AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಲಿಸ್ತಾನಿಗಳಿಂದ ಜೀವ ಬೆದರಿಕೆ: ಪಂಜಾಬ್ ಸಿಎಂ ಭಗವಂತ್ ಮಾನ್​ಗೆ Z+ ಭದ್ರತೆ

ಖಲಿಸ್ತಾನಿಗಳಿಂದ ಜೀವ ಬೆದರಿಕೆ ಹಿನ್ನೆಲೆ ಪಂಜಾಬ್ ಸಿಎಂ ಭಗವಂತ್ ಸಿಂಗ್ ಮಾನ್ ಅವರಿಗೆ ಕೇಂದ್ರದಿಂದ Z+ ಭದ್ರತೆ ನಿಯೋಜನೆ ಮಾಡಲಾಗಿದೆ.

ಖಲಿಸ್ತಾನಿಗಳಿಂದ ಜೀವ ಬೆದರಿಕೆ: ಪಂಜಾಬ್ ಸಿಎಂ ಭಗವಂತ್ ಮಾನ್​ಗೆ Z+ ಭದ್ರತೆ
ಖಲಿಸ್ತಾನಿಗಳಿಂದ ಜೀವ ಬೆದರಿಕೆ ಹಿನ್ನೆಲೆ ಪಂಜಾಬ್ ಸಿಎಂ ಭಗವಂತ್ ಮಾನ್​ಗೆ Z+ ಭದ್ರತೆ
Rakesh Nayak Manchi
|

Updated on:May 26, 2023 | 6:50 AM

Share

ಚಂಡೀಗಢ: ಖಲಿಸ್ತಾನಿಗಳಿಂದ ಜೀವ ಬೆದರಿಕೆ ಹಿನ್ನೆಲೆ ಪಂಜಾಬ್ ಸಿಎಂ ಭಗವಂತ್ ಸಿಂಗ್ ಮಾನ್ (Bhagwant Singh Mann) ಅವರಿಗೆ ಕೇಂದ್ರದಿಂದ Z+ ಭದ್ರತೆ ನಿಯೋಜನೆ ಮಾಡಲಾಗಿದೆ. ಭದ್ರತೆಗಾಗಿ ಒಟ್ಟು 55 ಸಿಆರ್​ಪಿಎಫ್​ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, 10ಕ್ಕೂ ಹೆಚ್ಚು ಎನ್​ಎಸ್​ಜಿ ಕಮಾಂಡೋಗಳು ಇದರಲ್ಲಿ ಇರಲಿದ್ದಾರೆ. ಭಗವಂತ್ ಮಾನ್​ ಸಿಂಗ್ ಕುಟುಂಬದ ಸದಸ್ಯರಿಗೂ ಭದ್ರತೆ ನೀಡಲಾಗಿದೆ.

ಭದ್ರತೆಯಲ್ಲಿರುವ ಕಮಾಂಡೋಗಳು ಪರಿಣಿತ ಸಮರ ಕಲೆಗಳು ಮತ್ತು ನಿರಾಯುಧ ಯುದ್ಧ ತರಬೇತಿಯನ್ನು ಪಡೆದವರಾಗಿದ್ದಾರೆ. ಸಿಎಂ ಮಾನ್ ಅವರ ನಿವಾಸ, ಕಚೇರಿಗಳು, ರಾಜ್ಯ ಭೇಟಿಗಳ ಸ್ಥಳಗಳಲ್ಲಿ ಸ್ಕ್ರೀನಿಂಗ್ ಮತ್ತು ಭೌತಿಕ ತಪಾಸಣೆ ನಡೆಸಲಾಗುತ್ತದೆ. ಸಾರ್ವಜನಿಕ ಸಂಪರ್ಕದ ಸಮಯದಲ್ಲಿ ಸಾಕಷ್ಟು ಜನಸಂದಣಿ ನಿಯಂತ್ರಣ ಮತ್ತಿತರ ಕಡೆಗಳಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗತ್ತದೆ.

ಇದನ್ನೂ ಓದಿ: ಪಂಜಾಬ್‌ನ ಅಂತರಾಷ್ಟ್ರೀಯ ಗಡಿ ಬಳಿ ಮಾದಕ ವಸ್ತು ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಿದ ಬಿಎಸ್‌ಎಫ್

‘ವಾರಿಸ್ ಪಂಜಾಬ್ ದೇ’ ಮುಖ್ಯಸ್ಥ ಮತ್ತು ಖಲಿಸ್ತಾನಿ ಬೆಂಬಲಿಗ ಅಮೃತಪಾಲ್ ಸಿಂಗ್ ಬಂಧನದ ನಂತರ ಪಂಜಾಬ್ ಸಿಎಂ ಭದ್ರತೆಯನ್ನು ಹೆಚ್ಚಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಪಂಜಾಬ್‌ನಲ್ಲಿ ಸುಮಾರು 36 ದಿನಗಳ ಕಾಲ ಪರಾರಿಯಾಗಿದ್ದ ಅಮೃತಪಾಲ್ ಸಿಂಗ್​ನನ್ನು ಅಂತಿಮವಾಗಿ ಪಂಜಾಬ್ ಪೊಲೀಸರು ಜರ್ನೈಲ್ ಸಿಂಗ್ ಭಿಂದ್ರನ್‌ವಾಲಾ ಗ್ರಾಮದ ರೋಡ್‌ನಲ್ಲಿ ಬಂಧಿಸಿದ್ದರು. ಸದ್ಯ ಅಮೃತಪಾಲ್ ಸಿಂಗ್ ತನ್ನ 9 ಸಹಚರರೊಂದಿಗೆ ಅಸ್ಸಾಂನ ದಿಬ್ರುಗಢ ಜೈಲಿನಲ್ಲಿದ್ದಾರೆ.

ಸಿಎಂ ಮಾನ್ ಪ್ರಸ್ತುತ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಮಹಾರಾಷ್ಟ್ರ ಪ್ರವಾಸದಲ್ಲಿದ್ದಾರೆ. ಗುರುವಾರ ಅವರು ಮುಂಬೈನ ಯಶವಂತರಾವ್ ಚವಾಣ್ ಸೆಂಟರ್‌ನಲ್ಲಿ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಭೇಟಿ ಮಾಡಿದರು. ಇದೇ ವೇಳೆ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಹಿಂತೆಗೆದುಕೊಳ್ಳಲು ಕೇಂದ್ರವು ದೆಹಲಿಯಲ್ಲಿ ತಂದಿರುವ ಸುಗ್ರೀವಾಜ್ಞೆಯ ವಿರುದ್ಧ ಸಂಸತ್ತಿನಲ್ಲಿ ಬೆಂಬಲ ಕೋರಿದರು.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:36 am, Fri, 26 May 23

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ