AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯ ಚುನಾವಣಾ ಆಯುಕ್ತರಿಗೆ ಝಡ್ ಶ್ರೇಣಿಯ ಭದ್ರತೆ

ಕೇಂದ್ರ ಚುನಾವಣಾ ಆಯೋಗ(Election Commission) ದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಗೃಹ ಸಚಿವಾಲಯವು ಝಡ್ ಶ್ರೇಣಿಯ ಭದ್ರತೆ ಕಲ್ಪಿಸಿದೆ. ಚುನಾವಣಾ ಆಯೋಗದ ಕಚೇರಿಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರು ಗಲಾಟೆ ನಡೆಸಿದ್ದರು. ಬೆದರಿಕೆ ಕೇಳಿಬಂದ ಹಿನ್ನೆಲೆಯಲ್ಲಿ ಗೃಹ ಸಚಿವಾಲಯವು ಭದ್ರತೆ ನೀಡಿದೆ.

ಮುಖ್ಯ ಚುನಾವಣಾ ಆಯುಕ್ತರಿಗೆ ಝಡ್ ಶ್ರೇಣಿಯ ಭದ್ರತೆ
ರಾಜೀವ್ ಕುಮಾರ್
ನಯನಾ ರಾಜೀವ್
|

Updated on: Apr 09, 2024 | 2:12 PM

Share

ಕೇಂದ್ರ ಚುನಾವಣಾ ಆಯೋಗ(Election Commission) ದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್(Rajiv Kumar) ಅವರಿಗೆ ಗೃಹ ಸಚಿವಾಲಯವು ಝಡ್ ಶ್ರೇಣಿಯ ಭದ್ರತೆ ಕಲ್ಪಿಸಿದೆ. ಚುನಾವಣಾ ಆಯೋಗದ ಕಚೇರಿಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರು ಗಲಾಟೆ ನಡೆಸಿದ್ದರು. ಬೆದರಿಕೆ ಕೇಳಿಬಂದ ಹಿನ್ನೆಲೆಯಲ್ಲಿ ಗೃಹ ಸಚಿವಾಲಯವು ಭದ್ರತೆ ನೀಡಿದೆ.

ಕೇಂದ್ರ ಅರೆಸೇನಾ ಪಡೆ ಸಿಆರ್‌ಪಿಎಫ್ ಮುಖ್ಯ ಚುನಾವಣಾ ಆಯುಕ್ತರಿಗೆ ಝಡ್ ಕೆಟಗರಿ ಭದ್ರತೆಯನ್ನು ಒದಗಿಸಲಿದೆ. ಸೋಮವಾರ ಚುನಾವಣಾ ಆಯೋಗದ ಕಚೇರಿಯ ಹೊರಗೆ ಪ್ರತಿಭಟನೆ ನಡೆಸುತ್ತಿದ್ದಾಗ ದೆಹಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಟಿಎಂಸಿ ನಾಯಕರು ಮಂಗಳವಾರ ಬೆಳಗ್ಗೆ ಮಂದಿರ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.

ಟಿಎಂಸಿ ನಿಯೋಗವು ಕೇಂದ್ರೀಯ ತನಿಖಾ ದಳ, ರಾಷ್ಟ್ರೀಯ ತನಿಖಾ ಸಂಸ್ಥೆ ಮತ್ತು ಆದಾಯ ತೆರಿಗೆ ಇಲಾಖೆ ಮುಖ್ಯಸ್ಥರನ್ನು ಬದಲಾಯಿಸಬೇಕು ಎಂದು ಒತ್ತಾಯಿಸಿತು. ನಂತರ ಚುನಾವಣಾ ಆಯೋಗದ ಕಚೇರಿಯ ಹೊರಗೆ 24 ಗಂಟೆಗಳ ಧರಣಿ ಕೂರುವುದಾಗಿ ಟಿಎಂಸಿ ನಾಯಕರು ಘೋಷಿಸಿದರು.

ನಿಯೋಗದಲ್ಲಿ ರಾಜ್ಯಸಭಾ ಸಂಸದರಾದ ಡೆರೆಕ್ ಓಬ್ರೇನ್, ಮೊಹಮ್ಮದ್ ನದಿಮುಲ್ ಹಕ್, ಡೋಲಾ ಸೇನ್, ಸಾಕೇತ್ ಗೋಖಲೆ, ಸಾಗರಿಕಾ ಘೋಷ್, ಶಾಸಕ ವಿವೇಕ್ ಗುಪ್ತಾ, ಮಾಜಿ ಸಂಸದರಾದ ಅರ್ಪಿತಾ ಘೋಷ್, ಶಂತನು ಸೇನ್ ಮತ್ತು ಅಬಿರ್ ರಂಜನ್ ಬಿಸ್ವಾಸ್ ಮತ್ತು ಟಿಎಂಸಿ ಪಶ್ಚಿಮ ಬಂಗಾಳದ ವಿದ್ಯಾರ್ಥಿ ವಿಭಾಗದ ಉಪಾಧ್ಯಕ್ಷ ಸುದೀಪ್ ರಾಹಾ ಇದ್ದರು.

ಮತ್ತಷ್ಟು ಓದಿ: ECI Press Conference Highlights: ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್; ಏಪ್ರಿಲ್ 19 ರಂದು ಮೊದಲ ಹಂತದ ಮತದಾನ

ಪೊಲೀಸರು ನಾಯಕರನ್ನು ವಶಕ್ಕೆ ಪಡೆದು ಬಲವಂತವಾಗಿ ಅಲ್ಲಿಂದ ಕರೆದೊಯ್ದರು. ಸೋಮವಾರ ರಾತ್ರಿ ಟಿಎಂಸಿ ನಾಯಕರನ್ನು ಬಿಡುಗಡೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆದರೆ, ಮುಖಂಡರು ರಾತ್ರಿಯಿಡೀ ಪೊಲೀಸ್ ಠಾಣೆಯಲ್ಲಿಯೇ ಕುಳಿತು ಪ್ರತಿಭಟನೆ ಮುಂದುವರಿಸಿದರು.

ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಆದೇಶದ ಮೇರೆಗೆ ಲೋಕಸಭೆ ಚುನಾವಣೆಗೆ ಮುನ್ನ ಕೇಂದ್ರ ತನಿಖಾ ಸಂಸ್ಥೆಗಳು ವಿರೋಧ ಪಕ್ಷಗಳನ್ನು ಗುರಿಯಾಗಿಸುತ್ತಿದೆ ಎಂದು ಆರೋಪಿಸುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!