AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್ಪುರದಲ್ಲಿ ಮತ್ತೆ 30 ಮಂದಿಗೆ ಝಿಕಾ ವೈರಸ್ ಸೋಂಕು; ಸೋಂಕಿತರ ಸಂಖ್ಯೆ 66ಕ್ಕೆ ಏರಿಕೆ

Zika Virus: ನಿನ್ನೆಯಷ್ಟೇ (ನವೆಂಬರ್ 3) ಇಲ್ಲಿ ವಾಯುಪಡೆಯ ಆರು ಸಿಬ್ಬಂದಿಯೂ ಸೇರಿದಂತೆ ಜಿಲ್ಲೆಯ 25 ಮಂದಿಯಲ್ಲಿ ಝಿಕಾ ವೈರಸ್ ಸೋಂಕು ಪತ್ತೆಯಾಗಿತ್ತು. ಈ ಬಗ್ಗೆ ಜಿಲ್ಲಾಧಿಕಾರಿ ಜಿ.ವಿಶಾಖ್ ಹೇಳಿಕೆ ನೀಡಿದ್ದರು.

ಕಾನ್ಪುರದಲ್ಲಿ ಮತ್ತೆ 30 ಮಂದಿಗೆ ಝಿಕಾ ವೈರಸ್ ಸೋಂಕು; ಸೋಂಕಿತರ ಸಂಖ್ಯೆ 66ಕ್ಕೆ ಏರಿಕೆ
ಝಿಕಾ ವೈರಸ್
TV9 Web
| Edited By: |

Updated on: Nov 04, 2021 | 8:51 PM

Share

ಕಾನ್ಪುರ: ಉತ್ತರಪ್ರದೇಶದ ಕಾನ್ಪುರದಲ್ಲಿ ಇಂದು (ನವೆಂಬರ್ 4) ಮತ್ತೆ 30 ಜನರಿಗೆ ಝಿಕಾ ವೈರಸ್​ ಪತ್ತೆ ಆಗಿದೆ. ಅದರಂತೆ ಜಿಲ್ಲೆಯಲ್ಲಿ ಝಿಕಾ ವೈರಸ್​ ಸೋಂಕಿತರ ಸಂಖ್ಯೆ 66ಕ್ಕೆ ಏರಿಕೆ ಆಗಿದೆ. ನಿನ್ನೆಯಷ್ಟೇ (ನವೆಂಬರ್ 3) ಇಲ್ಲಿ ವಾಯುಪಡೆಯ ಆರು ಸಿಬ್ಬಂದಿಯೂ ಸೇರಿದಂತೆ ಜಿಲ್ಲೆಯ 25 ಮಂದಿಯಲ್ಲಿ ಝಿಕಾ ವೈರಸ್ ಸೋಂಕು ಪತ್ತೆಯಾಗಿತ್ತು. ಈ ಬಗ್ಗೆ ಜಿಲ್ಲಾಧಿಕಾರಿ ಜಿ.ವಿಶಾಖ್ ಹೇಳಿಕೆ ನೀಡಿದ್ದರು.

ರೋಗ ಹರಡುವುದನ್ನು ತಡೆಯಲು ಮತ್ತು ಮೂಲವನ್ನು ಪತ್ತೆಹಚ್ಚಲು ಆರೋಗ್ಯ ತಂಡಗಳನ್ನು ರಚಿಸಲಾಗಿದೆ. ಸೊಳ್ಳೆಗಳನ್ನು ನಿಯಂತ್ರಿಸಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ರಾಸಾಯನಿಕಗಳನ್ನು ಸಿಂಪಡಿಸಲಾಗುತ್ತಿದೆ. ಗರ್ಭಿಣಿಯರು ಮತ್ತು ಜ್ವರ ಪೀಡಿತರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಜಿ. ವಿಶಾಖ್ ಹೇಳಿದ್ದರು.

ಮನೆಮನೆಯಿಂದ ಮಾದರಿ ಸಂಗ್ರಹಿಸಲು ಆರೋಗ್ಯ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ. ಝಿಕಾ ವೈರಸ್ ಸೋಂಕಿನ ಬಗ್ಗೆ ಯಾರೂ ಗಾಬರಿಯಾಗಬಾರದು ಎಂದು ಮನವಿ ಮಾಡಿರುವ ಅವರು, ವಾಯುಪಡೆ ಕೇಂದ್ರದ ಸುತ್ತಮುತ್ತ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದರು.

ಝಿಕಾ ವೈರಸ್ ಸೋಂಕು ಸೊಳ್ಳೆಗಳಿಂದ ಹರಡುತ್ತದೆ. ಉತ್ತರ ಪ್ರದೇಶದ ಕಾನ್ಪುರದಲ್ಲಿ ಅ.23ರಂದು ಮೊದಲ ಬಾರಿಗೆ ವಾಯುಪಡೆ ಅಧಿಕಾರಿಯೊಬ್ಬರಲ್ಲಿ ಝೀಕಾ ಸೋಂಕು ಕಾಣಿಸಿಕೊಂಡಿತ್ತು. ಇದಾದ ನಂತರ ಕೇಂದ್ರ ಆರೋಗ್ಯ ಇಲಾಖೆಯು ಉನ್ನತ ಮಟ್ಟದ ತಂಡವನ್ನು ಉತ್ತರ ಪ್ರದೇಶಕ್ಕೆ ಕಳುಹಿಸಿಕೊಟ್ಟಿತ್ತು.

ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ಆಫ್ರಿಕನ್ ದೇಶಗಳಲ್ಲಿ ಮೊದಲ ಏಕಾಏಕಿ ದಾಖಲಾದ ಝಿಕಾ ವೈರಸ್, ಗರ್ಭಧಾರಣೆಯ ಸಂಬಂಧಿತ ತೊಡಕುಗಳು ಮತ್ತು ವಯಸ್ಕರು ಮತ್ತು ಮಕ್ಕಳಲ್ಲಿ ನರವೈಜ್ಞಾನಿಕ ತೊಡಕುಗಳ ಅಪಾಯವನ್ನು ಹೆಚ್ಚಿಸುತ್ತದೆ. ಝಿಕಾ ವೈರಸ್ ಕಾಯಿಲೆಯ ಕಾವು ಕಾಲಾವಧಿ (ರೋಗಲಕ್ಷಣಗಳಿಗೆ ಒಡ್ಡಿಕೊಳ್ಳುವ ಸಮಯ) 3 ರಿಂದ 14 ದಿನಗಳು ಎಂದು ಅಂದಾಜಿಸಲಾಗಿದೆ.

ಝಿಕಾ ವೈರಸ್ ಸೋಂಕಿತ ಜನರಲ್ಲಿ ಹೆಚ್ಚಿನವರು ರೋಗಲಕ್ಷಣಗಳನ್ನು ಹೆಚ್ಚಾಗಿ ಕಂಡು ಬರಲ್ಲ ಎಂದು WHO ಹೇಳುತ್ತದೆ. ಜ್ವರ, ಕಾಂಜಂಕ್ಟಿವಿಟಿಸ್, ಸ್ನಾಯು ಮತ್ತು ಕೀಲು ನೋವು, ಅಸ್ವಸ್ಥತೆ ಮತ್ತು ತಲೆನೋವು ಸೇರಿದಂತೆ ರೋಗಲಕ್ಷಣಗಳು ಸಾಮಾನ್ಯವಾಗಿ ಸೌಮ್ಯವಾಗಿರುತ್ತವೆ. ಸಾಮಾನ್ಯವಾಗಿ 2 ರಿಂದ 7 ದಿನಗಳವರೆಗೆ ಇರುತ್ತದೆ ಎಂದು ಅದು ಹೇಳುತ್ತದೆ. ಝಿಕಾ ವೈರಸ್‌ಗೆ ಯಾವುದೇ ಚಿಕಿತ್ಸೆ ಲಭ್ಯವಿಲ್ಲ .ಆದರೆ WHO ಪ್ರಕಾರ ಅದರ ತಡೆಗಟ್ಟುವ ಕ್ರಮಗಳು ಹಗಲಿನಲ್ಲಿ ಮತ್ತು ಸಂಜೆಯ ಆರಂಭದಲ್ಲಿ ಸೊಳ್ಳೆ ಕಡಿತದಿಂದ ರಕ್ಷಣೆಯನ್ನು ಮಾಡಿಕೊಳ್ಳಬೇಕು. ಆಗ ಮಾತ್ರ ಝಿಕಾ ವೈರಸ್ ಬರದಂತೆ ತಡೆಯಲು ಸಾಧ್ಯ. ಕಳೆದ ಕೆಲವು ತಿಂಗಳುಗಳ ಹಿಂದೆ ಕೇರಳದಲ್ಲೂ ಓರ್ವ ವ್ಯಕ್ತಿಯಲ್ಲಿ ಝಿಕಾ ವೈರಸ್ ಸೋಂಕು ಪತ್ತೆಯಾಗಿತ್ತು. ಈಗ ಉತ್ತರ ಪ್ರದೇಶದ ಕಾನ್ಪುರದಲ್ಲಿ ಝಿಕಾ ವೈರಸ್ ಸೋಂಕು ದೃಢಪಟ್ಟಿದೆ.

ಇದನ್ನೂ ಓದಿ: ಕಾನ್ಪುರದಲ್ಲಿ ವಾಯುಪಡೆಯ 6 ಸಿಬ್ಬಂದಿ ಸೇರಿ 25ಕ್ಕೂ ಹೆಚ್ಚು ಜನರಿಗೆ ಝಿಕಾ ವೈರಸ್ ಸೋಂಕು

ಇದನ್ನೂ ಓದಿ: ಕಾನ್ಪುರದ ವ್ಯಕ್ತಿಯೊಬ್ಬರಲ್ಲಿ ಝಿಕಾ ವೈರಸ್ ಪತ್ತೆ; ಕೇಂದ್ರ ಹಾಗೂ ರಾಜ್ಯ ಸರ್ಕಾರದ ತಂಡಗಳ ಭೇಟಿ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ