AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರ್ಯಾಕ್ಟರ್​ ಪೆರೇಡ್​ಗೆ​ ಹರಿಯಾಣ ಯುವತಿಯರ ಸಿದ್ಧತೆ; ಗಣರಾಜ್ಯೋತ್ಸವದಂದು ಇವರೂ ದೆಹಲಿಗೆ ಧಾವಿಸಲಿದ್ದಾರೆ

ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್ ಪರೇಡ್ ನಡೆಸಲು ನಡೆಸಲುವುದಾಗಿ ರೈತ ನಾಯಕರು ಘೋಷಿಸಿದ್ದಾರೆ. ಪರೇಡ್ಮ​ನಲ್ಹಿಲಿ ಭಾಗವಹಿಸಲು ಮಹಿಳೆ-ಯುವತಿಯರು ಟ್ರ್ಯಾಕ್ಟರ್ ಚಾಲನೆ ಕಲಿಯುತ್ತಿದ್ದಾರೆ.

ಟ್ರ್ಯಾಕ್ಟರ್​ ಪೆರೇಡ್​ಗೆ​ ಹರಿಯಾಣ ಯುವತಿಯರ ಸಿದ್ಧತೆ; ಗಣರಾಜ್ಯೋತ್ಸವದಂದು ಇವರೂ ದೆಹಲಿಗೆ ಧಾವಿಸಲಿದ್ದಾರೆ
ಟ್ರ್ಯಾಕ್ಟರ್ ಏರಿ ಕುಳಿತಿರುವ ಮಹಿಳೆಯರು (ಸಾಂಕೇತಿಕ ಚಿತ್ರ)
guruganesh bhat
| Edited By: |

Updated on: Jan 05, 2021 | 8:19 PM

Share

ಚಂಡೀಗಢ: ದೆಹಲಿ ಚಲೋ ಚಳುವಳಿ ಸೇರಲು ಸಾವಿರಾರು ಯುವತಿಯರು ಸನ್ನದ್ಧರಾಗುತ್ತಿದ್ದಾರೆ. ಸ್ವತಃ ಟ್ರ್ಯಾಕ್ಟರ್ ಚಾಲನೆ ಮಾಡುತ್ತ ಟ್ರ್ಯಾಕ್ಟರ್ ಪರೇಡ್​ನಲ್ಲಿ ಭಾಗವಹಿಸುವುದು ಅವರ ಗುರಿಯಾಗಿದೆ.

ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್ ಪರೇಡ್ ನಡೆಸಲು ರೈತ ಒಕ್ಕೂಟಗಳು ಭರ್ಜರಿ ತಾಲೀಮು ನಡೆಸಿವೆ. ಇದೇ ಉದ್ದೇಶದಿಂದ ಹರಿಯಾಣದ ರೈತ ಮಹಿಳೆಯರಿಗೆ ಟ್ರ್ಯಾಕ್ಟರ್ ಚಾಲನೆ ಕಲಿಸಲಾಗುತ್ತಿದೆ. ಟ್ರ್ಯಾಕ್ಟರ್ ಪರೇಡ್ ಮೂಲಕ ಚಳುವಳಿ ನಿರತ ತಮ್ಮ ಕುಟುಂಬದ ಇತರ ಸದಸ್ಯರನ್ನು ಸೇರುವ ಖುಷಿಯಲ್ಲಿ ಯುವತಿಯರು ಉತ್ಸಾಹದಿಂದಲೇ ಟ್ರ್ಯಾಕ್ಟರ್ ಚಾಲನೆ ಕಲಿಯುತ್ತಿದ್ದಾರೆ.

ತಮ್ಮ ಬೇಡಿಕೆಗಳು ಈಡೇರದಿದ್ದರೆ ದೆಹಲಿಯಲ್ಲಿ ಟ್ರ್ಯಾಕ್ಟರ್ ಪರೇಡ್ ನಡೆಸುವುದಾಗಿ ರೈತ ಸಂಘಟನೆಗಳು ಘೋಷಿಸಿದ್ದವು. ಕೇವಲ ಘೋಷಿಸಿದರೆ ಸಾಕೇ, ತಯಾರಿ ಬೇಡವೇ. ರಾಜಧಾನಿ ಸೇರಲು ತಮ್ಮ ಊರುಗಳಿಂದ ಸಾವಿರಾರು ಟ್ರ್ಯಾಕ್ಟರ್​ಗಳನ್ನು ರೈತರ ಸಿದ್ಧಪಡಿಸುತ್ತಿದ್ದಾರೆ. ಜೊತೆಗೆ, ಜನವರಿ 26ರಂದು ಸ್ವತಃ ಯುವತಿಯರೇ ಟ್ರ್ಯಾಕ್ಟರ್ ಪರೇಡ್​ನಲ್ಲಿ ಭಾಗವಹಿಸುವಂತೆ ತಯಾರಿ ನಡೆಸುತ್ತಿದ್ದಾರೆ.

ಇದು ಕೇವಲ ಟ್ರೇಲರ್ ಅಷ್ಟೇ! ಹರಿಯಾಣದ ಖಟ್ಕರ್ ಟೋಲ್ ಬೂತ್ ಸಮೀಪ ಯುವತಿಯರು ಟ್ರ್ಯಾಕ್ಟರ್ ಚಾಲನೆ ಕಲಿಯುವ ದೃಶ್ಯ ಸಾಮಾನ್ಯವಾಗಿದೆ. ಈ ಟೋಲ್ ಬೂತ್​ ಅನ್ನು ಚಳುವಳಿಕಾರರು ಮುಕ್ತ ಪ್ರವೇಶಕ್ಕೆ ಅನುವುಗೊಳಿಸಿದ್ದರು ಎಂಬುದು ಸಹ ಇಲ್ಲಿ ಉಲ್ಲೇಖನೀಯ. ಇಡೀ ಜಿಲ್ಲೆಯ ಯುವತಿಯರಿಗೆ ಖಟ್ಕರ್ ಬಳಿ ಟ್ರ್ಯಾಕ್ಟರ್ ತರಬೇತಿ ನೀಡಲಾಗುತ್ತಿದ್ದು, ರಾಜ್ಯದ ಎಲ್ಲ ಜಿಲ್ಲೆಗಳ ಯುವತಿಯರೂ ಟ್ರ್ಯಾಕ್ಟರ್ ಚಾಲನೆಯಲ್ಲಿ ಪಳಗುತ್ತಿದ್ದಾರೆ ಎನ್ನುತ್ತಾರೆ ಸಪಾ ಖೇರಿ ಗ್ರಾಮದ ಸಿಕ್ಕಿಮ್ ನೈನ್. ಇದು ಕೇವಲ ಟ್ರೇಲರ್ ಅಷ್ಟೇ, ನಿಜವಾದ ಸಿನಿಮಾ ಇನ್ನೂ ಬಾಕಿಯಿದೆ ಎಂದು ಅವರು ಯುವತಿಯರ ಟ್ರ್ಯಾಕ್ಟರ್ ಕಲಿಕೆಯನ್ನು ವ್ಯಾಖ್ಯಾನಿಸುತ್ತಾರೆ. ಜನವರಿ 26 ಕ್ಕೆ ‘ದೆಹಲಿ ಚಲೋ’ ಎಂಬ ರಾಜಧಾನಿಯ ಗಡಿಗಳಳಲ್ಲಿ ನಡೆಯುತ್ತಿರುವ ವಾಸ್ತವದ ಚಲನಚಿತ್ರ 65ನೇ ದಿನವನ್ನು ಯಶಸ್ವಿಯಾಗಿ ಪೂರೈಸುವ ದೃಢ ವಿಶ್ವಾಸ ಅವರದು. ಅಂದು ನಮ್ಮ ಟ್ರ್ಯಾಕ್ಟರ್ ಚಲೋ ನೋಡಲು ಮರೆಯದಿರಿ ಎಂದು ರೈತ ನಾಯಕರು ಆಹ್ವಾನಿಸುತ್ತಾರೆ.

ಎರಡನೇ ಸ್ವಾತಂತ್ರ್ಯ ಹೋರಾಟವೆಂದೇ ಅನಿಸುತ್ತಿದೆ ನಮ್ಮ ಹಕ್ಕುಗಳನ್ನು ಪಡೆಯಲು ನಡೆಸುತ್ತಿರುವ ಈ ಹೋರಾಟ ಎರಡನೇ ಸ್ವಾತಂತ್ರ್ಯ ಹೋರಾಟವೆಂದೇ ಅನಿಸುತ್ತಿದೆ ಎನ್ನುತ್ತಾರೆ ಟ್ರ್ಯಾಕ್ಟರ್ ಚಾಲನೆ ಕಲಿಕೆಯಲ್ಲಿ ತೊಡಗಿರುವ 35 ವರ್ಷದ ಸರೋಜ. ನಾನು ರೈತನ ಮಗಳು, ಹೀಗಾಗಿ ಈ ಚಳುವಳಿಯ ಭಾಗವಾಗಲು ನನಗೆ ಹೆಮ್ಮೆಯಿದೆ ಎಂದು ಅವರು ಹೇಳುತ್ತಾರೆ.

ಖಟ್ಕರ್, ಸಪಾ ಖೇರಿ, ಬರ್ಸಾಲಾ, ಪೋಕ್ರಿ ಖೇರಿಗಳಿಂದಲೂ ಟ್ರ್ಯಾಕ್ಟರ್ ಚಾಲನೆ ಕಲಿಯಲು ಹುಮ್ಮಸ್ಸಿನಿಂದ ಮಹಿಳೆಯರು ಬರುತ್ತಿದ್ದಾರೆ. ನಮ್ಮ ಮಕ್ಕಳು ಭಾರತದ ಗಡಿಯಲ್ಲಿ ಸೈನಿಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇತರರು ದೇಶದ ಗಡಿಯಲ್ಲಿ ಚಳುವಳಿ ನಿರತರಾಗಿದ್ದಾರೆ. ನಾವು ಗಣರಾಜ್ಯೋತ್ಸವದಲ್ಲಿ ಸೈನಿಕರಂತೆಯೇ ಪರೇಡ್ ನಡೆಸಲಿದ್ದೇವೆ ಎಂದು ಈಭಾಗದ ಅನೇಕರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

Delhi Chalo: ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ಟ್ರ್ಯಾಕ್ಟರ್​ ಮೂಲಕ ರೈತರ ಪರೇಡ್​!

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ