Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರಿಗೆ ಗೋಮಾಂಸ ಸೇವನೆಗೆ ಅವಕಾಶ ನೀಡುತ್ತೆ: ಯೋಗಿ ಆದಿತ್ಯನಾಥ್

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರಿಗೆ ಗೋಮಾಂಸ ಸೇವನೆ ಮಾಡಲು ಅವಕಾಶ ನೀಡುತ್ತದೆ ಎಂದು ಕಾಂಗ್ರೆಸ್​ ಹೇಳಿದೆ.

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರಿಗೆ ಗೋಮಾಂಸ ಸೇವನೆಗೆ ಅವಕಾಶ ನೀಡುತ್ತೆ: ಯೋಗಿ ಆದಿತ್ಯನಾಥ್
Follow us
ನಯನಾ ರಾಜೀವ್
|

Updated on: Apr 28, 2024 | 11:55 AM

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರಿಗೆ ಗೋಮಾಂಸ ತಿನ್ನುವ ಹಕ್ಕನ್ನು ನೀಡುತ್ತದೆ ಇದು ಗೋಹತ್ಯೆಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದು ಯೋಗಿ ಆದಿತ್ಯನಾಥ್(Yogi Adityanath) ಹೇಳಿದ್ದಾರೆ. ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಯೋಗಿ, ಹಿಂದೂ ಧರ್ಮದಲ್ಲಿ ಗೋವನ್ನು ತಾಯಿಯಂತೆ ಪೂಜಿಸಲಾಗುತ್ತದೆ. ನಾಚಿಕೆ ಇಲ್ಲದ ಜನರು ಗೋಮಾಂಸ ತಿನ್ನುವ ಹಕ್ಕಿನ ಭರವಸೆ ನೀಡುತ್ತಾರೆ, ಭಾರತ ಇದಕ್ಕೆ ಎಂದಾದರೂ ಒಪ್ಪಿಕೊಳ್ಳುತ್ತದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.

ಅಲ್ಪಸಂಖ್ಯಾತರಿಗೆ ಅವರವರ ಇಷ್ಟದ ಆಹಾರ ತಿನ್ನುವ ಸ್ವಾತಂತ್ರ್ಯ ಕೊಡಬೇಕು ಎಂದರೆ ಗೋಹತ್ಯೆಗೆ ಅವಕಾಶ ಕೊಡುವ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ದೇಶದಲ್ಲಿ ಹಿಂದೂ ಸಮುದಾಯವು ಗೋಮಾಂಸವನ್ನು ಸಂಪೂರ್ಣವಾಗಿ ತ್ಯಜಿಸುತ್ತದೆ, ಏಕೆಂದರೆ ಅವರು ಗೋವನ್ನು ಪವಿತ್ರವೆಂದು ಪರಿಗಣಿಸುತ್ತಾರೆ. ಈ ನಿಟ್ಟಿನಲ್ಲಿ ಮುಸ್ಲಿಮರಿಗೆ ವಿನಾಯಿತಿ ನೀಡುವ ಕಾಂಗ್ರೆಸ್ನ ಪ್ರಯತ್ನವು ಎಲ್ಲರಿಗೂ ಸ್ವೀಕಾರಾರ್ಹವಲ್ಲ ಎಂದು ಅವರು ಹೇಳಿದರು.

ಉತ್ತರ ಪ್ರದೇಶ ಈಗಾಗಲೇ ಗೋಹತ್ಯೆ ವಿರುದ್ಧ ಕಠಿಣ ಕಾನೂನುಗಳನ್ನು ಹೊಂದಿದ್ದು, 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 5 ಲಕ್ಷ ರೂ. ದವರೆಗೆ ದಂಡ ವಿಧಿಸುವ ಅವಕಾಶವನ್ನು ಹೊಂದಿದೆ. ಉತ್ತರ ಪ್ರದೇಶ ಸರ್ಕಾರವು 2020 ರಲ್ಲಿ ಗೋಹತ್ಯೆ ಕುರಿತು ಸುಗ್ರೀವಾಜ್ಞೆಯನ್ನು ಜಾರಿಗೊಳಿಸುವ ಮೂಲಕ ಕಾನೂನಾಗಿ ರೂಪಿಸಿತು.

ಮತ್ತಷ್ಟು ಓದಿ: ಯೋಗಿ ಆದಿತ್ಯನಾಥ್ ದೇಶದ ಎರಡನೇ ಜನಪ್ರಿಯ ಮುಖ್ಯಮಂತ್ರಿ, ಮೊದಲನೆಯವರು ಯಾರು?

2020 ರಲ್ಲಿ, ಯೋಗಿ ಸರ್ಕಾರವು ಸುಗ್ರೀವಾಜ್ಞೆಯನ್ನು ಪ್ರಕಟಿಸಿತು ಮತ್ತು ನಂತರ ಅದನ್ನು ರಾಜ್ಯದಲ್ಲಿ ಜಾರಿಗೆ ತರಲು ಕಾನೂನನ್ನು ಜಾರಿಗೊಳಿಸಿತು. ಯುಪಿಎ ಸರ್ಕಾರದ ಅವಧಿಯಲ್ಲಿ 2004ರಿಂದ 2014ರವರೆಗೆ ಕಾಂಗ್ರೆಸ್​ ಇಂತಹ ಪ್ರಯತ್ನಗಳನ್ನು ಮಾಡಿದೆ. ಕರ್ನಾಟಕದಲ್ಲಿ ಎಸ್​ಸಿ, ಎಸ್​ಟಿ ಮತ್ತು ಒಬಿಸಿ ಮೀಸಲಾತಿಯಲ್ಲಿ ಮುಸ್ಲಿಮರಿಗೆ ಕೋಟಾ ನೀಡಲು ಕಾಂಗ್ರೆಸ್​ ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

ಸಾಚಾರ್ ಸಮಿತಿಯ ಶಿಫಾರಸುಗಳನ್ನು ಉಲ್ಲೇಕಿಸಿ ಮಾತನಾಡಿ ಎಸ್​ಸಿ ಎಸ್​ಟಿ ಮತ್ತು ಒಬಿಸಿ ಕೋಟಾಕ್ಕೆ ಶೇ.6ರಷ್ಟು ಮೀಸಲಾತಿ ನೀಡುವ ಮೂಲಕ ಅದನ್ನು ಜಾರಿಗೆ ತರಲು ಹೊರಟಿದೆ ಎಂದಿದ್ದಾರೆ.

ದೇಶದ ಸಂಪನ್ಮೂಲದ ಮೇಲೆ ಮುಸಲ್ಮಾನರಿಗೆ ಮೊದಲ ಹಕ್ಕಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದರು. ದೇಶವನ್ನು ಮತ್ತಷ್ಟು ವಿಭಜಿಸಲು ಕಾಂಗ್ರೆಸ್ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿದರು. ಭಾರತ್ ಮಾತಾ ಕಿ ಜೈ ಮತ್ತು ವಂದೇ ಮಾತರಂ ಘೋಷಣೆ ಕೂಗಲು ಹಿಂದೇಟು ಹಾಕುವವರಿಗೆ ಮತ ಹಾಕಬಾರದು ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ