AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ನೌಕರಿ ಆದೇಶ ಪತ್ರ! ಉದ್ಯೋಗ ವಂಚನೆ ಆರೋಪದ ಮೇಲೆ ಯುವಕನ ಬಂಧನ

ಜಿಲ್ಲಾಧಿಕಾರಿ ವಿನಯ್ ಕೃಷ್ಣಾ ರೆಡ್ಡಿ ಹಾಗೂ ಜಿಲ್ಲಾ ಶಿಕ್ಷಣಾಧಿಕಾರಿ ಚೈತನ್ಯ ಜೈನಿ ಅವರುಗಳ ನಕಲಿ ಸಹಿ ಮಾಡಿ, ಸ್ಟಾಂಪ್ ಮಾಡಿ ಸಂತ್ರಸ್ತರಿಗೆ ವಿವಿಧ ಇಲಾಖೆಗಳಲ್ಲಿ ನೇಮಕಾತಿ ಆದೇಶಗಳನ್ನು ನೀಡತೊಡಗಿದ್ದ. ತಾನು ಸೂಚಿಸಿದ ಸಮಯಕ್ಕೆ ಕೆಲಸಕ್ಕೆ ಸೇರಿಕೊಳ್ಳುವಂತೆ ಸಲಹೆ ನೀಡಿದ. ಆದರೆ ಕೆಲವರಿಗೆ ತಡವಾಗುತ್ತಿದೆ ಎಂದು ಸಬೂಬು ಹೇಳತೊಡಗಿದ.

ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ನೌಕರಿ ಆದೇಶ ಪತ್ರ! ಉದ್ಯೋಗ ವಂಚನೆ ಆರೋಪದ ಮೇಲೆ ಯುವಕನ ಬಂಧನ
ಉದ್ಯೋಗ ವಂಚನೆ ಆರೋಪದ ಮೇಲೆ ಯುವಕನ ಬಂಧನ
ಸಾಧು ಶ್ರೀನಾಥ್​
|

Updated on: Dec 21, 2023 | 2:57 PM

Share

ಆ ಯುವಕ  ಓದಿದ್ದು ಇಂಟರ್ ಮೀಡಿಯೇಟ್. ಐಷಾರಾಮಿ ಜೀವನಕ್ಕೆ ಒಗ್ಗಿ, ಇಚ್ಚಾನುಸಾರ ಅಲೆದಾಡಿದ. ವಿಲಾಸಿ ಜೀವನಕ್ಕೆ ಒಗ್ಗಿಕೊಂಡುಬಿಟ್ಟ. ಸರ್ಕಾರಿ ನೌಕರಿ ಕೊಡಿಸುವುದಾಗಿ ಭರವಸೆ ನೀಡಿ ವಂಚಿಸುವುದನ್ನೇ ಕಾಯಕವಾಗಿಸಿಕೊಂಡಿದ್ದ. ನಿರುದ್ಯೋಗಿಗಳಿಂದ ಲಕ್ಷಗಟ್ಟಲೆ ಹಣ ಸಂಗ್ರಹಿಸಿದ. ಮೇಲಧಿಕಾರಿಗಳ ಹೆಸರಿನಲ್ಲಿ ನಕಲಿ ನೇಮಕಾತಿ ದಾಖಲೆ ಸೃಷ್ಟಿಸಿ ಭಾರೀ ವಂಚನೆಗೆ ಇಳಿದುಬಿಟ್ಟಿದ್ದ. ಕೊನೆಗೆ ಸಂತ್ರಸ್ತರ ದೂರುಗಳು ಹೆಚ್ಚಾದಾಗ ಫೀಲ್ಡಿಗೆ ಇಳಿದ ಪೊಲೀಸರು ಯುವಕನೊಬ್ಬನನ್ನು ಜಾಲಾಡಿ, ಜೈಲಿಗೆ ಟ್ಟಿದ್ದಾರೆ.

ಆಲೇಟಿ ನವೀನ್ ಯಾದಾದ್ರಿ ಜಿಲ್ಲೆಯ ಮೋಟಕೊಂಡೂರು ಮಂಡಲದ ವರ್ತೂರು ಮೂಲದ. ಇಂಟರ್ ಮೀಡಿಯೇಟ್ ವರೆಗೆ ಓದಿದ್ದ. ಚಟಗಳಿಗೆ ದಾಸನಾಗಿದ್ದ ಆತ ವಿಲಾಸಿಯಂತೆ ಅಲೆದಾಡುತ್ತಿದ್ದ. ಆದರೆ ಸುಲಭವಾಗಿ ಹಣ ಗಳಿಸಲು ಅಡ್ಡ ಮಾರ್ಗ ಹಿಡಿದ. ಸರ್ಕಾರದ ನಾನಾ ಇಲಾಖೆಗಳಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ಕೆಲಸ ಕೊಡಿಸುವುದಾಗಿ ಭರವಸೆ ನೀಡಿ ಹಗರಣಗಳನ್ನು ಮಾಡತೊಡಗಿದ. ಭುವನಗಿರಿ ಪಟ್ಟಣದ ಸಂಜೀವ್ ನಗರದ ರಾಜಮಣಿ ಎಂಬ ಮಹಿಳೆಯ ಮೂಲಕ 11 ಮಂದಿಯಿಂದ ಲಕ್ಷ ಲಕ್ಷ ರೂ. ಗುಡ್ಡೆ ಹಾಕಿದ.

ಜಿಲ್ಲಾಧಿಕಾರಿ ವಿನಯ್ ಕೃಷ್ಣಾ ರೆಡ್ಡಿ ಹಾಗೂ ಜಿಲ್ಲಾ ಶಿಕ್ಷಣಾಧಿಕಾರಿ ಚೈತನ್ಯ ಜೈನಿ ಅವರುಗಳ ನಕಲಿ ಸಹಿ ಮಾಡಿ, ಸ್ಟಾಂಪ್ ಮಾಡಿ ಸಂತ್ರಸ್ತರಿಗೆ ವಿವಿಧ ಇಲಾಖೆಗಳಲ್ಲಿ ನೇಮಕಾತಿ ಆದೇಶಗಳನ್ನು ನೀಡತೊಡಗಿದ್ದ. ತಾನು ಸೂಚಿಸಿದ ಸಮಯಕ್ಕೆ ಕೆಲಸಕ್ಕೆ ಸೇರಿಕೊಳ್ಳುವಂತೆ ಸಲಹೆ ನೀಡಿದ. ಆದರೆ ಕೆಲವರಿಗೆ ತಡವಾಗುತ್ತಿದೆ ಎಂದು ಸಬೂಬು ಹೇಳತೊಡಗಿದ. ಇದರಿಂದ ಕೆಲ ಸಂತ್ರಸ್ತರನ್ನು ಸರ್ಕಾರಿ ಕಚೇರಿಗಳಲ್ಲಿ ವಿಚಾರಿಸಿದಾಗ ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ. ಇದರಿಂದ ಆತನ ಮೂಲ ಬಂಡವಾಳ ಬಯಲಾಗಿದೆ.

ಸಂತ್ರಸ್ತರಿಗೆ ನೀಡಿರುವ ಆದೇಶಗಳು ನಕಲಿ ಎಂದು ತಿಳಿದು ಬಂದ ಹಿನ್ನೆಲೆಯಲ್ಲಿ ತಾವು ನೀಡಿರುವ ಹಣವನ್ನು ಹಿಂದಿರುಗಿಸಬೇಕೆಂದು ನವೀನನನ್ನು ಸಂತ್ರಸ್ತರು ಕೇಳತೊಡಗಿದ್ದಾರೆ. ಆದರೆ ಅದು ಬಡ ಪೆಟ್ಟಿಗೆ ನಿರಾಕರಿಸಿದ್ದಾನೆ. ಪಂಚಾಯಿತಿ ನಡೆಸಿ, ಹಿರಿಯರ ಸಮ್ಮುಖದಲ್ಲಿ ಸಂತ್ರಸ್ತರಿಗೆ ಹಣ ಮರುಪಾವತಿಸುವಂತೆ ಬಾಂಡ್ ಪೇಪರ್ ಬರೆದುಕೊಟ್ಟಿದ್ದಾನೆ. ಆದರೂ ಹಣ ಪಾವತಿಯಾಗದ ಕಾರಣ ಸಂತ್ರಸ್ತರು ಭುವನಗಿರಿ ಪಟ್ಟಣ ಪೊಲೀಸರ ಮೊರೆ ಹೋಗಿದ್ದಾರೆ. ಪೊಲೀಸರು ನವೀನನ ವಿರುದ್ಧ ಪ್ರಕರಣ ದಾಖಲಿಸಿkಒಂಡು, ರಿಮಾಂಡ್‌ಗೆ ಕಳುಹಿಸಿದ್ದಾರೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ