AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೊಮ್ಯಾಟೊದ 1.5 ಲಕ್ಷಕ್ಕೂ ಅಧಿಕ ಉದ್ಯೋಗಿಗಳಿಗೆ ಕೊವಿಡ್​ ಲಸಿಕೆ ಉಚಿತ; ಸಿಇಒ ದೀಪಿಂದರ್​ ಗೋಯಲ್ ಘೋಷಣೆ

ರಾಷ್ಟ್ರರಾಜಧಾನಿಯಲ್ಲಿ ಈಗಾಗಲೇ ಲಸಿಕೆ ವಿತರಣೆ ನಡೆಯುತ್ತಿದ್ದು, ಸಾವಿರಕ್ಕೂ ಹೆಚ್ಚು ಮಂದಿ ವ್ಯಾಕ್ಸಿನೇಶನ್​ ಮಾಡಿಸಿಕೊಂಡಿದ್ದಾರೆ ಎಂದು ಸಿಇಒ ತಿಳಿಸಿದ್ದಾರೆ.

ಜೊಮ್ಯಾಟೊದ 1.5 ಲಕ್ಷಕ್ಕೂ ಅಧಿಕ ಉದ್ಯೋಗಿಗಳಿಗೆ ಕೊವಿಡ್​ ಲಸಿಕೆ ಉಚಿತ; ಸಿಇಒ ದೀಪಿಂದರ್​ ಗೋಯಲ್ ಘೋಷಣೆ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:May 22, 2021 | 3:43 PM

Share

ದೆಹಲಿ: ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲೂ ಕೆಲಸ ಮಾಡಿದ ಜೊಮ್ಯಾಟೊ ಆನ್​​ಲೈನ್​ ಫುಡ್​ ಆರ್ಡರ್​ ಕಂಪನಿಯ ಉದ್ಯೋಗಿಗಳು, ಸಿಬ್ಬಂದಿಗೆ ಉಚಿತವಾಗಿ ಕೊರೊನಾ ಲಸಿಕೆ ನೀಡಲಾಗುವುದು ಎಂದು ಸಂಸ್ಥೆಯ ಸಿಇಒ ದೀಪಿಂದರ್​ ಗೋಯಲ್ ತಿಳಿಸಿದ್ದಾರೆ. ಹೀಗಾಗಿ ಜೊಮ್ಯಾಟೋದ ಸುಮಾರು 1.5 ಲಕ್ಷ ಉದ್ಯೋಗಿಗಳು ಕಂಪನಿಯ ವತಿಯಿಂದ ಉಚಿತವಾಗಿ ಕೊರೊನಾ ಲಸಿಕೆ ಪಡೆಯಲಿದ್ದಾರೆ.

ರಾಷ್ಟ್ರರಾಜಧಾನಿಯಲ್ಲಿ ಈಗಾಗಲೇ ಲಸಿಕೆ ವಿತರಣೆ ನಡೆಯುತ್ತಿದ್ದು, ಸಾವಿರಕ್ಕೂ ಹೆಚ್ಚು ಮಂದಿ ವ್ಯಾಕ್ಸಿನೇಶನ್​ ಮಾಡಿಸಿಕೊಂಡಿದ್ದಾರೆ. ಶನಿವಾರ (ಇಂದು)ದಿಂದ ಮುಂಬೈ ಮತ್ತು ಬೆಂಗಳೂರಿನಲ್ಲಿರುವ ಜೊಮ್ಯಾಟೊ ಉದ್ಯೋಗಿಗಳಿಕೆ ಲಸಿಕೆ ನೀಡಲು ಪ್ರಾರಂಭಿಸಲಾಗುವುದು. ಮುಂದಿನ ವಾರದಲ್ಲಿ ಇನ್ನಷ್ಟು ನಗರಗಳಲ್ಲಿ ಈ ಅಭಿಯಾನ ಶುರುವಾಗುತ್ತದೆ ಎಂದು ಸಿಇಒ ಮಾಹಿತಿ ನೀಡಿದ್ದಾರೆ.

ನಮಗೆ ನಮ್ಮ ಗ್ರಾಹಕರ ಸುರಕ್ಷತೆ ಮೊದಲ ಆದ್ಯತೆ. ಕೊರೊನಾ ವೈರಸ್​ ಕಾಲದಲ್ಲೂ ನಮ್ಮ ಡೆಲಿವರಿ ಪಾಲುದಾರರು ಸುರಕ್ಷಿತವಾಗಿ, ತಮಗೆ ಅಪಾಯವಿದ್ದರೂ ಲೆಕ್ಕಿಸದೆ ಕೆಲಸ ಮಾಡಿದ್ದಾರೆ. ಹೀಗೆ ಮುಂಚೂಣಿಯಲ್ಲಿದ್ದು ಕೆಲಸ ಮಾಡಿದ ಸುಮಾರು 1.5 ಲಕ್ಷ ಉದ್ಯೋಗಿಗಳಿಗೆ ನೀಡುವ ಲಸಿಕೆ ವೆಚ್ಚವನ್ನು ಕಂಪನಿಯೇ ಭರಿಸಲಿದೆ ಎಂದೂ ಹೇಳಿದ್ದಾರೆ.

ಇನ್ನು ಲಸಿಕೆ ಪಡೆಯುವ ಬಗ್ಗೆ, ಅದರ ಮಹತ್ವದ ನಮ್ಮ ಆಹಾರ ವಿತರಣಾ ಪಾಲುದಾರರಿಗೆ ಅರಿವು ಮೂಡಿಸಲಾಗುವುದು. ಜೊಮ್ಯಾಟೊ ಆ್ಯಪ್​ನಲ್ಲೂ ಇದು ಗೋಚರವಾಗುವಂತೆ ಮಾಡುತ್ತೇವೆ ಎಂದು ಸಿಇಒ ತಿಳಿಸಿದ್ದಾರೆ.

ಇದನ್ನೂ ಓದಿ:  ಲಸಿಕೆ ಕೊರತೆ ಸೃಷ್ಟಿಯಾಗದಂತೆ ನೋಡಿಕೊಳ್ಳಲಾಗುತ್ತಿದೆ: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ

ಇದಪ್ಪಾ ಬ್ಯಾಲೆನ್ಸಿಂಗ್​​ ಅಂದ್ರೆ! ಈ ’ಬಾಟಲಿಪುತ್ರಿ‘ಯ ಸಾಹಸವನ್ನು ನೋಡಿದರೆ ಮೈ ಜುಂ ಎನ್ನದೇ ಇರದು

Zomato facilitating free vaccination drive for Its Employees Says CEO Deepinder Goyal

Published On - 3:40 pm, Sat, 22 May 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!