AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರಿಗೆ ಗೋಮಾಂಸ ಸೇವನೆಗೆ ಅವಕಾಶ ನೀಡುತ್ತೆ: ಯೋಗಿ ಆದಿತ್ಯನಾಥ್

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರಿಗೆ ಗೋಮಾಂಸ ಸೇವನೆ ಮಾಡಲು ಅವಕಾಶ ನೀಡುತ್ತದೆ ಎಂದು ಕಾಂಗ್ರೆಸ್​ ಹೇಳಿದೆ.

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರಿಗೆ ಗೋಮಾಂಸ ಸೇವನೆಗೆ ಅವಕಾಶ ನೀಡುತ್ತೆ: ಯೋಗಿ ಆದಿತ್ಯನಾಥ್
ನಯನಾ ರಾಜೀವ್
|

Updated on: Apr 28, 2024 | 11:55 AM

Share

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರಿಗೆ ಗೋಮಾಂಸ ತಿನ್ನುವ ಹಕ್ಕನ್ನು ನೀಡುತ್ತದೆ ಇದು ಗೋಹತ್ಯೆಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದು ಯೋಗಿ ಆದಿತ್ಯನಾಥ್(Yogi Adityanath) ಹೇಳಿದ್ದಾರೆ. ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಯೋಗಿ, ಹಿಂದೂ ಧರ್ಮದಲ್ಲಿ ಗೋವನ್ನು ತಾಯಿಯಂತೆ ಪೂಜಿಸಲಾಗುತ್ತದೆ. ನಾಚಿಕೆ ಇಲ್ಲದ ಜನರು ಗೋಮಾಂಸ ತಿನ್ನುವ ಹಕ್ಕಿನ ಭರವಸೆ ನೀಡುತ್ತಾರೆ, ಭಾರತ ಇದಕ್ಕೆ ಎಂದಾದರೂ ಒಪ್ಪಿಕೊಳ್ಳುತ್ತದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.

ಅಲ್ಪಸಂಖ್ಯಾತರಿಗೆ ಅವರವರ ಇಷ್ಟದ ಆಹಾರ ತಿನ್ನುವ ಸ್ವಾತಂತ್ರ್ಯ ಕೊಡಬೇಕು ಎಂದರೆ ಗೋಹತ್ಯೆಗೆ ಅವಕಾಶ ಕೊಡುವ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ದೇಶದಲ್ಲಿ ಹಿಂದೂ ಸಮುದಾಯವು ಗೋಮಾಂಸವನ್ನು ಸಂಪೂರ್ಣವಾಗಿ ತ್ಯಜಿಸುತ್ತದೆ, ಏಕೆಂದರೆ ಅವರು ಗೋವನ್ನು ಪವಿತ್ರವೆಂದು ಪರಿಗಣಿಸುತ್ತಾರೆ. ಈ ನಿಟ್ಟಿನಲ್ಲಿ ಮುಸ್ಲಿಮರಿಗೆ ವಿನಾಯಿತಿ ನೀಡುವ ಕಾಂಗ್ರೆಸ್ನ ಪ್ರಯತ್ನವು ಎಲ್ಲರಿಗೂ ಸ್ವೀಕಾರಾರ್ಹವಲ್ಲ ಎಂದು ಅವರು ಹೇಳಿದರು.

ಉತ್ತರ ಪ್ರದೇಶ ಈಗಾಗಲೇ ಗೋಹತ್ಯೆ ವಿರುದ್ಧ ಕಠಿಣ ಕಾನೂನುಗಳನ್ನು ಹೊಂದಿದ್ದು, 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 5 ಲಕ್ಷ ರೂ. ದವರೆಗೆ ದಂಡ ವಿಧಿಸುವ ಅವಕಾಶವನ್ನು ಹೊಂದಿದೆ. ಉತ್ತರ ಪ್ರದೇಶ ಸರ್ಕಾರವು 2020 ರಲ್ಲಿ ಗೋಹತ್ಯೆ ಕುರಿತು ಸುಗ್ರೀವಾಜ್ಞೆಯನ್ನು ಜಾರಿಗೊಳಿಸುವ ಮೂಲಕ ಕಾನೂನಾಗಿ ರೂಪಿಸಿತು.

ಮತ್ತಷ್ಟು ಓದಿ: ಯೋಗಿ ಆದಿತ್ಯನಾಥ್ ದೇಶದ ಎರಡನೇ ಜನಪ್ರಿಯ ಮುಖ್ಯಮಂತ್ರಿ, ಮೊದಲನೆಯವರು ಯಾರು?

2020 ರಲ್ಲಿ, ಯೋಗಿ ಸರ್ಕಾರವು ಸುಗ್ರೀವಾಜ್ಞೆಯನ್ನು ಪ್ರಕಟಿಸಿತು ಮತ್ತು ನಂತರ ಅದನ್ನು ರಾಜ್ಯದಲ್ಲಿ ಜಾರಿಗೆ ತರಲು ಕಾನೂನನ್ನು ಜಾರಿಗೊಳಿಸಿತು. ಯುಪಿಎ ಸರ್ಕಾರದ ಅವಧಿಯಲ್ಲಿ 2004ರಿಂದ 2014ರವರೆಗೆ ಕಾಂಗ್ರೆಸ್​ ಇಂತಹ ಪ್ರಯತ್ನಗಳನ್ನು ಮಾಡಿದೆ. ಕರ್ನಾಟಕದಲ್ಲಿ ಎಸ್​ಸಿ, ಎಸ್​ಟಿ ಮತ್ತು ಒಬಿಸಿ ಮೀಸಲಾತಿಯಲ್ಲಿ ಮುಸ್ಲಿಮರಿಗೆ ಕೋಟಾ ನೀಡಲು ಕಾಂಗ್ರೆಸ್​ ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

ಸಾಚಾರ್ ಸಮಿತಿಯ ಶಿಫಾರಸುಗಳನ್ನು ಉಲ್ಲೇಕಿಸಿ ಮಾತನಾಡಿ ಎಸ್​ಸಿ ಎಸ್​ಟಿ ಮತ್ತು ಒಬಿಸಿ ಕೋಟಾಕ್ಕೆ ಶೇ.6ರಷ್ಟು ಮೀಸಲಾತಿ ನೀಡುವ ಮೂಲಕ ಅದನ್ನು ಜಾರಿಗೆ ತರಲು ಹೊರಟಿದೆ ಎಂದಿದ್ದಾರೆ.

ದೇಶದ ಸಂಪನ್ಮೂಲದ ಮೇಲೆ ಮುಸಲ್ಮಾನರಿಗೆ ಮೊದಲ ಹಕ್ಕಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದರು. ದೇಶವನ್ನು ಮತ್ತಷ್ಟು ವಿಭಜಿಸಲು ಕಾಂಗ್ರೆಸ್ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿದರು. ಭಾರತ್ ಮಾತಾ ಕಿ ಜೈ ಮತ್ತು ವಂದೇ ಮಾತರಂ ಘೋಷಣೆ ಕೂಗಲು ಹಿಂದೇಟು ಹಾಕುವವರಿಗೆ ಮತ ಹಾಕಬಾರದು ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ