AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ: ವಿಐಪಿ ದರ್ಶನ ಮಾಡಿಸ್ತೀನಿ ಎಂದು ಹಣ ಪಡೆದು ವಂಚನೆ, ವೈಎಸ್​ಆರ್ ಕಾಂಗ್ರೆಸ್​ ನಾಯಕಿ ವಿರುದ್ಧ ದೂರು

ತಿರುಪತಿ ತಿರುಮಲ ದೇವಸ್ಥಾನದಲ್ಲಿ ವಿಶೇಷ ಭೇಟಿಗೆ ಅವಕಾಶ ಮಾಡಿಕೊಡುತ್ತೇನೆ ಎಂದು ವೈಎಸ್​ಆರ್​ ಕಾಂಗ್ರೆಸ್​ನ ಎಂಎಲ್​ಸಿ ಮಯಾನಾ ಜಾಕಿಯಾ ಖಾನಂ ವಂಚಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಮಯಾನಾ ಜಾಕಿಯಾ ಖಾನಂ ಮತ್ತು ಇತರ ಇಬ್ಬರ ವಿರುದ್ಧ ಆಂಧ್ರಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಿರುಪತಿ: ವಿಐಪಿ ದರ್ಶನ ಮಾಡಿಸ್ತೀನಿ ಎಂದು ಹಣ ಪಡೆದು ವಂಚನೆ, ವೈಎಸ್​ಆರ್ ಕಾಂಗ್ರೆಸ್​ ನಾಯಕಿ ವಿರುದ್ಧ ದೂರು
ತಿರುಪತಿ
ನಯನಾ ರಾಜೀವ್
|

Updated on: Oct 20, 2024 | 2:27 PM

Share

ತಿರುಪತಿ ತಿರುಮಲ ದೇವಸ್ಥಾನದಲ್ಲಿ ವಿಶೇಷ ಭೇಟಿಗೆ ಅವಕಾಶ ಮಾಡಿಕೊಡುತ್ತೇನೆ ಎಂದು ವೈಎಸ್​ಆರ್​ ಕಾಂಗ್ರೆಸ್​ನ ಎಂಎಲ್​ಸಿ ಮಯಾನಾ ಜಾಕಿಯಾ ಖಾನಂ ವಂಚಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಮಯಾನಾ ಜಾಕಿಯಾ ಖಾನಂ ಮತ್ತು ಇತರ ಇಬ್ಬರ ವಿರುದ್ಧ ಆಂಧ್ರಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ನೀಡಿದ ದೂರಿನ ಪ್ರಕಾರ, ಖಾನಂ, ಆಕೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಕೃಷ್ಣ ತೇಜ ಮತ್ತು ಮತ್ತೊಬ್ಬ ವ್ಯಕ್ತಿ ಪಿ ಚಂದ್ರಶೇಖರ್ ವಿಐಪಿ ದರ್ಶನ ಮತ್ತು ವೇದಾಶೀರ್ವಾದಂ, ಧಾರ್ಮಿಕ ವಿಧಿಗಳನ್ನು ನೀಡುವುದಾಗಿ ವ್ಯಕ್ತಿಯೊಬ್ಬನಿಗೆ 65,000 ರೂ.ಗಳನ್ನು ವಂಚಿಸಿದ್ದಾರೆ ಎಂಬುದು ತಿಳಿದುಬಂದಿದೆ.

ದೂರನ್ನು ಸ್ವೀಕರಿಸಿದ ನಂತರ, ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ತನಿಖೆಯನ್ನು ಪ್ರಾರಂಭಿಸಲಾಯಿತು. ಈ ಹಿಂದೆ ಇದೇ ಪ್ರಕರಣದಲ್ಲಿ 41 ವರ್ಷದ ಉದ್ಯಮಿಯೊಬ್ಬರಿಗೆ ತಿರುಮಲ ದೇವಸ್ಥಾನದಲ್ಲಿ ವಿಐಪಿ ದರ್ಶನಕ್ಕೆ ಅನುಕೂಲ ಮಾಡಿಕೊಡುವುದಾಗಿ ಹೇಳಿ ಸೈಬರ್ ಕ್ರಿಮಿನಲ್‌ಗಳು 64,000 ರೂ.ಗಳನ್ನು ವಂಚಿಸಿದ್ದರು.

ವ್ಯಕ್ತಿಗೆ ತಿರುಪತಿ ದೇವಸ್ಥಾನದಲ್ಲಿ ವಿಐಪಿ ದರ್ಶನ ನೀಡುವುದಾಗಿ ವಾಟ್ಸಾಪ್ ಸಂದೇಶ ಬಂದಿತ್ತು. ಕಳುಹಿಸಿದವರು ತಿರುಮಲ ತಿರುಪತಿ ದೇವಸ್ಥಾನದ ಉದ್ಯೋಗಿ ಎಂದು ಪರಿಚಯಿಸಿಕೊಂಡರು. ಈ ಸಂದೇಶಕ್ಕೆ ಪ್ರತಿಕ್ರಿಯಿಸಿದ ಉದ್ಯಮಿ ರಾಕೇಶ್ ಆನಂದ್ ಲಾಲ್ವಾನಿ, ಬುಕಿಂಗ್ ಮೊತ್ತವನ್ನು ಪಾವತಿಸುವಂತೆ ಆರೋಪಿಗಳು ಮನವೊಲಿಸಿದರು.

ಆರಂಭದಲ್ಲಿ, ಲಾಲ್ವಾನಿ 30,000 ರೂ.ಗಳನ್ನು ವರ್ಗಾಯಿಸಿದರು, ಮತ್ತು ನಂತರ ತಾಂತ್ರಿಕ ಕಾರಣಗಳನ್ನು ಉಲ್ಲೇಖಿಸಿ 29,000 ರೂ. ಅಲ್ಲದೆ ಹೆಚ್ಚುವರಿಯಾಗಿ 5 ಸಾವಿರ ರೂ. ಪಡೆಯಲಾಗಿತ್ತು. ಲಾಲ್ವಾನಿ ಅವರ ದೂರಿನ ಮೇರೆಗೆ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?