AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

’ಜೈಡಸ್ ಕ್ಯಾಡಿಲಾ ಕೊವಿಡ್​ 19 ಲಸಿಕೆ ಮಕ್ಕಳ ಮೇಲಿನ ಕ್ಲಿನಿಕಲ್​ ಪ್ರಯೋಗ ಮುಕ್ತಾಯ, ಶೀಘ್ರದಲ್ಲೇ ಬಳಕೆಗೆ ಲಭ್ಯ‘

ಕೇಂದ್ರ ಸರ್ಕಾರ ಒಟ್ಟು 380 ಪೇಜ್​ಗಳ ಅಫಿಡವಿಟ್​​ನ್ನು ಸುಪ್ರೀಂಕೋರ್ಟ್​ಗೆ ಸಲ್ಲಿಸಿದ್ದು, ಅದರಲ್ಲಿ ಕೊರೊನಾ ಲಸಿಕೆಗಳ ಬೆಲೆಯ ಬಗ್ಗೆಯೂ ಮಾಹಿತಿ ನೀಡಿದೆ. ಕೊವ್ಯಾಕ್ಸಿನ್​ ಲಸಿಕೆಯ ಒಂದು ಡೋಸ್​ಗೆ 150 ರೂ.ನಿಗದಿಪಡಿಸಲಾಗಿದ್ದು, ಅದನ್ನು ಯಾವ ಕಾರಣಕ್ಕೂ ಕಡಿಮೆ ಮಾಡಲು ಸಾಧ್ಯವೇ ಇಲ್ಲ ಎಂದು ಹೇಳಿದೆ.

’ಜೈಡಸ್ ಕ್ಯಾಡಿಲಾ ಕೊವಿಡ್​ 19 ಲಸಿಕೆ ಮಕ್ಕಳ ಮೇಲಿನ ಕ್ಲಿನಿಕಲ್​ ಪ್ರಯೋಗ ಮುಕ್ತಾಯ, ಶೀಘ್ರದಲ್ಲೇ ಬಳಕೆಗೆ ಲಭ್ಯ‘
ಜೈಡಿಸ್ ಕ್ಯಾಡಿಲಾ
TV9 Web
| Edited By: |

Updated on:Jun 27, 2021 | 10:56 AM

Share

ದೇಶದ ಕೊವಿಡ್​ 19 ಲಸಿಕೆ ನೀತಿ ಬಗ್ಗೆ ಸುಪ್ರೀಂಕೋರ್ಟ್​ ಕೇಳಿದ್ದ ಪ್ರಶ್ನೆಗೆ ಉತ್ತರ ರೂಪವಾಗಿ ಕೇಂದ್ರ ಸರ್ಕಾರ ಅಫಿಡವಿಟ್​ ಸಲ್ಲಿಸಿದೆ. ದೇಶದ ಕೊವಿಡ್​ 19 ಲಸಿಕೆ ನೀತಿಯನ್ನು ಈ ತಿಂಗಳ ಪ್ರಾರಂಭದಲ್ಲಿ ಕೂಲಂಕಷವಾಗಿ ಪರಿಶೀಲಿಸಲಾಗಿದೆ ಎಂದು ಅಫಿಡವಿಟ್​​ನಲ್ಲಿ ಹೇಳಿರುವ ಕೇಂದ್ರ ಸರ್ಕಾರ, ದೇಶದಲ್ಲಿ ಕೊರೊನಾ ಲಸಿಕೆ ಲಭ್ಯತೆ ಮತ್ತು ಡಿಸೆಂಬರ್​ ಅಂತ್ಯದೊಳಗೆ ದೇಶದ ಪ್ರತಿಯೊಬ್ಬ ವಯಸ್ಕ ನಾಗರಿಕನಿಗೂ ಕೊರೊನಾ ಲಸಿಕೆ ಕೊಟ್ಟು ಪೂರ್ಣಗೊಳಿಸಬೇಕು ಎಂಬುದು ತಮ್ಮ ಯೋಜನೆ ಎಂದು ವಿವರಿಸಿದೆ.

ಇನ್ನು ದೇಶದಲ್ಲಿ ಮಕ್ಕಳಿಗೆ ಕೊರೊನಾ ಲಸಿಕೆ ಲಭ್ಯತೆ ಬಗ್ಗೆ ಸುಪ್ರೀಂಕೋರ್ಟ್​ಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ, ಭಾರತ್​ ಬಯೋಟೆಕ್​​ನ ಕೊವ್ಯಾಕ್ಸಿನ್​ ಲಸಿಕೆಯನ್ನು 2-17ವರ್ಷದವರ ಮೇಲೆ ಕ್ಲಿನಿಕಲ್​ ಟೆಸ್ಟ್​​ ನಡೆಸಲು ಮೇ 12ರಂದು ಡ್ರಗ್ಸ್​ ಕಂಟ್ರೋಲರ್​ ಜನರಲ್ ಆಫ್​ ಇಂಡಿಯಾ (DCGI) ಅನುಮತಿ ನೀಡಿದೆ. ಈ ಕ್ಲಿನಿಕಲ್​ ಪ್ರಯೋಗಕ್ಕಾಗಿ ದಾಖಲಾತಿ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ತಿಳಿಸಿದೆ. ಕೊವಿಡ್​ 19 ಲಸಿಕೆ ಲಭ್ಯತೆ

ದೇಶದಲ್ಲಿ ವೇಗವಾಗಿ, ದೊಡ್ಡ ಪ್ರಮಾಣದಲ್ಲಿ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ಜೂ.26ರ ಹೊತ್ತಿಗೆ ದೇಶದಲ್ಲಿ 35.6 ಕೋಟಿ ಡೋಸ್ ಲಸಿಕೆ ಲಭ್ಯವಿದೆ. ಅದರಲ್ಲಿ 26.6 ಕೋಟಿ ಡೋಸ್​ಗಳಷ್ಟು ಕೊವಿಶೀಲ್ಡ್​ ಮತ್ತು 8 ಕೋಟಿ ಡೋಸ್​​ ಕೊವ್ಯಾಕ್ಸಿನ್​ ಲಭ್ಯವಿರಲಿದೆ. COVAX ವ್ಯವಸ್ಥೆಯಡಿ ಸರಕು ಸಹಾಯದ ರೂಪದಲ್ಲಿ ಹೆಚ್ಚುವರಿಯಾಗಿ 1 ಕೋಟಿ ಡೋಸ್​​ ಲಸಿಕೆ ಲಭ್ಯವಿದೆ ಎಂದು ಕೇಂದ್ರದ ಅಫಿಡವಿಟ್​​ನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ, ಜುಲೈ 31ರ ಹೊತ್ತಿಗೆ ದೇಶದಲ್ಲಿ 51.6 ಕೋಟಿ ಡೋಸ್​ ವ್ಯಾಕ್ಸಿನ್​ ಲಭ್ಯವಿರಬೇಕು. ಅದರಲ್ಲಿ 35.6 ಕೋಟಿ ಈಗಾಗಲೇ ಇದೆ. ಉಳಿದವುಗಳು ಜುಲೈ ಅಂತ್ಯದೊಳಗೆ ಪೂರೈಕೆ ಆಗುತ್ತದೆ ಎಂದು ಹೇಳಿದೆ.

ಮತ್ತೆರಡು ಹೊಸ ಲಸಿಕೆಗಳು ದೇಶದಲ್ಲಿ ಸದ್ಯ ಕೊವ್ಯಾಕ್ಸಿನ್​, ಕೊವಿಶೀಲ್ಡ್​ ಮತ್ತು ಸ್ಪುಟ್ನಿಕ್​ ವಿ ಲಸಿಕೆ ಬಳಕೆಗೆ ಲಭ್ಯವಿದೆ. ಇವುಗಳ ಹೊರತಾಗಿ ಬೇರೆ ಕೆಲವು ಲಸಿಕೆಗಳೂ ಶೀಘ್ರದಲ್ಲೇ ಭಾರತದಲ್ಲಿ ಲಭ್ಯವಾಗಲಿವೆ. ಅವುಗಳಲ್ಲಿ ಬಯಲಾಜಿಕಲ್​ ಇ ಮತ್ತು ಜೈಡಸ್ ಕ್ಯಾಡಿಲಾ ಕಂಪನಿಗಳ ದೇಶೀಯ ಲಸಿಕೆಗಳು ಕ್ಲಿನಿಕಲ್​ ಪ್ರಯೋಗದ ಕೊನೇ ಹಂತದಲ್ಲಿವೆ. ಅವುಗಳಿಗೆ ಅನುಮೋದನೆ ಸಿಕ್ಕ ಕೂಡಲೇ, ಲಸಿಕೆಗಳ ಲಭ್ಯತೆ ಇನ್ನೂ ಹೆಚ್ಚಲಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ಮಾಹಿತಿ ನೀಡಿದೆ. ಅದರಲ್ಲೂ ಜೈಡಸ್​ ಕ್ಯಾಡಿಲಾ ಅಭಿವೃದ್ಧಿಪಡಿಸುತ್ತಿರುವ ಡಿಎನ್​ಎ ಕೊರೊನಾ ಲಸಿಕೆಯನ್ನು 12-18 ವರ್ಷದವರ ಮೇಲೆ ಕ್ಲಿನಿಕಲ್​ ಪ್ರಯೋಗ ಮಾಡಲಾಗಿದೆ. ಇದು ಶೀಘ್ರದಲ್ಲೇ ಮಕ್ಕಳ ಬಳಕೆಗೆ ಲಭ್ಯವಾಗಲಿದೆ ಎಂದೂ ತಿಳಿಸಿದೆ.

ಕೇಂದ್ರ ಸರ್ಕಾರ ಒಟ್ಟು 380 ಪೇಜ್​ಗಳ ಅಫಿಡವಿಟ್​​ನ್ನು ಸುಪ್ರೀಂಕೋರ್ಟ್​ಗೆ ಸಲ್ಲಿಸಿದ್ದು, ಅದರಲ್ಲಿ ಕೊರೊನಾ ಲಸಿಕೆಗಳ ಬೆಲೆಯ ಬಗ್ಗೆಯೂ ಮಾಹಿತಿ ನೀಡಿದೆ. ಕೊವ್ಯಾಕ್ಸಿನ್​ ಲಸಿಕೆಯ ಒಂದು ಡೋಸ್​ಗೆ 150 ರೂ.ನಿಗದಿಪಡಿಸಲಾಗಿದ್ದು, ಅದನ್ನು ಯಾವ ಕಾರಣಕ್ಕೂ ಕಡಿಮೆ ಮಾಡಲು ಸಾಧ್ಯವೇ ಇಲ್ಲ ಎಂದು ಹೇಳಿದೆ. ಇದು ವಿಶ್ವದಲ್ಲೇ ಅತ್ಯಂತ ಕಡಿಮೆ ಬೆಲೆ ಎಂದೂ ತಿಳಿಸಿದೆ. ಕೊರೊನಾ ವಿರುದ್ಧ ಹೋರಾಟದ ಪ್ರಯತ್ನಗಳೆಲ್ಲ ಮುಂದುವರಿದ ಹಂತದಲ್ಲಿವೆ. ಹಾಗಾಗಿ ಈ ಬಗ್ಗೆ ಸಮಗ್ರ ಮಾಹಿತಿ ನೀಡುವುದು ಸಾಧ್ಯವಿಲ್ಲ ಮತ್ತು ಅದು ಅಪೇಕ್ಷಣೀಯವೂ ಅಲ್ಲ ಎಂದು ತಿಳಿಸಿದೆ.

ಇದನ್ನೂ ಓದಿ: Coronavirus cases in India: ದೇಶದಲ್ಲಿ 50,040 ಹೊಸ ಕೊವಿಡ್ ಪ್ರಕರಣ ಪತ್ತೆ, 1258 ಮಂದಿ ಸಾವು

Published On - 10:50 am, Sun, 27 June 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!