AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಪ್ರದೇಶದಿಂದ ಕಳವಾಗಿ ಇಂಗ್ಲೆಂಡ್​ ಸೇರಿದ್ದ ಯೋಗಿನಿ ವಿಗ್ರಹ ಸಂಕ್ರಾಂತಿಯಂದೇ ಭಾರತಕ್ಕೆ ವಾಪಸ್​; ಖಾಸಗಿ ನಿವಾಸದ ಬಳಿ ಸಿಕ್ಕಿತ್ತು ಈ ಶಿಲ್ಪ

ಉತ್ತರಪ್ರದೇಶದ ಬಂದಾ ಜಿಲ್ಲೆಯ ಲೋಖಾರಿ ದೇವಸ್ಥಾನದಲ್ಲಿದ್ದ ವಿಗ್ರಹ ಇದು ಎನ್ನಲಾಗಿದೆ. ಮರಳುಗಲ್ಲಿನಲ್ಲಿ ಸುಂದರವಾಗಿ ಕೆತ್ತಲಾದ ಶಿಲ್ಪವನ್ನು ನವದೆಹಲಿಯಲ್ಲಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ರವಾನಿಸಲಾಗುತ್ತದೆ. 

ಉತ್ತರಪ್ರದೇಶದಿಂದ ಕಳವಾಗಿ ಇಂಗ್ಲೆಂಡ್​ ಸೇರಿದ್ದ ಯೋಗಿನಿ ವಿಗ್ರಹ ಸಂಕ್ರಾಂತಿಯಂದೇ ಭಾರತಕ್ಕೆ ವಾಪಸ್​; ಖಾಸಗಿ ನಿವಾಸದ ಬಳಿ ಸಿಕ್ಕಿತ್ತು ಈ ಶಿಲ್ಪ
ಕಳವಾಗಿದ್ದ ಮೇಕೆ ಮುಖದ ಯೋಗಿನಿ
TV9 Web
| Edited By: |

Updated on: Jan 15, 2022 | 3:54 PM

Share

ಇಂಗ್ಲೆಂಡ್​​ನ ಖಾಸಗಿ ನಿವಾಸವೊಂದರ ಉದ್ಯಾನವನದಲ್ಲಿ ಇತ್ತೀಚೆಗೆ ಸಿಕ್ಕಿದ್ದ ಪ್ರಾಚೀನ ಭಾರತದ ದೇವಿ ವಿಗ್ರಹವೊಂದನ್ನು ಶುಕ್ರವಾರ ಮಕರ ಸಂಕ್ರಾಂತಿ ದಿನದಂದು ಭಾರತಕ್ಕೆ ಮರಳಿಸಲಾಗಿದೆ. ಮೇಖೆ ಮುಖವುಳ್ಳ ಯೋಗಿಣಿಯ ವಿಗ್ರಹ ಇದಾಗಿದ್ದು, ಯುಕೆಯ ಕ್ರಿಸ್​ ಮರಿನೆಲ್ಲೋ ಆಫ್ ಆರ್ಟ್​ ರಿಕವರಿ ಇಂಟರ್​ನ್ಯಾಷನಲ್​ ಎಂಬ ಸಂಸ್ಥೆಯು ಭಾರತಕ್ಕೆ ಹಸ್ತಾಂತರಿಸಲು ಎಲ್ಲ ರೀತಿಯ ಸಹಾಯ ಮಾಡಿದೆ. ಹಾಗೇ, ಲಂಡನ್​​ನಲ್ಲಿರುವ ಭಾರತದ ಹೈಕಮಿಷನ್​ ಕಚೇರಿಯಲ್ಲಿ, ಇಂಗ್ಲೆಂಡ್​​ನ ಭಾರತೀಯ ಹೈಕಮಿಷನರ್​ ಗಾಯತ್ರಿ ಇಸ್ಸಾರ್ ಕುಮಾರ್​ಗೆ ಈ ಶಿಲ್ಪವನ್ನು ಹಸ್ತಾಂತರ ಮಾಡಲಾಗಿದೆ.  

ಉತ್ತರಪ್ರದೇಶದ ಬಂದಾ ಜಿಲ್ಲೆಯ ಲೋಖಾರಿ ದೇವಸ್ಥಾನದಲ್ಲಿದ್ದ ವಿಗ್ರಹ ಇದು ಎನ್ನಲಾಗಿದೆ. ಮರಳುಗಲ್ಲಿನಲ್ಲಿ ಸುಂದರವಾಗಿ ಕೆತ್ತಲಾದ ಶಿಲ್ಪವನ್ನು ನವದೆಹಲಿಯಲ್ಲಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ರವಾನಿಸಲಾಗುತ್ತದೆ.   ವಿಗ್ರಹ ಸ್ವೀಕಾರ ಮಾಡಿದ ಗಾಯತ್ರಿ ಇಸ್ಸಾರ್ ಕುಮಾರ್​ ಮಾತನಾಡಿ, ಮಕರ ಸಂಕ್ರಾಂತಿಯಂದೇ ಈ ಯೋಗಿನಿಯ ವಿಗ್ರಹವನ್ನು ಸ್ವೀಕಾರಮಾಡುತ್ತಿರುವುದು ತುಂಬ ಸಂತೋಷ ತಂದ ವಿಚಾರ ಎಂದು ಹೇಳಿದ್ದಾರೆ. ಈ ವಿಗ್ರಹ ಇರುವುದು 2021ರ ನವೆಂಬರ್​​ನಲ್ಲಿಯೇ ಭಾರತೀಯ ಹೈಕಮಿಷನ್​​ಗೆ ತಿಳಿಯಿತು. ಆಗಿನಿಂದಲೇ ಹಸ್ತಾಂತರ ಪ್ರಕ್ರಿಯೆಯಗಳು ಶುರುವಾಗಿದ್ದವು. ಇದೀಗ ನಾವು ಪುರಾತತ್ವ ಇಲಾಖೆಗೆ ವಿಗ್ರಹ ಕಳಿಸುವುದಷ್ಟೇ ಬಾಕಿ ಇದೆ. ಈ ವಿಗ್ರಹವನ್ನು ನ್ಯಾಷನಲ್​ ಮ್ಯೂಸಿಯಂನಲ್ಲಿ ಇಡುವ ಸಾಧ್ಯತೆ ಇದೆ ಎಂದೂ ಹೇಳಿದ್ದಾರೆ.

ಇದೇ ಗಾಯತ್ರಿ ಕುಮಾರ್​ ಅವರು ಪ್ಯಾರಿಸ್​ನಲ್ಲಿ ರಾಜತಾಂತ್ರಿಕ ಅಧಿಕಾರಿಯಾಗಿದ್ದಾಗ ಕೋಣನ ತಲೆಯ ಯೋಗಿನಿ ಶಿಲ್ಪವೊಂದನ್ನು ಭಾರತಕ್ಕೆ ತರಲಾಗಿತ್ತು. ಆ ಪುರಾತನ ಶಿಲ್ಪ ಕೂಡ ಲೋಖಾರಿಯ ಇದೇ ದೇಗುಲದಿಂದಲೇ ಕಳವಾಗಿತ್ತು. 2013ರಲ್ಲಿ ಅದನ್ನು ವಾಪಸ್ ಭಾರತಕ್ಕೆ ತರಲಾಗಿದ್ದು, ಸದ್ಯ ಇಲ್ಲಿನ ನ್ಯಾಷನಲ್ ಮ್ಯೂಸಿಯಂನಲ್ಲಿ ಇಡಲಾಗಿದೆ. ಅದರಂತೆ ಈಗ ಮೇಕೆ ತಲೆಯ ಯೋಗಿನಿಯನ್ನೂ ಅಲ್ಲೇ ಇಡಬಹುದು ಎಂಬ ನಿರೀಕ್ಷೆ ಇದೆ. ಅಂದಹಾಗೆ, ಈ ಯೋಗಿನಿಯರು ತಾಂತ್ರಿಕ ಪೂಜಾ ವಿಧಾನಕ್ಕೆ ಸಂಬಂಧಪಟ್ಟ ಶಕ್ತಿಶಾಲಿ ಸ್ತ್ರೀ ದೇವತೆಗಳಾಗಿದ್ದಾರೆ. 64 ಯೋಗಿನಿಯರ ಗುಂಪಿದ್ದು, ಅವರ ಶಕ್ತಿ ಅನಂತ, ಅಪರಿಮಿತ ಎಂದೇ ನಂಬಲಾಗಿದೆ.

ಇದನ್ನೂ ಓದಿ: ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಟಿಬಿ ಜಯಚಂದ್ರ ಹಾಗೂ ಕೆಲ ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ದೃಢ

ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು