AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಮುಸ್ಲಿಮನಿಗೆ ಪ್ರಶಸ್ತಿ ನೀಡುವುದಿಲ್ಲ ಎಂದು ಭಾವಿಸಿದ್ದೆ, ನೀವು ಅದನ್ನು ತಪ್ಪು ಎಂದು ಸಾಬೀತು ಮಾಡಿದಿರಿ: ಪದ್ಮಶ್ರೀ ಪುರಸ್ಕೃತ ಕ್ವಾದ್ರಿ

ನಾನು ಈ ಪ್ರಶಸ್ತಿಯನ್ನು ಪಡೆಯಲು 10 ವರ್ಷಗಳಿಂದ ಪ್ರಯತ್ನಿಸಿದೆ. ಬಿಜೆಪಿ ಸರ್ಕಾರ ಬಂದಾಗ, ನಾನು ಈ ಪ್ರಶಸ್ತಿಯನ್ನು ಪಡೆಯುವುದಿಲ್ಲ ಎಂದು ಭಾವಿಸಿದ್ದೆ, ಏಕೆಂದರೆ ಬಿಜೆಪಿ ಎಂದಿಗೂ ಮುಸ್ಲಿಮರಿಗೆ ಏನನ್ನೂ ನೀಡುವುದಿಲ್ಲ, ಆದರೆ ಈ ಪ್ರಶಸ್ತಿಗೆ ನನ್ನನ್ನು ಆಯ್ಕೆ ಮಾಡುವ ಮೂಲಕ ಪ್ರಧಾನಿ ಮೋದಿ ಆ ಭಾವನೆ ತಪ್ಪು ಎಂದು ಸಾಬೀತುಪಡಿಸಿದರು ಎಂದ ಕ್ವಾದ್ರಿ.

ಬಿಜೆಪಿ ಮುಸ್ಲಿಮನಿಗೆ ಪ್ರಶಸ್ತಿ ನೀಡುವುದಿಲ್ಲ ಎಂದು ಭಾವಿಸಿದ್ದೆ, ನೀವು ಅದನ್ನು ತಪ್ಪು ಎಂದು ಸಾಬೀತು ಮಾಡಿದಿರಿ: ಪದ್ಮಶ್ರೀ ಪುರಸ್ಕೃತ ಕ್ವಾದ್ರಿ
ಕ್ವಾದ್ರಿ ಜತೆ ಮೋದಿ ಮಾತು
ರಶ್ಮಿ ಕಲ್ಲಕಟ್ಟ
|

Updated on: Apr 05, 2023 | 10:49 PM

Share

ಕರ್ನಾಟಕದ ಖ್ಯಾತ ಕಲಾವಿದ ರಶೀದ್ ಅಹ್ಮದ್ ಕ್ವಾದ್ರಿ (Rashid Ahmed Quadri)ಅವರು ಬುಧವಾರ ನವದೆಹಲಿಯಲ್ಲಿ ನಡೆದ ಸಮಾರಂಭದಲ್ಲಿ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀಯನ್ನು (Padma Shri) ಸ್ವೀಕರಿಸಿದ ನಂತರ ಪ್ರಧಾನಿ ನರೇಂದ್ರ ಮೋದಿಯವರಿಗೆ (Narendra Modi) ಧನ್ಯವಾದ ಅರ್ಪಿಸಿದರು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗೌರವವನ್ನು ಪಡೆಯುವ ಭರವಸೆಯನ್ನು ಕಳೆದುಕೊಂಡಿದ್ದೆ. ಏಕೆಂದರೆ ಬಿಜೆಪಿ ಮುಸ್ಲಿಮನಿಗೆ ಪ್ರಶಸ್ತಿ ನೀಡುವುದಿಲ್ಲ ಎಂದು ಭಾವಿಸಿದ್ದೆ. ಆದರೆ ನೀವು ಅದನ್ನು ತಪ್ಪು ಎಂದು ಸಾಬೀತು ಪಡಿಸಿರುವುದಾಗಿ ಮೋದಿ ಅವರಲ್ಲಿ ಕ್ವಾದ್ರಿ ಹೇಳಿದ್ದಾರೆ. ಸಮಾರಂಭ ಮುಗಿದ ನಂತರ ಪ್ರಧಾನಮಂತ್ರಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಶಸ್ತಿ ಪುರಸ್ಕೃತರೊಂದಿಗೆ ಸಂವಾದ ನಡೆಸಿದರು.

ಪ್ರಶಸ್ತಿ ಪುರಸ್ಕತರಿಗೆ ಅಭಿನಂದನೆ ಸಲ್ಲಿಸಿ ಮೋದಿ ಹಸ್ತಲಾಘವ ಮಾಡಿದಾಗ, ಕ್ವಾದ್ರಿ ಅವರು ಯುಪಿಎ ಸರ್ಕಾರದ ಅವಧಿಯಲ್ಲಿ ಪದ್ಮ ಪ್ರಶಸ್ತಿಯನ್ನು ನಿರೀಕ್ಷಿಸಿದ್ದೆ, ಆದರೆ ನನಗೆ ಅದು ಸಿಗಲಿಲ್ಲ, ನಿಮ್ಮ ಸರ್ಕಾರ ಬಂದಾಗ, ಈಗ ಬಿಜೆಪಿ ಸರ್ಕಾರ ನನಗೆ ಯಾವುದೇ ಪ್ರಶಸ್ತಿ ನೀಡುವುದಿಲ್ಲ ಎಂದು ಭಾವಿಸಿದ್ದೆ. ಆದರೆ ನೀವು ಅದನ್ನು ತಪ್ಪು ಎಂದು ಸಾಬೀತುಪಡಿಸಿದ್ದೀರಿ. ನಾನು ನಿಮಗೆ ನನ್ನ ಪ್ರಾಮಾಣಿಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ ಎಂದಿದ್ದಾರೆ. ಹೀಗೆ ಹೇಳಿದ ಕೂಡಲೇ ಮೋದಿ ನಮಸ್ಕಾರ ಮಾಡಿ ಮುಗುಳ್ನಕ್ಕು ಮುಂದೆ ಸಾಗಿದ್ದಾರೆ.

ನಾನು ಈ ಪ್ರಶಸ್ತಿಯನ್ನು ಪಡೆಯಲು 10 ವರ್ಷಗಳಿಂದ ಪ್ರಯತ್ನಿಸಿದೆ. ಬಿಜೆಪಿ ಸರ್ಕಾರ ಬಂದಾಗ, ನಾನು ಈ ಪ್ರಶಸ್ತಿಯನ್ನು ಪಡೆಯುವುದಿಲ್ಲ ಎಂದು ಭಾವಿಸಿದ್ದೆ, ಏಕೆಂದರೆ ಬಿಜೆಪಿ ಎಂದಿಗೂ ಮುಸ್ಲಿಮರಿಗೆ ಏನನ್ನೂ ನೀಡುವುದಿಲ್ಲ, ಆದರೆ ಈ ಪ್ರಶಸ್ತಿಗೆ ನನ್ನನ್ನು ಆಯ್ಕೆ ಮಾಡುವ ಮೂಲಕ ಪ್ರಧಾನಿ ಮೋದಿ ಆ ಭಾವನೆ ತಪ್ಪು ಎಂದು ಸಾಬೀತುಪಡಿಸಿದರು ಎಂದು ಎಎನ್ಐ ಸುದ್ದಿಸಂಸ್ಥೆ ಜತೆ ಮಾತನಾಡಿದ ಕ್ವಾದ್ರಿ ಹೇಳಿದ್ದಾರೆ.

ಜೂನ್ 5, 1955 ರಂದು ಜನಿಸಿದ ಕ್ವಾದ್ರಿ ಅವರು ಬಿದ್ರಿ ಕುಶಲಕರ್ಮಿಗಳ ಕುಟುಂಬದಿಂದ ಬಂದವರು. 1984 ರಲ್ಲಿ ಕರ್ನಾಟಕ ರಾಜ್ಯ ಪ್ರಶಸ್ತಿ, 1988 ರಲ್ಲಿ ರಾಷ್ಟ್ರೀಯ ಪ್ರಶಸ್ತಿ, 1996 ರಲ್ಲಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಕ್ವಾದ್ರಿಗೆ ಹಲವರು ಪ್ರಶಸ್ತಿಗಳು ಲಭಿಸಿವೆ.

ಇದನ್ನೂ ಓದಿ: Padma Awards 2023: ನಾಟು ನಾಟು ಸಂಗೀತ ಸಂಯೋಜಕ ಕೀರವಾಣಿ, ಸುಧಾಮೂರ್ತಿ ಸೇರಿ ಹಲವರಿಗೆ ಪದ್ಮ ಪ್ರಶಸ್ತಿ ಪ್ರದಾನ

ಕರ್ನಾಟಕದಿಂದ ಒಟ್ಟು ಎಂಟು ಮಂದಿ ಪದ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಸಮಾಜಕಾರ್ಯ ಕ್ಷೇತ್ರದಲ್ಲಿ ತಮ್ಮ ಕೊಡುಗೆಗಾಗಿ ಸುಧಾ ಮೂರ್ತಿ, ಸಾಹಿತ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಎಸ್‌ಎಂ ಕೃಷ್ಣ, ಎಸ್‌ಎಲ್ ಭೈರಪ್ಪ, ವಿಜ್ಞಾನ ಮತ್ತು ಇಂಜಿನಿಯರಿಂಗ್ ಕ್ಷೇತ್ರದಲ್ಲಿ ಖಾದರವಲಿ ದೂದೇಕುಲ, ಪುರಾತತ್ವ ಕ್ಷೇತ್ರದಲ್ಲಿ ಎಸ್ ಸುಬ್ಬರಾಮ್, ಜಾನಪದ ನೃತ್ಯಗಾರ್ತಿ ರಾಣಿ ಮಾಚಯ್ಯ, ನಾಡೋಜ ಪಿಂಡಿಪಾಪನಹಳ್ಳಿ ಮಿನಿವೆಂಕಟಪ್ಪ ಮತ್ತು ಶಾ ಅಹಮದ್ ಅವರಿಗೆ ಪದ್ಮ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ