AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಗಾಂಧಿ ನೇಮಕಕ್ಕೆ ಯುವ ಕಾಂಗ್ರೆಸ್​ ಒತ್ತಾಯ

ಗಾಂಧಿ ಕುಟುಂಬಕ್ಕೆ ಹೊರತಾದವರೊಬ್ಬರು ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಬೇಕು ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ರಾಹುಲ್ ಗಾಂಧಿ ಅವರು ಹೇಳಿದ್ದರು.

ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಗಾಂಧಿ ನೇಮಕಕ್ಕೆ ಯುವ ಕಾಂಗ್ರೆಸ್​ ಒತ್ತಾಯ
ರಾಹುಲ್ ಗಾಂಧಿ
TV9 Web
| Edited By: |

Updated on: Sep 06, 2021 | 11:22 PM

Share

ಪಣಜಿ: ಅಖಿಲ ಭಾರತ ಕಾಂಗ್ರೆಸ್ ಸಮಿತಿ (All India Congress Committee – AICC) ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅವರನ್ನು ನೇಮಿಸಬೇಕು ಎಂದು ಒತ್ತಾಯಿಸುವ ಠರಾವನ್ನು ಯುವ ಕಾಂಗ್ರೆಸ್​ ಅನುಮೋದಿಸಿದೆ.

ಭಾರತೀಯ ಯುವ ಕಾಂಗ್ರೆಸ್ (Indian Youth Congress – IYC) ಟ್ವಿಟರ್​ನಲ್ಲಿ ಠರಾವಿನ ಪ್ರತಿಯನ್ನು ಪೋಸ್ಟ್ ಮಾಡಿದೆ. ಕಾಂಗ್ರೆಸ್​ನ ಇಂದಿನ ಸ್ಥಿತಿಯನ್ನು ಗಮನದಲ್ಲಿರಿಸಿಕೊಂಡು ಯೋಚಿಸಿದರೆ ರಾಹುಲ್ ಗಾಂಧಿ ಮತ್ತೆ ಕಾಂಗ್ರೆಸ್ ಅಧ್ಯಕ್ಷರಾದರೆ ಒಳ್ಳೆಯದು ಎಂದು ಯುವ ಕಾಂಗ್ರೆಸ್ ಹೇಳಿದೆ.

ಗೋವಾದ ಪಣಜಿ ಸಮೀಪದ ರೆಸಾರ್ಟ್ ಒಂದರಲ್ಲಿ ಯುವ ಕಾಂಗ್ರೆಸ್​ನ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿ ಸಭೆ ನಡೆಯಿತು. ಯುವ ಕಾಂಗ್ರೆಸ್​ನ ರಾಷ್ಟ್ರೀಯ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಮತ್ತು ಯುವ ಕಾಂಗ್ರೆಸ್​ನ ಉಸ್ತುವಾರಿ ಮತ್ತು ಎಐಸಿಸಿ ಜಂಟಿ ಕಾರ್ಯದರ್ಶಿ ಕೃಷ್ಣ ಅಲ್ಲಾವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಮುಂದಿನ ದಿನಗಳಲ್ಲಿ ದೇಶವನ್ನು ಬಾಧಿಸುತ್ತಿರುವ ಸಮಸ್ಯೆಗಳ ಬಗ್ಗೆ ಯುವ ಕಾಂಗ್ರೆಸ್​ ಬೀದಿಗಿಳಿದು ಹೋರಾಡಲಿದೆ. ಜನರ ನಡುವೆ ಹೋರಾಟಗಳನ್ನು ಸಂಘಟಿಸಲಿದೆ ಎಂದು ಶ್ರೀನಿವಾಸ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

2017ರಲ್ಲಿ ಸೋನಿಯಾ ಗಾಂಧಿಯಿಂದ ಎಐಸಿಸಿ ಅಧ್ಯಕ್ಷ ಪದವಿ ಪಡೆದುಕೊಂಡಿದ್ದ ರಾಹುಲ್ ಗಾಂಧಿ 2019ರಲ್ಲಿ ಪಕ್ಷದ ಕಳಪೆ ಸಾಧನೆಯ ಹೊಣೆ ಹೊತ್ತು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ರಾಹುಲ್ ಗಾಂಧಿ ಅವರ ರಾಜೀನಾಮೆಯು ಕಾಂಗ್ರೆಸ್ ಪಕ್ಷದಲ್ಲಿ ಕೆಲ ವಾರಗಳ ಕಾಲ ಕ್ಷೋಭೆ ಉಂಟು ಮಾಡಿತ್ತು. ರಾಹುಲ್ ಗಾಂಧಿ ಅವರ ಮನಸ್ಸು ಬದಲಿಸಲು ಹಲವು ನಾಯಕರು ಯತ್ನಿಸಿ ವಿಫಲರಾಗಿದ್ದರು. ಸತತ 19 ವರ್ಷಗಳ ಕಾಲ ಪಕ್ಷದ ಅಧ್ಯಕ್ಷರಾಗಿದ್ದ ಸೋನಿಯಾ ಗಾಂಧಿ ನಂತರದ ದಿನಗಳಲ್ಲಿ ಹಂಗಾಮಿ ಅಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ಗಾಂಧಿ ಕುಟುಂಬಕ್ಕೆ ಹೊರತಾದವರೊಬ್ಬರು ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಬೇಕು ಎಂದು ತಮ್ಮ ರಾಜೀನಾಮೆ ಪತ್ರದಲ್ಲಿ ರಾಹುಲ್ ಗಾಂಧಿ ಅವರು ಹೇಳಿದ್ದರು. ಕಳೆದ 135 ವರ್ಷಗಳಿಂದ ನೆಹರು-ಗಾಂಧಿ ಕುಟುಂಬಕ್ಕೆ ಸೇರಿದವರೇ ಕಾಂಗ್ರೆಸ್ ಪಕ್ಷದ ನಾಯಕತ್ವ ವಹಿಸಿಕೊಂಡಿದ್ದಾರೆ.

(Youth Congress Passed Resolution to Appoint Rahul Gandhi as AICC Chief)

ಇದನ್ನೂ ಓದಿ: ಜಿಡಿಪಿ ಏರಿಕೆ ಎಂದರೆ ಗ್ಯಾಸ್, ಡೀಸೆಲ್, ಪೆಟ್ರೋಲ್ ಬೆಲೆ ಏರಿಕೆ: ಕೇಂದ್ರ ಸರ್ಕಾರದ ವಿರುದ್ಧ  ರಾಹುಲ್ ಗಾಂಧಿ ವಾಗ್ದಾಳಿ

ಇದನ್ನೂ ಓದಿ: ನಾನೂ ಹುತಾತ್ಮರ ಮಗ, ಈ ಅವಮಾನ ಸಹಿಸುವುದಿಲ್ಲ; ಜಲಿಯನ್ ವಾಲಾಬಾಗ್ ಸ್ಮಾರಕದ ನವೀಕರಣಕ್ಕೆ ರಾಹುಲ್ ಗಾಂಧಿ ಕಿಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ