AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಲಿಸ್ತಾನಿಗಳಿಂದ ಜೀವ ಬೆದರಿಕೆ: ಪಂಜಾಬ್ ಸಿಎಂ ಭಗವಂತ್ ಮಾನ್​ಗೆ Z+ ಭದ್ರತೆ

ಖಲಿಸ್ತಾನಿಗಳಿಂದ ಜೀವ ಬೆದರಿಕೆ ಹಿನ್ನೆಲೆ ಪಂಜಾಬ್ ಸಿಎಂ ಭಗವಂತ್ ಸಿಂಗ್ ಮಾನ್ ಅವರಿಗೆ ಕೇಂದ್ರದಿಂದ Z+ ಭದ್ರತೆ ನಿಯೋಜನೆ ಮಾಡಲಾಗಿದೆ.

ಖಲಿಸ್ತಾನಿಗಳಿಂದ ಜೀವ ಬೆದರಿಕೆ: ಪಂಜಾಬ್ ಸಿಎಂ ಭಗವಂತ್ ಮಾನ್​ಗೆ Z+ ಭದ್ರತೆ
ಖಲಿಸ್ತಾನಿಗಳಿಂದ ಜೀವ ಬೆದರಿಕೆ ಹಿನ್ನೆಲೆ ಪಂಜಾಬ್ ಸಿಎಂ ಭಗವಂತ್ ಮಾನ್​ಗೆ Z+ ಭದ್ರತೆ
Rakesh Nayak Manchi
|

Updated on:May 26, 2023 | 6:50 AM

Share

ಚಂಡೀಗಢ: ಖಲಿಸ್ತಾನಿಗಳಿಂದ ಜೀವ ಬೆದರಿಕೆ ಹಿನ್ನೆಲೆ ಪಂಜಾಬ್ ಸಿಎಂ ಭಗವಂತ್ ಸಿಂಗ್ ಮಾನ್ (Bhagwant Singh Mann) ಅವರಿಗೆ ಕೇಂದ್ರದಿಂದ Z+ ಭದ್ರತೆ ನಿಯೋಜನೆ ಮಾಡಲಾಗಿದೆ. ಭದ್ರತೆಗಾಗಿ ಒಟ್ಟು 55 ಸಿಆರ್​ಪಿಎಫ್​ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, 10ಕ್ಕೂ ಹೆಚ್ಚು ಎನ್​ಎಸ್​ಜಿ ಕಮಾಂಡೋಗಳು ಇದರಲ್ಲಿ ಇರಲಿದ್ದಾರೆ. ಭಗವಂತ್ ಮಾನ್​ ಸಿಂಗ್ ಕುಟುಂಬದ ಸದಸ್ಯರಿಗೂ ಭದ್ರತೆ ನೀಡಲಾಗಿದೆ.

ಭದ್ರತೆಯಲ್ಲಿರುವ ಕಮಾಂಡೋಗಳು ಪರಿಣಿತ ಸಮರ ಕಲೆಗಳು ಮತ್ತು ನಿರಾಯುಧ ಯುದ್ಧ ತರಬೇತಿಯನ್ನು ಪಡೆದವರಾಗಿದ್ದಾರೆ. ಸಿಎಂ ಮಾನ್ ಅವರ ನಿವಾಸ, ಕಚೇರಿಗಳು, ರಾಜ್ಯ ಭೇಟಿಗಳ ಸ್ಥಳಗಳಲ್ಲಿ ಸ್ಕ್ರೀನಿಂಗ್ ಮತ್ತು ಭೌತಿಕ ತಪಾಸಣೆ ನಡೆಸಲಾಗುತ್ತದೆ. ಸಾರ್ವಜನಿಕ ಸಂಪರ್ಕದ ಸಮಯದಲ್ಲಿ ಸಾಕಷ್ಟು ಜನಸಂದಣಿ ನಿಯಂತ್ರಣ ಮತ್ತಿತರ ಕಡೆಗಳಲ್ಲಿ ಭಾರೀ ಭದ್ರತೆ ಕೈಗೊಳ್ಳಲಾಗತ್ತದೆ.

ಇದನ್ನೂ ಓದಿ: ಪಂಜಾಬ್‌ನ ಅಂತರಾಷ್ಟ್ರೀಯ ಗಡಿ ಬಳಿ ಮಾದಕ ವಸ್ತು ಸಾಗಿಸುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಿದ ಬಿಎಸ್‌ಎಫ್

‘ವಾರಿಸ್ ಪಂಜಾಬ್ ದೇ’ ಮುಖ್ಯಸ್ಥ ಮತ್ತು ಖಲಿಸ್ತಾನಿ ಬೆಂಬಲಿಗ ಅಮೃತಪಾಲ್ ಸಿಂಗ್ ಬಂಧನದ ನಂತರ ಪಂಜಾಬ್ ಸಿಎಂ ಭದ್ರತೆಯನ್ನು ಹೆಚ್ಚಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಪಂಜಾಬ್‌ನಲ್ಲಿ ಸುಮಾರು 36 ದಿನಗಳ ಕಾಲ ಪರಾರಿಯಾಗಿದ್ದ ಅಮೃತಪಾಲ್ ಸಿಂಗ್​ನನ್ನು ಅಂತಿಮವಾಗಿ ಪಂಜಾಬ್ ಪೊಲೀಸರು ಜರ್ನೈಲ್ ಸಿಂಗ್ ಭಿಂದ್ರನ್‌ವಾಲಾ ಗ್ರಾಮದ ರೋಡ್‌ನಲ್ಲಿ ಬಂಧಿಸಿದ್ದರು. ಸದ್ಯ ಅಮೃತಪಾಲ್ ಸಿಂಗ್ ತನ್ನ 9 ಸಹಚರರೊಂದಿಗೆ ಅಸ್ಸಾಂನ ದಿಬ್ರುಗಢ ಜೈಲಿನಲ್ಲಿದ್ದಾರೆ.

ಸಿಎಂ ಮಾನ್ ಪ್ರಸ್ತುತ ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರೊಂದಿಗೆ ಮಹಾರಾಷ್ಟ್ರ ಪ್ರವಾಸದಲ್ಲಿದ್ದಾರೆ. ಗುರುವಾರ ಅವರು ಮುಂಬೈನ ಯಶವಂತರಾವ್ ಚವಾಣ್ ಸೆಂಟರ್‌ನಲ್ಲಿ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಅವರನ್ನು ಭೇಟಿ ಮಾಡಿದರು. ಇದೇ ವೇಳೆ ಸುಪ್ರೀಂ ಕೋರ್ಟ್‌ನ ತೀರ್ಪನ್ನು ಹಿಂತೆಗೆದುಕೊಳ್ಳಲು ಕೇಂದ್ರವು ದೆಹಲಿಯಲ್ಲಿ ತಂದಿರುವ ಸುಗ್ರೀವಾಜ್ಞೆಯ ವಿರುದ್ಧ ಸಂಸತ್ತಿನಲ್ಲಿ ಬೆಂಬಲ ಕೋರಿದರು.

ದೇಶದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:36 am, Fri, 26 May 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!