Zika Virus: ಮಹಾರಾಷ್ಟ್ರದಲ್ಲಿ ಝಿಕಾ ವೈರಸ್​ ಹೆಚ್ಚಳ, ಎಲ್ಲಾ ರಾಜ್ಯಗಳಿಗೆ ಕೇಂದ್ರದ ಸಲಹೆ

ಇತ್ತೀಚಿನ ದಿನಗಳಲ್ಲಿ ಡೆಂಗ್ಯೂದಂತೆಯೇ ಝಿಕಾ ವೈರಸ್ ಕೂಡ ಜನರ ನಿದ್ದೆಗೆಡಿಸಿದೆ. ಮಹಾರಾಷ್ಟ್ರದಲ್ಲಿ ಝಿಕಾ ಸೋಂಕು ತೀವ್ರಗೊಂಡಿದ್ದು, ಎಲ್ಲಾ ರಾಜ್ಯಗಳಿಗೆ ಕೇಂದ್ರವು ಕೆಲವು ಸಲಹೆಗಳನ್ನು ನೀಡಿದೆ.

Zika Virus: ಮಹಾರಾಷ್ಟ್ರದಲ್ಲಿ ಝಿಕಾ ವೈರಸ್​ ಹೆಚ್ಚಳ, ಎಲ್ಲಾ ರಾಜ್ಯಗಳಿಗೆ ಕೇಂದ್ರದ ಸಲಹೆ
ಝಿಕಾ ವೈರಸ್
Follow us
|

Updated on:Jul 03, 2024 | 3:13 PM

ಮಹಾರಾಷ್ಟ್ರದಲ್ಲಿ ಝಿಕಾ ವೈರಸ್(Zika Virus) ಪ್ರಕರಣಗಳು ಪತ್ತೆಯಾದ ಹಿನ್ನೆಲೆಯಲ್ಲಿ, ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಎಲ್ಲಾ ರಾಜ್ಯಗಳಿಗೆ ಸಲಹೆಯನ್ನು ನೀಡಿದೆ. ಗರ್ಭಿಣಿಯರಿಗೆ ಸೋಂಕಿನ ತಪಾಸಣೆ ಮತ್ತು ಝಿಕಾ ಸೋಂಕಿಗೆ ಒಳಗಾದ ತಾಯಂದಿರ ಭ್ರೂಣದ ಬೆಳವಣಿಗೆಯನ್ನು ಮೇಲ್ವಿಚಾರಣೆ ಮಾಡುವ ಮೂಲಕ ನಿರಂತರ ಜಾಗರೂಕತೆಯ ಸ್ಥಿತಿಯನ್ನು ಕಾಪಾಡಿಕೊಳ್ಳಲು ಆರೋಗ್ಯ ಸಚಿವಾಲಯವು ರಾಜ್ಯಗಳನ್ನು ಕೇಳಿದೆ.

ಈಡಿಸ್ ಸೊಳ್ಳೆಗಳಿಂದ ಆವರಣವನ್ನು ಮುಕ್ತವಾಗಿಡಲು ನಿಗಾ ವಹಿಸಲು ಮತ್ತು ಕಾರ್ಯನಿರ್ವಹಿಸಲು ನೋಡಲ್ ಅಧಿಕಾರಿಯನ್ನು ಗುರುತಿಸಲು ಆರೋಗ್ಯ ಸೌಲಭ್ಯಗಳು ಮತ್ತು ಆಸ್ಪತ್ರೆಗಳಿಗೆ ಸೂಚನೆ ನೀಡಲಾಗಿದೆ.

ವಸತಿ ಪ್ರದೇಶಗಳು, ಕೆಲಸದ ಸ್ಥಳಗಳು, ಶಾಲೆಗಳು, ನಿರ್ಮಾಣ ಸ್ಥಳಗಳು, ಸಂಸ್ಥೆಗಳು ಮತ್ತು ಆರೋಗ್ಯ ಸೌಲಭ್ಯಗಳಲ್ಲಿ ವೆಕ್ಟರ್ ನಿಯಂತ್ರಣ ಚಟುವಟಿಕೆಗಳನ್ನು ತೀವ್ರಗೊಳಿಸಲು ರಾಜ್ಯಗಳಿಗೆ ಸೂಚಿಸಲಾಗಿದೆ. ಜುಲೈ 1 ರಂದು ಪುಣೆಯಲ್ಲಿ ಇಬ್ಬರು ಗರ್ಭಿಣಿಯರು ಸೇರಿದಂತೆ ಆರು ಮಂದಿಗೆ ಝಿಕಾ ವೈರಸ್ ಸೋಂಕು ತಗುಲಿತ್ತು . ನಗರದ ಎರಂಡ್ವಾನೆ ಪ್ರದೇಶದಲ್ಲಿ ನಾಲ್ಕು ಮತ್ತು ಮುಂಡ್ವಾ ಪ್ರದೇಶದಲ್ಲಿ ಎರಡು ಪ್ರಕರಣಗಳು ವರದಿಯಾಗಿವೆ.

ಮತ್ತಷ್ಟು ಓದಿ: Zika Virus: ಪುಣೆಯಲ್ಲಿ ಝಿಕಾ ವೈರಸ್ ಪತ್ತೆ, ವೈದ್ಯ ಹಾಗೂ ಮಗಳಿಗೆ ತಗುಲಿದ ಸೋಂಕು

ಸೋಂಕಿತ ಈಡಿಸ್ ಸೊಳ್ಳೆಯ ಕಚ್ಚುವಿಕೆಯ ಮೂಲಕ ವೈರಸ್ ಹರಡುತ್ತದೆ, ಇದು ಡೆಂಗ್ಯೂ ಮತ್ತು ಚಿಕೂನ್‌ಗುನ್ಯಾದಂತಹ ಸೋಂಕುಗಳನ್ನು ಹರಡುತ್ತದೆ. ಈ ವೈರಸ್ ಅನ್ನು ಮೊದಲು 1947 ರಲ್ಲಿ ಉಗಾಂಡಾದಲ್ಲಿ ಗುರುತಿಸಲಾಯಿತು.

ಗರ್ಭಿಣಿಯರಲ್ಲಿ ಝಿಕಾ ವೈರಸ್ ಮೈಕ್ರೊಸೆಫಾಲಿಯನ್ನು ಉಂಟುಮಾಡಬಹುದು, ಇದರಿಂದ ಮೆದುಳಿನ ಬೆಳವಣಿಗೆಯಲ್ಲಿ ಕುಂಠಿತ ಉಂಟಾಗಲಿದೆ. ಹವಾಮಾನ ವೈಪರೀತ್ಯದಿಂದ ಡೆಂಗ್ಯೂ, ಮಲೇರಿಯಾ, ಚಿಕೂನ್ ಗುನ್ಯಾ ಸೇರಿದಂತೆ ಇತರೆ ರೋಗಗಳೂ ಹೆಚ್ಚಾಗತೊಡಗಿವೆ. ಝಿಕಾ ವೈರಸ್ ಈಡಿಸ್ ಈಜಿಪ್ಟಿ ಸೊಳ್ಳೆಯಿಂದ ಉಂಟಾಗುವ ಕಾಯಿಲೆಯಾಗಿದ್ದು, ಈ ರೋಗದ ಶೇಕಡಾ 80 ರಷ್ಟು ರೋಗಿಗಳು ಯಾವುದೇ ರೋಗಲಕ್ಷಣಗಳನ್ನು ತೋರಿಸುವುದಿಲ್ಲ.

ಕೆಲವು ರೋಗಿಗಳು ಜ್ವರ, ಕೀಲು ನೋವು, ದೇಹದ ನೋವು, ತಲೆನೋವು, ಕೆಂಪು ಕಣ್ಣುಗಳು, ವಾಂತಿ, ಅಸ್ವಸ್ಥತೆ, ಜ್ವರ ಮತ್ತು ದೇಹದ ದದ್ದುಗಳನ್ನು ಅನುಭವಿಸುತ್ತಾರೆ. ಝಿಕಾ ರೋಗಿ ಪತ್ತೆಯಾದ ಹಿನ್ನೆಲೆಯಲ್ಲಿ ಆಡಳಿತ ಮಂಡಳಿಯೂ ಎಚ್ಚೆತ್ತುಕೊಂಡಿದೆ.

ಇದನ್ನು ತಡೆಯುವುದು ಹೇಗೆ? ಮನೆಗಳಲ್ಲಿ ಸೊಳ್ಳೆಗಳನ್ನು ತಪ್ಪಿಸಿ, ಸ್ವಚ್ಛವಾಗಿಡಿ, ಸೊಳ್ಳೆ ಪರದೆಗಳನ್ನು ಬಳಸಿ ಹೆಚ್ಚು ಕಾಲ ನೀರು ನಿಲ್ಲದಂತೆ ನೋಡಿಕೊಳ್ಳಿ ಎರಡು ದಿನಗಳ ಕಾಲ ಜ್ವರ ಮುಂದುವರೆದರೆ, ತಕ್ಷಣ ವೈದ್ಯರನ್ನು ಸಂಪರ್ಕಿಸಿ.ಮನೆಯ ಒಳಾಂಗಣ ಹಾಗೂ ಹೊರಾಂಗಣವನ್ನು ಸ್ವಚ್ಚವಾಗಿಡಬೇಕು, ನೀರು ಸಂಗ್ರಹಣಾ ಪರಿಕರಗಳನ್ನು ವಾರಕ್ಕೊಮ್ಮೆ ಸ್ವಚ್ಚಗೊಳಿಸುವುದು ಹಾಗೂ ಮುಚ್ಚಳದಿಂದ ಮುಚ್ಚಬೇಕು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:12 pm, Wed, 3 July 24

ತಾಜಾ ಸುದ್ದಿ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?