AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲಾ ಆಸ್ತಿನೂ ನಿನ್ನ ಹೆಂಡತಿ ಹೆಸರಿಗೆ ಬರಿ, ಅತ್ತೆ-ಮಾವನ ಕಿರುಕುಳದಿಂದ ಬೇಸತ್ತು ಅಳಿಯ ಆತ್ಮಹತ್ಯೆ

ಎಲ್ಲಾ ಆಸ್ತಿಯನ್ನು ನಿನ್ನ ಹೆಂಡತಿ ಹೆಸರಿಗೆ ಬರಿ, ಆಗ ನಿಮ್ಮನೆಗೆ ಆಕೆಯನ್ನು ಕಳುಹಿಸುತ್ತೇವೆ ಎಂದು ಅತ್ತೆ-ಮಾವ ನಿತ್ಯ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿಯಲ್ಲಿ ನಡೆದಿದೆ. ಪತ್ನಿಯ ಮನೆಯವರು ಮಗಳ ಹೆಸರಿಗೆ ಎಲ್ಲಾ ಭೂಮಿ ಮತ್ತು ಆಸ್ತಿ ಪತ್ರಗಳನ್ನು ವರ್ಗಾಯಿಸುವಂತೆ ನಿತ್ಯ ಒತ್ತಡ ಹೇರುತ್ತಿದ್ದರು. ಇಷ್ಟೆಲ್ಲಾ ಮಾಡಿದರೆ ಮಾತ್ರ ಆಕೆ ಮನೆಗೆ ವಾಪಸ್ ಬರುತ್ತಾಳೆ ಎಂದು ಬ್ಲ್ಯಾಕ್​ಮೇಲ್ ಮಾಡುತ್ತಿದ್ದರು, ಇದರಿಂದ ಮನನೊಂದು ವಿಷ ಸೇವಿಸಿ ಆತ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಎಲ್ಲಾ ಆಸ್ತಿನೂ ನಿನ್ನ ಹೆಂಡತಿ ಹೆಸರಿಗೆ ಬರಿ, ಅತ್ತೆ-ಮಾವನ ಕಿರುಕುಳದಿಂದ ಬೇಸತ್ತು ಅಳಿಯ ಆತ್ಮಹತ್ಯೆ
ಸಾವು
ನಯನಾ ರಾಜೀವ್
|

Updated on: Jul 29, 2025 | 5:37 PM

Share

ಬಸ್ತಿ, ಜುಲೈ 29: ಎಲ್ಲಾ ಆಸ್ತಿಯನ್ನು ನಿನ್ನ ಹೆಂಡತಿ ಹೆಸರಿಗೆ ಬರಿ, ಆಗ ನಿಮ್ಮನೆಗೆ ಆಕೆಯನ್ನು ಕಳುಹಿಸುತ್ತೇವೆ ಎಂದು ಅತ್ತೆ-ಮಾವ ನಿತ್ಯ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತು ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿಯಲ್ಲಿ ನಡೆದಿದೆ. ಪತ್ನಿಯ ಮನೆಯವರು ಮಗಳ ಹೆಸರಿಗೆ ಎಲ್ಲಾ ಭೂಮಿ ಮತ್ತು ಆಸ್ತಿ ಪತ್ರಗಳನ್ನು ವರ್ಗಾಯಿಸುವಂತೆ ನಿತ್ಯ ಒತ್ತಡ ಹೇರುತ್ತಿದ್ದರು.

ಇಷ್ಟೆಲ್ಲಾ ಮಾಡಿದರೆ ಮಾತ್ರ ಆಕೆ ಮನೆಗೆ ವಾಪಸ್ ಬರುತ್ತಾಳೆ ಎಂದು ಬ್ಲ್ಯಾಕ್​ಮೇಲ್ ಮಾಡುತ್ತಿದ್ದರು, ಇದರಿಂದ ಮನನೊಂದು ವಿಷ ಸೇವಿಸಿ  ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಯುವಕ ತನ್ನ ಜೀವನವನ್ನು ಕೊನೆಗೊಳಿಸುವ ಮೊದಲು ವೀಡಿಯೊ ರೆಕಾರ್ಡ್ ಮಾಡಿದ್ದಾರೆ. ಯುವಕನ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

ಹರೈಯಾ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ಬಿಜ್ರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ರಾಜ್ ಈ ವರ್ಷ ಏಪ್ರಿಲ್ 22 ರಂದು ಮಹಾದೇವರಿಯ ನಿವಾಸಿ ಖುಷಿಯನ್ನು ವಿವಾಹವಾದರು. ಆದರೆ, ದಂಪತಿ ನಡುವಿನ ವಿವಾದಗಳಿಂದಾಗಿ ಮದುವೆಯಾದ ಕೆಲವೇ ದಿನಗಳಲ್ಲಿ ಸಂಬಂಧ ಹದಗೆಟ್ಟಿತ್ತು. ಖುಷಿ ತನ್ನ ತಾಯಿಯ ಮನೆಗೆ ಹೋದವಳು ಹಿಂದಿರುಗಿರಲಿಲ್ಲ.

ಮತ್ತಷ್ಟು ಓದಿ: ಸತ್ತ ಅಮ್ಮ ಕನಸಿನಲ್ಲಿ ಬಂದು ಕರೆದಳೆಂದು ಆತ್ಮಹತ್ಯೆ ಮಾಡಿಕೊಂಡ 16 ವರ್ಷದ ಬಾಲಕ!

ರಾಜ್ ತನ್ನ ಹೆಂಡತಿಯನ್ನು ಮರಳಿ ಕರೆತರಲು ಹಲವಾರು ಪ್ರಯತ್ನಗಳನ್ನು ಮಾಡಿದರೂ, ಆಕೆಯ ಕುಟುಂಬವು ಕಳುಹಿಸಲು ಒಪ್ಪಲಿಲ್ಲ. ರಾಜ್, ಹರೈಯಾ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು, ತಮ್ಮ ಅತ್ತೆ-ಮಾವನ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿರುವ ಲಿಖಿತ ಹೇಳಿಕೆಯನ್ನು ಸಹ ಸಲ್ಲಿಸಿದ್ದರು.

ತನ್ನ ಭೂಮಿಯನ್ನು ತನ್ನ ಹೆಂಡತಿಯ ಹೆಸರಿಗೆ ವರ್ಗಾಯಿಸಲು ಒತ್ತಾಯಿಸುತ್ತಿದ್ದಾರೆ, ತನ್ನ ಪತ್ನಿ ಈಗ ಗರ್ಭಿಣಿ, ಒಂದೊಮ್ಮೆ ಆಸ್ತಿ ಹೆಸರಿಗೆ ಬರೆಯದಿದ್ದರೆ ಮಗುವನ್ನು ತೆಗೆಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಹೇಳಿದ್ದರು.

ಈ ತೀವ್ರವಾದ ಒತ್ತಡ ಮತ್ತು ಭಾವನಾತ್ಮಕ ಆಘಾತವು ಅವನನ್ನು ಈ ತೀವ್ರ ಹೆಜ್ಜೆ ಇಡಲು ಕಾರಣವಾಯಿತು. ಹರೈಯಾ ಠಾಣೆಯ ಪೊಲೀಸರು ಸ್ಥಳಕ್ಕೆ ತಲುಪಿ, ಶವವನ್ನು ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದು, ತನಿಖೆ ಪೂರ್ಣಗೊಂಡ ನಂತರ ಕಾನೂನು ಕ್ರಮ ಕೈಗೊಳ್ಳಲಾಗುವುದು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು