AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೊಮ್ಯಾಟೋ, ಸ್ವಿಗ್ಗಿಯಲ್ಲಿ ತಾಂತ್ರಿಕ ದೋಷ; ಆ್ಯಪ್​ನಲ್ಲಿ ಫುಡ್ ಆರ್ಡರ್ ಮಾಡಲಾಗದೆ ಗ್ರಾಹಕರ ಪರದಾಟ

ಇಂದು ಮಧ್ಯಾಹ್ನದಿಂದ ಟ್ವಿಟ್ಟರ್​ನಲ್ಲಿ #Zomato ಮತ್ತು #Swiggy ಹ್ಯಾಶ್​ಟ್ಯಾಗ್​ ಟ್ರೆಂಡಿಂಗ್​ನಲ್ಲಿವೆ. ಭಾರತದಾದ್ಯಂತ ಅನೇಕ ಬಳಕೆದಾರರು ಈ ಎರಡು ಆ್ಯಪ್​ಗಳಲ್ಲಿ ಆಹಾರವನ್ನು ಆರ್ಡರ್ ಮಾಡಲು ಸಾಧ್ಯವಾಗುತ್ತಿಲ್ಲ.

ಜೊಮ್ಯಾಟೋ, ಸ್ವಿಗ್ಗಿಯಲ್ಲಿ ತಾಂತ್ರಿಕ ದೋಷ; ಆ್ಯಪ್​ನಲ್ಲಿ ಫುಡ್ ಆರ್ಡರ್ ಮಾಡಲಾಗದೆ ಗ್ರಾಹಕರ ಪರದಾಟ
ಜೊಮ್ಯಾಟೋ ಡೆಲಿವರಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Apr 06, 2022 | 4:04 PM

ನವದೆಹಲಿ: ಆಹಾರ ವಿತರಣಾ ಅಪ್ಲಿಕೇಶನ್‌ಗಳಾದ ಜೊಮ್ಯಾಟೊ (Zomato) ಮತ್ತು ಸ್ವಿಗ್ಗಿ (Swiggy) ಇಂದು ತಾಂತ್ರಿಕ ದೋಷಗಳನ್ನು ಎದುರಿಸುತ್ತಿದೆ. ಭಾರತದಾದ್ಯಂತ ಅನೇಕ ಬಳಕೆದಾರರು ಈ ಎರಡು ಆ್ಯಪ್​ಗಳಲ್ಲಿ ಆಹಾರವನ್ನು ಆರ್ಡರ್ ಮಾಡಲು ಸಾಧ್ಯವಾಗುತ್ತಿಲ್ಲ. ಜೊಮ್ಯಾಟೊ ಮತ್ತು ಸ್ವಿಗ್ಗಿ ವಿರುದ್ಧ ಕಂಪ್ಲೇಂಟ್ ಮಾಡುತ್ತಿರುವ ಗ್ರಾಹಕರು ಸಾಮಾಜಿಕ ಜಾಲತಾಣಗಳಲ್ಲಿ (Social Media) ಈ ಎರಡು ಕಂಪನಿಗಳಿಗೆ ಟ್ಯಾಗ್ ಮಾಡಿ ತಮ್ಮ ಅಸಮಾಧಾನ ಹೊರಹಾಕುತ್ತಿದ್ದಾರೆ. ವಾರದ ದಿನಗಳಲ್ಲಿ ಊಟದ ಸಮಯದಲ್ಲಿಯೇ ಈ ಎರಡು ಆ್ಯಪ್​ಗಳು ಕ್ರ್ಯಾಶ್ ಆಗಿರುವುದರಿಂದ ಬಳಕೆದಾರರಿಗೆ ತೊಂದರೆ ಉಂಟಾಗುತ್ತಿದೆ.

ಜೊಮ್ಯಾಟೋ ಮತ್ತು ಸ್ವಿಗ್ಗಿ ಈ ಎರಡೂ ಅಪ್ಲಿಕೇಶನ್‌ಗಳು ಅರ್ಧ ಗಂಟೆಯೊಳಗೆ ಸರಿಯಾಗಿವೆ. ಆದರೆ ಸಾಮಾಜಿಕ ಮಾಧ್ಯಮವು ಆರ್ಡರ್‌ಗಳನ್ನು ಇರಿಸಲು ಅಥವಾ ಮೆನುಗಳು ಮತ್ತು ಪಟ್ಟಿಗಳನ್ನು ಬ್ರೌಸ್ ಮಾಡಲು ಸಾಧ್ಯವಾಗದ ಕಾರಣದಿಂದ ತೊಂದರೆಗೊಳಗಾಗಿದ್ದಾರೆ. ಈ ಎರಡೂ ಕಂಪನಿಗಳ ಗ್ರಾಹಕ ಬೆಂಬಲ ಹ್ಯಾಂಡಲ್‌ಗಳು ಗ್ರಾಹಕರಿಗೆ ಪ್ರತಿಕ್ರಿಯಿಸಿದ್ದು, “ತಾತ್ಕಾಲಿಕ ಗ್ಲಿಚ್ ಅನ್ನು ಪರಿಹರಿಸುವಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ” ಎಂದು ಹೇಳಿದ್ದಾರೆ.

ಜೊಮ್ಯಾಟೋ ಮತ್ತು ಸ್ವಿಗ್ಗಿ ಪ್ಲಾಟ್‌ಫಾರ್ಮ್‌ಗಳು ಸುಮಾರು 10 ಬಿಲಿಯನ್ ಮೌಲ್ಯದ ಭಾರತದ ಆನ್‌ಲೈನ್ ಆಹಾರ ವಿತರಣಾ ಮಾರುಕಟ್ಟೆಯಲ್ಲಿ ಪ್ರಾಬಲ್ಯ ಹೊಂದಿದೆ. ಇಂದು ಮಧ್ಯಾಹ್ನದಿಂದ ಟ್ವಿಟ್ಟರ್​ನಲ್ಲಿ #Zomato ಮತ್ತು #Swiggy ಹ್ಯಾಶ್​ಟ್ಯಾಗ್​ ಟ್ರೆಂಡಿಂಗ್​ನಲ್ಲಿವೆ.

ಕಳೆದ ತಿಂಗಳು ಜೊಮಾಟೊ ಸಂಸ್ಥಾಪಕ ಮತ್ತು ಸಿಇಒ ದೀಪಿಂದರ್ ಗೋಯಲ್ 10 ನಿಮಿಷಗಳಲ್ಲಿ ಆನ್‌ಲೈನ್ ಆಹಾರ ವಿತರಣಾ ಸೇವೆಯನ್ನು ಗ್ರಾಹಕರಿಗೆ ತಲುಪಿಸುವ ಯೋಜನೆಯನ್ನು ಪ್ರಕಟಿಸಿದ್ದರು. ಇದರಿಂದಾಗಿ ಇನ್ನು ಆನ್​ಲೈನ್​ನಲ್ಲಿ ಆಹಾರಕ್ಕಾಗಿ 30 ಅರ್ಧ ಗಂಟೆ ಕಾಯಬೇಕಾದ ಅಗತ್ಯವಿಲ್ಲ ಎಂದು ಗ್ರಾಹಕರು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಖುಷಿಯನ್ನು ಹಂಚಿಕೊಂಡಿದ್ದರು. ಹಾಗೇ, ಇಷ್ಟು ವೇಗವಾಗಿ ಆಹಾರವನ್ನು ಡೆಲಿವರಿ ನೀಡುವಾಗ ಡೆಲಿವರಿ ಬಾಯ್​ಗಳ ಸುರಕ್ಷತೆಯ ಕಡೆಯೂ ಗಮನ ನೀಡಬೇಕು ಎಂದಿದ್ದರು. ಈ ಹಿನ್ನೆಲೆಯಲ್ಲಿ ಮರುದಿನ ವಿವರವಾದ ಸ್ಪಷ್ಟೀಕರಣ ನೀಡಿದ್ದ ಗೋಯಲ್, ಡೆಲಿವರಿ ಏಜೆಂಟ್‌ಗಳ ಸುರಕ್ಷತೆಯು ನಮ್ಮ ಮುಖ್ಯ ಆದ್ಯತೆಯಾಗಿದೆ ಎಂದು ಸ್ಪಷ್ಟನೆ ನೀಡಿದ್ದರು.

ಇದನ್ನೂ ಓದಿ: ಬೆಂಗಳೂರಲ್ಲಿ ಜೊಮ್ಯಾಟೋ ಡೆಲಿವರಿ ಹುಡುಗರು ಮತ್ತು ಕೇರಳ ಮೂಲದ ಹೋಟೆಲ್ ಸಿಬ್ಬಂದಿ ನಡುವೆ ರಂಪಾಟ

Crime News: ಪಾರ್ಸಲ್ ಕೊಡಲು ತಡವಾಗಿದ್ದಕ್ಕೆ ರೆಸ್ಟೋರೆಂಟ್​ ಮಾಲೀಕನಿಗೆ ಗುಂಡಿಕ್ಕಿ ಕೊಂದ ಸ್ವಿಗ್ಗಿ ಡೆಲಿವರಿ ಬಾಯ್!

Published On - 3:59 pm, Wed, 6 April 22

RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
RCB ಅಂದ್ರೆ ರಿಯಲ್ ಕಲ್ಪ್ರಿಟ್ ಆಫ್ ಬೆಂಗಳೂರು: ಅಶೋಕ್ ಲೇವಡಿ
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ಮಕ್ಕಳಿದ್ದ ಆಟೋ ನ್ಯೂಟ್ರಲ್​ ಮಾಡಿ ಹಿಂದೆ ತಳ್ಳಿ ಬಿಟ್ಟ ಯುವಕ!
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ದರ್ಶನ್ ಸಂಪರ್ಕಿಸುತ್ತಾರೆ ಎಂಬ ನಂಬಿಕೆ ಇಲ್ಲ: ರೇಣುಕಾಸ್ವಾಮಿ ತಂದೆ
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಸಸ್ಪೆಂಡ್ ಆದ ಕಮಿಷನರ್ ದಯಾನಂದ್ ದಕ್ಷತೆ, ಪ್ರಮಾಣಿಕತೆ: ವಿಡಿಯೋ ವೈರಲ್
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ ದುರಂತದ ಭೀಕರತೆ ಬಿಚ್ಚಿಟ್ಟ ಗಾಯಾಳು
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ಬೆಂಗಳೂರು ಕಾಲ್ತುಳಿತ: ಅಶೋಕ್ ತುರ್ತು ಸುದ್ದಿಗೋಷ್ಠಿಯ ನೇರಪ್ರಸಾರ
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರೇಣುಕಾಸ್ವಾಮಿ ಹತ್ಯೆಗೆ 1ವರ್ಷ;ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಕುಟುಂಬಸ್ಥರು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ರ್‍ಯಾಲಿ ವೇಳೆ ಕೊಲಂಬಿಯಾದ ಅಧ್ಯಕ್ಷೀಯ ಅಭ್ಯರ್ಥಿ ಟರ್ಬೆಗೆ ಗುಂಡೇಟು
ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ವಿಡಿಯೋ ವೈರಲ್
ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗಿರಿ: ವಿಡಿಯೋ ವೈರಲ್
ಐತಿಹಾಸಿಕ ಪ್ರವಾಸಿತಾಣ ನಂದಿಗಿರಿಧಾಮ ಫುಲ್ ಟ್ರಾಫಿಕ್ ಜಾಮ್..!
ಐತಿಹಾಸಿಕ ಪ್ರವಾಸಿತಾಣ ನಂದಿಗಿರಿಧಾಮ ಫುಲ್ ಟ್ರಾಫಿಕ್ ಜಾಮ್..!