AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೋದಲ್ಲಿ ಕೆಲಸ ಕೇಳಲು ಹೋದಾಗ ನೀವು ನಿಷ್ಪ್ರಯೋಜಕರು, ಇಲ್ಲಿಂದ ಹೊರಗೆ ಹೋಗಿ ಎಂದಿದ್ದರು: ಕೆ ಶಿವನ್

Former ISRO chairman K Sivan: ಬಿಇ ಪದವಿ ನಂತರ ಉದ್ಯೋಗಕ್ಕೆ ಸೇರುವುದಾಗಿ ತೀರ್ಮಾನಿಸಿದೆ. ಆದರೆ ಕೆಲಸ ಪಡೆಯುವುದು ಸುಲಭ ಆಗಿರಲಿಲ್ಲ, ಹಾಗಾಗಿ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆದೆ. ಸ್ನಾತಕೋತ್ತರ ಪದವಿಯ ನಂತರವೇ ಕೆಲಸಕ್ಕಾಗಿ ಇಸ್ರೋ ಸ್ಯಾಟಲೈಟ್ ಕೇಂದ್ರಕ್ಕೆ ಹೋಗಿದ್ದು. ಅಲ್ಲಿಗೆ ಹೋದಾಗ ನಿಮ್ಮಿಂದೇನೂ ಆಗಲ್ಲ, ನಿಮಗೆ ಇಲ್ಲಿ ಕೆಲಸ ಸಿಗುವುದಿಲ್ಲ. ಇಲ್ಲಿಂದ ಹೊರಡಿ ಎಂದು ಹೇಳಿದ್ದರು. ನೋಡಿ, ವರ್ಷಗಳ ನಂತರ ನಾನು ಅದೇ ಸಂಸ್ಥೆಯ ಅಧ್ಯಕ್ಷನಾದೆ

ಇಸ್ರೋದಲ್ಲಿ ಕೆಲಸ ಕೇಳಲು ಹೋದಾಗ ನೀವು ನಿಷ್ಪ್ರಯೋಜಕರು, ಇಲ್ಲಿಂದ ಹೊರಗೆ ಹೋಗಿ ಎಂದಿದ್ದರು: ಕೆ ಶಿವನ್
ಕೆ.ಶಿವನ್
ರಶ್ಮಿ ಕಲ್ಲಕಟ್ಟ
|

Updated on:Oct 17, 2023 | 1:06 PM

Share

ಪಣಜಿ ಅಕ್ಟೋಬರ್ 17: ಇತ್ತೀಚೆಗೆ ಗೋವಾದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (NIT) ಘಟಿಕೋತ್ಸವ ಸಮಾರಂಭದಲ್ಲಿ ಮಾತನಾಡಿದ ಇಸ್ರೋ (ISRO) ಮಾಜಿ ಅಧ್ಯಕ್ಷ ಕೆ ಶಿವನ್(K Sivan), ತಮ್ಮ ಜೀವನಕ್ಕೆ ಸಂಬಂಧಿಸಿದ ಅನೇಕ ಘಟನೆಗಳನ್ನು ಹಂಚಿಕೊಂಡಿದ್ದಾರೆ. ನಾನು ಶಾಲಾ ಶಿಕ್ಷಕನಾಗಲು ಬಯಸಿದ್ದೆ, ವಿಜ್ಞಾನಿಯಾಗಲು ಅಲ್ಲ ಎಂದು ಶಿವನ್ ಹೇಳಿದ್ದಾರೆ ಸ್ನಾತಕೋತ್ತರ ಪದವಿ ನಂತರ ಕೆಲಸಕ್ಕಾಗಿ ಇಸ್ರೋದ ಸ್ಯಾಟಲೈಟ್ ಸೆಂಟರ್​​ಗೆ ಹೋಗಿದ್ದೆ. ಆಗ ಅಲ್ಲಿರುವವರು ನೀವು ‘ನಿಷ್ಪ್ರಯೋಜಕ, ಇಲ್ಲಿಂದ ಹೊರಗೆ ಹೋಗಿ ಎಂದು ಹೇಳಿದ್ದಾರೆ.

ಬಿಇ ಪದವಿ ನಂತರ ಉದ್ಯೋಗಕ್ಕೆ ಸೇರುವುದಾಗಿ ತೀರ್ಮಾನಿಸಿದೆ. ಆದರೆ ಕೆಲಸ ಪಡೆಯುವುದು ಸುಲಭ ಆಗಿರಲಿಲ್ಲ, ಹಾಗಾಗಿ ಸ್ನಾತಕೋತ್ತರ ಪದವಿಗೆ ಪ್ರವೇಶ ಪಡೆದೆ. ಸ್ನಾತಕೋತ್ತರ ಪದವಿಯ ನಂತರವೇ ಕೆಲಸಕ್ಕಾಗಿ ಇಸ್ರೋ ಸ್ಯಾಟಲೈಟ್ ಕೇಂದ್ರಕ್ಕೆ ಹೋಗಿದ್ದು. ಅಲ್ಲಿಗೆ ಹೋದಾಗ ನಿಮ್ಮಿಂದೇನೂ ಆಗಲ್ಲ, ನಿಮಗೆ ಇಲ್ಲಿ ಕೆಲಸ ಸಿಗುವುದಿಲ್ಲ. ಇಲ್ಲಿಂದ ಹೊರಡಿ ಎಂದು ಹೇಳಿದ್ದರು. ನೋಡಿ, ವರ್ಷಗಳ ನಂತರ ನಾನು ಅದೇ ಸಂಸ್ಥೆಯ ಅಧ್ಯಕ್ಷನಾದೆ. ನನಗೆ ಉಪಗ್ರಹ ಕೇಂದ್ರದಲ್ಲಿ ಕೆಲಸ ಸಿಗಲಿಲ್ಲ, ಆದರೆ ರಾಕೆಟ್ ಕೇಂದ್ರದಲ್ಲಿ ಕೆಲಸ ಸಿಕ್ಕಿತು ಎಂದಿದ್ದಾರೆ ಶಿವನ್.

ನನ್ನ ವೃತ್ತಿಜೀವನದಲ್ಲಿ ನಾನು ಬಯಸಿದ್ದನ್ನು ಎಂದಿಗೂ ಪಡೆಯಲಿಲ್ಲ. ಆದರೆ ಅದೃಷ್ಟ ಯಾವಾಗಲೂ ಹೊಸ ಬಾಗಿಲುಗಳನ್ನು ತೆರೆಯುತ್ತದೆ. ನಾನು ಜಿಎಸ್ಎಲ್ ವಿ (ಜಿಯೋಸಿಂಕ್ರೋನಸ್ ಸ್ಯಾಟಲೈಟ್ ಲಾಂಚ್ ವೆಹಿಕಲ್) ನಿರ್ದೇಶಕನಾಗಿ ನೇಮಕಗೊಂಡಾಗ,ಈ ಯೋಜನೆಯನ್ನು ಸಂಪೂರ್ಣ ಯಶಸ್ವಿಗೊಳಿಸಲು ನಿರ್ಧರಿಸಿದೆ. ಅದಕ್ಕಾಗಿ ರಿಸ್ಕ್ ತೆಗೆದುಕೊಂಡೆ, ಇಸ್ರೋ ಅಧಿಕಾರಿಗಳ ಗಮನ ನನ್ನ ಮೇಲೆ ಬಿತ್ತು.

ಜಿಎಸ್‌ಎಲ್‌ವಿ ಯೋಜನೆ ಮತ್ತೆ ಮತ್ತೆ ವಿಫಲವಾಗುತ್ತಿದ್ದು, 4 ಬಾರಿ ವಿಫಲವಾಗಿರುವ ಆ ಯೋಜನೆಯ ನಿರ್ದೇಶಕರನ್ನಾಗಿ ನನ್ನನ್ನು ಮಾಡಿದರು. “ನಾನು ಜಿಎಸ್‌ಎಲ್‌ವಿ ಯೋಜನೆಯ ನಿರ್ದೇಶಕರಾದಾಗ, ನನ್ನ ಎಲ್ಲಾ ಸ್ನೇಹಿತರು ಮತ್ತು ಸಹೋದ್ಯೋಗಿಗಳು ನನ್ನನ್ನು ಅಭಿನಂದಿಸುವ ಬದಲು ಸಹಾನುಭೂತಿ ಹೊಂದಿದ್ದರು. ಈ ಪ್ರಸ್ತಾಪವನ್ನು ಸ್ವೀಕರಿಸಿದ್ದು ಮೂರ್ಖತನ ಎಂದು ಅವರು ಹೇಳಿದರು. ಆದರೆ ನನಗೆ ನನ್ನ ಮೇಲೆ ನಂಬಿಕೆ ಇತ್ತು, ಹಾಗಾಗಿ ಜಿಎಸ್ಎಲ್ ವಿ ಯೋಜನೆಯನ್ನು ಯಶಸ್ವಿಗೊಳಿಸಿದ್ದೇನೆ ಎಂದು ಶಿವನ್ ಹೇಳಿದ್ದಾರೆ.

ಇದನ್ನೂ ಓದಿGaganyaan: ಅಕ್ಟೋಬರ್ 21ಕ್ಕೆ ಗಗನಯಾನ ಮಿಷನ್‌ ಸಿಬ್ಬಂದಿ ಮಾಡ್ಯೂಲ್‌ನ ಮೊದಲ ಹಾರಾಟ ಪರೀಕ್ಷೆ: ಇಸ್ರೋ

ಶಿವನ್ ಅವರ ನೇತೃತ್ವದಲ್ಲಿ ಭಾರತವು ಚಂದ್ರಯಾನ-2 ಮಿಷನ್ ಅನ್ನು ಪ್ರಾರಂಭಿಸಿತು, ಅದು ಯಶಸ್ವಿಯಾಗಲಿಲ್ಲ. ಆ ಘಟನೆಯನ್ನು ನೆನಪಿಸಿಕೊಂಡ ಶಿವನ್, ಚಂದ್ರಯಾನ-2 ವಿಫಲವಾದ ನಂತರ ನಾವು ಸುಮ್ಮನೆ ಕುಳಿತುಕೊಳ್ಳಲಿಲ್ಲ. ಮರುದಿನವೇ ಚಂದ್ರಯಾನ-3 ಗಾಗಿ ತಯಾರಿ ಆರಂಭಿಸಿದ್ದೇವೆ ಎಂದು ಹೇಳಿದರು. ಮರುದಿನವೇ ಚಂದ್ರಯಾನ-3 ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅನುಮೋದನೆ ನೀಡಿದ್ದರು ಎಂದು ಇಸ್ರೋ ಮಾಜಿ ಮುಖ್ಯಸ್ಥರು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:04 pm, Tue, 17 October 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ