AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಮ್ಮ ತಾಳ್ಮೆ ಪರೀಕ್ಷಿಸುತ್ತಿದ್ದೀರಿ’: ನ್ಯಾಯಾಧಿಕರಣ ಸುಧಾರಣಾ ಕಾಯ್ದೆ ವಿಚಾರದಲ್ಲಿ ಕೇಂದ್ರಕ್ಕೆ ಸುಪ್ರೀಂಕೋರ್ಟ್ ತರಾಟೆ

Supreme Court: "ಈ ನ್ಯಾಯಾಲಯದ ತೀರ್ಪುಗಳಿಗೆ ಗೌರವವಿಲ್ಲ. ನೀವು ನಮ್ಮ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದೀರಿ. ಎಷ್ಟು ಜನರನ್ನು ನೇಮಿಸಲಾಗಿದೆ? ಕೆಲವು ವ್ಯಕ್ತಿಗಳನ್ನು ನೇಮಿಸಲಾಗಿದೆ ಎಂದು ನೀವು ಹೇಳಿದ್ದೀರಾ? " ನ್ಯಾಯಾಲಯವು ಈ ಬಗ್ಗೆ ತೀವ್ರವಾಗಿ ಅಸಮಾಧಾನಗೊಂಡಿದೆ ಎಂದು ಮುಖ್ಯ ನ್ಯಾಯಮೂರ್ತಿ ಎನ್. ವಿ ರಮಣ ಹೇಳಿದರು.

'ನಮ್ಮ ತಾಳ್ಮೆ ಪರೀಕ್ಷಿಸುತ್ತಿದ್ದೀರಿ': ನ್ಯಾಯಾಧಿಕರಣ ಸುಧಾರಣಾ ಕಾಯ್ದೆ ವಿಚಾರದಲ್ಲಿ ಕೇಂದ್ರಕ್ಕೆ ಸುಪ್ರೀಂಕೋರ್ಟ್ ತರಾಟೆ
ಸುಪ್ರೀಂ​ ಕೋರ್ಟ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Sep 06, 2021 | 1:20 PM

Share

ದೆಹಲಿ: ನ್ಯಾಯಮಂಡಳಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ವಿಳಂಬದ ಕುರಿತು ಸುಪ್ರೀಂಕೋರ್ಟ್ ಸೋಮವಾರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು ಎಂದು ಲೈವ್ ಲಾ ವರದಿ ಮಾಡಿದೆ. ನ್ಯಾಯಾಧಿಕರಣ ಸುಧಾರಣಾ ಕಾಯ್ದೆಯನ್ನು ಅಂಗೀಕರಿಸಿದ ಕೇಂದ್ರದ ಮೇಲೆ ನ್ಯಾಯಪೀಠ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು ಇದು ” ನ್ಯಾಯಾಲಯವು ರದ್ದುಗೊಳಿಸಿದ ನಿಬಂಧನೆಗಳ ವಾಸ್ತವ ಪ್ರತಿರೂಪ ” ಎಂದು ಕರೆದಿದೆ.

“ಈ ನ್ಯಾಯಾಲಯದ ತೀರ್ಪುಗಳಿಗೆ ಗೌರವವಿಲ್ಲ. ನೀವು ನಮ್ಮ ತಾಳ್ಮೆಯನ್ನು ಪರೀಕ್ಷಿಸುತ್ತಿದ್ದೀರಿ. ಎಷ್ಟು ಜನರನ್ನು ನೇಮಿಸಲಾಗಿದೆ? ಕೆಲವು ವ್ಯಕ್ತಿಗಳನ್ನು ನೇಮಿಸಲಾಗಿದೆ ಎಂದು ನೀವು ಹೇಳಿದ್ದೀರಾ? ” ನ್ಯಾಯಾಲಯವು ಈ ಬಗ್ಗೆ ತೀವ್ರವಾಗಿ ಅಸಮಾಧಾನಗೊಂಡಿದೆ ಎಂದು ಮುಖ್ಯ ನ್ಯಾಯಮೂರ್ತಿ ಎನ್. ವಿ ರಮಣ ಹೇಳಿದರು.

ನ್ಯಾಯಾಲಯವು ಸರ್ಕಾರಕ್ಕೆ ನೋಟಿಸ್ ನೀಡಿದ್ದು ಅಗತ್ಯ ನೇಮಕಾತಿಗಳನ್ನು ಮಾಡಲು ಒಂದು ವಾರ ಕಾಲಾವಕಾಶ ನೀಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಎನ್‌.ವಿ ರಮಣ, ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್ ಅವರನ್ನೊಳಗೊಂಡ ವಿಶೇಷ ಪೀಠವು ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ನ್ಯಾಯಮಂಡಳಿಗಳ ಸ್ಥಿತಿಗತಿಗಳ ಬಗ್ಗೆ ನ್ಯಾಯಾಲಯದ ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿದೆ. “ನಮಗೆ ಕೇವಲ ಮೂರು ಆಯ್ಕೆಗಳಿವೆ. ಒಂದು ನಾವು ಶಾಸನದಲ್ಲಿ ಉಳಿಯುತ್ತೇವೆ. ಎರಡು ನಾವು ನ್ಯಾಯಮಂಡಳಿಗಳನ್ನು ಮುಚ್ಚುತ್ತೇವೆ ಮತ್ತು ಅಧಿಕಾರವನ್ನು ಹೈಕೋರ್ಟ್‌ಗೆ ನೀಡುತ್ತೇವೆ. ಮೂರು, ನಾವೇ ನೇಮಕಾತಿ ಮಾಡಿಕೊಳ್ಳುತ್ತೇವೆ ”ಎಂದು ಸಿಜೆಐ ಹೇಳಿದರು.

“ನಾವು ಸರ್ಕಾರದೊಂದಿಗೆ ಮುಖಾಮುಖಿಯಾಗಲು ಬಯಸುವುದಿಲ್ಲ. ಸುಪ್ರೀಂಕೋರ್ಟ್ ನ್ಯಾಯಾಧೀಶರನ್ನು ನೇಮಿಸಿದ ರೀತಿ ನಮಗೆ ಸಂತೋಷವಾಗಿದೆ. ಸದಸ್ಯರು ಅಥವಾ ಅಧ್ಯಕ್ಷರಿಲ್ಲದೆ ಈ ನ್ಯಾಯಮಂಡಳಿಗಳು ಕುಸಿಯುತ್ತಿವೆ “ಎಂದು ಸಿಜೆಐ ಹೇಳಿದರು.

ಕೇಂದ್ರ ಸರ್ಕಾರವನ್ನು ಪ್ರತಿನಿಧಿಸುತ್ತಿರುವ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ “ನ್ಯಾಯಾಧಿಕರಣಗಳನ್ನು ಮುಚ್ಚುವ ಯಾವುದೇ ದೂರದ ಉದ್ದೇಶವಿಲ್ಲ” ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರ ಮನವಿಯ ಮೇಲೆ ನ್ಯಾಯಾಲಯ ಈ ರೀತಿ ಪ್ರತಿಕ್ರಿಯಿಸಿದೆ. ನ್ಯಾಯಾಧಿಕರಣ ಸುಧಾರಣಾ ಕಾಯ್ದೆ 2021 ರ ಸಾಂವಿಧಾನಿಕ ಸಿಂಧುತ್ವವನ್ನು ಕಾಂಗ್ರೆಸ್ ನಾಯಕ ಪ್ರಶ್ನಿಸಿದ್ದರು. ಇದನ್ನು ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಇತ್ತೀಚೆಗೆ ಅಂಗೀಕರಿಸಲಾಯಿತು ಮತ್ತು ಆಗಸ್ಟ್ 13 ರಂದು ರಾಷ್ಟ್ರಪತಿಗಳ ಒಪ್ಪಿಗೆಯನ್ನು ಪಡೆಯಲಾಯಿತು.

ಇದನ್ನೂ ಓದಿ: Bhabanipur bypoll ಭವಾನಿಪುರ ಉಪಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಸ್ಪರ್ಧೆ; ಅಭ್ಯರ್ಥಿ ಆಯ್ಕೆಗೆ ಬಿಜೆಪಿ ಸಭೆ ನಾಳೆ

ಇದನ್ನೂ ಓದಿ: ಕೆಲಸ ಕಾಯಂಗೆ ಆಗ್ರಹಿಸಿ 16 ಸಾವಿರ ಪೌರಕಾರ್ಮಿಕರಿಂದ ಪ್ರತಿಭಟನೆ; ಬಿಬಿಎಂಪಿ ಆವರಣ ಸ್ವಚ್ಛಗೊಳಿಸದೆ ಹಾಗೆಯೇ ಬಿಟ್ಟರು!

(You are testing our patience Supreme Court rapped the Centre over Tribunals Reforms Act)

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ