ಮದುವೆಯಾಗಲು ಸಿದ್ಧತೆ ನಡೆಸಿರುವ ಕೇರಳದ ಇಬ್ಬರು ಕಿರಿಯರು; ಪಾಲಕರು ಮಾತುಕತೆ ನಡೆಸುತ್ತಿದ್ದಾರೆಂದ ಆರ್ಯಾ ರಾಜೇಂದ್ರನ್​

ಎಸ್​ಎಫ್​ಐನಲ್ಲಿದ್ದಾಗಿನಿಂದಲೂ ನಾವು ಪರಿಚಿತರು.  ಈಗಷ್ಟೇ ಮದುವೆ ಮಾತುಕತೆ ಶುರುವಾಗಿದ್ದು, ನಮ್ಮ ಪಕ್ಷದ ಗಮನಕ್ಕೂ ತಂದಿದ್ದೇವೆ ಎಂದು ಹೇಳಿದ್ದಾರೆ.

ಮದುವೆಯಾಗಲು ಸಿದ್ಧತೆ ನಡೆಸಿರುವ ಕೇರಳದ ಇಬ್ಬರು ಕಿರಿಯರು; ಪಾಲಕರು ಮಾತುಕತೆ ನಡೆಸುತ್ತಿದ್ದಾರೆಂದ ಆರ್ಯಾ ರಾಜೇಂದ್ರನ್​
ಆರ್ಯಾ ರಾಜೇಂದ್ರನ್​ ಮತ್ತು ಸಚಿನ್​ ದೇವ್​
Follow us
| Updated By: Lakshmi Hegde

Updated on:Feb 16, 2022 | 6:26 PM

ದೇಶದ ಅತ್ಯಂತ ಕಿರಿಯ ಮೇಯರ್ ಆಗಿರುವ ತಿರುವನಂತಪುರಂ ಮಹಾನಗರ ಪಾಲಿಕೆ ಮೇಯರ್ (Thiruvananthapuram Corporation) ಆರ್ಯಾ ರಾಜೇಂದ್ರನ್​ (Mayor Arya Rajendran) ಅವರು, ಕೇರಳ 15ನೇ ವಿಧಾನಸಭೆಯಲ್ಲಿ ಅತ್ಯಂತ ಕಿರಿಯ ಶಾಸಕನಾಗಿರುವ ಬಲುಸೆರ್ರಿ ಎಂಎಲ್​ಎ ಸಚಿನ್​ ದೇವ್​ನ್ನು ವಿವಾಹವಾಗಲಿದ್ದಾರೆ.  ಈ ಬಗ್ಗೆ ಆರ್ಯಾ ಅವರೇ ದೃಢಪಡಿಸಿದ್ದಾರೆ. ‘ಮೊದಲು ನಾನು ಮತ್ತು ಸಚಿನ್​ ದೇವ್​ ಇಬ್ಬರೂ ಮಾತನಾಡಿಕೊಂಡಿದ್ದೇವೆ. ಬಳಿಕ ನಮ್ಮ ಪಾಲಕರಿಗೆ ಹೇಳಿದೆವು. ಇದೀಗ ನಮ್ಮ ಪಾಲಕರು ಮದುವೆ ಮಾತುಕತೆ ಪ್ರಾರಂಭಿಸಿದ್ದಾರೆ. ಹಾಗಂತ ತತ್​​ಕ್ಷಣಕ್ಕೇ ಮದುವೆ ನಡೆಯುತ್ತಿಲ್ಲ. ಇನ್ನೂ ಸ್ವಲ್ಪ ಕಾಲಾವಕಾಶ ಇದೆ’ ಎಂದು ಆರ್ಯಾ ಹೇಳಿದ್ದಾರೆ.

ಆರ್ಯಾ ರಾಜೇಂದ್ರನ್​ ಅವರು 2020ರಲ್ಲಿ, ಅವರ 21ನೇ ವಯಸ್ಸಿನಲ್ಲಿ ತಿರುವನಂತಪುರಂ ಕಾರ್ಪೋರೇಶನ್​ ಮೇಯರ್​ ಹುದ್ದೆಗೆ ಏರಿದವರು. ಈ ದೇಶದ ಅತ್ಯಂತ ಕಿರಿಯ ಮೇಯರ್​ ಆಗಿದ್ದಾರೆ. ಇವರು ನೇಮೊಮ್​ ವಿಧಾನಸಭಾ ಕ್ಷೇತ್ರದ ಮುದವನ್ಮುಕಲ್​ ಎಂಬ ವಾರ್ಡ್​​ನಿಂದ ಮಹಾನಗರ ಪಾಲಿಕೆಗೆ ಆಯ್ಕೆಯಾಗಿದ್ದರು. ಸಚಿನ್ ದೇವ್ ಅವರು ಭಾರತೀಯ ವಿದ್ಯಾರ್ಥಿಗಳ ಒಕ್ಕೂಟ (SFI)ನ ರಾಜ್ಯ ಕಾರ್ಯದರ್ಶಿ ಮತ್ತು ಅಖಿಲ ಭಾರತೀಯ ಜಂಟಿ ಕಾರ್ಯದರ್ಶಿಯಾಗಿದ್ದರು. ಕೋಳಿಕ್ಕೋಡ್​ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಇಂಗ್ಲಿಷ್​ ಮಾಧ್ಯಮದಲ್ಲಿ ಪದವಿ ಪಡೆದಿದ್ದಾರೆ. ನಂತರ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಎಲ್​ಎಲ್​ಬಿ ಓದಿದ್ದಾರೆ. 27ನೇ ವಯಸ್ಸಿನಲ್ಲಿ ಬುಲುಸೆರ್ರಿ ವಿಧಾನಸಭೆ ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದಾರೆ.

ಇನ್ನು ಆರ್ಯಾ ಅವರೂ ಕೂಡ ಎಸ್​ಎಫ್​ಐನ ರಾಜ್ಯ ಸಮಿತಿ ಸದಸ್ಯರು. ಆರ್ಯಾ ಹಾಗೂ ಸಚಿನ್​ ಇಬ್ಬರೂ ಕೇರಳದ ಅತ್ಯಂತ ದೊಡ್ಡ ಮಕ್ಕಳ ಸಂಸ್ಥೆಯಾದ, ಸಿಪಿಎಂ  ಪಕ್ಷದ ಬಾಲ ಸಂಗಮ್​ನಲ್ಲಿ ಒಟ್ಟಿಗೇ ಕೆಲಸ ಮಾಡಿದ್ದಾರೆ. ಹಾಗಾಗಿ ಮೊದಲಿನಿಂದಲೂ ಪರಿಚಿತರೂ ಹೌದು. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಆರ್ಯಾ ರಾಜೇಂದ್ರನ್​, ಎಸ್​ಎಫ್​ಐನಲ್ಲಿದ್ದಾಗಿನಿಂದಲೂ ನಾವು ಪರಿಚಿತರು.  ಈಗಷ್ಟೇ ಮದುವೆ ಮಾತುಕತೆ ಶುರುವಾಗಿದ್ದು, ನಮ್ಮ ಪಕ್ಷದ ಗಮನಕ್ಕೂ ತಂದಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊವಿಡ್ ಸಾಂಕ್ರಾಮಿಕ ತಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಿ: ಹಾಂಗ್ ಕಾಂಗ್​​ಗೆ ಚೀನಾ ಅಧ್ಯಕ್ಷ ಷಿ ಜಿನ್‌ಪಿಂಗ್ ಸಲಹೆ

Published On - 5:49 pm, Wed, 16 February 22

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ