AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಾಲೋವರ್ಸ್​ ಹೆಚ್ಚಿಸಿಕೊಳ್ಳಲು ಬೈಕ್​ ಮೇಲೆ ಡ್ಯಾನ್ಸ್ ಮಾಡಿದ ಯುವಕ; ಅದಾದ ಮೇಲೆ 9000 ರೂ.ಖರ್ಚು ಮಾಡಬೇಕಾಯ್ತು !

ಯುವಕನನ್ನು ಖಲೀದ್​ ಅಹ್ಮದ್​ ಎಂದು ಹೇಳಲಾಗಿದೆ. ಕಾನ್ಪುರದ ಕಲ್ಯಾಣಪುರ ಏರಿಯಾದ ಮಸ್ವಾನ್​​ಪುರದ ನಿವಾಸಿ. ಸುಮಾರು ಒಂದು ವಾರದ ಹಿಂದೆ ಈತ ತನ್ನ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದ.

ಫಾಲೋವರ್ಸ್​ ಹೆಚ್ಚಿಸಿಕೊಳ್ಳಲು ಬೈಕ್​ ಮೇಲೆ ಡ್ಯಾನ್ಸ್ ಮಾಡಿದ ಯುವಕ; ಅದಾದ ಮೇಲೆ 9000 ರೂ.ಖರ್ಚು ಮಾಡಬೇಕಾಯ್ತು !
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Dec 09, 2021 | 4:57 PM

Share

ಯುವಜನರು ಎಂಥೆಂಥದ್ದೋ ಕ್ರೇಜ್​ಗೆ ಬಿದ್ದು ತಮ್ಮ ಭವಿಷ್ಯ ಹಾಳುಮಾಡಿಕೊಂಡ ಸುದ್ದಿಗಳನ್ನು ಈಗಾಗಲೇ ಹಲವು ಬಾರಿ ಓದಿದ್ದೇವೆ. ಹಾಗೇ, ಉತ್ತರ ಪ್ರದೇಶದ ಕಾನ್ಪುರದಲ್ಲಿ ಒಬ್ಬ ಯುವಕ ಸೋಷಿಯಲ್​ ಮೀಡಿಯಾದಲ್ಲಿ ಫಾಲೋವರ್ಸ್​ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳು ಹೋಗಿ ಪೊಲೀಸರ ಕೆಂಗಣ್ಣಿಗೆ ಗುರಿಯಾಗಿದ್ದಾನೆ. ಈತನಿಗೆ ಆರಕ್ಷಕರು ದಂಡವನ್ನೂ ವಿಧಿಸಿದ್ದಾರೆ. ಯುವಕ ಬಾಲಿವುಡ್​ ಸಿನಿಮಾಗಳಲ್ಲಿ ತೋರಿಸುವಂತೆ ಸ್ಟಂಟ್ ಮಾಡಲು ಹೋಗಿದ್ದೇ ಇದಕ್ಕೆಲ್ಲ ಕಾರಣ. ಈತ ಹೆಲ್ಮೆಟ್ ಧರಿಸದೆ ಬೈಕ್​ ಮೇಲೆ ನಿಂತು ಡ್ಯಾನ್ಸ್​ ಮಾಡಿದ್ದ ವಿಡಿಯೋ ನೋಡಿದ ಪೊಲೀಸರು ಇವನಿಗೆ ದಂಡ ವಿಧಿಸಿದ್ದಾರೆ. 

ಈ ಯುವಕನನ್ನು ಖಲೀದ್​ ಅಹ್ಮದ್​ ಎಂದು ಹೇಳಲಾಗಿದೆ. ಕಾನ್ಪುರದ ಕಲ್ಯಾಣಪುರ ಏರಿಯಾದ ಮಸ್ವಾನ್​​ಪುರದ ನಿವಾಸಿ. ಸುಮಾರು ಒಂದು ವಾರದ ಹಿಂದೆ ಈತ ತನ್ನ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದ. ಅದರಲ್ಲಿ ಯುವಕ ನಟ ಗೋವಿಂದ್ ಅಭಿನಯದ ಏಕ್​ ಲಡಕೀ ಚಾಹಿಯೇ ಖಾಸ್​ ಖಾಸ್​ ಹಾಡಿಗೆ ಮೋಟಾರ್ ಸೈಕಲ್​ ಮೇಲೆ ನಿಂತು ನೃತ್ಯ ಮಾಡುತ್ತಿರುವುದನ್ನು ನೋಡಬಹುದು. ಆತ ಈ ಸ್ಟಂಟ್ ಮಾಡುವಾಗ ಹೆಲ್ಮೆಟ್​ ಕೂಡ ಧರಿಸಿರಲಿಲ್ಲ.   ವಿಡಿಯೋ ನೋಡಿದ ಟ್ರಾಫಿಕ್​ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಖಲೀದ್​​ನಿಗೆ 9000 ರೂಪಾಯಿ ದಂಡ ವಿಧಿಸಿದ್ದಾರೆ. ಖಲೀದ್​​ ಹಿಂದೆ ಬ್ರೇಕ್​ ಟ್ರಾಫಿಕ್​ ರೂಲ್ಸ್​​​ಗಳನ್ನೆಲ್ಲ ಬ್ರೇಕ್​ ಮಾಡಿದ್ದನ್ನು ಸೇರಿಸಿ ಇದೀಗ ಒಮ್ಮೆಲೇ ಪೊಲೀಸರು ದಂಡ ವಿಧಿಸಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಅನಧಿಕೃತ ಕಟ್ಟಡ ನಿರ್ಮಿಸಿದ ಪ್ರಭಾವಿಗಳ ವಿರುದ್ಧ ಮೊದಲು ಕ್ರಮ ಕೈಗೊಳ್ಳಿ; ಬಿಬಿಎಂಪಿಗೆ ಹೈಕೋರ್ಟ್​ ಸೂಚನೆ

Follow Us
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!