AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ: ವಿಐಪಿ ದರ್ಶನ ಮಾಡಿಸ್ತೀನಿ ಎಂದು ಹಣ ಪಡೆದು ವಂಚನೆ, ವೈಎಸ್​ಆರ್ ಕಾಂಗ್ರೆಸ್​ ನಾಯಕಿ ವಿರುದ್ಧ ದೂರು

ತಿರುಪತಿ ತಿರುಮಲ ದೇವಸ್ಥಾನದಲ್ಲಿ ವಿಶೇಷ ಭೇಟಿಗೆ ಅವಕಾಶ ಮಾಡಿಕೊಡುತ್ತೇನೆ ಎಂದು ವೈಎಸ್​ಆರ್​ ಕಾಂಗ್ರೆಸ್​ನ ಎಂಎಲ್​ಸಿ ಮಯಾನಾ ಜಾಕಿಯಾ ಖಾನಂ ವಂಚಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಮಯಾನಾ ಜಾಕಿಯಾ ಖಾನಂ ಮತ್ತು ಇತರ ಇಬ್ಬರ ವಿರುದ್ಧ ಆಂಧ್ರಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಿರುಪತಿ: ವಿಐಪಿ ದರ್ಶನ ಮಾಡಿಸ್ತೀನಿ ಎಂದು ಹಣ ಪಡೆದು ವಂಚನೆ, ವೈಎಸ್​ಆರ್ ಕಾಂಗ್ರೆಸ್​ ನಾಯಕಿ ವಿರುದ್ಧ ದೂರು
ತಿರುಪತಿ
ನಯನಾ ರಾಜೀವ್
|

Updated on: Oct 20, 2024 | 2:27 PM

Share

ತಿರುಪತಿ ತಿರುಮಲ ದೇವಸ್ಥಾನದಲ್ಲಿ ವಿಶೇಷ ಭೇಟಿಗೆ ಅವಕಾಶ ಮಾಡಿಕೊಡುತ್ತೇನೆ ಎಂದು ವೈಎಸ್​ಆರ್​ ಕಾಂಗ್ರೆಸ್​ನ ಎಂಎಲ್​ಸಿ ಮಯಾನಾ ಜಾಕಿಯಾ ಖಾನಂ ವಂಚಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಮಯಾನಾ ಜಾಕಿಯಾ ಖಾನಂ ಮತ್ತು ಇತರ ಇಬ್ಬರ ವಿರುದ್ಧ ಆಂಧ್ರಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ನೀಡಿದ ದೂರಿನ ಪ್ರಕಾರ, ಖಾನಂ, ಆಕೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಕೃಷ್ಣ ತೇಜ ಮತ್ತು ಮತ್ತೊಬ್ಬ ವ್ಯಕ್ತಿ ಪಿ ಚಂದ್ರಶೇಖರ್ ವಿಐಪಿ ದರ್ಶನ ಮತ್ತು ವೇದಾಶೀರ್ವಾದಂ, ಧಾರ್ಮಿಕ ವಿಧಿಗಳನ್ನು ನೀಡುವುದಾಗಿ ವ್ಯಕ್ತಿಯೊಬ್ಬನಿಗೆ 65,000 ರೂ.ಗಳನ್ನು ವಂಚಿಸಿದ್ದಾರೆ ಎಂಬುದು ತಿಳಿದುಬಂದಿದೆ.

ದೂರನ್ನು ಸ್ವೀಕರಿಸಿದ ನಂತರ, ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ತನಿಖೆಯನ್ನು ಪ್ರಾರಂಭಿಸಲಾಯಿತು. ಈ ಹಿಂದೆ ಇದೇ ಪ್ರಕರಣದಲ್ಲಿ 41 ವರ್ಷದ ಉದ್ಯಮಿಯೊಬ್ಬರಿಗೆ ತಿರುಮಲ ದೇವಸ್ಥಾನದಲ್ಲಿ ವಿಐಪಿ ದರ್ಶನಕ್ಕೆ ಅನುಕೂಲ ಮಾಡಿಕೊಡುವುದಾಗಿ ಹೇಳಿ ಸೈಬರ್ ಕ್ರಿಮಿನಲ್‌ಗಳು 64,000 ರೂ.ಗಳನ್ನು ವಂಚಿಸಿದ್ದರು.

ವ್ಯಕ್ತಿಗೆ ತಿರುಪತಿ ದೇವಸ್ಥಾನದಲ್ಲಿ ವಿಐಪಿ ದರ್ಶನ ನೀಡುವುದಾಗಿ ವಾಟ್ಸಾಪ್ ಸಂದೇಶ ಬಂದಿತ್ತು. ಕಳುಹಿಸಿದವರು ತಿರುಮಲ ತಿರುಪತಿ ದೇವಸ್ಥಾನದ ಉದ್ಯೋಗಿ ಎಂದು ಪರಿಚಯಿಸಿಕೊಂಡರು. ಈ ಸಂದೇಶಕ್ಕೆ ಪ್ರತಿಕ್ರಿಯಿಸಿದ ಉದ್ಯಮಿ ರಾಕೇಶ್ ಆನಂದ್ ಲಾಲ್ವಾನಿ, ಬುಕಿಂಗ್ ಮೊತ್ತವನ್ನು ಪಾವತಿಸುವಂತೆ ಆರೋಪಿಗಳು ಮನವೊಲಿಸಿದರು.

ಆರಂಭದಲ್ಲಿ, ಲಾಲ್ವಾನಿ 30,000 ರೂ.ಗಳನ್ನು ವರ್ಗಾಯಿಸಿದರು, ಮತ್ತು ನಂತರ ತಾಂತ್ರಿಕ ಕಾರಣಗಳನ್ನು ಉಲ್ಲೇಖಿಸಿ 29,000 ರೂ. ಅಲ್ಲದೆ ಹೆಚ್ಚುವರಿಯಾಗಿ 5 ಸಾವಿರ ರೂ. ಪಡೆಯಲಾಗಿತ್ತು. ಲಾಲ್ವಾನಿ ಅವರ ದೂರಿನ ಮೇರೆಗೆ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ