AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾನ್ಪುರದಲ್ಲಿ ಝಿಕಾ ಸೋಂಕಿತರ ಸಂಖ್ಯೆ 79ಕ್ಕೆ ಏರಿಕೆ; ತುರ್ತು ಸಭೆ ನಡೆಸಿದ ಸಿಎಂ ಯೋಗಿ ಆದಿತ್ಯನಾಥ್

Zika Virus: ಕಾನ್ಪುರದಲ್ಲಿ ಝಿಕಾ ವೈರಸ್​ ಸೋಂಕು  ವೇಗವಾಗಿ ಹರಡುತ್ತಿದೆ. ಇದರ ಗಂಭೀರತೆಯನ್ನು ಪರಿಗಣಿಸಿ ವಿಶೇಷ ಎಚ್ಚರಿಕೆ ತೆಗೆದುಕೊಳ್ಳಲು ನಿರ್ಧಾರ ಮಾಡಲಾಗಿದೆ. ಆಸ್ಪತ್ರೆಗಳಲ್ಲಿ ಎಲ್ಲ ರೀತಿಯ ವ್ಯವಸ್ಥೆಯನ್ನೂ ಮಾಡಲಾಗಿದೆ.

ಕಾನ್ಪುರದಲ್ಲಿ ಝಿಕಾ ಸೋಂಕಿತರ ಸಂಖ್ಯೆ 79ಕ್ಕೆ ಏರಿಕೆ; ತುರ್ತು ಸಭೆ ನಡೆಸಿದ ಸಿಎಂ ಯೋಗಿ ಆದಿತ್ಯನಾಥ್
ಸಿಎಂ ಯೋಗಿ ಆದಿತ್ಯನಾಥ್​
TV9 Web
| Edited By: |

Updated on: Nov 07, 2021 | 12:34 PM

Share

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಝಿಕಾ ವೈರಸ್​ (Zika Virus) ಸೋಂಕಿತರ ಸಂಖ್ಯೆ 79ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಚರ್ಚಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ ಅವರು ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಝಿಕಾ ವೈರಸ್​ ಹರಡುತ್ತಿರುವುದಕ್ಕೆ ಕಾರಣಗಳು, ನಿಯಂತ್ರಣಾ ಕ್ರಮಗಳ ಬಗ್ಗೆ ಅವರು ಚರ್ಚಿಸಿದ್ದಾರೆ.  ಶನಿವಾರ ಕಾನ್ಪುರದಲ್ಲಿ 13 ಹೊಸ ಝಿಕಾ ವೈರಸ್​ ಪ್ರಕರಣಗಳು ಪತ್ತೆಯಾಗಿವೆ. ಅಲ್ಲಿಗೆ ಒಟ್ಟು ಪ್ರಕರಣಗಳ ಸಂಖ್ಯೆ 79ಕ್ಕೆ ಏರಿದೆ.  

ನವೆಂಬರ್​ 6ರವರೆಗೆ ಒಟ್ಟು 79 ಝಿಕಾ ವೈರಸ್​ ಪ್ರಕರಣಗಳು ಪತ್ತೆಯಾಗಿವೆ. ಆರೋಗ್ಯ ಇಲಾಖೆ ಈ ಬಗ್ಗೆ ಮುತುವರ್ಜಿ ವಹಿಸುತ್ತಿದೆ. ಝಿಕಾ ಸೋಂಕಿಗೆ ಒಳಗಾದವರ ಮನೆಗೆ ಆರೋಗ್ಯ ಇಲಾಖೆಯ ಆರ್​ಆರ್​ಟಿ (ಕ್ಷಿಪ್ರ ಪ್ರತಿಕ್ರಿಯೆ ತಂಡ) ಭೇಟಿ ನೀಡಿ, ಪರಿಸ್ಥಿತಿ ಪರಿಶೀಲನೆ ನಡೆಸುತ್ತಿದೆ. ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆಯೂ ಜನರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ಕಾನ್ಪುರ ಜಿಲ್ಲಾಧಿಕಾರಿ ವಿಶಾಖ್​ ಜಿ ತಿಳಿಸಿದ್ದಾರೆ.

ಕಾನ್ಪುರದಲ್ಲಿ ಝಿಕಾ ವೈರಸ್​ ಸೋಂಕು  ವೇಗವಾಗಿ ಹರಡುತ್ತಿದೆ. ಇದರ ಗಂಭೀರತೆಯನ್ನು ಪರಿಗಣಿಸಿ ವಿಶೇಷ ಎಚ್ಚರಿಕೆ ತೆಗೆದುಕೊಳ್ಳಲು ನಿರ್ಧಾರ ಮಾಡಲಾಗಿದೆ. ಆಸ್ಪತ್ರೆಗಳಲ್ಲಿ ಎಲ್ಲ ರೀತಿಯ ವ್ಯವಸ್ಥೆಯನ್ನೂ ಮಾಡಲಾಗಿದೆ. ಝಿಕಾ ಸೋಂಕಿಗೆ ಒಳಗಾದ ಪ್ರತಿಯೊಬ್ಬ ರೋಗಿಯ ಆರೋಗ್ಯವನ್ನೂ ತುಂಬ ಎಚ್ಚರಿಕೆಯಿಂದ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಸಭೆಯಲ್ಲಿ ಹೇಳಿದ್ದಾಗಿ ಎಎನ್​ಐ ವರದಿ ಮಾಡಿದೆ.

ಈಡಿಸ್​ ಈಜಿಪ್ಟಿ ಎಂಬ ಸೊಳ್ಳೆ ಕಚ್ಚುವುದರಿಂದ ಈ ಝಿಕಾ ಸೋಂಕು ತಗುಲುತ್ತದೆ. ಜ್ವರ, ಮೈಕೈನೋವು, ದದ್ದು, ಸ್ನಾಯು-ಕೀಲು ನೋವುಗಳು, ಅಸ್ವಸ್ಥತೆ, ತಲೆನೋವು ಇದರ ಸಾಮಾನ್ಯ ಲಕ್ಷಣಗಳು.   ಆಗಸ್ಟ್​​ನಲ್ಲಿ ಮಹಾರಾಷ್ಟ್ರದಲ್ಲಿ ಮೊದಲ ಝಿಕಾ ವೈರಸ್​ ಪ್ರಕರಣ ಪತ್ತೆಯಾಗಿತ್ತು. ಅದಕ್ಕೂ ಮೊದಲು ಕೇರಳದಲ್ಲಿ ಹಲವರಿಗೆ ಝಿಕಾ ಸೋಂಕು ಕಾಣಿಸಿಕೊಂಡಿತ್ತು.

ಇದನ್ನೂ ಓದಿ: ಪಾಲಿಕೆಯ ಹಗ್ಗಜಗ್ಗಾಟಕ್ಕೆ ಬ್ರೇಕ್: ಕಲಬುರಗಿ ಪಾಲಿಕೆ ಮೇಯರ್ ಆಯ್ಕೆಗೆ ದಿನಾಂಕ ನಿಗದಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ