AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಗಾಂಧಿ ನೇಮಕಕ್ಕೆ ಯುವ ಕಾಂಗ್ರೆಸ್​ ಒತ್ತಾಯ

ಗಾಂಧಿ ಕುಟುಂಬಕ್ಕೆ ಹೊರತಾದವರೊಬ್ಬರು ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಬೇಕು ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ರಾಹುಲ್ ಗಾಂಧಿ ಅವರು ಹೇಳಿದ್ದರು.

ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಗಾಂಧಿ ನೇಮಕಕ್ಕೆ ಯುವ ಕಾಂಗ್ರೆಸ್​ ಒತ್ತಾಯ
ರಾಹುಲ್ ಗಾಂಧಿ
TV9 Web
| Edited By: |

Updated on: Sep 06, 2021 | 11:22 PM

Share

ಪಣಜಿ: ಅಖಿಲ ಭಾರತ ಕಾಂಗ್ರೆಸ್ ಸಮಿತಿ (All India Congress Committee – AICC) ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅವರನ್ನು ನೇಮಿಸಬೇಕು ಎಂದು ಒತ್ತಾಯಿಸುವ ಠರಾವನ್ನು ಯುವ ಕಾಂಗ್ರೆಸ್​ ಅನುಮೋದಿಸಿದೆ.

ಭಾರತೀಯ ಯುವ ಕಾಂಗ್ರೆಸ್ (Indian Youth Congress – IYC) ಟ್ವಿಟರ್​ನಲ್ಲಿ ಠರಾವಿನ ಪ್ರತಿಯನ್ನು ಪೋಸ್ಟ್ ಮಾಡಿದೆ. ಕಾಂಗ್ರೆಸ್​ನ ಇಂದಿನ ಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ಯೋಚಿಸಿದರೆ ರಾಹುಲ್ ಗಾಂಧಿ ಮತ್ತೆ ಕಾಂಗ್ರೆಸ್ ಅಧ್ಯಕ್ಷರಾದರೆ ಒಳ್ಳೆಯದು ಎಂದು ಯುವ ಕಾಂಗ್ರೆಸ್ ಹೇಳಿದೆ.

ಗೋವಾದ ಪಣಜಿ ಸಮೀಪದ ರೆಸಾರ್ಟ್ ಒಂದರಲ್ಲಿ ಯುವ ಕಾಂಗ್ರೆಸ್​ನ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿ ಸಭೆ ನಡೆಯಿತು. ಯುವ ಕಾಂಗ್ರೆಸ್​ನ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಮತ್ತು ಯುವ ಕಾಂಗ್ರೆಸ್​ನ ಉಸ್ತುವಾರಿ ಮತ್ತು ಎಐಸಿಸಿ ಜಂಟಿ ಕಾರ್ಯದರ್ಶಿ ಕೃಷ್ಣ ಅಲ್ಲಾವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಮುಂದಿನ ದಿನಗಳಲ್ಲಿ ದೇಶವನ್ನು ಬಾಧಿಸುತ್ತಿರುವ ಸಮಸ್ಯೆಗಳ ಬಗ್ಗೆ ಯುವ ಕಾಂಗ್ರೆಸ್​ ಬೀದಿಗಿಳಿದು ಹೋರಾಡಲಿದೆ. ಜನರ ನಡುವೆ ಹೋರಾಟಗಳನ್ನು ಸಂಘಟಿಸಲಿದೆ ಎಂದು ಶ್ರೀನಿವಾಸ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

2017ರಲ್ಲಿ ಸೋನಿಯಾ ಗಾಂಧಿಯಿಂದ ಎಐಸಿಸಿ ಅಧ್ಯಕ್ಷ ಪದವಿ ಪಡೆದುಕೊಂಡಿದ್ದ ರಾಹುಲ್ ಗಾಂಧಿ 2019ರಲ್ಲಿ ಪಕ್ಷದ ಕಳಪೆ ಸಾಧನೆಯ ಹೊಣೆ ಹೊತ್ತು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ರಾಹುಲ್ ಗಾಂಧಿ ಅವರ ರಾಜೀನಾಮೆಯು ಕಾಂಗ್ರೆಸ್ ಪಕ್ಷದಲ್ಲಿ ಕೆಲ ವಾರಗಳ ಕಾಲ ಕ್ಷೋಭೆ ಉಂಟು ಮಾಡಿತ್ತು. ರಾಹುಲ್ ಗಾಂಧಿ ಅವರ ಮನಸ್ಸು ಬದಲಿಸಲು ಹಲವು ನಾಯಕರು ಯತ್ನಿಸಿ ವಿಫಲರಾಗಿದ್ದರು. ಸತತ 19 ವರ್ಷಗಳ ಕಾಲ ಪಕ್ಷದ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ನಂತರದ ದಿನಗಳಲ್ಲಿ ಹಂಗಾಮಿ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ಗಾಂಧಿ ಕುಟುಂಬಕ್ಕೆ ಹೊರತಾದವರೊಬ್ಬರು ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಬೇಕು ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ರಾಹುಲ್ ಗಾಂಧಿ ಅವರು ಹೇಳಿದ್ದರು. ಕಳೆದ 135 ವರ್ಷಗಳಿಂದ ನೆಹರು-ಗಾಂಧಿ ಕುಟುಂಬಕ್ಕೆ ಸೇರಿದವರೇ ಕಾಂಗ್ರೆಸ್ ಪಕ್ಷದ ನಾಯಕತ್ವ ವಹಿಸಿಕೊಂಡಿದ್ದಾರೆ.

(Youth Congress Passed Resolution to Appoint Rahul Gandhi as AICC Chief)

ಇದನ್ನೂ ಓದಿ: ಜಿಡಿಪಿ ಏರಿಕೆ ಎಂದರೆ ಗ್ಯಾಸ್, ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ: ಕೇಂದ್ರ ಸರ್ಕಾರದ ವಿರುದ್ಧ  ರಾಹುಲ್ ಗಾಂಧಿ ವಾಗ್ದಾಳಿ

ಇದನ್ನೂ ಓದಿ: ನಾನೂ ಹುತಾತ್ಮರ ಮಗ, ಈ ಅವಮಾನ ಸಹಿಸುವುದಿಲ್ಲ; ಜಲಿಯನ್ ವಾಲಾಬಾಗ್ ಸ್ಮಾರಕದ ನವೀಕರಣಕ್ಕೆ ರಾಹುಲ್ ಗಾಂಧಿ ಕಿಡಿ

48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
48 ಗಂಟೆಗಳಲ್ಲಿ ಅಭಿಷೇಕ್ ದಾಖಲೆ ಮುರಿದ ಇಶಾನ್ ಕಿಶನ್
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ