AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರಿಗೆ ಗೋಮಾಂಸ ಸೇವನೆಗೆ ಅವಕಾಶ ನೀಡುತ್ತೆ: ಯೋಗಿ ಆದಿತ್ಯನಾಥ್

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರಿಗೆ ಗೋಮಾಂಸ ಸೇವನೆ ಮಾಡಲು ಅವಕಾಶ ನೀಡುತ್ತದೆ ಎಂದು ಕಾಂಗ್ರೆಸ್​ ಹೇಳಿದೆ.

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರಿಗೆ ಗೋಮಾಂಸ ಸೇವನೆಗೆ ಅವಕಾಶ ನೀಡುತ್ತೆ: ಯೋಗಿ ಆದಿತ್ಯನಾಥ್
ನಯನಾ ರಾಜೀವ್
|

Updated on: Apr 28, 2024 | 11:55 AM

Share

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಅಲ್ಪಸಂಖ್ಯಾತರಿಗೆ ಗೋಮಾಂಸ ತಿನ್ನುವ ಹಕ್ಕನ್ನು ನೀಡುತ್ತದೆ ಇದು ಗೋಹತ್ಯೆಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದು ಯೋಗಿ ಆದಿತ್ಯನಾಥ್(Yogi Adityanath) ಹೇಳಿದ್ದಾರೆ. ಚುನಾವಣಾ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಯೋಗಿ, ಹಿಂದೂ ಧರ್ಮದಲ್ಲಿ ಗೋವನ್ನು ತಾಯಿಯಂತೆ ಪೂಜಿಸಲಾಗುತ್ತದೆ. ನಾಚಿಕೆ ಇಲ್ಲದ ಜನರು ಗೋಮಾಂಸ ತಿನ್ನುವ ಹಕ್ಕಿನ ಭರವಸೆ ನೀಡುತ್ತಾರೆ, ಭಾರತ ಇದಕ್ಕೆ ಎಂದಾದರೂ ಒಪ್ಪಿಕೊಳ್ಳುತ್ತದೆಯೇ ಎಂದು ಪ್ರಶ್ನೆ ಮಾಡಿದ್ದಾರೆ.

ಅಲ್ಪಸಂಖ್ಯಾತರಿಗೆ ಅವರವರ ಇಷ್ಟದ ಆಹಾರ ತಿನ್ನುವ ಸ್ವಾತಂತ್ರ್ಯ ಕೊಡಬೇಕು ಎಂದರೆ ಗೋಹತ್ಯೆಗೆ ಅವಕಾಶ ಕೊಡುವ ಮಾತನಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಈ ದೇಶದಲ್ಲಿ ಹಿಂದೂ ಸಮುದಾಯವು ಗೋಮಾಂಸವನ್ನು ಸಂಪೂರ್ಣವಾಗಿ ತ್ಯಜಿಸುತ್ತದೆ, ಏಕೆಂದರೆ ಅವರು ಗೋವನ್ನು ಪವಿತ್ರವೆಂದು ಪರಿಗಣಿಸುತ್ತಾರೆ. ಈ ನಿಟ್ಟಿನಲ್ಲಿ ಮುಸ್ಲಿಮರಿಗೆ ವಿನಾಯಿತಿ ನೀಡುವ ಕಾಂಗ್ರೆಸ್ನ ಪ್ರಯತ್ನವು ಎಲ್ಲರಿಗೂ ಸ್ವೀಕಾರಾರ್ಹವಲ್ಲ ಎಂದು ಅವರು ಹೇಳಿದರು.

ಉತ್ತರ ಪ್ರದೇಶ ಈಗಾಗಲೇ ಗೋಹತ್ಯೆ ವಿರುದ್ಧ ಕಠಿಣ ಕಾನೂನುಗಳನ್ನು ಹೊಂದಿದ್ದು, 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 5 ಲಕ್ಷ ರೂ. ದವರೆಗೆ ದಂಡ ವಿಧಿಸುವ ಅವಕಾಶವನ್ನು ಹೊಂದಿದೆ. ಉತ್ತರ ಪ್ರದೇಶ ಸರ್ಕಾರವು 2020 ರಲ್ಲಿ ಗೋಹತ್ಯೆ ಕುರಿತು ಸುಗ್ರೀವಾಜ್ಞೆಯನ್ನು ಜಾರಿಗೊಳಿಸುವ ಮೂಲಕ ಕಾನೂನಾಗಿ ರೂಪಿಸಿತು.

ಮತ್ತಷ್ಟು ಓದಿ: ಯೋಗಿ ಆದಿತ್ಯನಾಥ್ ದೇಶದ ಎರಡನೇ ಜನಪ್ರಿಯ ಮುಖ್ಯಮಂತ್ರಿ, ಮೊದಲನೆಯವರು ಯಾರು?

2020 ರಲ್ಲಿ, ಯೋಗಿ ಸರ್ಕಾರವು ಸುಗ್ರೀವಾಜ್ಞೆಯನ್ನು ಪ್ರಕಟಿಸಿತು ಮತ್ತು ನಂತರ ಅದನ್ನು ರಾಜ್ಯದಲ್ಲಿ ಜಾರಿಗೆ ತರಲು ಕಾನೂನನ್ನು ಜಾರಿಗೊಳಿಸಿತು. ಯುಪಿಎ ಸರ್ಕಾರದ ಅವಧಿಯಲ್ಲಿ 2004ರಿಂದ 2014ರವರೆಗೆ ಕಾಂಗ್ರೆಸ್​ ಇಂತಹ ಪ್ರಯತ್ನಗಳನ್ನು ಮಾಡಿದೆ. ಕರ್ನಾಟಕದಲ್ಲಿ ಎಸ್​ಸಿ, ಎಸ್​ಟಿ ಮತ್ತು ಒಬಿಸಿ ಮೀಸಲಾತಿಯಲ್ಲಿ ಮುಸ್ಲಿಮರಿಗೆ ಕೋಟಾ ನೀಡಲು ಕಾಂಗ್ರೆಸ್​ ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ.

ಸಾಚಾರ್ ಸಮಿತಿಯ ಶಿಫಾರಸುಗಳನ್ನು ಉಲ್ಲೇಕಿಸಿ ಮಾತನಾಡಿ ಎಸ್​ಸಿ ಎಸ್​ಟಿ ಮತ್ತು ಒಬಿಸಿ ಕೋಟಾಕ್ಕೆ ಶೇ.6ರಷ್ಟು ಮೀಸಲಾತಿ ನೀಡುವ ಮೂಲಕ ಅದನ್ನು ಜಾರಿಗೆ ತರಲು ಹೊರಟಿದೆ ಎಂದಿದ್ದಾರೆ.

ದೇಶದ ಸಂಪನ್ಮೂಲದ ಮೇಲೆ ಮುಸಲ್ಮಾನರಿಗೆ ಮೊದಲ ಹಕ್ಕಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದರು. ದೇಶವನ್ನು ಮತ್ತಷ್ಟು ವಿಭಜಿಸಲು ಕಾಂಗ್ರೆಸ್ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿದರು. ಭಾರತ್ ಮಾತಾ ಕಿ ಜೈ ಮತ್ತು ವಂದೇ ಮಾತರಂ ಘೋಷಣೆ ಕೂಗಲು ಹಿಂದೇಟು ಹಾಕುವವರಿಗೆ ಮತ ಹಾಕಬಾರದು ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ