Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ತಾಯಿ ವಾಸಿಸುವ ಮನೆಯೂ ನಿಮ್ಮ ಕಾರಿನಷ್ಟೇ ದೊಡ್ಡದು; ಒಬಾಮಾಗೆ ಹೀಗೆ ಹೇಳಿದ್ದರಂತೆ ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರ ನಡುವಿನ ಸಂಬಂಧ ಬಹಳ ಉತ್ತಮವಾಗಿತ್ತು. ಅಮೆರಿಕ ಅಧ್ಯಕ್ಷರಾಗಿದ್ದ ಬರಾಕ್ ಒಬಾಮಾ ಅವರನ್ನು ಪ್ರಧಾನಿ ಮೋದಿ ಭೇಟಿಯಾದಾಗ ಅವರು ತಮ್ಮ ಸ್ವಂತ ಜೀವನದ ಕೆಲವು ಅನುಭವಗಳನ್ನು ಕೂಡ ಹಂಚಿಕೊಂಡಿದ್ದರು. ಈ ಬಗ್ಗೆ ಅಮೆರಿಕದ ಭಾರತೀಯ ರಾಯಭಾರಿ ವಿನಯ್ ಕ್ವಾತ್ರಾ ಕೆಲವು ನೆನಪುಗಳನ್ನು ಹಂಚಿಕೊಂಡಿದ್ದಾರೆ.

ನನ್ನ ತಾಯಿ ವಾಸಿಸುವ ಮನೆಯೂ ನಿಮ್ಮ ಕಾರಿನಷ್ಟೇ ದೊಡ್ಡದು; ಒಬಾಮಾಗೆ ಹೀಗೆ ಹೇಳಿದ್ದರಂತೆ ಪ್ರಧಾನಿ ಮೋದಿ
ಮೋದಿ- ಒಬಾಮಾ
Follow us
ಸುಷ್ಮಾ ಚಕ್ರೆ
|

Updated on:Sep 21, 2024 | 4:36 PM

ನವದೆಹಲಿ: ನರೇಂದ್ರ ಮೋದಿಯವರು ಮೊದಲ ಬಾರಿಗೆ ಪ್ರಧಾನಿಯಾದಾಗ 2014ರಲ್ಲಿ ಅಮೆರಿಕಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅಲ್ಲಿ ಆಗಿನ ಅಧ್ಯಕ್ಷ ಬರಾಕ್ ಒಬಾಮಾ ಅವರ ಜೊತೆ ಮಾತುಕತೆ ನಡೆಸಿದ್ದರು. ಆಗ ಅವರಿಬ್ಬರ ನಡುವೆ ನಡೆದಿದ್ದ ಸಂವಾದವನ್ನು ಅಮೆರಿಕದ ಭಾರತೀಯ ರಾಯಭಾರಿ ವಿನಯ್ ಕ್ವಾತ್ರಾ ನೆನಪಿಸಿಕೊಂಡಿದ್ದಾರೆ. ಇದು ಒಬಾಮಾ ಮತ್ತು ಮೋದಿ ಅವರ ಸರಳ ವ್ಯಕ್ತಿತ್ವದ ಅನಾವರಣ ಮಾಡಿದೆ.

ಪ್ರಧಾನಿ ಮೋದಿಯವರ ಪ್ರವಾಸದ ಸಂದರ್ಭದಲ್ಲಿ, ಭಾರತದ ಮಾಜಿ ವಿದೇಶಾಂಗ ಕಾರ್ಯದರ್ಶಿ ಮತ್ತು ಪ್ರಸ್ತುತ ಯುನೈಟೆಡ್ ಸ್ಟೇಟ್ಸ್‌ನಲ್ಲಿರುವ ಭಾರತೀಯ ರಾಯಭಾರಿಯಾಗಿರುವ ವಿನಯ್ ಕ್ವಾತ್ರಾ ಅವರು 2014ರ ಪ್ರಧಾನ ಮಂತ್ರಿಯ ಯುಎಸ್ ಭೇಟಿಯ ಸ್ಮರಣೀಯ ಕ್ಷಣವನ್ನು ನೆನಪಿಸಿಕೊಂಡಿದ್ದಾರೆ. ಆಗ ಅವರ ಮತ್ತು ಅಂದಿನ ಅಧ್ಯಕ್ಷ ಬರಾಕ್ ಒಮಾಬಾ ನಡುವೆ ಹೃತ್ಪೂರ್ವಕ ಮಾತುಕತೆ ನಡೆದಿತ್ತು. ಆಗ ಒಬಾಮಾ ಅವರ ಕಾರನ್ನು ನೋಡಿ ಅಚ್ಚರಿಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ ನಿಮ್ಮ ಕಾರು ಹೆಚ್ಚೂ ಕಡಿಮೆ ನನ್ನ ತಾಯಿ ವಾಸವಾಗಿರುವ ಮನೆಯಷ್ಟೇ ದೊಡ್ಡದಾಗಿದೆ ಎಂದು ಹೇಳಿದ್ದರು.

ಪ್ರಧಾನಿ ನರೇಂದ್ರ ಮೋದಿಯವರು ಅಮೆರಿಕದ ಅಧ್ಯಕ್ಷರು ಸೇರಿದಂತೆ ವಿಶ್ವ ನಾಯಕರೊಂದಿಗೆ ಸಂಪರ್ಕ ಸಾಧಿಸುವ ಮತ್ತು ಆಳವಾದ ಬಾಂಧವ್ಯವನ್ನು ಬೆಸೆಯುವ ಸಾಮರ್ಥ್ಯ ಹೊಂದಿದ್ದಾರೆ. ಈ ಬಗ್ಗೆ ಆಗಾಗ ಚರ್ಚೆಯಾಗುತ್ತಲೇ ಇರುತ್ತದೆ. ಪ್ರಧಾನಿ ಮೋದಿಯವರು ವೈಯಕ್ತಿಕ ಮಟ್ಟದಲ್ಲಿ ಜಾಗತಿಕ ನಾಯಕರೊಂದಿಗೆ ಸಂಪರ್ಕ ಸಾಧಿಸುತ್ತಾರೆ, ಸಾಂಸ್ಕೃತಿಕ ಮತ್ತು ಭೌಗೋಳಿಕ ರಾಜಕೀಯ ಭಿನ್ನಾಭಿಪ್ರಾಯಗಳನ್ನು ನಿವಾರಿಸಲು ತಮ್ಮ ಸ್ವಂತ ಜೀವನದ ಅನುಭವಗಳನ್ನು ಸೆಳೆಯುತ್ತಾರೆ ಎಂದು ಅಂತಾರಾಷ್ಟ್ರೀಯ ಸಭೆಗಳಲ್ಲಿ ಮೋದಿ ಅವರ ಜೊತೆಗಿರುವ ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂ ಓದಿ: ವಿದೇಶದಲ್ಲಿ ಭಾರತವನ್ನು ಕಾಂಗ್ರೆಸ್ ಅವಮಾನಿಸಿದೆ; ರಾಹುಲ್ ಗಾಂಧಿ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ಪ್ರಧಾನಿ ಮೋದಿಯವರ ಪ್ರವಾಸದ ಸಂದರ್ಭದಲ್ಲಿ, ಭಾರತದ ಮಾಜಿ ವಿದೇಶಾಂಗ ಕಾರ್ಯದರ್ಶಿ ಮತ್ತು ಪ್ರಸ್ತುತ ಯುನೈಟೆಡ್ ಸ್ಟೇಟ್ಸ್‌ನಲ್ಲಿರುವ ಭಾರತೀಯ ರಾಯಭಾರಿಯಾಗಿರುವ ವಿನಯ್ ಕ್ವಾತ್ರಾ ಅವರು 2014ರ ಪ್ರಧಾನ ಮಂತ್ರಿಯ ಯುಎಸ್ ಭೇಟಿಯ ಸ್ಮರಣೀಯ ಕ್ಷಣವನ್ನು ನೆನಪಿಸಿಕೊಂಡಿದ್ದಾರೆ. ಉಭಯ ದೇಶಗಳ ನಾಯಕರ ನಡುವಿನ ಔಪಚಾರಿಕ ಚರ್ಚೆಗಳು ಮುಕ್ತಾಯಗೊಂಡ ನಂತರ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಬರಾಕ್ ಒಬಾಮಾ ಇಬ್ಬರೂ ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್ ಸ್ಮಾರಕಕ್ಕೆ ತೆರಳಿದರು.

10ರಿಂದ 12 ನಿಮಿಷಗಳ ಪ್ರಯಾಣ ಅದಾಗಿದ್ದರಿಂದ ಅವರಿಬ್ಬರೂ ಒಬಾಮಾ ಅವರ ವೈಯಕ್ತಿಕ ಕಾರಾದ ಸ್ಟ್ರೆಚ್ ಲಿಮೋಸಿನ್‌ನಲ್ಲಿ ಒಟ್ಟಿಗೆ ಕುಳಿತು ಹರಟುತ್ತಾ ತೆರಳಿದ್ದರು. ಈ ವೇಳೆ ಅವರಿಬ್ಬರೂ ತಮ್ಮ ಕುಟುಂಬದ ಬಗ್ಗೆ ಮಾತನಾಡತೊಡಗಿದರು. ಈ ಅನೌಪಚಾರಿಕೆ ಮಾತುಕತೆಯ ವಿನಿಮಯದಲ್ಲಿ ಒಬಾಮಾ ಮೋದಿಯವರ ತಾಯಿಯ ಬಗ್ಗೆ ಕೇಳಿದರು. ಆಗ ಮುಗುಳ್ನಕ್ಕ ಪಿಎಂ ಮೋದಿ ಅವರು ಪ್ರಾಮಾಣಿಕ ಮತ್ತು ಅನಿರೀಕ್ಷಿತ ಪ್ರತಿಕ್ರಿಯೆಯನ್ನು ನೀಡಿದರು: “ಒಬಾಮಾ ಅವರೇ, ನೀವು ಇದನ್ನು ನಂಬದಿರಬಹುದು. ಆದರೆ, ನಿಮ್ಮ ಈ ಕಾರು ಎಷ್ಟು ದೊಡ್ಡದಾಗಿದೆಯೋ ನನ್ನ ತಾಯಿ ವಾಸಿಸುವ ಮನೆ ಕೂಡ ಇಷ್ಟೇ ದೊಡ್ಡದಾಗಿದೆ! ನನ್ನ ತಾಯಿ ವಾಸ ಮಾಡುವ ಮನೆಯಷ್ಟು ದೊಡ್ಡದಾದ ಕಾರಿನಲ್ಲಿ ನಾವೀಗ ಪ್ರಯಾಣಿಸುತ್ತಿದ್ದೇವೆ” ಎಂದು ಹೇಳಿದ್ದರು.

ಇದನ್ನೂ ಓದಿ: ಅಮೆರಿಕ ತಲುಪಿದ ಪ್ರಧಾನಿ ಮೋದಿ, ಕ್ವಾಡ್ ಶೃಂಗಸಭೆಯಲ್ಲಿ ಭಾಗಿ

ಈ ಹೇಳಿಕೆಯು ಅಮೆರಿಕ ಅಧ್ಯಕ್ಷರನ್ನು ಆಶ್ಚರ್ಯಗೊಳಿಸಿತು. ಏಕೆಂದರೆ ಅವರು ಇದ್ದ ಕಾರು ಸ್ಟ್ರೆಚ್ ಲಿಮೋಸಿನ್ ಆಗಿತ್ತು. ಅದು ಬಹಳ ಐಷಾರಾಮಿಯಾದ ದೊಡ್ಡ ಕಾರಾಗಿತ್ತು. ಮೋದಿಯವರು ತಮ್ಮ ಕುಟುಂಬದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಹೇಳಲು ಹಿಂಜರಿಯದೆ ಪ್ರಾಮಾಣಿಕವಾಗಿ ಮಾತನಾಡಿದ್ದು ಒಬಾಮಾ ಅವರಿಗೆ ಬಹಳ ಇಷ್ಟವಾಯಿತು.

ಈ ಮಾತುಕತೆ ವೇಳೆ ಅವರಿಬ್ಬರ ಜೊತೆಗೆ ಲಿಮೋಸಿನ್‌ನಲ್ಲಿದ್ದ ವಿನಯ್ ಕ್ವಾತ್ರಾ, ಈ ಸಂಭಾಷಣೆಯು ಉಭಯ ನಾಯಕರ ನಡುವಿನ ಆಳವಾದ ಸಂಪರ್ಕದ ಬಿಂದುವಾಗಿದೆ ಎಂದು ಹಂಚಿಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:36 pm, Sat, 21 September 24

ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ