AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯಾಗಲು ಸಿದ್ಧತೆ ನಡೆಸಿರುವ ಕೇರಳದ ಇಬ್ಬರು ಕಿರಿಯರು; ಪಾಲಕರು ಮಾತುಕತೆ ನಡೆಸುತ್ತಿದ್ದಾರೆಂದ ಆರ್ಯಾ ರಾಜೇಂದ್ರನ್​

ಎಸ್​ಎಫ್​ಐನಲ್ಲಿದ್ದಾಗಿನಿಂದಲೂ ನಾವು ಪರಿಚಿತರು.  ಈಗಷ್ಟೇ ಮದುವೆ ಮಾತುಕತೆ ಶುರುವಾಗಿದ್ದು, ನಮ್ಮ ಪಕ್ಷದ ಗಮನಕ್ಕೂ ತಂದಿದ್ದೇವೆ ಎಂದು ಹೇಳಿದ್ದಾರೆ.

ಮದುವೆಯಾಗಲು ಸಿದ್ಧತೆ ನಡೆಸಿರುವ ಕೇರಳದ ಇಬ್ಬರು ಕಿರಿಯರು; ಪಾಲಕರು ಮಾತುಕತೆ ನಡೆಸುತ್ತಿದ್ದಾರೆಂದ ಆರ್ಯಾ ರಾಜೇಂದ್ರನ್​
ಆರ್ಯಾ ರಾಜೇಂದ್ರನ್​ ಮತ್ತು ಸಚಿನ್​ ದೇವ್​
TV9 Web
| Edited By: |

Updated on:Feb 16, 2022 | 6:26 PM

Share

ದೇಶದ ಅತ್ಯಂತ ಕಿರಿಯ ಮೇಯರ್ ಆಗಿರುವ ತಿರುವನಂತಪುರಂ ಮಹಾನಗರ ಪಾಲಿಕೆ ಮೇಯರ್ (Thiruvananthapuram Corporation) ಆರ್ಯಾ ರಾಜೇಂದ್ರನ್​ (Mayor Arya Rajendran) ಅವರು, ಕೇರಳ 15ನೇ ವಿಧಾನಸಭೆಯಲ್ಲಿ ಅತ್ಯಂತ ಕಿರಿಯ ಶಾಸಕನಾಗಿರುವ ಬಲುಸೆರ್ರಿ ಎಂಎಲ್​ಎ ಸಚಿನ್​ ದೇವ್​ನ್ನು ವಿವಾಹವಾಗಲಿದ್ದಾರೆ.  ಈ ಬಗ್ಗೆ ಆರ್ಯಾ ಅವರೇ ದೃಢಪಡಿಸಿದ್ದಾರೆ. ‘ಮೊದಲು ನಾನು ಮತ್ತು ಸಚಿನ್​ ದೇವ್​ ಇಬ್ಬರೂ ಮಾತನಾಡಿಕೊಂಡಿದ್ದೇವೆ. ಬಳಿಕ ನಮ್ಮ ಪಾಲಕರಿಗೆ ಹೇಳಿದೆವು. ಇದೀಗ ನಮ್ಮ ಪಾಲಕರು ಮದುವೆ ಮಾತುಕತೆ ಪ್ರಾರಂಭಿಸಿದ್ದಾರೆ. ಹಾಗಂತ ತತ್​​ಕ್ಷಣಕ್ಕೇ ಮದುವೆ ನಡೆಯುತ್ತಿಲ್ಲ. ಇನ್ನೂ ಸ್ವಲ್ಪ ಕಾಲಾವಕಾಶ ಇದೆ’ ಎಂದು ಆರ್ಯಾ ಹೇಳಿದ್ದಾರೆ.

ಆರ್ಯಾ ರಾಜೇಂದ್ರನ್​ ಅವರು 2020ರಲ್ಲಿ, ಅವರ 21ನೇ ವಯಸ್ಸಿನಲ್ಲಿ ತಿರುವನಂತಪುರಂ ಕಾರ್ಪೋರೇಶನ್​ ಮೇಯರ್​ ಹುದ್ದೆಗೆ ಏರಿದವರು. ಈ ದೇಶದ ಅತ್ಯಂತ ಕಿರಿಯ ಮೇಯರ್​ ಆಗಿದ್ದಾರೆ. ಇವರು ನೇಮೊಮ್​ ವಿಧಾನಸಭಾ ಕ್ಷೇತ್ರದ ಮುದವನ್ಮುಕಲ್​ ಎಂಬ ವಾರ್ಡ್​​ನಿಂದ ಮಹಾನಗರ ಪಾಲಿಕೆಗೆ ಆಯ್ಕೆಯಾಗಿದ್ದರು. ಸಚಿನ್ ದೇವ್ ಅವರು ಭಾರತೀಯ ವಿದ್ಯಾರ್ಥಿಗಳ ಒಕ್ಕೂಟ (SFI)ನ ರಾಜ್ಯ ಕಾರ್ಯದರ್ಶಿ ಮತ್ತು ಅಖಿಲ ಭಾರತೀಯ ಜಂಟಿ ಕಾರ್ಯದರ್ಶಿಯಾಗಿದ್ದರು. ಕೋಳಿಕ್ಕೋಡ್​ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಇಂಗ್ಲಿಷ್​ ಮಾಧ್ಯಮದಲ್ಲಿ ಪದವಿ ಪಡೆದಿದ್ದಾರೆ. ನಂತರ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಎಲ್​ಎಲ್​ಬಿ ಓದಿದ್ದಾರೆ. 27ನೇ ವಯಸ್ಸಿನಲ್ಲಿ ಬುಲುಸೆರ್ರಿ ವಿಧಾನಸಭೆ ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದಾರೆ.

ಇನ್ನು ಆರ್ಯಾ ಅವರೂ ಕೂಡ ಎಸ್​ಎಫ್​ಐನ ರಾಜ್ಯ ಸಮಿತಿ ಸದಸ್ಯರು. ಆರ್ಯಾ ಹಾಗೂ ಸಚಿನ್​ ಇಬ್ಬರೂ ಕೇರಳದ ಅತ್ಯಂತ ದೊಡ್ಡ ಮಕ್ಕಳ ಸಂಸ್ಥೆಯಾದ, ಸಿಪಿಎಂ  ಪಕ್ಷದ ಬಾಲ ಸಂಗಮ್​ನಲ್ಲಿ ಒಟ್ಟಿಗೇ ಕೆಲಸ ಮಾಡಿದ್ದಾರೆ. ಹಾಗಾಗಿ ಮೊದಲಿನಿಂದಲೂ ಪರಿಚಿತರೂ ಹೌದು. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಆರ್ಯಾ ರಾಜೇಂದ್ರನ್​, ಎಸ್​ಎಫ್​ಐನಲ್ಲಿದ್ದಾಗಿನಿಂದಲೂ ನಾವು ಪರಿಚಿತರು.  ಈಗಷ್ಟೇ ಮದುವೆ ಮಾತುಕತೆ ಶುರುವಾಗಿದ್ದು, ನಮ್ಮ ಪಕ್ಷದ ಗಮನಕ್ಕೂ ತಂದಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊವಿಡ್ ಸಾಂಕ್ರಾಮಿಕ ತಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಿ: ಹಾಂಗ್ ಕಾಂಗ್​​ಗೆ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಸಲಹೆ

Published On - 5:49 pm, Wed, 16 February 22

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?