AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಾರಣೆಗೂ ಮುನ್ನ ಜೈಲಿನಲ್ಲಿ ದೀರ್ಘಕಾಲ ಇರಿಸಲು ಸಾಧ್ಯವಿಲ್ಲ: ಮದ್ಯ ನೀತಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್

ಬಿನೊಯ್ ಬಾಬು ಅವರಿಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಸಂಜೀವ್ ಖನ್ನಾ "ನೀವು ಜನರನ್ನು ವಿಚಾರಣೆಯ ಮೊದಲು, ದೀರ್ಘಕಾಲದವರೆಗೆ ಜೈಲಿನಲ್ಲಿ ಇರಿಸಲು ಸಾಧ್ಯವಿಲ್ಲ. ಇದು ಸರಿಯಲ್ಲ. ಇದು ಹೇಗೆ ನಡೆಯುತ್ತದೆ ಎಂದು ನಮಗೆ ಇನ್ನೂ ತಿಳಿದಿಲ್ಲ. ಕೇಂದ್ರೀಯ ತನಿಖಾ ದಳದ ಆರೋಪ ಮತ್ತು ಇಡಿ ಆರೋಪಿಸುವುದರ ನಡುವೆ ವಿರೋಧಾಭಾಸವಿದೆ ಎಂದು ಹೇಳಿದ್ದಾರೆ.

ವಿಚಾರಣೆಗೂ ಮುನ್ನ ಜೈಲಿನಲ್ಲಿ ದೀರ್ಘಕಾಲ ಇರಿಸಲು ಸಾಧ್ಯವಿಲ್ಲ: ಮದ್ಯ ನೀತಿ ಪ್ರಕರಣದಲ್ಲಿ ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್
ರಶ್ಮಿ ಕಲ್ಲಕಟ್ಟ
|

Updated on: Dec 08, 2023 | 1:58 PM

Share

ದೆಹಲಿ ಡಿಸೆಂಬರ್ 08: ದೆಹಲಿ ಮದ್ಯ ನೀತಿ ಹಗರಣಕ್ಕೆ(Delhi liquor policy scam) ಸಂಬಂಧಿಸಿದಂತೆ ವಿಶ್ವದ ಅತಿದೊಡ್ಡ ಆಲ್ಕೊಹಾಲ್​​ಯುಕ್ತ ಪಾನೀಯಗಳ ಕಂಪನಿಯ ಅಂಗಸಂಸ್ಥೆಯಾದ ಪೆರ್ನೋಡ್ ರಿಕಾರ್ಡ್ ಇಂಡಿಯಾದ (Pernod Ricard India) ಹಿರಿಯ ಕಾರ್ಯನಿರ್ವಾಹಕರಿಗೆ ಸುಪ್ರೀಂಕೋರ್ಟ್ (Supreme Court) ಶುಕ್ರವಾರ ಜಾಮೀನು ನೀಡಿದೆ. ಪ್ರಾದೇಶಿಕ ಜನರಲ್ ಮ್ಯಾನೇಜರ್ ಬಿನೊಯ್ ಬಾಬು ಅವರಿಗೆ ಜಾಮೀನು ನೀಡುವಾಗ, ನ್ಯಾಯಾಲಯವು, “ನೀವು ಜನರನ್ನು ವಿಚಾರಣೆಯ ಮೊದಲು, ದೀರ್ಘಕಾಲದವರೆಗೆ ಜೈಲಿನಲ್ಲಿ ಇರಿಸಲು ಸಾಧ್ಯವಿಲ್ಲ. ಇದು ಸರಿಯಲ್ಲ ಎಂದು ಗಮನಿಸಿತು. ಇದು ಹೇಗೆ ನಡೆಯುತ್ತದೆ ಎಂದು ನಮಗೆ ಇನ್ನೂ ತಿಳಿದಿಲ್ಲ. ಕೇಂದ್ರೀಯ ತನಿಖಾ ದಳದ ಆರೋಪ ಮತ್ತು ಇಡಿ ಆರೋಪಿಸುವುದರ ನಡುವೆ ವಿರೋಧಾಭಾಸವಿದೆ ಎಂದು ನ್ಯಾಯಮೂರ್ತಿ ಸಂಜೀವ್ ಖನ್ನಾ ಹೇಳಿದ್ದಾರೆ.

ನ್ಯಾಯಮೂರ್ತಿ ಎಸ್‌ವಿಎನ್ ಭಟ್ ಅವರನ್ನೊಳಗೊಂಡ ಪೀಠವು, ಬಾಬು ಅವರು ಈಗಾಗಲೇ 13 ತಿಂಗಳ ಕಾಲ ಜೈಲಿನಲ್ಲಿದ್ದರು. ಅವರ ಅರ್ಜಿಯಲ್ಲಿ ಎತ್ತಿದ ವಾಸ್ತವಿಕ ಸನ್ನಿವೇಶಗಳ ಆಧಾರದ ಮೇಲೆ ಅವರಿಗೆ ಜಾಮೀನು ನೀಡಲಾಗುವುದು ಎಂದಿದ್ದಾರೆ.  ಈ ಪ್ರಕರಣದಲ್ಲಿ ಹಲವಾರು ಜನರನ್ನು ಬಂಧಿಸಲಾಗಿದೆ, ಇದು ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳ ನಡುವೆ, ವಿಶೇಷವಾಗಿ ದೆಹಲಿಯಲ್ಲಿ ಅಧಿಕಾರದಲ್ಲಿರುವ ಆಮ್ ಆದ್ಮಿ ಪಕ್ಷದ ನಡುವೆ ಭಾರೀ ರಾಜಕೀಯ ಗದ್ದಲವನ್ನು ಉಂಟುಮಾಡಿದೆ. ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಇಬ್ಬರು ಹಿರಿಯ ಎಎಪಿ ಸದಸ್ಯರನ್ನೂ ಬಂಧಿಸಲಾಗಿದೆ.

ಸಿಸೋಡಿಯಾ ಫೆಬ್ರವರಿಯಿಂದ ಮತ್ತು ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಅಕ್ಟೋಬರ್‌ನಿಂದ ಜೈಲಿನಲ್ಲಿದ್ದಾರೆ. ಅಕ್ಟೋಬರ್ 30 ರಂದು ಸುಪ್ರೀಂಕೋರ್ಟ್ ಮನೀಶ್ ಸಿಸೋಡಿಯಾ ಜಾಮೀನು ನಿರಾಕರಿಸಿತು. ಸಗಟು ಮದ್ಯ ಮಾರಾಟಗಾರರಿಗೆ ₹ 338 ಕೋಟಿಯ ಗಳಿಕೆಗೆ ಅನುಕೂಲ ಮಾಡಿಕೊಟ್ಟ ಆರೋಪಗಳು “ತಾತ್ಕಾಲಿಕವಾಗಿ” ಸಾಕ್ಷ್ಯಾಧಾರಗಳಿಂದ ಬೆಂಬಲಿತವಾಗಿದೆ ಎಂದು ಅದು ಹೇಳಿದೆ. ಸಿಸೋಡಿಯಾ ಕಳೆದ ವಾರ ತನ್ನ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಫೆಬ್ರವರಿ 26 ರಂದು ಸಿಸೋಡಿಯಾ ಅವರನ್ನು ಸಿಬಿಐ ಮೊದಲು ಬಂಧಿಸಿತು. ದೆಹಲಿಯ ತಿಹಾರ್ ಜೈಲಿನಲ್ಲಿ ಸುದೀರ್ಘ ವಿಚಾರಣೆಯ ನಂತರ ಎರಡು ವಾರಗಳ ನಂತರ ಮಾರ್ಚ್ 9 ರಂದು ಜಾರಿ ನಿರ್ದೇಶನಾಲಯ ಅವರನ್ನು ಬಂಧಿಸಿತು. ದೆಹಲಿ ಸರ್ಕಾರವು ಪರಿಷ್ಕೃತ ಮದ್ಯದ ಅಬಕಾರಿ ನೀತಿಯನ್ನು ನವೆಂಬರ್ 17, 2021 ರಂದು ಜಾರಿಗೆ ತಂದಿದ್ದರೂ ಭ್ರಷ್ಟಾಚಾರದ ವ್ಯಾಪಕ ಆರೋಪಗಳ ನಡುವೆ ಒಂದು ವರ್ಷದ ನಂತರ ಅದನ್ನು ರದ್ದುಗೊಳಿಸಲಾಯಿತು. ತನಿಖಾ ಸಂಸ್ಥೆಗಳು ಸಗಟು ವ್ಯಾಪಾರಿಗಳ ಲಾಭಾಂಶವನ್ನು ನಿರಂಕುಶವಾಗಿ ಐದರಿಂದ 12 ಪ್ರತಿಶತಕ್ಕೆ ಹೆಚ್ಚಿಸಲಾಗಿದೆ ಎಂದು ಹೇಳಿವೆ.

ಇದನ್ನೂ ಓದಿ: ಮಣಿಪುರ ಹಿಂಸಾಚಾರ: 170ಕ್ಕೂ ಹೆಚ್ಚು ಶವಗಳ ಅಂತಿಮ ಸಂಸ್ಕಾರಕ್ಕೆ ಸುಪ್ರೀಂ ನಿರ್ದೇಶನ 

ಹೊಸ ನೀತಿಯು ಮದ್ಯದ ಪರವಾನಗಿಗಳಿಗೆ ಅನರ್ಹರು ವಿತ್ತೀಯ ಪ್ರಯೋಜನಗಳಿಗೆ ಒಲವು ತೋರಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಆದರೆ, ದೆಹಲಿ ಸರ್ಕಾರ ಮತ್ತು ಮನೀಶ್ ಸಿಸೋಡಿಯಾ ಯಾವುದೇ ತಪ್ಪು ಮಾಡಿಲ್ಲ ಎಂದು ನಿರಾಕರಿಸಿದ್ದು ಹೊಸ ನೀತಿಯು ಆದಾಯದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ