ತಿದ್ದಾನೆ: ಮಹಿಳೆಯರಿಗೆ ಕಿರುಕುಳ ನೀಡುವವರಿಗೆ ಎಚ್ಚರಿಕೆ ನೀಡಿದ ಯೋಗಿ ಆದಿತ್ಯನಾಥ್

ಮಹಿಳೆಯರಿಗೆ ಕಿರುಕುಳ ನೀಡುವವರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುವಂತಹ ಅಪರಾಧವನ್ನು ಯಾರಾದರೂ ಮಾಡಿದವರಿಗಾಗಿ ಯಮರಾಜ ಕಾಯುತ್ತಿದ್ದಾನೆ ಎಂದು ಹೇಳಿದ್ದಾರೆ. ಅಂಬೇಡ್ಕರ್ ನಗರದಲ್ಲಿ ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಬಾಲಕಿಯ ದುಪಟ್ಟಾವನ್ನು ಎಳೆದಿದ್ದರು, ಆಗ ಬಾಲಕಿ ಕೆಳಗೆ ಬಿದ್ದಾಗ ಮತ್ತೋರ್ವ ಬೈಕ್​ನ್ನು ಆಕೆಯ ಮೈಮೇಲೆ ಹತ್ತಿಸಿ ಕೊಲೆ ಮಾಡಿದ್ದ.

ಯಮರಾಜ ನಿಮಗಾಗಿ ಕಾಯುತ್ತಿದ್ದಾನೆ: ಮಹಿಳೆಯರಿಗೆ ಕಿರುಕುಳ ನೀಡುವವರಿಗೆ ಎಚ್ಚರಿಕೆ ನೀಡಿದ ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್
Image Credit source: The Economic Times

Updated on: Sep 18, 2023 | 9:51 AM

ಮಹಿಳೆಯರಿಗೆ ಕಿರುಕುಳ ನೀಡುವವರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುವಂತಹ ಅಪರಾಧವನ್ನು ಯಾರಾದರೂ ಮಾಡಿದವರಿಗಾಗಿ ಯಮರಾಜ ಕಾಯುತ್ತಿದ್ದಾನೆ ಎಂದು ಹೇಳಿದ್ದಾರೆ. ಅಂಬೇಡ್ಕರ್ ನಗರದಲ್ಲಿ ಬೈಕ್​ನಲ್ಲಿ ಬಂದ ದುಷ್ಕರ್ಮಿಗಳು ಬಾಲಕಿಯ ದುಪಟ್ಟಾವನ್ನು ಎಳೆದಿದ್ದರು, ಆಗ ಬಾಲಕಿ ಕೆಳಗೆ ಬಿದ್ದಾಗ ಮತ್ತೋರ್ವ ಬೈಕ್​ನ್ನು ಆಕೆಯ ಮೈಮೇಲೆ ಹತ್ತಿಸಿ ಕೊಲೆ ಮಾಡಿದ್ದ.

ಶುಕ್ರವಾರ ಘಟನೆ ನಡೆದಿದೆ, ಶನಿವಾರ ರಾತ್ರಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇಬ್ಬರು ಆರೋಪಿಗಳ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದರು. ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ) ಮತ್ತು 354 ಜೊತೆಗೆ POCSO ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಂಧಿತ ಆರೋಪಿಗಳನ್ನು ಸೆಹಬಾಜ್ ಮತ್ತು ಆತನ ಸಹೋದರ ಅರ್ಬಾಜ್ ಎಂದು ಗುರುತಿಸಲಾಗಿದೆ. ಭಾನುವಾರ ಪರಾರಿಯಾಗಲು ಪ್ರಯತ್ನಿಸುವಾಗ ಮತ್ತೊಬ್ಬ ಆರೋಪಿಯ ಕಾಲು ಮುರಿತವಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ರಾಜ್ಯದಲ್ಲಿ ಮಹಿಳೆಯರಿಗೆ ಕಿರುಕುಳ ನೀಡುವಂಥ ಅಪರಾಧ ಕೃತ್ಯ ಎಸಗಿದರೆ ಯಮರಾಜ ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ.

ಮತ್ತಷ್ಟು ಓದಿ: ಬಾಲಕಿಯ ದುಪಟ್ಟಾ ಎಳೆದು ಆಕೆಯ ಸಾವಿಗೆ ಕಾರಣವಾಗಿದ್ದ ಆರೋಪಿಗಳ ಕಾಲಿಗೆ ಪೊಲೀಸರ ಗುಂಡೇಟು

ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಬಲವಾದ ಕಾನೂನು ವ್ಯವಸ್ಥೆಯ ಪ್ರಾಮುಖ್ಯತೆಯನ್ನು ಆದಿತ್ಯನಾಥ್ ಎತ್ತಿ ಹಿಡಿದರು. ವ್ಯವಸ್ಥೆಗೆ ಅಡ್ಡಿಪಡಿಸಲು ಕಾನೂನನ್ನು ದುರುಪಯೋಗಪಡಿಸಿಕೊಳ್ಳಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಒತ್ತಿ ಹೇಳಿದರು.

ಉತ್ತರ ಪ್ರದೇಶದ ಆಡಳಿತಾರೂಢ ಬಿಜೆಪಿಯು ಆದಿತ್ಯನಾಥ್ ಸರ್ಕಾರ ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿಭಾಯಿಸುತ್ತಿರುವುದನ್ನು ತನ್ನ ಸಾಧನೆಗಳಲ್ಲಿ ಒಂದು ಎಂದು ಆಗಾಗ ಹೇಳಿಕೊಳ್ಳುತ್ತಿರುತ್ತಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us