ನನ್ನ ತಾಯಿ ವಾಸಿಸುವ ಮನೆಯೂ ನಿಮ್ಮ ಕಾರಿನಷ್ಟೇ ದೊಡ್ಡದು; ಒಬಾಮಾಗೆ ಹೀಗೆ ಹೇಳಿದ್ದರಂತೆ ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರ ನಡುವಿನ ಸಂಬಂಧ ಬಹಳ ಉತ್ತಮವಾಗಿತ್ತು. ಅಮೆರಿಕ ಅಧ್ಯಕ್ಷರಾಗಿದ್ದ ಬರಾಕ್ ಒಬಾಮಾ ಅವರನ್ನು ಪ್ರಧಾನಿ ಮೋದಿ ಭೇಟಿಯಾದಾಗ ಅವರು ತಮ್ಮ ಸ್ವಂತ ಜೀವನದ ಕೆಲವು ಅನುಭವಗಳನ್ನು ಕೂಡ ಹಂಚಿಕೊಂಡಿದ್ದರು. ಈ ಬಗ್ಗೆ ಅಮೆರಿಕದ ಭಾರತೀಯ ರಾಯಭಾರಿ ವಿನಯ್ ಕ್ವಾತ್ರಾ ಕೆಲವು ನೆನಪುಗಳನ್ನು ಹಂಚಿಕೊಂಡಿದ್ದಾರೆ.

ನನ್ನ ತಾಯಿ ವಾಸಿಸುವ ಮನೆಯೂ ನಿಮ್ಮ ಕಾರಿನಷ್ಟೇ ದೊಡ್ಡದು; ಒಬಾಮಾಗೆ ಹೀಗೆ ಹೇಳಿದ್ದರಂತೆ ಪ್ರಧಾನಿ ಮೋದಿ
ಮೋದಿ- ಒಬಾಮಾ
Follow us
|

Updated on:Sep 21, 2024 | 4:36 PM

ನವದೆಹಲಿ: ನರೇಂದ್ರ ಮೋದಿಯವರು ಮೊದಲ ಬಾರಿಗೆ ಪ್ರಧಾನಿಯಾದಾಗ 2014ರಲ್ಲಿ ಅಮೆರಿಕಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅಲ್ಲಿ ಆಗಿನ ಅಧ್ಯಕ್ಷ ಬರಾಕ್ ಒಬಾಮಾ ಅವರ ಜೊತೆ ಮಾತುಕತೆ ನಡೆಸಿದ್ದರು. ಆಗ ಅವರಿಬ್ಬರ ನಡುವೆ ನಡೆದಿದ್ದ ಸಂವಾದವನ್ನು ಅಮೆರಿಕದ ಭಾರತೀಯ ರಾಯಭಾರಿ ವಿನಯ್ ಕ್ವಾತ್ರಾ ನೆನಪಿಸಿಕೊಂಡಿದ್ದಾರೆ. ಇದು ಒಬಾಮಾ ಮತ್ತು ಮೋದಿ ಅವರ ಸರಳ ವ್ಯಕ್ತಿತ್ವದ ಅನಾವರಣ ಮಾಡಿದೆ.

ಪ್ರಧಾನಿ ಮೋದಿಯವರ ಪ್ರವಾಸದ ಸಂದರ್ಭದಲ್ಲಿ, ಭಾರತದ ಮಾಜಿ ವಿದೇಶಾಂಗ ಕಾರ್ಯದರ್ಶಿ ಮತ್ತು ಪ್ರಸ್ತುತ ಯುನೈಟೆಡ್ ಸ್ಟೇಟ್ಸ್‌ನಲ್ಲಿರುವ ಭಾರತೀಯ ರಾಯಭಾರಿಯಾಗಿರುವ ವಿನಯ್ ಕ್ವಾತ್ರಾ ಅವರು 2014ರ ಪ್ರಧಾನ ಮಂತ್ರಿಯ ಯುಎಸ್ ಭೇಟಿಯ ಸ್ಮರಣೀಯ ಕ್ಷಣವನ್ನು ನೆನಪಿಸಿಕೊಂಡಿದ್ದಾರೆ. ಆಗ ಅವರ ಮತ್ತು ಅಂದಿನ ಅಧ್ಯಕ್ಷ ಬರಾಕ್ ಒಮಾಬಾ ನಡುವೆ ಹೃತ್ಪೂರ್ವಕ ಮಾತುಕತೆ ನಡೆದಿತ್ತು. ಆಗ ಒಬಾಮಾ ಅವರ ಕಾರನ್ನು ನೋಡಿ ಅಚ್ಚರಿಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ನಿಮ್ಮ ಕಾರು ಹೆಚ್ಚೂ ಕಡಿಮೆ ನನ್ನ ತಾಯಿ ವಾಸವಾಗಿರುವ ಮನೆಯಷ್ಟೇ ದೊಡ್ಡದಾಗಿದೆ ಎಂದು ಹೇಳಿದ್ದರು.

ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕದ ಅಧ್ಯಕ್ಷರು ಸೇರಿದಂತೆ ವಿಶ್ವ ನಾಯಕರೊಂದಿಗೆ ಸಂಪರ್ಕ ಸಾಧಿಸುವ ಮತ್ತು ಆಳವಾದ ಬಾಂಧವ್ಯವನ್ನು ಬೆಸೆಯುವ ಸಾಮರ್ಥ್ಯ ಹೊಂದಿದ್ದಾರೆ. ಈ ಬಗ್ಗೆ ಆಗಾಗ ಚರ್ಚೆಯಾಗುತ್ತಲೇ ಇರುತ್ತದೆ. ಪ್ರಧಾನಿ ಮೋದಿಯವರು ವೈಯಕ್ತಿಕ ಮಟ್ಟದಲ್ಲಿ ಜಾಗತಿಕ ನಾಯಕರೊಂದಿಗೆ ಸಂಪರ್ಕ ಸಾಧಿಸುತ್ತಾರೆ, ಸಾಂಸ್ಕೃತಿಕ ಮತ್ತು ಭೌಗೋಳಿಕ ರಾಜಕೀಯ ಭಿನ್ನಾಭಿಪ್ರಾಯಗಳನ್ನು ನಿವಾರಿಸಲು ತಮ್ಮ ಸ್ವಂತ ಜೀವನದ ಅನುಭವಗಳನ್ನು ಸೆಳೆಯುತ್ತಾರೆ ಎಂದು ಅಂತಾರಾಷ್ಟ್ರೀಯ ಸಭೆಗಳಲ್ಲಿ ಮೋದಿ ಅವರ ಜೊತೆಗಿರುವ ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ವಿದೇಶದಲ್ಲಿ ಭಾರತವನ್ನು ಕಾಂಗ್ರೆಸ್ ಅವಮಾನಿಸಿದೆ; ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಪ್ರಧಾನಿ ಮೋದಿಯವರ ಪ್ರವಾಸದ ಸಂದರ್ಭದಲ್ಲಿ, ಭಾರತದ ಮಾಜಿ ವಿದೇಶಾಂಗ ಕಾರ್ಯದರ್ಶಿ ಮತ್ತು ಪ್ರಸ್ತುತ ಯುನೈಟೆಡ್ ಸ್ಟೇಟ್ಸ್‌ನಲ್ಲಿರುವ ಭಾರತೀಯ ರಾಯಭಾರಿಯಾಗಿರುವ ವಿನಯ್ ಕ್ವಾತ್ರಾ ಅವರು 2014ರ ಪ್ರಧಾನ ಮಂತ್ರಿಯ ಯುಎಸ್ ಭೇಟಿಯ ಸ್ಮರಣೀಯ ಕ್ಷಣವನ್ನು ನೆನಪಿಸಿಕೊಂಡಿದ್ದಾರೆ. ಉಭಯ ದೇಶಗಳ ನಾಯಕರ ನಡುವಿನ ಔಪಚಾರಿಕ ಚರ್ಚೆಗಳು ಮುಕ್ತಾಯಗೊಂಡ ನಂತರ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಬರಾಕ್ ಒಬಾಮಾ ಇಬ್ಬರೂ ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ಸ್ಮಾರಕಕ್ಕೆ ತೆರಳಿದರು.

10ರಿಂದ 12 ನಿಮಿಷಗಳ ಪ್ರಯಾಣ ಅದಾಗಿದ್ದರಿಂದ ಅವರಿಬ್ಬರೂ ಒಬಾಮಾ ಅವರ ವೈಯಕ್ತಿಕ ಕಾರಾದ ಸ್ಟ್ರೆಚ್ ಲಿಮೋಸಿನ್‌ನಲ್ಲಿ ಒಟ್ಟಿಗೆ ಕುಳಿತು ಹರಟುತ್ತಾ ತೆರಳಿದ್ದರು. ಈ ವೇಳೆ ಅವರಿಬ್ಬರೂ ತಮ್ಮ ಕುಟುಂಬದ ಬಗ್ಗೆ ಮಾತನಾಡತೊಡಗಿದರು. ಈ ಅನೌಪಚಾರಿಕೆ ಮಾತುಕತೆಯ ವಿನಿಮಯದಲ್ಲಿ ಒಬಾಮಾ ಮೋದಿಯವರ ತಾಯಿಯ ಬಗ್ಗೆ ಕೇಳಿದರು. ಆಗ ಮುಗುಳ್ನಕ್ಕ ಪಿಎಂ ಮೋದಿ ಅವರು ಪ್ರಾಮಾಣಿಕ ಮತ್ತು ಅನಿರೀಕ್ಷಿತ ಪ್ರತಿಕ್ರಿಯೆಯನ್ನು ನೀಡಿದರು: “ಒಬಾಮಾ ಅವರೇ, ನೀವು ಇದನ್ನು ನಂಬದಿರಬಹುದು. ಆದರೆ, ನಿಮ್ಮ ಈ ಕಾರು ಎಷ್ಟು ದೊಡ್ಡದಾಗಿದೆಯೋ ನನ್ನ ತಾಯಿ ವಾಸಿಸುವ ಮನೆ ಕೂಡ ಇಷ್ಟೇ ದೊಡ್ಡದಾಗಿದೆ! ನನ್ನ ತಾಯಿ ವಾಸ ಮಾಡುವ ಮನೆಯಷ್ಟು ದೊಡ್ಡದಾದ ಕಾರಿನಲ್ಲಿ ನಾವೀಗ ಪ್ರಯಾಣಿಸುತ್ತಿದ್ದೇವೆ” ಎಂದು ಹೇಳಿದ್ದರು.

ಇದನ್ನೂ ಓದಿ: ಅಮೆರಿಕ ತಲುಪಿದ ಪ್ರಧಾನಿ ಮೋದಿ, ಕ್ವಾಡ್ ಶೃಂಗಸಭೆಯಲ್ಲಿ ಭಾಗಿ

ಈ ಹೇಳಿಕೆಯು ಅಮೆರಿಕ ಅಧ್ಯಕ್ಷರನ್ನು ಆಶ್ಚರ್ಯಗೊಳಿಸಿತು. ಏಕೆಂದರೆ ಅವರು ಇದ್ದ ಕಾರು ಸ್ಟ್ರೆಚ್ ಲಿಮೋಸಿನ್ ಆಗಿತ್ತು. ಅದು ಬಹಳ ಐಷಾರಾಮಿಯಾದ ದೊಡ್ಡ ಕಾರಾಗಿತ್ತು. ಮೋದಿಯವರು ತಮ್ಮ ಕುಟುಂಬದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಹೇಳಲು ಹಿಂಜರಿಯದೆ ಪ್ರಾಮಾಣಿಕವಾಗಿ ಮಾತನಾಡಿದ್ದು ಒಬಾಮಾ ಅವರಿಗೆ ಬಹಳ ಇಷ್ಟವಾಯಿತು.

ಈ ಮಾತುಕತೆ ವೇಳೆ ಅವರಿಬ್ಬರ ಜೊತೆಗೆ ಲಿಮೋಸಿನ್‌ನಲ್ಲಿದ್ದ ವಿನಯ್ ಕ್ವಾತ್ರಾ, ಈ ಸಂಭಾಷಣೆಯು ಉಭಯ ನಾಯಕರ ನಡುವಿನ ಆಳವಾದ ಸಂಪರ್ಕದ ಬಿಂದುವಾಗಿದೆ ಎಂದು ಹಂಚಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:36 pm, Sat, 21 September 24

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ