Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯ ಚುನಾವಣಾ ಆಯುಕ್ತರಿಗೆ ಝಡ್ ಶ್ರೇಣಿಯ ಭದ್ರತೆ

ಕೇಂದ್ರ ಚುನಾವಣಾ ಆಯೋಗ(Election Commission) ದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರಿಗೆ ಗೃಹ ಸಚಿವಾಲಯವು ಝಡ್ ಶ್ರೇಣಿಯ ಭದ್ರತೆ ಕಲ್ಪಿಸಿದೆ. ಚುನಾವಣಾ ಆಯೋಗದ ಕಚೇರಿಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರು ಗಲಾಟೆ ನಡೆಸಿದ್ದರು. ಬೆದರಿಕೆ ಕೇಳಿಬಂದ ಹಿನ್ನೆಲೆಯಲ್ಲಿ ಗೃಹ ಸಚಿವಾಲಯವು ಭದ್ರತೆ ನೀಡಿದೆ.

ಮುಖ್ಯ ಚುನಾವಣಾ ಆಯುಕ್ತರಿಗೆ ಝಡ್ ಶ್ರೇಣಿಯ ಭದ್ರತೆ
ರಾಜೀವ್ ಕುಮಾರ್
Follow us
ನಯನಾ ರಾಜೀವ್
|

Updated on: Apr 09, 2024 | 2:12 PM

ಕೇಂದ್ರ ಚುನಾವಣಾ ಆಯೋಗ(Election Commission) ದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್(Rajiv Kumar) ಅವರಿಗೆ ಗೃಹ ಸಚಿವಾಲಯವು ಝಡ್ ಶ್ರೇಣಿಯ ಭದ್ರತೆ ಕಲ್ಪಿಸಿದೆ. ಚುನಾವಣಾ ಆಯೋಗದ ಕಚೇರಿಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತರು ಗಲಾಟೆ ನಡೆಸಿದ್ದರು. ಬೆದರಿಕೆ ಕೇಳಿಬಂದ ಹಿನ್ನೆಲೆಯಲ್ಲಿ ಗೃಹ ಸಚಿವಾಲಯವು ಭದ್ರತೆ ನೀಡಿದೆ.

ಕೇಂದ್ರ ಅರೆಸೇನಾ ಪಡೆ ಸಿಆರ್‌ಪಿಎಫ್ ಮುಖ್ಯ ಚುನಾವಣಾ ಆಯುಕ್ತರಿಗೆ ಝಡ್ ಕೆಟಗರಿ ಭದ್ರತೆಯನ್ನು ಒದಗಿಸಲಿದೆ. ಸೋಮವಾರ ಚುನಾವಣಾ ಆಯೋಗದ ಕಚೇರಿಯ ಹೊರಗೆ ಪ್ರತಿಭಟನೆ ನಡೆಸುತ್ತಿದ್ದಾಗ ದೆಹಲಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಟಿಎಂಸಿ ನಾಯಕರು ಮಂಗಳವಾರ ಬೆಳಗ್ಗೆ ಮಂದಿರ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.

ಟಿಎಂಸಿ ನಿಯೋಗವು ಕೇಂದ್ರೀಯ ತನಿಖಾ ದಳ, ರಾಷ್ಟ್ರೀಯ ತನಿಖಾ ಸಂಸ್ಥೆ ಮತ್ತು ಆದಾಯ ತೆರಿಗೆ ಇಲಾಖೆ ಮುಖ್ಯಸ್ಥರನ್ನು ಬದಲಾಯಿಸಬೇಕು ಎಂದು ಒತ್ತಾಯಿಸಿತು. ನಂತರ ಚುನಾವಣಾ ಆಯೋಗದ ಕಚೇರಿಯ ಹೊರಗೆ 24 ಗಂಟೆಗಳ ಧರಣಿ ಕೂರುವುದಾಗಿ ಟಿಎಂಸಿ ನಾಯಕರು ಘೋಷಿಸಿದರು.

ನಿಯೋಗದಲ್ಲಿ ರಾಜ್ಯಸಭಾ ಸಂಸದರಾದ ಡೆರೆಕ್ ಓಬ್ರೇನ್, ಮೊಹಮ್ಮದ್ ನದಿಮುಲ್ ಹಕ್, ಡೋಲಾ ಸೇನ್, ಸಾಕೇತ್ ಗೋಖಲೆ, ಸಾಗರಿಕಾ ಘೋಷ್, ಶಾಸಕ ವಿವೇಕ್ ಗುಪ್ತಾ, ಮಾಜಿ ಸಂಸದರಾದ ಅರ್ಪಿತಾ ಘೋಷ್, ಶಂತನು ಸೇನ್ ಮತ್ತು ಅಬಿರ್ ರಂಜನ್ ಬಿಸ್ವಾಸ್ ಮತ್ತು ಟಿಎಂಸಿ ಪಶ್ಚಿಮ ಬಂಗಾಳದ ವಿದ್ಯಾರ್ಥಿ ವಿಭಾಗದ ಉಪಾಧ್ಯಕ್ಷ ಸುದೀಪ್ ರಾಹಾ ಇದ್ದರು.

ಮತ್ತಷ್ಟು ಓದಿ: ECI Press Conference Highlights: ಲೋಕಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್; ಏಪ್ರಿಲ್ 19 ರಂದು ಮೊದಲ ಹಂತದ ಮತದಾನ

ಪೊಲೀಸರು ನಾಯಕರನ್ನು ವಶಕ್ಕೆ ಪಡೆದು ಬಲವಂತವಾಗಿ ಅಲ್ಲಿಂದ ಕರೆದೊಯ್ದರು. ಸೋಮವಾರ ರಾತ್ರಿ ಟಿಎಂಸಿ ನಾಯಕರನ್ನು ಬಿಡುಗಡೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಆದರೆ, ಮುಖಂಡರು ರಾತ್ರಿಯಿಡೀ ಪೊಲೀಸ್ ಠಾಣೆಯಲ್ಲಿಯೇ ಕುಳಿತು ಪ್ರತಿಭಟನೆ ಮುಂದುವರಿಸಿದರು.

ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಆದೇಶದ ಮೇರೆಗೆ ಲೋಕಸಭೆ ಚುನಾವಣೆಗೆ ಮುನ್ನ ಕೇಂದ್ರ ತನಿಖಾ ಸಂಸ್ಥೆಗಳು ವಿರೋಧ ಪಕ್ಷಗಳನ್ನು ಗುರಿಯಾಗಿಸುತ್ತಿದೆ ಎಂದು ಆರೋಪಿಸುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ