AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀವು ಅಧಿಕಾರದ ನಶೆಯಲ್ಲಿದ್ದೀರಿ: ಅರವಿಂದ ಕೇಜ್ರಿವಾಲ್‌ಗೆ ಅಣ್ಣಾ ಹಜಾರೆ ಪತ್ರ

ನೀವು ಮುಖ್ಯಮಂತ್ರಿಯಾದ ನಂತರ ನಾನು ನಿಮಗೆ ಮೊದಲ ಬಾರಿಗೆ ಪತ್ರ ಬರೆಯುತ್ತಿದ್ದೇನೆ, ಏಕೆಂದರೆ ನಿಮ್ಮ ಸರ್ಕಾರದ ಮದ್ಯ ನೀತಿಯ ಬಗ್ಗೆ ಇತ್ತೀಚಿನ ಸುದ್ದಿ ವರದಿಗಳಿಂದ ನನಗೆ ನೋವಾಗಿದೆ ಎಂದು ಪತ್ರ ಆರಂಭವಾಗುತ್ತದೆ.

ನೀವು ಅಧಿಕಾರದ ನಶೆಯಲ್ಲಿದ್ದೀರಿ: ಅರವಿಂದ ಕೇಜ್ರಿವಾಲ್‌ಗೆ ಅಣ್ಣಾ ಹಜಾರೆ ಪತ್ರ
ಅಣ್ಣಾ ಹಜಾರೆ- ಕೇಜ್ರಿವಾಲ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Aug 30, 2022 | 3:37 PM

Share

ದೆಹಲಿ: ಮದ್ಯದಂತೆಯೇ ಅಧಿಕಾರ ಕೂಡ ಅಮಲೇರಿಸುತ್ತದೆ. ನೀವು ಅಧಿಕಾರದ ನಶೆಯಲ್ಲಿದ್ದೀರಿ ಎಂದು ತೋರುತ್ತದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ಗೆ (Arvind Kejriwal)  ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ (Anna Hazare) ಪತ್ರ ಬರೆದಿದ್ದಾರೆ. ಭ್ರಷ್ಟಾಚಾರ ಪ್ರಕರಣದ ನಂತರ ಜುಲೈನಲ್ಲಿ ಹಿಂತೆಗೆದುಕೊಳ್ಳಲಾದ ಅವರ ಸರ್ಕಾರಿ ಅಬಕಾರಿ ಪರವಾನಗಿ ನೀತಿಯ ಕುರಿತು ಅಣ್ಣಾ, ಈ ರೀತಿ ಟೀಕೆ ಮಾಡಿದ್ದಾರೆ. ನೀವು ಮುಖ್ಯಮಂತ್ರಿಯಾದ ನಂತರ ನಾನು ನಿಮಗೆ ಮೊದಲ ಬಾರಿಗೆ ಪತ್ರ ಬರೆಯುತ್ತಿದ್ದೇನೆ, ಏಕೆಂದರೆ ನಿಮ್ಮ ಸರ್ಕಾರದ ಮದ್ಯ ನೀತಿಯ ಬಗ್ಗೆ ಇತ್ತೀಚಿನ ಸುದ್ದಿ ವರದಿಗಳಿಂದ ನನಗೆ ನೋವಾಗಿದೆ ಎಂದು ಪತ್ರ ಆರಂಭವಾಗುತ್ತದೆ. ನಿಮ್ಮ ‘ಸ್ವರಾಜ್’ ಪುಸ್ತಕದಲ್ಲಿ ಅಬಕಾರಿ ನೀತಿಗಳ ಬಗ್ಗೆ ಆದರ್ಶಪ್ರಾಯವಾದ ವಿಷಯಗಳನ್ನು ಬರೆದಿದ್ದೀರಿ, ಅದಕ್ಕೆ ನನಗೆ ಪರಿಚಯವನ್ನು ಬರೆಯುವಂತೆ ಮಾಡಿದ್ದೀರಿ ಎಂದ ಅಣ್ಣಾ, ಪ್ರದೇಶದ ನಿವಾಸಿಗಳ ಒಪ್ಪಿಗೆಯಿಲ್ಲದೆ ಯಾವುದೇ ಮದ್ಯದ ಅಂಗಡಿಗಳನ್ನು ತೆರೆಯಬೇಡಿ. ಮುಖ್ಯಮಂತ್ರಿಯಾದ ನಂತರ ನೀವು ಆ ಆದರ್ಶಗಳನ್ನು ಮರೆತಿದ್ದೀರಿ ಎಂದಿದ್ದಾರೆ.

ನೀವು, ಮನೀಶ್ ಸಿಸೋಡಿಯಾ ಮತ್ತು ಇತರರು ಸ್ಥಾಪಿಸಿದ ಆಮ್ ಆದ್ಮಿ ಪಕ್ಷವು ಈಗ ಯಾವುದೇ ಪಕ್ಷಕ್ಕಿಂತ ಭಿನ್ನವಾಗಿಲ್ಲ. ನಾವು ಒತ್ತಡದ ಗುಂಪಿಗೆ ಅಂಟಿಕೊಂಡಿದ್ದರೆ ಮತ್ತು ನಾನು ಸೂಚಿಸಿದಂತೆ ಜಾಗೃತಿ ಅಭಿಯಾನವನ್ನು ನಡೆಸಿದ್ದರೆ ಭಾರತದಲ್ಲಿ ಎಲ್ಲಿಯೂ ಇಂತಹ ತಪ್ಪು ಮದ್ಯ ನೀತಿ ರೂಪುಗೊಳ್ಳುತ್ತಿರಲಿಲ್ಲ ಎಂದು ಹಜಾರೆ ಹೇಳಿದ್ದಾರೆ.

ಏತನ್ಮಧ್ಯೆ, ಅಬಕಾರಿ ನೀತಿಯ ಕುರಿತು ನಡೆಯುತ್ತಿರುವ ಸಿಬಿಐ ತನಿಖೆಯಲ್ಲಿ, ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ಬ್ಯಾಂಕ್ ಲಾಕರ್‌ಗಳನ್ನು ಇಂದು ಪರಿಶೀಲಿಸಲಾಯಿತು. ಈ ಹಿಂದೆ ಅವರ ಮನೆ ಮೇಲೆ ದಾಳಿ ನಡೆಸಲಾಗಿತ್ತು. ಅವರ ಮನೆಯಲ್ಲಿ ಅಥವಾ ಬ್ಯಾಂಕ್‌ನಲ್ಲಿ ಕೇಂದ್ರ ಸರ್ಕಾರದ ತನಿಖಾ ಸಂಸ್ಥೆಗೆ ‘ಏನೂ ಸಿಗದ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರಿಂದ ನನಗೆ ಕ್ಲೀನ್ ಚಿಟ್ ಸಿಕ್ಕಿದೆ’ ಎಂದು ಸಿಸೋಡಿಯಾ  ಹೇಳಿದ್ದು ಸಿಬಿಐ ಇನ್ನೂ ಯಾವುದೇ ಹೇಳಿಕೆ ಬಿಡುಗಡೆ ಮಾಡಿಲ್ಲ.

ಇದನ್ನೂ ಓದಿ
Image
BIG NEWS: ದೆಹಲಿ ಅಬಕಾರಿ ನೀತಿಯಲ್ಲಿ ಭ್ರಷ್ಟಾಚಾರ ಆರೋಪ: ಮನೀಶ್ ಸಿಸೋಡಿಯಾ ಬ್ಯಾಂಕ್ ಲಾಕರ್ ಪರಿಶೀಲಿಸಲಿದೆ ಸಿಬಿಐ
Image
Majority Test: ಬಹುಮತವಿದ್ದರೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿಶ್ವಾಸಮತ ಯಾಚನೆ
Image
Big News: ಡಿಸಿಎಂ ಮನೀಶ್ ಸಿಸೋಡಿಯಾಗೆ ಬಿಜೆಪಿಯಿಂದ ಸಿಎಂ ಸ್ಥಾನದ ಆಫರ್; ಅರವಿಂದ್ ಕೇಜ್ರಿವಾಲ್ ಮತ್ತೊಂದು ಆರೋಪ
Image
AAP vs BJP: ಬಿಜೆಪಿಗೆ ಸೇರಲು 20 ಕೋಟಿ, ಇತರರನ್ನು ಕರೆತರಲು 25 ಕೋಟಿ; ಬಿಜೆಪಿ ವಿರುದ್ಧ ಆಪ್ ಆರೋಪ

ದೆಹಲಿ ಸರ್ಕಾರದ ಅಬಕಾರಿ ಖಾತೆಯನ್ನು ನಿರ್ವಹಿಸುತ್ತಿರುವ  ಸಿಸೋಡಿಯಾ ಅವರು ಸಿಬಿಐ ಸಲ್ಲಿಸಿದ ಎಫ್‌ಐಆರ್‌ನಲ್ಲಿ ಹೆಸರಿಸಲಾದ 15 ಆರೋಪಿಗಳಲ್ಲಿ ಒಬ್ಬರು.

ಲೆಫ್ಟಿನೆಂಟ್ ಗವರ್ನರ್‌ನ ಅಗತ್ಯ ಅನುಮತಿಯಿಲ್ಲದೆ ನೀತಿಯನ್ನು ಪರಿಚಯಿಸಲಾಗಿದೆ ಮಾತ್ರವಲ್ಲದೆ, ಅನೇಕ ಅನರ್ಹ ಮಾರಾಟಗಾರರಿಗೆ ಲಂಚದ ಬದಲಾಗಿ ಪರವಾನಗಿಗಳನ್ನು ಸಹ ನೀಡಲಾಗಿದೆ ಎಂದು ಸಂಸ್ಥೆ ಆರೋಪಿಸಿದೆ. ಕಳೆದ ವರ್ಷ ನವೆಂಬರ್‌ನಲ್ಲಿ ಪರಿಚಯಿಸಲಾದ ಈ ನೀತಿಯನ್ನು ಎಂಟು ತಿಂಗಳ ನಂತರ ಸಿಬಿಐ ಪರಿಶೀಲಿಸಲು ಪ್ರಾರಂಭಿಸಿದ್ದರಿಂದ  ಅದನ್ನು ದೆಹಲಿ ಸರ್ಕಾರ ಹಿಂಪಡೆದಿದೆ ,

ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಕೇಜ್ರಿವಾಲ್, ತನಿಖೆಯು ಕೊಳಕು ರಾಜಕೀಯದಿಂದ ಪ್ರೇರಿತವಾಗಿದೆ ಎಂದು ಹೇಳಿದ್ದಾರೆ.

ಕೇಂದ್ರದಲ್ಲಿ ಅಧಿಕಾರದಲ್ಲಿದ್ದರೂ ದೆಹಲಿ ವಿಧಾನಸಭೆಯಲ್ಲಿ ಬಿಜೆಪಿ ಸಣ್ಣಪುಟ್ಟ ಅಲ್ಪಸಂಖ್ಯಾತರೆಂದು ಕಿಡಿಕಾರಿದೆ. ಅರವಿಂದ್ ಕೇಜ್ರಿವಾಲ್ ಅವರ ಹೆಚ್ಚುತ್ತಿರುವ ಜನಪ್ರಿಯತೆಗೆ  ಅವರು ಹೆದರುತ್ತಾರೆ” ಎಂದು ಪಕ್ಷ ಹೇಳಿದೆ.

Published On - 3:32 pm, Tue, 30 August 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?