AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯೋಗಿ ಸಾಹಬ್ ರಾಮ್ ರಾಮ್’ ಅಂದ್ರು ಮೌಲ್ವಿ’: ಜಮ್ಮು ಮತ್ತು ಕಾಶ್ಮೀರದ ಭೇಟಿ ನೆನಪಿಸಿಕೊಂಡ ಆದಿತ್ಯನಾಥ್

"ನಾನು ಕಳೆದ ಎರಡು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಗೆ ಇದ್ದೆ. ಅಲ್ಲಿ ಮಳೆಯಾಗುತ್ತಿದೆ, ಆದ್ದರಿಂದ ನಾನು ನೇರವಾಗಿ ವಿಮಾನ ನಿಲ್ದಾಣದ ಒಳಗೆ ಹೋದೆ. ಒಬ್ಬ ವ್ಯಕ್ತಿ 'ಯೋಗಿ ಸಾಹಬ್ ರಾಮ್ ರಾಮ್' ಎಂದು ನನ್ನನ್ನು ಸ್ವಾಗತಿಸಿದರು. ನಂತರ, ಅವರು ಮೌಲ್ವಿ ಎಂದು ನಾನು ಅರಿತುಕೊಂಡೆ, ಮೌಲ್ವಿ 'ರಾಮ್ ರಾಮ್' ಎಂದು ಹೇಳಿದ್ದು ನನಗೆ ಆಶ್ಚರ್ಯವಾಯಿತು" ಎಂದು ಆದಿತ್ಯನಾಥ್ ಹೇಳಿದರು.

'ಯೋಗಿ ಸಾಹಬ್ ರಾಮ್ ರಾಮ್' ಅಂದ್ರು ಮೌಲ್ವಿ': ಜಮ್ಮು ಮತ್ತು ಕಾಶ್ಮೀರದ ಭೇಟಿ ನೆನಪಿಸಿಕೊಂಡ ಆದಿತ್ಯನಾಥ್
ಯೋಗಿ ಆದಿತ್ಯನಾಥ್
ರಶ್ಮಿ ಕಲ್ಲಕಟ್ಟ
|

Updated on: Sep 28, 2024 | 6:01 PM

Share

ಫರಿದಾಬಾದ್‌ ಸೆಪ್ಟೆಂಬರ್ 28: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರು ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರಕ್ಕೆ (Jammu and Kashmir) ಭೇಟಿ ನೀಡಿದ್ದನ್ನು ನೆನಪಿಸಿಕೊಂಡರು. ಫರಿದಾಬಾದ್‌ನಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಆದಿತ್ಯನಾಥ್, ಮುಸ್ಲಿಂ ಧರ್ಮಗುರು, ಮೌಲ್ವಿಯೊಬ್ಬರನ್ನು ಭೇಟಿಯಾದಾಗ ಅವರು “ರಾಮ್ ರಾಮ್” ಎಂದು ನಮಸ್ಕರಿಸಿದರು. ಜಮ್ಮು ಕಾಶ್ಮೀರದಲ್ಲಿ 370 ನೇ ವಿಧಿಯ ರದ್ದತಿಯು ಈ ಪ್ರದೇಶದಲ್ಲಿ ಹೇಗೆ ಪ್ರಮುಖ ಬದಲಾವಣೆಗಳನ್ನು ತಂದಿದೆ ಎಂಬುದಕ್ಕೆ ಇದು ಉದಾಹರಣೆ ಎಂದಿದ್ದಾರೆ ಯುಪಿ ಸಿಎಂ.

“ನಾನು ಕಳೆದ ಎರಡು ದಿನಗಳಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಗೆ ಇದ್ದೆ. ಅಲ್ಲಿ ಮಳೆಯಾಗುತ್ತಿದೆ, ಆದ್ದರಿಂದ ನಾನು ನೇರವಾಗಿ ವಿಮಾನ ನಿಲ್ದಾಣದ ಒಳಗೆ ಹೋದೆ. ಒಬ್ಬ ವ್ಯಕ್ತಿ ‘ಯೋಗಿ ಸಾಹಬ್ ರಾಮ್ ರಾಮ್’ ಎಂದು ನನ್ನನ್ನು ಸ್ವಾಗತಿಸಿದರು. ನಂತರ, ಅವರು ಮೌಲ್ವಿ ಎಂದು ನಾನು ಅರಿತುಕೊಂಡೆ, ಮೌಲ್ವಿ ‘ರಾಮ್ ರಾಮ್’ ಎಂದು ಹೇಳಿದ್ದು ನನಗೆ ಆಶ್ಚರ್ಯವಾಯಿತು” ಎಂದು ಆದಿತ್ಯನಾಥ್ ಹೇಳಿದರು.

“ಇದು ಆರ್ಟಿಕಲ್ 370 ರದ್ದತಿ ಪರಿಣಾಮ. ಭಾರತದ ಸಾರ್ವಭೌಮತೆಗೆ ಸವಾಲು ಹಾಕುತ್ತಿದ್ದವರು ಈಗ ‘ರಾಮ್ ರಾಮ್’ ಎಂದು ಹೇಳುತ್ತಿದ್ದಾರೆ” ಎಂದು ಮುಖ್ಯಮಂತ್ರಿ ಹೇಳಿದಾಗ ಪ್ರೇಕ್ಷಕರು ‘ಜೈ ಶ್ರೀ ರಾಮ್’ ಎಂದು ಪ್ರತಿಕ್ರಿಯಿಸಿದರು.

“ಬಲವಾದ ಭಾರತ ಮತ್ತು ಬಲಗೊಂಡ ಬಿಜೆಪಿಯೊಂದಿಗೆ, ಒಂದು ದಿನ, ಅವರು ದೇಶದ ಬೀದಿಗಳಲ್ಲಿ ‘ಹರೇ ರಾಮ, ಹರೇ ಕೃಷ್ಣ’ ಎಂದು ಜಪಿಸುವುದನ್ನು ಕಾಣಬಹುದು ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

“ಕಳೆದ ಏಳೂವರೆ ವರ್ಷಗಳಲ್ಲಿ ನಿಮ್ಮ ನೆರೆಯ ರಾಜ್ಯ ಉತ್ತರ ಪ್ರದೇಶದಲ್ಲಿ ಗಲಭೆಯ ಬಗ್ಗೆ ಕೇಳಿದ್ದೀರಾ?” ಅವರು ಕೇಳಿದರು, ಪ್ರೇಕ್ಷಕರು “ಇಲ್ಲ” ಎಂದು ಪ್ರತಿಕ್ರಿಯಿಸಿದರು. ‘‘ಈ ಮೊದಲು ಎರಡು ಮೂರು ದಿನಕ್ಕೊಮ್ಮೆ ಗಲಭೆ ನಡೆಯುತ್ತಿತ್ತು ಎಂದು ಯೋಗಿ ಹೇಳಿದ್ದಾರೆ.

90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಅಕ್ಟೋಬರ್ 5 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 8 ರಂದು ಫಲಿತಾಂಶಗಳನ್ನು ಎಣಿಕೆ ಮಾಡಲಾಗುತ್ತದೆ. ಭಾರತೀಯ ಚುನಾವಣಾ ಆಯೋಗವು (ಇಸಿಐ) ಅಕ್ಟೋಬರ್ 1 ರಿಂದ ಅಕ್ಟೋಬರ್ 5 ರವರೆಗೆ ಮತದಾನದ ದಿನಾಂಕವನ್ನು ಪರಿಷ್ಕರಿಸಿದೆ, ಅಕ್ಟೋಬರ್ 4 ರಿಂದ ಅಕ್ಟೋಬರ್ 8 ರವರೆಗೆ ಹರ್ಯಾಣ ಮತ್ತು ಜಮ್ಮು ಮತ್ತು ಕಾಶ್ಮೀರದ ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ಉದ್ಘಾಟನೆ ವೇಳೆ ಹಾಡು-ನೃತ್ಯ; ರಾಹುಲ್ ಗಾಂಧಿ ಹೇಳಿಕೆಗೆ ಬಿಜೆಪಿ ಆಕ್ರೋಶ

ಹರ್ಯಾಣಕ್ಕೆ ಬಿಜೆಪಿ ಪ್ರಣಾಳಿಕೆ

ಹರ್ಯಾಣದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರ ನಡೆಸುವ ಗುರಿ ಹೊಂದಿರುವ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಮಹಿಳೆಯರಿಗೆ ಮಾಸಿಕ ₹ 2,100 ನೆರವು, ಎರಡು ಲಕ್ಷ ಸರ್ಕಾರಿ ಉದ್ಯೋಗಗಳು ಮತ್ತು ಗ್ರಾಮೀಣ ಪ್ರದೇಶದ ಮಹಿಳಾ ಕಾಲೇಜು ವಿದ್ಯಾರ್ಥಿಗಳಿಗೆ ಸ್ಕೂಟರ್ ಸೇರಿದಂತೆ ಹಲವು ಭರವಸೆಗಳನ್ನು ನೀಡಿದೆ.

ಬಿಜೆಪಿಯು 24 ಬೆಳೆಗಳನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ (MSP) ಖರೀದಿಸಲು ವಾಗ್ದಾನ ಮಾಡಿದೆ, ಅಸ್ತಿತ್ವದಲ್ಲಿರುವ 14 ಬೆಳೆಗಳ ಸಂಗ್ರಹವನ್ನು ವಿಸ್ತರಿಸಿದೆ. ಕಳೆದ ತಿಂಗಳು, ಹರ್ಯಾಣ ಕ್ಯಾಬಿನೆಟ್ MSP ನಲ್ಲಿ 10 ಹೆಚ್ಚುವರಿ ಬೆಳೆಗಳನ್ನು ಖರೀದಿಸಲು ಅನುಮೋದನೆ ನೀಡಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ