Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Acid Attack: ದೆಹಲಿಯಲ್ಲಿ 17ರ ಹರೆಯದ ಶಾಲಾ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ

Acid Attack on School Girl: ದೆಹಲಿಯ ದ್ವಾರಕಾದಲ್ಲಿ ಬಾಲಕಿಯ ಮೇಲೆ ಬಾಲಕಿ ಜತೆ ಆಕೆಯ ತಂಗಿ ಕೂಡಾ ಇದ್ದಳು. ತಮಗೆ ಪರಿಚಿತರಾಗಿರುವ ವ್ಯಕ್ತಿಗಳೇ ಈ ಕೃತ್ಯವೆಸಗಿದ್ದಾರೆ ಎಂದು ಆಕೆ ಸಂದೇಹ ವ್ಯಕ್ತ ಪಡಿಸಿದ್ದಾಳೆ. ಇದೀಗ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದು, ಈ ಪ್ರಕರಣ ಬಗ್ಗೆ ತನಿಖೆ ನಡೆಯುತ್ತಿದೆ.

Delhi Acid Attack: ದೆಹಲಿಯಲ್ಲಿ 17ರ ಹರೆಯದ ಶಾಲಾ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ
ಬಾಲಕಿ ಮೇಲೆ ಆ್ಯಸಿಡ್ ದಾಳಿ (ಸಿಸಿಟಿವಿ ದೃಶ್ಯ)
Follow us
TV9 Web
| Updated By: Digi Tech Desk

Updated on:Dec 14, 2022 | 2:01 PM

ದೆಹಲಿ: ದೆಹಲಿಯ (Delhi) ದ್ವಾರಾಕಾದಲ್ಲಿ ಮಂಗಳವಾರ ಬೆಳಗ್ಗೆ ಬೈಕ್ ನಲ್ಲಿ ಬಂದ ಇಬ್ಬರು ಯುವಕರು 17ರ ಹರೆಯದ ಶಾಲಾ ವಿದ್ಯಾರ್ಥಿನಿಗೆ ಆ್ಯಸಿಡ್ (Acid Attack) ಎರಚಿರುವ ಘಟನೆ ವರದಿಯಾಗಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಆ್ಯಸಿಡ್ ದಾಳಿಗೊಳಗಾಗಿರುವ 12ನೇ ತರಗತಿ ವಿದ್ಯಾರ್ಥಿನಿ ಸಫ್ದಾರ್‌ಜಂಗ್ ಆಸ್ಪತ್ರೆಯಲ್ಲಿ (Safdarjung hospital) ಚಿಕಿತ್ಸೆ ಪಡೆಯುತ್ತಿದ್ದು ಆಕೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಪ್ರಸ್ತುತ ಪ್ರಕರಣದಲ್ಲಿ ಬಾಲಕಿಯ ಕುಟುಂಬ ನೀಡಿದ ದೂರಿನನ್ವಯ ಪೊಲೀಸರು ಒಬ್ಬನನ್ನು ಬಂಧಿಸಿದ್ದು, ಇನ್ನೊಬ್ಬನಿಗಾಗಿ ಹುಡುಕಾಟ ನಡೆದಿದೆ. ಬೆಳಗ್ಗೆ 9 ಗಂಟೆಗೆ ಮೋಹನ್ ಗಾರ್ಡನ್ ಪ್ರದೇಶದಲ್ಲಿ ನಡೆದಿರುವ ಆ್ಯಸಿಡ್ ದಾಳಿಬಗ್ಗೆ ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಬಂದಿತ್ತು. ಬೆಳಗ್ಗೆ ಸರಿ ಸುಮಾರು 7.30ಕ್ಕೆ ಬೈಕ್​​ನಲ್ಲಿ ಬಂದ ವ್ಯಕ್ತಿಗಳು 17ರ ಹರೆಯದ ಬಾಲಕಿ ಮೇಲೆ ಆ್ಯಸಿಡ್ ನಂತಿರುವ ವಸ್ತು ಎರಚಿದ್ದಾರೆ ಎಂದು ಕರೆ ಮಾಡಿದ ವ್ಯಕ್ತಿ ಹೇಳಿದ್ದರು ಎಂದು ಉಪ ಪೊಲೀಸ್ ಆಯುಕ್ತ (ದ್ವಾರಕಾ) ಎಂ. ಹರ್ಷವರ್ಧನ್ ಹೇಳಿದ್ದಾರೆ. ಘಟನೆ ನಡೆದಾಗ ಬಾಲಕಿ ಜತೆ ಆಕೆಯ ತಂಗಿ ಕೂಡಾ ಇದ್ದಳು. ತಮಗೆ ಪರಿಚಿತರಾಗಿರುವ ವ್ಯಕ್ತಿಗಳೇ ಈ ಕೃತ್ಯವೆಸಗಿದ್ದಾರೆ ಎಂದು ಆಕೆ ಸಂದೇಹ ವ್ಯಕ್ತ ಪಡಿಸಿದ್ದಾಳೆ. ಇದೀಗ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದು, ಈ ಪ್ರಕರಣ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಡಿಸಿಪಿ ಹೇಳಿದ್ದಾರೆ. ಆರೋಪಿಗಳು ಅಪ್ರಾಪ್ತರೇ ಅಥವಾ ಅಲ್ಲವೇ ಎಂಬುದು ತಕ್ಷಣಕ್ಕೆ ಗೊತ್ತಾಗಿಲ್ಲ. ಬಲ್ಲಮೂಲಗಳ ಪ್ರಕಾರ ಆರೋಪಿಗಳು ಸಂತ್ರಸ್ತೆಯ ನೆರೆಹೊರೆಯವರೇ ಆಗಿದ್ದಾರೆ.

ದಾಳಿಗೆ ಕಾರಣ ಏನೆಂಬುದನ್ನು ಪೊಲೀಸರು ಪತ್ತೆ ಹಚ್ಚುತ್ತಿದ್ದು, ಸಂತ್ರಸ್ತೆ ಮತ್ತು ಆಕೆಯ ಪೋಷಕರ ಹೇಳಿಕೆಯನ್ನು ದಾಖಲಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಮಾಹಿತಿ ಪಡೆದ ಮಹಿಳಾ ಆಯೋಗ

ರಾಷ್ಟ್ರೀಯ ಮಹಿಳಾ ಆಯೋಗ (ಎನ್‌ಸಿಡಬ್ಲ್ಯು) ಆಸಿಡ್ ದಾಳಿಯ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು ಘಟನೆಯ ಬಗ್ಗೆ ವಿಚಾರಣೆಗೆ ತಂಡವನ್ನು ಸಫ್ದಾರ್‌ಜಂಗ್ ಆಸ್ಪತ್ರೆಗೆ ಕಳುಹಿಸಿದೆ. ಮಹಿಳಾ ಆಯೋಗವು ವರದಿಯಾದ ಅಪರಾಧ ಬಗ್ಗೆ ಮಾಹಿತಿ ತೆಗೆದುಕೊಳ್ಳುತ್ತದೆ. ಆಯೋಗದ ತಂಡವು ಈ ವಿಷಯವನ್ನು ವಿಚಾರಣೆ ಮಾಡಲು ಮತ್ತು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ಆಸ್ಪತ್ರೆಗೆ ತಲುಪಲಿದೆ ಎಂದು ಆಯೋಗದ ಹೇಳಿಕೆಯಲ್ಲಿ ತಿಳಿಸಿದೆ. ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ಘಟನೆಯ ಬಗ್ಗೆ ಟ್ವೀಟ್ ಮಾಡಿದ್ದು, ಆಯೋಗವು ಸಂತ್ರಸ್ತೆಗೆ ನ್ಯಾಯ ದೊರಕಿಸಲು ಒತ್ತಾಯಿಸಿದೆ.

ಇದನ್ನೂ ಓದಿ: ದೆಹಲಿ ಹತ್ಯೆ ಮಾದರಿಯಲ್ಲಿ ತಂದೆಯನ್ನೇ ಕೊಂದು ದೇಹವನ್ನು 30 ತುಂಡು ಮಾಡಿ ಬೋರ್​ವೆಲ್​ಗೆ ಹಾಕಿದ ಮಗ!

ಎರಡೂ ಕಣ್ಣಿಗೂ ಹೊಕ್ಕಿದ ಆ್ಯಸಿಡ್

ಮಗಳ ಎರಡೂ ಕಣ್ಣಿಗೂ ಆ್ಯಸಿಡ್ ಹೊಕ್ಕಿದೆ ಎಂದು ಸಂತ್ರಸ್ತೆಯ ಅಪ್ಪ ಹೇಳಿದ್ದಾರೆ. ಆರೋಪಿಗಳು ಮುಖ ಮುಚ್ಚಿದ್ದರಿಂದ ಅವರನ್ನು ಇನ್ನೂ ಪತ್ತೆ ಹಚ್ಚಬೇಕಿದೆ. ನಮ್ಮ ಸಣ್ಣ ಮಗಳು ಮನೆಗೆ ಓಡುತ್ತಾ ಬಂದು ಅಕ್ಕನಿಗೆ ಆ್ಯಸಿಡ್ ಎರಚಲಾಗಿದೆ ಎಂದು ಹೇಳಿದ್ದಳು. ಆ್ಯಸಿಡ್ ಎರಚಿದ ಹುಡುಗರು ಮುಖ ಮುಚ್ಚಿದ್ದರು, ಅವರನ್ನು ಪತ್ತೆ ಹಚ್ಚಬೇಕಿದೆ ಎಂದು ಅವರು ಹೇಳಿದ್ದಾರೆ.

Published On - 1:38 pm, Wed, 14 December 22

ಕಲ್ಲೆಸದವನನ್ನು ವಶಕ್ಕೆ ಪಡೆದು ಅಹಿತಕರ ಘಟನೆಗಳಿಗೆ ಅವಕಾಶವೀಯದ ಪೊಲೀಸ್
ಕಲ್ಲೆಸದವನನ್ನು ವಶಕ್ಕೆ ಪಡೆದು ಅಹಿತಕರ ಘಟನೆಗಳಿಗೆ ಅವಕಾಶವೀಯದ ಪೊಲೀಸ್
ನನ್ನ ಸುದೀಪ್ ಮಧ್ಯೆ ಮನಸ್ತಾಪ ಆಗಿರಬಹುದು, ವೈರತ್ವ ಬೆಳೆದಿಲ್ಲ; ಶಿವಣ್ಣ
ನನ್ನ ಸುದೀಪ್ ಮಧ್ಯೆ ಮನಸ್ತಾಪ ಆಗಿರಬಹುದು, ವೈರತ್ವ ಬೆಳೆದಿಲ್ಲ; ಶಿವಣ್ಣ
ಸಜ್ಜನರ ನೋಯಿಸಿದರೆ ಆ ಕರ್ಮ ಹೇಗೆ ಸುತ್ತಿಕೊಳ್ಳುತ್ತೆ? ಇಲ್ಲಿದೆ ವಿವರ
ಸಜ್ಜನರ ನೋಯಿಸಿದರೆ ಆ ಕರ್ಮ ಹೇಗೆ ಸುತ್ತಿಕೊಳ್ಳುತ್ತೆ? ಇಲ್ಲಿದೆ ವಿವರ
ರವಿ ಮೀನ ರಾಶಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಇಂದಿನ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಇಂದಿನ ರಾಶಿ ಭವಿಷ್ಯ
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ