AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಾವಣಗೆರೆ ಕಾಂಗ್ರೆಸ್: ಪ್ರಧಾನಿ ಮೋದಿ ಜನ್ಮದಿನವನ್ನು ನಿರುದ್ಯೋಗಿಗಳ ದಿನವೆಂದು ಆಚರಣೆ; ರಕ್ತದಲ್ಲಿ ಪತ್ರ!

Congress Protest: Happy Birthday PM Modi. Happy Unemployment Day ಎಂದು ರಕ್ತದಲ್ಲಿ ಪತ್ರ ಬರೆದು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. 80 ಕ್ಕೂ ಹೆಚ್ಚು ಜನ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ರಕ್ತದಲ್ಲಿ ಪತ್ರ ಬರೆದು ವಿರೋಧ ವ್ಯಕ್ತವಾಗಿದೆ.

ದಾವಣಗೆರೆ ಕಾಂಗ್ರೆಸ್: ಪ್ರಧಾನಿ ಮೋದಿ ಜನ್ಮದಿನವನ್ನು ನಿರುದ್ಯೋಗಿಗಳ ದಿನವೆಂದು ಆಚರಣೆ; ರಕ್ತದಲ್ಲಿ ಪತ್ರ!
ದಾವಣಗೆರೆ ಕಾಂಗ್ರೆಸ್: ಪ್ರಧಾನಿ ಮೋದಿ ಜನ್ಮದಿನವನ್ನು ನಿರುದ್ಯೋಗಿಗಳ ದಿನವೆಂದು ಆಚರಣೆ
TV9 Web
| Updated By: ganapathi bhat|

Updated on: Sep 15, 2021 | 2:48 PM

Share

ದಾವಣಗೆರೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮದಿನ ಆಚರಣೆಯನ್ನು ನಿರುದ್ಯೋಗಿಗಳ ದಿನವಾಗಿ ಆಚರಿಸಲು ದಾವಣಗೆರೆ ಕಾಂಗ್ರೆಸ್ ನಿರ್ಧಾರ ಕೈಗೊಂಡಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷದ ಯುವ ಕಾರ್ಯಕರ್ತರು ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದು ಪ್ರಧಾನಿಗೆ ಪೋಸ್ಟ್ ಮಾಡಿದ್ದಾರೆ. ದಾವಣಗೆರೆ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಪೋಸ್ಟ್ ಮಾಡಲಾಗಿದೆ. ಅಷ್ಟೇ ಅಲ್ಲದೆ, ದಾವಣಗೆರೆ ನಗರದ ಗಡಿಯಾರ ಕಂಬದ ಬಳಿ ಪ್ರತಿಭಟನೆ ನಡೆಸಲಾಗಿದೆ. Happy Birthday PM Modi. Happy Unemployment Day ಎಂದು ರಕ್ತದಲ್ಲಿ ಪತ್ರ ಬರೆದು ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. 80 ಕ್ಕೂ ಹೆಚ್ಚು ಜನ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ರಕ್ತದಲ್ಲಿ ಪತ್ರ ಬರೆದು ವಿರೋಧ ವ್ಯಕ್ತವಾಗಿದೆ.

ಇತ್ತ, ನರೇಂದ್ರ ಮೋದಿ ಜನ್ಮದಿನಕ್ಕೆ ಬಿಜೆಪಿ ವಿವಿಧ ಯೋಜನೆಗಳನ್ನು ಹಾಕಿಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್​ 17 ರಂದು 71 ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಹಾಗೇ, ಮೋದಿ ರಾಜಕೀಯದಲ್ಲಿ ಉನ್ನತ ಹುದ್ದೆಗೇರಿ 20 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬಿಜೆಪಿ ಸೇವಾ ಮತ್ತು ಸಮರ್ಪಣ ಅಭಿಯಾನ ಹಮ್ಮಿಕೊಳ್ಳಲು ನಿರ್ಧರಿಸಿದೆ. ಈ ಅಭಿಯಾನ ಸೆಪ್ಟೆಂಬರ್​ 17 ರಿಂದ ಪ್ರಾರಂಭವಾಗಿ, 20 ದಿನಗಳ ಕಾಲ ನಡೆಯಲಿದೆ. ಈ 20 ದಿನಗಳ ಅಭಿಯಾನದ ಪ್ರಯುಕ್ತ ಬಿಜೆಪಿ ದೇಶಾದ್ಯಂದ ಸಾಮೂಹಿಕ ಸ್ವಚ್ಛತಾ ಕೆಲಸ ನಡೆಸಲಿದೆ. ಹಾಗೇ ರಕ್ತದಾನ ಶಿಬಿರಗಳಂಥ ಸಮಾಜ ಸೇವಾ ಕಾರ್ಯ ಹಮ್ಮಿಕೊಳ್ಳಲಿದೆ. ಆಚರಣೆ ಕುರಿತಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಈಗಾಗಲೇ ಎಲ್ಲ ಘಟಕಗಳಿಗೂ ನಿರ್ದೇಶನ ನೀಡಿದ್ದಾರೆ. ಉತ್ತರಪ್ರದೇಶ ಬಿಜೆಪಿ 71 ಸ್ಥಳಗಳಲ್ಲಿ ಗಂಗಾನದಿಯನ್ನು ಸ್ವಚ್ಛಗೊಳಿಸಲಿದೆ.

ಇನ್ನೊಂದು ಬಹುಮುಖ್ಯವಾಗಿ, ದೇಶಾದ್ಯಂತ ಎಲ್ಲ ಬಿಜೆಪಿ ಬೂತ್​ಗಳಿಂದ ಪ್ರಧಾನಿ ನರೇಂದ್ರ ಮೋದಿಗೆ 5 ಕೋಟಿಗಳಷ್ಟು ಅಂಚೆಪತ್ರ ಕಳಿಸುವ ಮೂಲಕ ಅಭಿನಂದನೆ ಸಲ್ಲಿಸಲಾಗುವುದು. ಪ್ರಧಾನಿ ನರೇಂದ್ರ ಮೋದಿ ತಮ್ಮನ್ನು ತಾವು ಸಾರ್ವಜನಿಕ ಸೇವೆಗೆ ತೊಡಗಿಸಿಕೊಳ್ಳುವುದಲ್ಲದೆ, ಬಿಜೆಪಿ ಪಕ್ಷದ ಪ್ರತಿ ಸದಸ್ಯರೂ ತಮ್ಮನ್ನು ತಾವು ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವಲ್ಲಿ ತುಂಬ ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಾಗಿ ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸಲು 5 ಕೋಟಿ ಪೋಸ್ಟ್ ಕಾರ್ಡ್​ ಕಳಿಸಿಕೊಡಲಾಗುವುದು ಎಂದು ಬಿಜೆಪಿ ಹೇಳಿಕೆ ಬಿಡುಗಡೆ ಮಾಡಿದೆ.

Cong Protest Unemployment Day

ದಾವಣಗೆರೆ ಕಾಂಗ್ರೆಸ್: ಪ್ರಧಾನಿ ಮೋದಿ ಜನ್ಮದಿನವನ್ನು ನಿರುದ್ಯೋಗಿಗಳ ದಿನವೆಂದು ಆಚರಣೆ

ಇದನ್ನೂ ಓದಿ: ಪ್ರಧಾನಿ ಮೋದಿಗೆ 5 ಕೋಟಿ ಪೋಸ್ಟ್​ಕಾರ್ಡ್​ ಕಳಿಸಲಿರುವ ಬಿಜೆಪಿ; ಹುಟ್ಟುಹಬ್ಬದ ನಿಮಿತ್ತ ಸೇವಾ-ಸಮರ್ಪಣ ಅಭಿಯಾನ

ಇದನ್ನೂ ಓದಿ: ಗುಜರಿ ವಸ್ತುಗಳಿಂದಲೇ ನಿರ್ಮಾಣವಾಯ್ತು 14 ಅಡಿ ಎತ್ತರದ ಪ್ರಧಾನಿ ನರೇಂದ್ರ ಮೋದಿ ಪ್ರತಿಮೆ!

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ