AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಾವುದೇ ಸ್ಥಳದಲ್ಲಿ, ಯಾವ ಸಮಯದಲ್ಲಾದರೂ ಚರ್ಚೆಗೆ ಸಿದ್ಧ’; 4ನೇ ಬಾರಿ ಸಿಜೆಪಿಗೆ ಕೇಂದ್ರ ಸರ್ಕಾರ ಆಹ್ವಾನ

ಕಾಕ್ರೋಚ್ ಜನತಾ ಪಾರ್ಟಿ (CJP) ಮತ್ತು ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಮತ್ತೊಮ್ಮೆ ಮಾತುಕತೆಗೆ ಆಹ್ವಾನ ನೀಡಿರುವ ಕೇಂದ್ರ ಸರ್ಕಾರ, ಯಾವುದೇ ಸಮಯದಲ್ಲಿ, ಯಾವುದೇ ಸ್ಥಳದಲ್ಲಿ ಬೇಕಾದರೂ ಚರ್ಚೆ ನಡೆಸಲು ಸಿದ್ಧ ಎಂದು ಪುನರುಚ್ಚರಿಸಿದೆ. ನಿನ್ನೆ ಮಧ್ಯಾಹ್ನದಿಂದ ಚರ್ಚೆಗಾಗಿ ಸರ್ಕಾರ ಈಗಾಗಲೇ 4 ಪ್ರಸ್ತಾವನೆಗಳನ್ನು ಕಳುಹಿಸಿದೆ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ. ಸರ್ಕಾರದ ಪ್ರಸ್ತಾವನೆಗಳ ಕುರಿತು ಮಾತನಾಡಿದ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಪ್ರತಿಭಟನಾಕಾರರಿಗೆ ಬಹಿರಂಗ ಆಹ್ವಾನ ನೀಡಿದ್ದಾರೆ.

'ಯಾವುದೇ ಸ್ಥಳದಲ್ಲಿ, ಯಾವ ಸಮಯದಲ್ಲಾದರೂ ಚರ್ಚೆಗೆ ಸಿದ್ಧ'; 4ನೇ ಬಾರಿ ಸಿಜೆಪಿಗೆ ಕೇಂದ್ರ ಸರ್ಕಾರ ಆಹ್ವಾನ
Union Minister Jitendra SinghImage Credit source: PTI
ಸುಷ್ಮಾ ಚಕ್ರೆ
|

Updated on:Jul 23, 2026 | 4:28 PM

Share

ನವದೆಹಲಿ, ಜುಲೈ 23: ಕಾಕ್ರೋಚ್ ಜನತಾ ಪಾರ್ಟಿಯ (CJP) ಪ್ರತಿನಿಧಿಗಳನ್ನು ಚರ್ಚೆಗೆ ಬರುವಂತೆ ಕೇಂದ್ರ ಸರ್ಕಾರ 4ನೇ ಬಾರಿಗೆ ಆಹ್ವಾನಿಸುತ್ತಿದೆ ಎಂದು ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ (Jitendra Singh) ಇಂದು ತಿಳಿಸಿದ್ದಾರೆ. ಚರ್ಚೆಗಾಗಿ ಸರ್ಕಾರ ಈಗಾಗಲೇ 4 ಅಧಿಕೃತ ಪ್ರಸ್ತಾವನೆಗಳನ್ನು ಕಳುಹಿಸಿಕೊಟ್ಟಿದ್ದು, ಯಾವುದೇ ಸಮಯದಲ್ಲಿಯಾದರೂ ಮಾತುಕತೆ ನಡೆಸಲು ಮುಕ್ತವಾಗಿದೆ ಎಂದು ಅವರು ಹೇಳಿದ್ದಾರೆ. ಈ ಪರಿಷ್ಕೃತ ಪ್ರಸ್ತಾವನೆಯ ಕುರಿತು ಮಾತನಾಡಿದ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ನಿನ್ನೆ ಮಧ್ಯಾಹ್ನದಿಂದಲೇ ಸಿಜೆಪಿ ಪ್ರತಿನಿಧಿಗಳಿಗೆ ಆಹ್ವಾನ ಕಳುಹಿಸಲಾಗಿದೆ. ನಿನ್ನೆ ಮಧ್ಯಾಹ್ನದಿಂದ ಇದುವರೆಗೂ 4 ಬಾರಿ ಅವರನ್ನು ಮಾತುಕತೆಗೆ ಆಹ್ವಾನಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ವಿದ್ಯಾರ್ಥಿ ಸಂಘಟನೆಯ ಅನುಕೂಲಕ್ಕೆ ತಕ್ಕಂತೆ ಎಲ್ಲಾ ವಿಷಯಗಳ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧವಿದೆ. ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರ ಕಚೇರಿ ಅಥವಾ ನಿವಾಸ ಎರಡದಲ್ಲಿ ಎಲ್ಲಿ ಬೇಕಾದರೂ ಸಭೆಗಳನ್ನು ನಡೆಸಬಹುದು ಎಂದು ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಸಂಧಾನದ ವೇಳೆ ಬೇಡಿಕೆ ಬದಲಾಯಿಸಿದ ರಾಹುಲ್ ಗಾಂಧಿ; ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಆರೋಪ

“ನಾವು ಯಾವುದೇ ಪ್ರತಿಷ್ಠೆಯ ಬಗ್ಗೆ ಯೋಚಿಸುತ್ತಿಲ್ಲ. ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಮತ್ತು ನಾನು ಇಬ್ಬರೂ ಚರ್ಚೆಯಲ್ಲಿ ಭಾಗವಹಿಸಲಿದ್ದೇವೆ. ಮಾತುಕತೆಯ ಮೂಲಕವೇ ನಾವು ಪರಿಹಾರ ಕಂಡುಕೊಳ್ಳಬಹುದು. ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ಮತ್ತು ಮಾತುಕತೆಯ ಮೂಲಕ ಪ್ರತಿಯೊಂದು ಸಮಸ್ಯೆಯನ್ನು ಬಗೆಹರಿಸುವುದೇ ಸರ್ಕಾರದ ಮುಖ್ಯ ಆದ್ಯತೆಯಾಗಿದೆ” ಎಂದು ಜಿತೇಂದ್ರ ಸಿಂಗ್ ಪುನರುಚ್ಚರಿಸಿದ್ದಾರೆ.

ಇದಕ್ಕೂ ಮುನ್ನ ಪ್ರಧಾನಮಂತ್ರಿ ನರೇಂದ್ರ ಮೋದಿ ಪೇಪರ್ ಲೀಕ್ ಪ್ರಕರಣಗಳಲ್ಲಿ ಭಾಗಿಯಾದವರಿಗೆ ತುರ್ತು ನ್ಯಾಯ ಒದಗಿಸಲು ಮತ್ತು ಕಠಿಣ ಶಿಕ್ಷೆ ವಿಧಿಸಲು ಫಾಸ್ಟ್ ಟ್ರ್ಯಾಕ್ ಕೋರ್ಟ್‌ಗಳನ್ನು ಸ್ಥಾಪಿಸುವುದಾಗಿ ಘೋಷಿಸಿದ್ದರು.

ಇದನ್ನೂ ಓದಿ: ನೀಟ್ ಪೇಪರ್ ಸೋರಿಕೆ: ಮೌನ ಮುರಿದ ಪ್ರಧಾನಿ, ಫಾಸ್ಟ್​ ಟ್ರ್ಯಾಕ್ ಕೋರ್ಟ್​ ಮಾಡಿ ಅಪರಾಧಿಗಳಿಗೆ ಶಿಕ್ಷೆ ಕೊಡ್ತೀವಿ ಎಂದ ಮೋದಿ

ನೀಟ್ (NEET) ಪೇಪರ್ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಸಾವಿರಾರು ವಿದ್ಯಾರ್ಥಿಗಳು ಸಂಸತ್ತಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬೆನ್ನಲ್ಲೇ ಕೇಂದ್ರ ಸರ್ಕಾರದಿಂದ ಈ ಸಂಧಾನ ಮಾತುಕತೆಯ ಆಫರ್ ಬಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:25 pm, Thu, 23 July 26

Follow Us
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ಕಾಂಗ್ರೆಸ್ ಕಚೇರಿಗೆ ಇಟ್ಟಿಗೆ ಎಸೆದ ಬಿಜೆಪಿ ಎಂಎಲ್​​​ಸಿ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ನದಿಗೆ ಬಿದ್ದಿದ್ದ ಯುವತಿಯ ಪ್ರಾಣ ಉಳಿಸಿದ ಯುವಕ
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮಂಗಳೂರಲ್ಲಿ ಜನವಸತಿ ಕಟ್ಟಡಗಳ ಸಮೀಪವೇ ಹಾರಾಡಿದ ಸೇನಾ ಹೆಲಿಕಾಪ್ಟರ್‌ಗಳು!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಮೆಣಸಿನಕಾಯಿ ದರ ಕುಸಿತ, 3 ಎಕರೆಯಲ್ಲಿ ಬೆಳೆದಿದ್ದ ಬೆಳೆ ನಾಶ ಮಾಡಿದ ರೈತ!
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ನಡೆಯುತ್ತೆ ಪ್ರತಿಭಟನೆ: ದೀಪ್ಕೆ
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಬೊಮ್ಮಸಂದ್ರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ಸಿಲಿಂಡರ್ ಸ್ಫೋಟ!
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
ಮರಿ ಮೊಮ್ಮಗಳ ಜೊತೆ ದೇವೇಗೌಡ-ಚೆನ್ನಮ್ಮ ದಂಪತಿಯ ಮುದ್ದಾದ ವಿಡಿಯೋ ವೈರಲ್​​
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ