AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ನಿಯಮದಲ್ಲಿ ಬದಲಾವಣೆಯಿಲ್ಲ; ಬಿಜೆಪಿಗೆ ಬೆಂಬಲ ಘೋಷಿಸಿದ ವೈಎಸ್​ಆರ್​ ಕಾಂಗ್ರೆಸ್

"ದೇಶ ಮತ್ತು ಆಂಧ್ರಪ್ರದೇಶದ ಹಿತಾಸಕ್ತಿ ಎಲ್ಲೆಲ್ಲಿ ಒಳಗೊಂಡಿದ್ದರೂ, ನಾವು ಮೋದಿ ಸರ್ಕಾರಕ್ಕೆ ಬೆಂಬಲವನ್ನು ನೀಡುತ್ತೇವೆ" ಎಂದು ವೈಎಸ್​ಆರ್​ ಕಾಂಗ್ರೆಸ್ ತಿಳಿಸಿದೆ.

ನಮ್ಮ ನಿಯಮದಲ್ಲಿ ಬದಲಾವಣೆಯಿಲ್ಲ; ಬಿಜೆಪಿಗೆ ಬೆಂಬಲ ಘೋಷಿಸಿದ ವೈಎಸ್​ಆರ್​ ಕಾಂಗ್ರೆಸ್
ವೈಎಸ್ ಜಗನ್ ಮೋಹನ್ ರೆಡ್ಡಿ
ಸುಷ್ಮಾ ಚಕ್ರೆ
|

Updated on: Jun 15, 2024 | 5:50 PM

Share

ಹೈದರಾಬಾದ್: ನರೇಂದ್ರ ಮೋದಿ ಸರ್ಕಾರದ ಮಸೂದೆಗಳು ಭಾರತ ಮತ್ತು ಆಂಧ್ರಪ್ರದೇಶದ ಹಿತಾಸಕ್ತಿಯಲ್ಲಿದ್ದರೆ ಬಿಜೆಪಿಗೆ ನಮ್ಮ ಬೆಂಬಲ ಸದಾ ಇರುತ್ತದೆ ಎಂದು ವೈಎಸ್‌ಆರ್ ಕಾಂಗ್ರೆಸ್ (YSR Congress) ಘೋಷಿಸಿದೆ. “ನಮ್ಮ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ” ಎಂದು ವೈಎಸ್‌ಆರ್‌ಸಿ ಸ್ಪಷ್ಟಪಡಿಸಿದೆ. ವೈಎಸ್ಆರ್ ಕಾಂಗ್ರೆಸ್ ರಾಜ್ಯಸಭೆಯಲ್ಲಿ 11 ಸಂಸದರನ್ನು ಹೊಂದಿದೆ ಮತ್ತು ಬಿಜೆಪಿ, ಕಾಂಗ್ರೆಸ್ ಮತ್ತು ಟಿಎಂಸಿ ನಂತರ ರಾಜ್ಯಸಭೆಯಲ್ಲಿ ಇದು ನಾಲ್ಕನೇ ದೊಡ್ಡ ಪಕ್ಷವಾಗಿದೆ.

ವೈಎಸ್‌ಆರ್ ಕಾಂಗ್ರೆಸ್ ಪಕ್ಷದ (ವೈಎಸ್‌ಆರ್‌ಸಿಪಿ) ಅಧ್ಯಕ್ಷ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ಹೈದರಾಬಾದ್‌ನಲ್ಲಿ ಇತ್ತೀಚಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋತ ಕಾರಣಕ್ಕಾಗಿ ತಮ್ಮ ಪಕ್ಷವನ್ನು ಮರೆಯಬಾರದು ಎಂದು ಶುಕ್ರವಾರ ಹೇಳಿದ್ದಾರೆ. ನಾವು ಸಂಸತ್ತಿನಲ್ಲಿ ಇನ್ನೂ 15 ಸಂಸದರನ್ನು ಹೊಂದಿದ್ದೇವೆ ಎಂದು ಅವರು ನೆನಪಿಸಿದ್ದಾರೆ.

ಇದನ್ನೂ ಓದಿ: ಧನ್ಯವಾದ ಮೋದಿ!; ತಮ್ಮ ಗೆಲುವನ್ನು ಪ್ರಧಾನಿಗೆ ಅರ್ಪಿಸಿದ ಎನ್​ಸಿಪಿ ನಾಯಕ ಶರದ್ ಪವಾರ್

ನಮ್ಮಲ್ಲಿ 11 ರಾಜ್ಯಸಭಾ ಸದಸ್ಯರು ಮತ್ತು ನಾಲ್ಕು ಲೋಕಸಭಾ ಸದಸ್ಯರಿದ್ದಾರೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ ಭಾಗವಾಗಿರುವ ತೆಲುಗು ದೇಶಂ ಪಕ್ಷ (ಟಿಡಿಪಿ) ಲೋಕಸಭೆಯಲ್ಲಿ 16 ಸದಸ್ಯರನ್ನು ಹೊಂದಿದ್ದರೂ, ನಾವು 15 ಸಂಸದರನ್ನು ಹೊಂದಿರುವ ಪ್ರಬಲ ಪಕ್ಷವಾಗಿದ್ದು, ನಾವು ಸಂಸತ್ತಿನಲ್ಲಿ ನಿರ್ಣಾಯಕ ಪಾತ್ರ ವಹಿಸಲಿದ್ದೇವೆ ಎಂದು ಜಗನ್ ಹೇಳಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ಹಿನ್ನಡೆಯಾಗಿದ್ದರೂ ವೈಎಸ್‌ಆರ್‌ಸಿಪಿ ಬಲಿಷ್ಠವಾಗಿದ್ದು, ಯಾವ ಶಕ್ತಿಯಿಂದಲೂ ಅದನ್ನು ಬುಡಮೇಲು ಮಾಡಲು ಸಾಧ್ಯವಿಲ್ಲ ಎಂದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ