AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ಕಾಂಗ್ರೆಸ್: ಪ್ರಧಾನಿ ಮೋದಿ ಜನ್ಮದಿನವನ್ನು ನಿರುದ್ಯೋಗಿಗಳ ದಿನವೆಂದು ಆಚರಣೆ; ರಕ್ತದಲ್ಲಿ ಪತ್ರ!

Congress Protest: Happy Birthday PM Modi. Happy Unemployment Day ಎಂದು ರಕ್ತದಲ್ಲಿ ಪತ್ರ ಬರೆದು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. 80 ಕ್ಕೂ ಹೆಚ್ಚು ಜನ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ರಕ್ತದಲ್ಲಿ ಪತ್ರ ಬರೆದು ವಿರೋಧ ವ್ಯಕ್ತವಾಗಿದೆ.

ದಾವಣಗೆರೆ ಕಾಂಗ್ರೆಸ್: ಪ್ರಧಾನಿ ಮೋದಿ ಜನ್ಮದಿನವನ್ನು ನಿರುದ್ಯೋಗಿಗಳ ದಿನವೆಂದು ಆಚರಣೆ; ರಕ್ತದಲ್ಲಿ ಪತ್ರ!
ದಾವಣಗೆರೆ ಕಾಂಗ್ರೆಸ್: ಪ್ರಧಾನಿ ಮೋದಿ ಜನ್ಮದಿನವನ್ನು ನಿರುದ್ಯೋಗಿಗಳ ದಿನವೆಂದು ಆಚರಣೆ
TV9 Web
| Edited By: |

Updated on: Sep 15, 2021 | 2:48 PM

Share

ದಾವಣಗೆರೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮದಿನ ಆಚರಣೆಯನ್ನು ನಿರುದ್ಯೋಗಿಗಳ ದಿನವಾಗಿ ಆಚರಿಸಲು ದಾವಣಗೆರೆ ಕಾಂಗ್ರೆಸ್ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷದ ಯುವ ಕಾರ್ಯಕರ್ತರು ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದು ಪ್ರಧಾನಿಗೆ ಪೋಸ್ಟ್ ಮಾಡಿದ್ದಾರೆ. ದಾವಣಗೆರೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪೋಸ್ಟ್ ಮಾಡಲಾಗಿದೆ. ಅಷ್ಟೇ ಅಲ್ಲದೆ, ದಾವಣಗೆರೆ ನಗರದ ಗಡಿಯಾರ ಕಂಬದ ಬಳಿ ಪ್ರತಿಭಟನೆ ನಡೆಸಲಾಗಿದೆ. Happy Birthday PM Modi. Happy Unemployment Day ಎಂದು ರಕ್ತದಲ್ಲಿ ಪತ್ರ ಬರೆದು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. 80 ಕ್ಕೂ ಹೆಚ್ಚು ಜನ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ರಕ್ತದಲ್ಲಿ ಪತ್ರ ಬರೆದು ವಿರೋಧ ವ್ಯಕ್ತವಾಗಿದೆ.

ಇತ್ತ, ನರೇಂದ್ರ ಮೋದಿ ಜನ್ಮದಿನಕ್ಕೆ ಬಿಜೆಪಿ ವಿವಿಧ ಯೋಜನೆಗಳನ್ನು ಹಾಕಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್​ 17 ರಂದು 71 ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಹಾಗೇ, ಮೋದಿ ರಾಜಕೀಯದಲ್ಲಿ ಉನ್ನತ ಹುದ್ದೆಗೇರಿ 20 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಿಜೆಪಿ ಸೇವಾ ಮತ್ತು ಸಮರ್ಪಣ ಅಭಿಯಾನ ಹಮ್ಮಿಕೊಳ್ಳಲು ನಿರ್ಧರಿಸಿದೆ. ಈ ಅಭಿಯಾನ ಸೆಪ್ಟೆಂಬರ್​ 17 ರಿಂದ ಪ್ರಾರಂಭವಾಗಿ, 20 ದಿನಗಳ ಕಾಲ ನಡೆಯಲಿದೆ. ಈ 20 ದಿನಗಳ ಅಭಿಯಾನದ ಪ್ರಯುಕ್ತ ಬಿಜೆಪಿ ದೇಶಾದ್ಯಂದ ಸಾಮೂಹಿಕ ಸ್ವಚ್ಛತಾ ಕೆಲಸ ನಡೆಸಲಿದೆ. ಹಾಗೇ ರಕ್ತದಾನ ಶಿಬಿರಗಳಂಥ ಸಮಾಜ ಸೇವಾ ಕಾರ್ಯ ಹಮ್ಮಿಕೊಳ್ಳಲಿದೆ. ಆಚರಣೆ ಕುರಿತಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಈಗಾಗಲೇ ಎಲ್ಲ ಘಟಕಗಳಿಗೂ ನಿರ್ದೇಶನ ನೀಡಿದ್ದಾರೆ. ಉತ್ತರಪ್ರದೇಶ ಬಿಜೆಪಿ 71 ಸ್ಥಳಗಳಲ್ಲಿ ಗಂಗಾನದಿಯನ್ನು ಸ್ವಚ್ಛಗೊಳಿಸಲಿದೆ.

ಇನ್ನೊಂದು ಬಹುಮುಖ್ಯವಾಗಿ, ದೇಶಾದ್ಯಂತ ಎಲ್ಲ ಬಿಜೆಪಿ ಬೂತ್​ಗಳಿಂದ ಪ್ರಧಾನಿ ನರೇಂದ್ರ ಮೋದಿಗೆ 5 ಕೋಟಿಗಳಷ್ಟು ಅಂಚೆಪತ್ರ ಕಳಿಸುವ ಮೂಲಕ ಅಭಿನಂದನೆ ಸಲ್ಲಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ತಮ್ಮನ್ನು ತಾವು ಸಾರ್ವಜನಿಕ ಸೇವೆಗೆ ತೊಡಗಿಸಿಕೊಳ್ಳುವುದಲ್ಲದೆ, ಬಿಜೆಪಿ ಪಕ್ಷದ ಪ್ರತಿ ಸದಸ್ಯರೂ ತಮ್ಮನ್ನು ತಾವು ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವಲ್ಲಿ ತುಂಬ ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸಲು 5 ಕೋಟಿ ಪೋಸ್ಟ್ ಕಾರ್ಡ್​ ಕಳಿಸಿಕೊಡಲಾಗುವುದು ಎಂದು ಬಿಜೆಪಿ ಹೇಳಿಕೆ ಬಿಡುಗಡೆ ಮಾಡಿದೆ.

Cong Protest Unemployment Day

ದಾವಣಗೆರೆ ಕಾಂಗ್ರೆಸ್: ಪ್ರಧಾನಿ ಮೋದಿ ಜನ್ಮದಿನವನ್ನು ನಿರುದ್ಯೋಗಿಗಳ ದಿನವೆಂದು ಆಚರಣೆ

ಇದನ್ನೂ ಓದಿ: ಪ್ರಧಾನಿ ಮೋದಿಗೆ 5 ಕೋಟಿ ಪೋಸ್ಟ್​ಕಾರ್ಡ್​ ಕಳಿಸಲಿರುವ ಬಿಜೆಪಿ; ಹುಟ್ಟುಹಬ್ಬದ ನಿಮಿತ್ತ ಸೇವಾ-ಸಮರ್ಪಣ ಅಭಿಯಾನ

ಇದನ್ನೂ ಓದಿ: ಗುಜರಿ ವಸ್ತುಗಳಿಂದಲೇ ನಿರ್ಮಾಣವಾಯ್ತು 14 ಅಡಿ ಎತ್ತರದ ಪ್ರಧಾನಿ ನರೇಂದ್ರ ಮೋದಿ ಪ್ರತಿಮೆ!

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?