AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ: ವಿಐಪಿ ದರ್ಶನ ಮಾಡಿಸ್ತೀನಿ ಎಂದು ಹಣ ಪಡೆದು ವಂಚನೆ, ವೈಎಸ್​ಆರ್ ಕಾಂಗ್ರೆಸ್​ ನಾಯಕಿ ವಿರುದ್ಧ ದೂರು

ತಿರುಪತಿ ತಿರುಮಲ ದೇವಸ್ಥಾನದಲ್ಲಿ ವಿಶೇಷ ಭೇಟಿಗೆ ಅವಕಾಶ ಮಾಡಿಕೊಡುತ್ತೇನೆ ಎಂದು ವೈಎಸ್​ಆರ್​ ಕಾಂಗ್ರೆಸ್​ನ ಎಂಎಲ್​ಸಿ ಮಯಾನಾ ಜಾಕಿಯಾ ಖಾನಂ ವಂಚಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಮಯಾನಾ ಜಾಕಿಯಾ ಖಾನಂ ಮತ್ತು ಇತರ ಇಬ್ಬರ ವಿರುದ್ಧ ಆಂಧ್ರಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಿರುಪತಿ: ವಿಐಪಿ ದರ್ಶನ ಮಾಡಿಸ್ತೀನಿ ಎಂದು ಹಣ ಪಡೆದು ವಂಚನೆ, ವೈಎಸ್​ಆರ್ ಕಾಂಗ್ರೆಸ್​ ನಾಯಕಿ ವಿರುದ್ಧ ದೂರು
ತಿರುಪತಿ
ನಯನಾ ರಾಜೀವ್
|

Updated on: Oct 20, 2024 | 2:27 PM

Share

ತಿರುಪತಿ ತಿರುಮಲ ದೇವಸ್ಥಾನದಲ್ಲಿ ವಿಶೇಷ ಭೇಟಿಗೆ ಅವಕಾಶ ಮಾಡಿಕೊಡುತ್ತೇನೆ ಎಂದು ವೈಎಸ್​ಆರ್​ ಕಾಂಗ್ರೆಸ್​ನ ಎಂಎಲ್​ಸಿ ಮಯಾನಾ ಜಾಕಿಯಾ ಖಾನಂ ವಂಚಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಮಯಾನಾ ಜಾಕಿಯಾ ಖಾನಂ ಮತ್ತು ಇತರ ಇಬ್ಬರ ವಿರುದ್ಧ ಆಂಧ್ರಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ನೀಡಿದ ದೂರಿನ ಪ್ರಕಾರ, ಖಾನಂ, ಆಕೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಕೃಷ್ಣ ತೇಜ ಮತ್ತು ಮತ್ತೊಬ್ಬ ವ್ಯಕ್ತಿ ಪಿ ಚಂದ್ರಶೇಖರ್ ವಿಐಪಿ ದರ್ಶನ ಮತ್ತು ವೇದಾಶೀರ್ವಾದಂ, ಧಾರ್ಮಿಕ ವಿಧಿಗಳನ್ನು ನೀಡುವುದಾಗಿ ವ್ಯಕ್ತಿಯೊಬ್ಬನಿಗೆ 65,000 ರೂ.ಗಳನ್ನು ವಂಚಿಸಿದ್ದಾರೆ ಎಂಬುದು ತಿಳಿದುಬಂದಿದೆ.

ದೂರನ್ನು ಸ್ವೀಕರಿಸಿದ ನಂತರ, ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ (ಬಿಎನ್‌ಎಸ್) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ತನಿಖೆಯನ್ನು ಪ್ರಾರಂಭಿಸಲಾಯಿತು. ಈ ಹಿಂದೆ ಇದೇ ಪ್ರಕರಣದಲ್ಲಿ 41 ವರ್ಷದ ಉದ್ಯಮಿಯೊಬ್ಬರಿಗೆ ತಿರುಮಲ ದೇವಸ್ಥಾನದಲ್ಲಿ ವಿಐಪಿ ದರ್ಶನಕ್ಕೆ ಅನುಕೂಲ ಮಾಡಿಕೊಡುವುದಾಗಿ ಹೇಳಿ ಸೈಬರ್ ಕ್ರಿಮಿನಲ್‌ಗಳು 64,000 ರೂ.ಗಳನ್ನು ವಂಚಿಸಿದ್ದರು.

ವ್ಯಕ್ತಿಗೆ ತಿರುಪತಿ ದೇವಸ್ಥಾನದಲ್ಲಿ ವಿಐಪಿ ದರ್ಶನ ನೀಡುವುದಾಗಿ ವಾಟ್ಸಾಪ್ ಸಂದೇಶ ಬಂದಿತ್ತು. ಕಳುಹಿಸಿದವರು ತಿರುಮಲ ತಿರುಪತಿ ದೇವಸ್ಥಾನದ ಉದ್ಯೋಗಿ ಎಂದು ಪರಿಚಯಿಸಿಕೊಂಡರು. ಈ ಸಂದೇಶಕ್ಕೆ ಪ್ರತಿಕ್ರಿಯಿಸಿದ ಉದ್ಯಮಿ ರಾಕೇಶ್ ಆನಂದ್ ಲಾಲ್ವಾನಿ, ಬುಕಿಂಗ್ ಮೊತ್ತವನ್ನು ಪಾವತಿಸುವಂತೆ ಆರೋಪಿಗಳು ಮನವೊಲಿಸಿದರು.

ಆರಂಭದಲ್ಲಿ, ಲಾಲ್ವಾನಿ 30,000 ರೂ.ಗಳನ್ನು ವರ್ಗಾಯಿಸಿದರು, ಮತ್ತು ನಂತರ ತಾಂತ್ರಿಕ ಕಾರಣಗಳನ್ನು ಉಲ್ಲೇಖಿಸಿ 29,000 ರೂ. ಅಲ್ಲದೆ ಹೆಚ್ಚುವರಿಯಾಗಿ 5 ಸಾವಿರ ರೂ. ಪಡೆಯಲಾಗಿತ್ತು. ಲಾಲ್ವಾನಿ ಅವರ ದೂರಿನ ಮೇರೆಗೆ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್