AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರು ಸ್ಥಳಗಳಲ್ಲಿ ಧರಣಿನಿರತ ರೈತರ ತೆರವುಗೊಳಿಸಿದ ಯೋಗಿ ಸರ್ಕಾರ; ದೆಹಲಿ ಹಿಂಸಾಚಾರದ ಬೆನ್ನಲ್ಲೇ ಕ್ರಮ

ಧರಣಿ ನಿರತರನ್ನು ಅಲ್ಲಿಂದ ತೆರವುಗೊಳಿಸಲು ಪೊಲೀಸ್​ ಪ್ರಯೋಗ ಆಗಲಿಲ್ಲ. ಅನುಮತಿ ಹಿಂಪಡೆಯುತ್ತಿದ್ದಂತೆ ರೈತರೇ ಜಾಗ ಖಾಲಿ ಮಾಡಿ ಹೋಗಿದ್ದಾರೆ. ಆದರೆ ಇವರೊಂದಿಗೆ ಇದ್ದ ಕೆಲವರು ಗಲಾಟೆ ಶುರು ಮಾಡಲು ಪ್ರಯತ್ನ ಮಾಡಿದರು ಎಂದು ಎಡಿಎಂ ತಿಳಿಸಿದ್ದಾರೆ.

ಮೂರು ಸ್ಥಳಗಳಲ್ಲಿ ಧರಣಿನಿರತ ರೈತರ ತೆರವುಗೊಳಿಸಿದ ಯೋಗಿ ಸರ್ಕಾರ; ದೆಹಲಿ ಹಿಂಸಾಚಾರದ ಬೆನ್ನಲ್ಲೇ ಕ್ರಮ
Lakshmi Hegde
| Updated By: ಸಾಧು ಶ್ರೀನಾಥ್​|

Updated on: Jan 28, 2021 | 3:42 PM

Share

ಲಖನೌ: ದೆಹಲಿಯಲ್ಲಿ ಜನವರಿ 26ರಂದು ಹಿಂಸಾಚಾರ ನಡೆದ ಬೆನ್ನಲ್ಲೇ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್​ ಸರ್ಕಾರ ಎಚ್ಚೆತ್ತುಕೊಂಡಿದೆ. ಇಲ್ಲಿಯೂ ಅಂಥ ಘಟನೆ ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದು, ರಾಜ್ಯದ ಮೂರು ಸ್ಥಳಗಳಲ್ಲಿ ನಡೆಯುತ್ತಿರುವ ಕಿಸಾನ್​ ಧರಣಿಗಳನ್ನು ತೆರವುಗೊಳಿಸಿದೆ.

ಉತ್ತರ ಪ್ರದೇಶದ ಚಿಲ್ಲಾ ಗಡಿ, ನೋಯ್ಡಾದ ರಾಷ್ಟ್ರೀಯ ಪ್ರೇರಣಾ ಸ್ಥಳ ಮತ್ತು ಹಸಿರು ಉದ್ಯಾನ ಹಾಗೂ ಬಾಗ್​ಪತ್​ನ ಬರೌತ್​ನಲ್ಲಿ ರೈತರು ಧರಣಿ ನಡೆಸುತ್ತಿದ್ದರು. ದೆಹಲಿ ಕೆಂಪುಕೋಟೆ ಬಳಿ ಮಿತಿಮೀರಿದ ಹಿಂಸಾಚಾರ ನಡೆದ ಬೆನ್ನಲ್ಲೇ, ಅವರಿಗೆ ನೀಡಲಾಗಿದ್ದ ಅನುಮತಿಯನ್ನು ಯೋಗಿ ಸರ್ಕಾರ ವಾಪಸ್​ ಪಡೆದಿದೆ.

ಧರಣಿ ನಿರತರನ್ನು ಅಲ್ಲಿಂದ ತೆರವುಗೊಳಿಸಲು ಪೊಲೀಸ್​ ಪ್ರಯೋಗ ಆಗಲಿಲ್ಲ. ಅನುಮತಿ ಹಿಂಪಡೆಯುತ್ತಿದ್ದಂತೆ ರೈತರೇ ಜಾಗ ಖಾಲಿ ಮಾಡಿ ಹೋಗಿದ್ದಾರೆ. ಆದರೆ ಇವರೊಂದಿಗೆ ಇದ್ದ ಕೆಲವರು ಗಲಾಟೆ ಶುರು ಮಾಡಲು ಪ್ರಯತ್ನ ಮಾಡಿದರು. ಈಗ ಅವರೆಲ್ಲ ನಾಪತ್ತೆಯಾಗಿದ್ದು, ಪತ್ತೆ ಕಾರ್ಯ ನಡೆಸಲಾಗುತ್ತಿದೆ ಎಂದು ರಾಜ್ಯ ಸರ್ಕಾರದ ಮೂಲಗಳು ತಿಳಿಸಿವೆ.

ಪ್ರತಿಭಟನಾ ನಿರತರಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆಯುತ್ತಿರುವ ದುರಸ್ತಿ ಕಾರ್ಯ ವಿಳಂಬವಾಗುತ್ತಿದೆ ಎಂದು ಹೈವೇ ಪ್ರಾಧಿಕಾರ ಸರ್ಕಾರಕ್ಕೆ ಪತ್ರ ಬರೆದಿತ್ತು. ನಾವಿದನ್ನು ರೈತರೊಂದಿಗೆ ಚರ್ಚಿಸಿದೆವು. ಅವರೂ ಸಹ ಒಪ್ಪಿಕೊಂಡು ಶಾಂತಿಯುತವಾಗಿಯೇ ಧರಣಿ ಸ್ಥಳದಿಂದ ಎದ್ದುಹೋಗಿದ್ದಾರೆ ಎಂದು ಬಾಗ್​ಪತ್​ ಎಡಿಎಂ ತಿಳಿಸಿದ್ದಾರೆ.

ಎಫ್​ಐಆರ್​ ದಾಖಲಾದ ರೈತ ಮುಖಂಡರಿಗೆ ಲುಕ್​ ಔಟ್ ನೋಟಿಸ್ ನೀಡಲು ನಿರ್ಧಾರ​ : ಆಸ್ಪತ್ರೆಗೆ ಅಮಿತ್​ ಷಾ ಭೇಟಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ