ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ, ಯುವಕ ದುರ್ಮರಣ

ಹೈದರಾಬಾದ್: ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಯುವಕ ಮೃತಪಟ್ಟಿರುವ ಭೀಕರ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ತುಂಗಭದ್ರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಖಾನಾಪುರ ಗ್ರಾಮದ ನಿವಾಸಿಯಾದ 25 ವರ್ಷದ ಶರಣ ಬಸವ ಮೃತ ದುರ್ದೈವಿ. ತಂದೆ ಪ್ರಣಾಪಾಯದಿಂದ ಪಾರಾಗಿದ್ದು, ಮಂತ್ರಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಿಂದ ಬಂದ ತಂದೆ ಮಗ ಇಬ್ಬರು ತುಂಗಭದ್ರ ರೈಲ್ವೆ ನಿಲ್ದಾಣದಲ್ಲಿ ಇಳಿದಿದ್ದಾರೆ. ನಂತರ ಮಗ ಕಿವಿಯಲ್ಲಿ ಏರಫೋನ್ ಹಾಕೊಂಡು ಹಾಡು ಕೇಳುತ್ತಾ ಹಳಿ ದಾಟಲು ಮುಂದಾಗಿದ್ದು, ತಂದೆ ಮಗ ಇಬ್ಬರು […]

ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿ, ಯುವಕ ದುರ್ಮರಣ
ಸಾಧು ಶ್ರೀನಾಥ್​

Updated on: Jan 19, 2020 | 2:10 PM

ಹೈದರಾಬಾದ್: ಹಳಿ ದಾಟುತ್ತಿದ್ದ ವೇಳೆ ರೈಲು ಡಿಕ್ಕಿಯಾಗಿ ಯುವಕ ಮೃತಪಟ್ಟಿರುವ ಭೀಕರ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ತುಂಗಭದ್ರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಖಾನಾಪುರ ಗ್ರಾಮದ ನಿವಾಸಿಯಾದ 25 ವರ್ಷದ ಶರಣ ಬಸವ ಮೃತ ದುರ್ದೈವಿ. ತಂದೆ ಪ್ರಣಾಪಾಯದಿಂದ ಪಾರಾಗಿದ್ದು, ಮಂತ್ರಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಿಂದ ಬಂದ ತಂದೆ ಮಗ ಇಬ್ಬರು ತುಂಗಭದ್ರ ರೈಲ್ವೆ ನಿಲ್ದಾಣದಲ್ಲಿ ಇಳಿದಿದ್ದಾರೆ. ನಂತರ ಮಗ ಕಿವಿಯಲ್ಲಿ ಏರಫೋನ್ ಹಾಕೊಂಡು ಹಾಡು ಕೇಳುತ್ತಾ ಹಳಿ ದಾಟಲು ಮುಂದಾಗಿದ್ದು, ತಂದೆ ಮಗ ಇಬ್ಬರು ಹಳಿ ದಾಟಲು ಇಳಿದಿದ್ದಾರೆ. ಈ ವೇಳೆ ಬಂದ ರಾಜಧಾನಿ ಎಕ್ಸಪ್ರೆಸ್ ಟ್ರೇನ್ ಡಿಕ್ಕಿ ಹೊಡೆದಿದೆ. ಘಟನಾ ಸ್ಥಳಕ್ಕೆ ರೈಲ್ವೆ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us