AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

’ಜೈಡಸ್ ಕ್ಯಾಡಿಲಾ ಕೊವಿಡ್​ 19 ಲಸಿಕೆ ಮಕ್ಕಳ ಮೇಲಿನ ಕ್ಲಿನಿಕಲ್​ ಪ್ರಯೋಗ ಮುಕ್ತಾಯ, ಶೀಘ್ರದಲ್ಲೇ ಬಳಕೆಗೆ ಲಭ್ಯ‘

ಕೇಂದ್ರ ಸರ್ಕಾರ ಒಟ್ಟು 380 ಪೇಜ್​ಗಳ ಅಫಿಡವಿಟ್​​ನ್ನು ಸುಪ್ರೀಂಕೋರ್ಟ್​ಗೆ ಸಲ್ಲಿಸಿದ್ದು, ಅದರಲ್ಲಿ ಕೊರೊನಾ ಲಸಿಕೆಗಳ ಬೆಲೆಯ ಬಗ್ಗೆಯೂ ಮಾಹಿತಿ ನೀಡಿದೆ. ಕೊವ್ಯಾಕ್ಸಿನ್​ ಲಸಿಕೆಯ ಒಂದು ಡೋಸ್​ಗೆ 150 ರೂ.ನಿಗದಿಪಡಿಸಲಾಗಿದ್ದು, ಅದನ್ನು ಯಾವ ಕಾರಣಕ್ಕೂ ಕಡಿಮೆ ಮಾಡಲು ಸಾಧ್ಯವೇ ಇಲ್ಲ ಎಂದು ಹೇಳಿದೆ.

’ಜೈಡಸ್ ಕ್ಯಾಡಿಲಾ ಕೊವಿಡ್​ 19 ಲಸಿಕೆ ಮಕ್ಕಳ ಮೇಲಿನ ಕ್ಲಿನಿಕಲ್​ ಪ್ರಯೋಗ ಮುಕ್ತಾಯ, ಶೀಘ್ರದಲ್ಲೇ ಬಳಕೆಗೆ ಲಭ್ಯ‘
ಜೈಡಿಸ್ ಕ್ಯಾಡಿಲಾ
TV9 Web
| Edited By: |

Updated on:Jun 27, 2021 | 10:56 AM

Share

ದೇಶದ ಕೊವಿಡ್​ 19 ಲಸಿಕೆ ನೀತಿ ಬಗ್ಗೆ ಸುಪ್ರೀಂಕೋರ್ಟ್​ ಕೇಳಿದ್ದ ಪ್ರಶ್ನೆಗೆ ಉತ್ತರ ರೂಪವಾಗಿ ಕೇಂದ್ರ ಸರ್ಕಾರ ಅಫಿಡವಿಟ್​ ಸಲ್ಲಿಸಿದೆ. ದೇಶದ ಕೊವಿಡ್​ 19 ಲಸಿಕೆ ನೀತಿಯನ್ನು ಈ ತಿಂಗಳ ಪ್ರಾರಂಭದಲ್ಲಿ ಕೂಲಂಕಷವಾಗಿ ಪರಿಶೀಲಿಸಲಾಗಿದೆ ಎಂದು ಅಫಿಡವಿಟ್​​ನಲ್ಲಿ ಹೇಳಿರುವ ಕೇಂದ್ರ ಸರ್ಕಾರ, ದೇಶದಲ್ಲಿ ಕೊರೊನಾ ಲಸಿಕೆ ಲಭ್ಯತೆ ಮತ್ತು ಡಿಸೆಂಬರ್​ ಅಂತ್ಯದೊಳಗೆ ದೇಶದ ಪ್ರತಿಯೊಬ್ಬ ವಯಸ್ಕ ನಾಗರಿಕನಿಗೂ ಕೊರೊನಾ ಲಸಿಕೆ ಕೊಟ್ಟು ಪೂರ್ಣಗೊಳಿಸಬೇಕು ಎಂಬುದು ತಮ್ಮ ಯೋಜನೆ ಎಂದು ವಿವರಿಸಿದೆ.

ಇನ್ನು ದೇಶದಲ್ಲಿ ಮಕ್ಕಳಿಗೆ ಕೊರೊನಾ ಲಸಿಕೆ ಲಭ್ಯತೆ ಬಗ್ಗೆ ಸುಪ್ರೀಂಕೋರ್ಟ್​ಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ, ಭಾರತ್​ ಬಯೋಟೆಕ್​​ನ ಕೊವ್ಯಾಕ್ಸಿನ್​ ಲಸಿಕೆಯನ್ನು 2-17ವರ್ಷದವರ ಮೇಲೆ ಕ್ಲಿನಿಕಲ್​ ಟೆಸ್ಟ್​​ ನಡೆಸಲು ಮೇ 12ರಂದು ಡ್ರಗ್ಸ್​ ಕಂಟ್ರೋಲರ್​ ಜನರಲ್ ಆಫ್​ ಇಂಡಿಯಾ (DCGI) ಅನುಮತಿ ನೀಡಿದೆ. ಈ ಕ್ಲಿನಿಕಲ್​ ಪ್ರಯೋಗಕ್ಕಾಗಿ ದಾಖಲಾತಿ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ತಿಳಿಸಿದೆ. ಕೊವಿಡ್​ 19 ಲಸಿಕೆ ಲಭ್ಯತೆ

ದೇಶದಲ್ಲಿ ವೇಗವಾಗಿ, ದೊಡ್ಡ ಪ್ರಮಾಣದಲ್ಲಿ ಕೊರೊನಾ ಲಸಿಕೆ ಅಭಿಯಾನ ನಡೆಯುತ್ತಿದೆ. ಜೂ.26ರ ಹೊತ್ತಿಗೆ ದೇಶದಲ್ಲಿ 35.6 ಕೋಟಿ ಡೋಸ್ ಲಸಿಕೆ ಲಭ್ಯವಿದೆ. ಅದರಲ್ಲಿ 26.6 ಕೋಟಿ ಡೋಸ್​ಗಳಷ್ಟು ಕೊವಿಶೀಲ್ಡ್​ ಮತ್ತು 8 ಕೋಟಿ ಡೋಸ್​​ ಕೊವ್ಯಾಕ್ಸಿನ್​ ಲಭ್ಯವಿರಲಿದೆ. COVAX ವ್ಯವಸ್ಥೆಯಡಿ ಸರಕು ಸಹಾಯದ ರೂಪದಲ್ಲಿ ಹೆಚ್ಚುವರಿಯಾಗಿ 1 ಕೋಟಿ ಡೋಸ್​​ ಲಸಿಕೆ ಲಭ್ಯವಿದೆ ಎಂದು ಕೇಂದ್ರದ ಅಫಿಡವಿಟ್​​ನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ, ಜುಲೈ 31ರ ಹೊತ್ತಿಗೆ ದೇಶದಲ್ಲಿ 51.6 ಕೋಟಿ ಡೋಸ್​ ವ್ಯಾಕ್ಸಿನ್​ ಲಭ್ಯವಿರಬೇಕು. ಅದರಲ್ಲಿ 35.6 ಕೋಟಿ ಈಗಾಗಲೇ ಇದೆ. ಉಳಿದವುಗಳು ಜುಲೈ ಅಂತ್ಯದೊಳಗೆ ಪೂರೈಕೆ ಆಗುತ್ತದೆ ಎಂದು ಹೇಳಿದೆ.

ಮತ್ತೆರಡು ಹೊಸ ಲಸಿಕೆಗಳು ದೇಶದಲ್ಲಿ ಸದ್ಯ ಕೊವ್ಯಾಕ್ಸಿನ್​, ಕೊವಿಶೀಲ್ಡ್​ ಮತ್ತು ಸ್ಪುಟ್ನಿಕ್​ ವಿ ಲಸಿಕೆ ಬಳಕೆಗೆ ಲಭ್ಯವಿದೆ. ಇವುಗಳ ಹೊರತಾಗಿ ಬೇರೆ ಕೆಲವು ಲಸಿಕೆಗಳೂ ಶೀಘ್ರದಲ್ಲೇ ಭಾರತದಲ್ಲಿ ಲಭ್ಯವಾಗಲಿವೆ. ಅವುಗಳಲ್ಲಿ ಬಯಲಾಜಿಕಲ್​ ಇ ಮತ್ತು ಜೈಡಸ್ ಕ್ಯಾಡಿಲಾ ಕಂಪನಿಗಳ ದೇಶೀಯ ಲಸಿಕೆಗಳು ಕ್ಲಿನಿಕಲ್​ ಪ್ರಯೋಗದ ಕೊನೇ ಹಂತದಲ್ಲಿವೆ. ಅವುಗಳಿಗೆ ಅನುಮೋದನೆ ಸಿಕ್ಕ ಕೂಡಲೇ, ಲಸಿಕೆಗಳ ಲಭ್ಯತೆ ಇನ್ನೂ ಹೆಚ್ಚಲಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ಮಾಹಿತಿ ನೀಡಿದೆ. ಅದರಲ್ಲೂ ಜೈಡಸ್​ ಕ್ಯಾಡಿಲಾ ಅಭಿವೃದ್ಧಿಪಡಿಸುತ್ತಿರುವ ಡಿಎನ್​ಎ ಕೊರೊನಾ ಲಸಿಕೆಯನ್ನು 12-18 ವರ್ಷದವರ ಮೇಲೆ ಕ್ಲಿನಿಕಲ್​ ಪ್ರಯೋಗ ಮಾಡಲಾಗಿದೆ. ಇದು ಶೀಘ್ರದಲ್ಲೇ ಮಕ್ಕಳ ಬಳಕೆಗೆ ಲಭ್ಯವಾಗಲಿದೆ ಎಂದೂ ತಿಳಿಸಿದೆ.

ಕೇಂದ್ರ ಸರ್ಕಾರ ಒಟ್ಟು 380 ಪೇಜ್​ಗಳ ಅಫಿಡವಿಟ್​​ನ್ನು ಸುಪ್ರೀಂಕೋರ್ಟ್​ಗೆ ಸಲ್ಲಿಸಿದ್ದು, ಅದರಲ್ಲಿ ಕೊರೊನಾ ಲಸಿಕೆಗಳ ಬೆಲೆಯ ಬಗ್ಗೆಯೂ ಮಾಹಿತಿ ನೀಡಿದೆ. ಕೊವ್ಯಾಕ್ಸಿನ್​ ಲಸಿಕೆಯ ಒಂದು ಡೋಸ್​ಗೆ 150 ರೂ.ನಿಗದಿಪಡಿಸಲಾಗಿದ್ದು, ಅದನ್ನು ಯಾವ ಕಾರಣಕ್ಕೂ ಕಡಿಮೆ ಮಾಡಲು ಸಾಧ್ಯವೇ ಇಲ್ಲ ಎಂದು ಹೇಳಿದೆ. ಇದು ವಿಶ್ವದಲ್ಲೇ ಅತ್ಯಂತ ಕಡಿಮೆ ಬೆಲೆ ಎಂದೂ ತಿಳಿಸಿದೆ. ಕೊರೊನಾ ವಿರುದ್ಧ ಹೋರಾಟದ ಪ್ರಯತ್ನಗಳೆಲ್ಲ ಮುಂದುವರಿದ ಹಂತದಲ್ಲಿವೆ. ಹಾಗಾಗಿ ಈ ಬಗ್ಗೆ ಸಮಗ್ರ ಮಾಹಿತಿ ನೀಡುವುದು ಸಾಧ್ಯವಿಲ್ಲ ಮತ್ತು ಅದು ಅಪೇಕ್ಷಣೀಯವೂ ಅಲ್ಲ ಎಂದು ತಿಳಿಸಿದೆ.

ಇದನ್ನೂ ಓದಿ: Coronavirus cases in India: ದೇಶದಲ್ಲಿ 50,040 ಹೊಸ ಕೊವಿಡ್ ಪ್ರಕರಣ ಪತ್ತೆ, 1258 ಮಂದಿ ಸಾವು

Published On - 10:50 am, Sun, 27 June 21

ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ