AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರೇಮಿಯೊಂದಿಗೆ ಸಿಕ್ಕಿ ಬಿದ್ದ ಪತ್ನಿ, ದುಪಟ್ಟಾದಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ

ತನ್ನ ಗುಟ್ಟು ಪತಿಗೆ ಗೊತ್ತಾಯಿತೆಂದು ಮಹಿಳೆಯೊಬ್ಬಳು ಪತಿಯನ್ನು ಕೊಲೆ ಮಾಡಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ. ಈಗಲೂ ಕೂಡ ತಮ್ಮ ವಿಷಯ ಪತಿಗೆ ಗೊತ್ತಾಯಿತೆಂಬ ಭಯದಲ್ಲಿ ಆತನನ್ನು ಕೊಂದಿದ್ದಾಳೆ. ಆಕೆ ಯೂಟ್ಯೂಬರ್ ಆಗಿದ್ದು, ಒಂದೂವರೆ ವರ್ಷಗಳ ಹಿಂದೆ ಸುರೇಶ್ ಎಂಬಾತನನ್ನು ಇನ್​ಸ್ಟಾಗ್ರಾಮ್​ನಲ್ಲಿ ಭೇಟಿಯಾಗಿದ್ದಳು. ಪತಿ ಪ್ರವೀಣ್ ಆಕೆ ನಿತ್ಯವೂ ಸೋಷಿಯಲ್ ಮೀಡಿಯಾದಲ್ಲಿ ಸಮಯ ಕಳೆಯುವುದರ ಕುರಿತು ಜಗಳವಾಡುತ್ತಿದ್ದರು.

ಪ್ರೇಮಿಯೊಂದಿಗೆ ಸಿಕ್ಕಿ ಬಿದ್ದ ಪತ್ನಿ, ದುಪಟ್ಟಾದಿಂದ ಕುತ್ತಿಗೆ ಬಿಗಿದು ಪತಿಯ ಕೊಲೆ
ರವೀನಾ
ನಯನಾ ರಾಜೀವ್
|

Updated on:Apr 16, 2025 | 12:36 PM

Share

ಹರ್ಯಾಣ, ಏಪ್ರಿಲ್ 16: ತಾನು ಪ್ರೇಮಿಯೊಂದಿಗಿರುವುದನ್ನು ಪತಿ(Husband) ನೋಡಿದ್ದಕ್ಕೆ, ಆತನ ಕುತ್ತಿಗೆಗೆ ದುಪಟ್ಟಾ ಬಿಗಿದು ಕೊಲೆ ಮಾಡಿರುವ ಘಟನೆ ಹರ್ಯಾಣದಲ್ಲಿ ನಡೆದಿದೆ. ಇತ್ತೀಚೆಗೆ ಮೀರತ್​ನಲ್ಲಿ ಇಂಥದ್ದೇ ಘಟನೆಯೊಂದು ನಡೆದಿದ್ದು, ಮಹಿಳೆ ಹಾಗೂ ಆಕೆಯ ಪ್ರೇಮಿ ಸೇರಿಕೊಂಡು ಪತಿಯನ್ನು ಕೊಲೆ, ತುಂಡಾಗಿ ಕತ್ತರಿಸಿ ಪ್ಲಾಸ್ಟಿಕ್ ಡ್ರಮ್​ನಲ್ಲಿ ಹಾಕಿ ಸಿಮೆಂಟ್​ನಿಂದ ಸೀಲ್ ಮಾಡಿರುವ ಘಟನೆ ನಡೆದಿತ್ತು.

ಈಗಲೂ ಕೂಡ ತಮ್ಮ ವಿಷಯ ಪತಿಗೆ ಗೊತ್ತಾಯಿತೆಂಬ ಭಯದಲ್ಲಿ ಆತನನ್ನು ಕೊಂದಿದ್ದಾಳೆ.  ರವೀನಾ ಯೂಟ್ಯೂಬರ್ ಆಗಿದ್ದು, ಒಂದೂವರೆ ವರ್ಷಗಳ ಹಿಂದೆ ಸುರೇಶ್ ಎಂಬಾತನನ್ನು ಇನ್​ಸ್ಟಾಗ್ರಾಮ್​ನಲ್ಲಿ ಭೇಟಿಯಾಗಿದ್ದಳು. ಪತಿ ಪ್ರವೀಣ್ ಆಕೆ ನಿತ್ಯವೂ ಸೋಷಿಯಲ್ ಮೀಡಿಯಾದಲ್ಲಿ ಸಮಯ ಕಳೆಯುವುದರ ಕುರಿತು ಜಗಳವಾಡುತ್ತಿದ್ದರು.

ಪ್ರವೀಣ್ ಮನೆಗೆ ಬಂದಾಗ ಆತನಿಗಿದ್ದ ಭಯ ನಿಜವಾಗಿತ್ತು, ಆಕೆ ಸುರೇಶ್​ ಎಂಬುವವನ ಜತೆ ಇದ್ದುದನ್ನು ಕಂಡು ತಾಳ್ಮೆ ಕಳೆದುಕೊಂಡಿದ್ದಾನೆ. ಬಳಿಕ ವಾಗ್ವಾದ ನಡೆದಿತ್ತು. ನಂತರ ಮಹಿಳೆ ದುಪಟ್ಟಾದಿಂದ ಪ್ರವೀಣ್​ ಕುತ್ತಿಗೆಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ. ಸಂಜೆಯಾಗುವವರೆಗೆ ಹೆಣವನ್ನು ಅಲ್ಲೇ ಇಟ್ಟುಕೊಂಡು ಬಳಿಕ, 6 ಕಿ.ಮೀ ಬೈಕ್​ನಲ್ಲಿ ಹೋಗಿ ಚರಂಡಿಗೆ ದೇಹ ಎಸೆದಿದ್ದರು.

ಇದನ್ನೂ ಓದಿ
Image
ಹೊಸ ಪಾಡ್‌ಕಾಸ್ಟ್‌ನಲ್ಲಿ ಡೈವೋರ್ಸ್ ಬಗ್ಗೆ ಚರ್ಚಿಸಿದ ಮಿಚೆಲ್ ಒಬಾಮಾ
Image
ಪಾಕಿಸ್ತಾನದಲ್ಲಿ ರೈಲು ಹೈಜಾಕ್;27 ಉಗ್ರರ ಹತ್ಯೆ, 155 ಒತ್ತೆಯಾಳುಗಳ ರಕ್ಷಣೆ
Image
ಪಾಕಿಸ್ತಾನದಲ್ಲಿ ಉಗ್ರರಿಂದ ಪ್ಯಾಸೆಂಜರ್​​ ರೈಲು ಹೈಜಾಕ್; 11 ಸೈನಿಕರ ಹತ್ಯೆ
Image
ಒಡಿಶಾ ವಿಧಾನಸಭೆಯಲ್ಲಿ ಬಿಜೆಪಿ, ಕಾಂಗ್ರೆಸ್ ಶಾಸಕರಿಂದ ಪರಸ್ಪರ ಹಲ್ಲೆ

ಮತ್ತಷ್ಟು ಓದಿ: ದೆಹಲಿ: ಬೀದಿಯಲ್ಲಿ ಯುವತಿ ಶವ ಪತ್ತೆ, ಮೈಮೇಲೆ ಬುಲೆಟ್ ಗುರುತು

ಮೂರು ದಿನಗಳ ಬಳಿಕ ಪ್ರವೀಣ್ ಅವರ ಕೊಳೆತ ಶವ ಚರಂಡಿಯಲ್ಲಿ ಸಿಕ್ಕಿತ್ತು. ಆ ಪ್ರದೇಶದಲ್ಲಿರುವ ಸಿಸಿಟಿವಿ ಕ್ಯಾಮರಾಗಳಲ್ಲಿ ಈ ಕೃತ್ಯ ಸೆರೆಯಾಗಿದೆ. ಯೂಟ್ಯೂಬರ್​ ಆಗಿದ್ದ ಮಹಿಳೆಗೆ 34 ಸಾವಿರ ಫಾಲೋವರ್ಸ್​ ಇದ್ದಾರೆ. ಆಕೆ ಹಾಸ್ಯ ಹಾಗೂ ಕೌಂಟುಂಬಿಕ ಸಮಸ್ಯೆಗಳಿಗೆ ಸಂಬಂಧಿಸಿದ ವಿಡಿಯೋಗಳನ್ನು ಪೋಸ್ಟ್​ ಮಾಡುತ್ತಿದ್ದಳು. ಅವರಿಬ್ಬರಿಗೆ 6 ವರ್ಷದ ಮಗನಿದ್ದಾನೆ. ಆಕೆ ವಿಡಿಯೋ ಚಿತ್ರೀಕರಿಸಲು ಆಗಾಗ ಬೇರೆ ಕಡೆಗೆ ಹೋಗುತ್ತಿದ್ದಳು. ಪ್ರವೀಣ್ ಮತ್ತು ಕುಟುಂಬದ ಇತರರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು ಮತ್ತು ಆಗಾಗ ವಾದಗಳು ನಡೆಯುತ್ತಿದ್ದವು.

ಮಾರ್ಚ್​ 25ರಂದು ಶಕೆ ಶೂಟಿಂಗ್​ಗೆ ಹೊರ ಹೋಗಿದ್ದಳು, ಬಳಿಕ ಪ್ರವೀಣ್ ಮನೆಗೆ ಬರುವಾಗ ಆಕೆ ಸುರೇಶ್​ ಜತೆ ಮನೆಯಲ್ಲಿದ್ದಳು. ಅದನ್ನು ನೋಡಿ ಜಗಳ ಶುರುವಾಗಿತ್ತು, ಅದು ಕೊಲೆಯ ರೂಪ ತಾಳಿತ್ತು. ಪತ್ನಿಯಿಂದ ಆತ ಕೊಲೆಯಾಗಿಬಿಟ್ಟಿದ್ದ. ಸಂಜೆಯವರೆಗೆ ಕಾದು ಆಮೇಲೆ ಶವವನ್ನು ವಿಲೇವಾರಿ ಮಾಡಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:36 pm, Wed, 16 April 25

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ