AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಕೊವಿಡ್​ ಲಸಿಕೆ ಸಿದ್ಧ; ಜುಲೈ-ಅಗಸ್ಟ್​​ನಿಂದ 12 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನೇಶನ್​​

Zydus Cadila: ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ಸಲ್ಲಿಸಿದ ಅಫಿಡವಿಟ್​ನಲ್ಲಿ ಕೂಡ ಜೈಡಸ್​ ಕ್ಯಾಡಿಲಾ ಲಸಿಕೆಯ ಪ್ರಯೋಗ ಬಹುತೇಕ ಸಂಪೂರ್ಣವಾಗಿದೆ. ಈ ಕಂಪನಿ ZyCoV-D ಎಂಬ ಹೆಸರಿನ ಲಸಿಕೆ ಅಭಿವೃದ್ಧಿ ಪಡಿಸಿದ್ದು, ಭಾರತದಲ್ಲಿ ತುರ್ತು ಸಂದರ್ಭದಲ್ಲಿ ಬಳಕೆಗೆ ಲಭ್ಯವಾಗಲಿದೆ ಎಂದು ತಿಳಿಸಿದೆ.

ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಕೊವಿಡ್​ ಲಸಿಕೆ ಸಿದ್ಧ; ಜುಲೈ-ಅಗಸ್ಟ್​​ನಿಂದ 12 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನೇಶನ್​​
ಜೈಡಸ್​ ಕ್ಯಾಡಿಲಾ ಕಂಪನಿ
TV9 Web
| Edited By: |

Updated on: Jun 28, 2021 | 9:54 AM

Share

ದೆಹಲಿ: ದೇಶದಲ್ಲಿ ಜುಲೈ ಅಂತ್ಯ ಅಥವಾ ಆಗಸ್ಟ್​ನಿಂದ 12-18ವರ್ಷದವರಿಗೆ ಕೊವಿಡ್​ 19 ಲಸಿಕೆ ನೀಡುವ ಅಭಿಯಾನ ಶುರುವಾಗಲಿದೆ ಎಂದು ಕೇಂದ್ರ ಸರ್ಕಾರ ಭಾನುವಾರ ತಿಳಿಸಿದೆ. ಜೈಡಸ್​ ಕ್ಯಾಡಿಲಾದ ಕೊರೊನಾ ಲಸಿಕೆ ಪ್ರಯೋಗ ಬಹುತೇಕ ಮುಕ್ತಾಯವಾಗಿದೆ. ಜುಲೈ ಅಂತ್ಯ ಅಥವಾ ಆಗಸ್ಟ್​​ನಿಂದ ಈ ಲಸಿಕೆಯನ್ನು 12-18ವರ್ಷದವರಿಗೆ ನೀಡಲು ಶುರು ಮಾಡುತ್ತೇವೆ ಎಂದು ಕೊವಿಡ್​-19 ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ (ಎನ್​​ಟಿಎಜಿಐ) ಮುಖ್ಯಸ್ಥ ಡಾ. ಎನ್​.ಕೆ.ಅರೋರಾ ತಿಳಿಸಿದ್ದಾರೆ.

ಸದ್ಯಕ್ಕೆ ದೇಶದಲ್ಲಿ 18ವರ್ಷ ಮೇಲ್ಪಟ್ಟವರಿಗೆ ಮಾತ್ರ ಕೊರೊನಾ ಲಸಿಕೆ ನೀಡಲಾಗುತ್ತಿದೆ. ದೇಶದಲ್ಲಿರುವ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆ ನೀಡುವ ಮೂಲಕ ಸೋಂಕನ್ನು ನಿಯಂತ್ರಣ ಮಾಡಲು ದಿನಕ್ಕೆ ಒಂದು ಕೋಟಿ ಡೋಸ್​​ಗಳಷ್ಟು ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಹೀಗೆ ದಿನಕ್ಕೆ ಒಂದು ಕೋಟಿ ಡೋಸ್ ಲಸಿಕೆ ನೀಡಿದರೆ ಏಳೆಂಟು ತಿಂಗಳಲ್ಲಿ ದೇಶದ ಪ್ರತಿಯೊಬ್ಬರಿಗೂ ಲಸಿಕೆ ಕೊಟ್ಟು ಮುಗಿಯಲಿದೆ. ಭಾರತದಲ್ಲಿ ಬಳಕೆಯಾಗುತ್ತಿರುವ ಎಲ್ಲ ಲಸಿಕೆಗಳೂ ಶೇ.95-96ರಷ್ಟು ಸುರಕ್ಷಿತವಾಗಿದ್ದು, ಯಾವುದೇ ರೂಮರ್​​ಗಳನ್ನೂ ನಂಬಬಾರದು ಎಂದು ತಿಳಿಸಿದ್ದಾರೆ.

ಮೂರನೇ ಅಲೆ ಇಷ್ಟು ಬೇಗ ಬರುವುದಿಲ್ಲ ಎಂದು ಐಸಿಎಂಆರ್​ (ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ) ಸಂಶೋಧನೆ ತಿಳಿಸಿದೆ. ಅದರಿಂದ ಜನರನ್ನು ರಕ್ಷಿಸಲು ಕೊವಿಡ್​ 19 ಲಸಿಕೆ ನೀಡುವುದೊಂದೇ ಮಾರ್ಗ. ಇನ್ನು ಆರರಿಂದ ಎಂಟು ತಿಂಗಳಲ್ಲಿ ಪ್ರತಿಯೊಬ್ಬರ ದೇಹದಲ್ಲೂ ರೋಗನಿರೋಧಕ ಶಕ್ತಿ ಬೆಳೆಸಬೇಕು. ಆದರೆ ಕೊರೊನಾ ಲಸಿಕೆ ಬಗ್ಗೆ ಒಂದಷ್ಟು ತಪ್ಪು ಕಲ್ಪನೆಗಳೂ ಹುಟ್ಟಿಕೊಂಡಿವೆ. ಇದರಿಂದ ಅಡ್ಡಪರಿಣಾಮಗಳಾಗುತ್ತವೆ..ಲಸಿಕೆ ಸುರಕ್ಷಿತವಲ್ಲ ಎಂಬಿತ್ಯಾದಿ ರೂಮರ್​ಗಳೂ ಹಬ್ಬಿವೆ. ಆದರೆ ಜನರು ಇದನ್ನೆಲ್ಲ ನಂಬದೆ, ಧೈರ್ಯದಿಂದ ಕೊರೊನಾ ಲಸಿಕೆ ಸ್ವೀಕರಿಸಬೇಕು ಎಂದಿದ್ದಾರೆ. ಕೊವಿಡ್​ 19 ಲಸಿಕೆ ಪಡೆದ ಶೇ.95-96ರಷ್ಟು ಜನರಲ್ಲಿ ಸಣ್ಣ ಜ್ವರ, ಮೈಕೈ ನೋವು ಕಾಣಿಸಿಕೊಳ್ಳುತ್ತಿದೆ. ಕೇವಲ 4-5 ಪರ್ಸಂಟ್​ ಜನರಿಗೆ ಮಾತ್ರ ಅಲರ್ಜಿ ಹೆಚ್ಚಾಗಿ ಆಸ್ಪತ್ರೆ ಸೇರುವ ಪರಿಸ್ಥಿತಿ ಎದುರಾಗುತ್ತಿದೆ. ಆದರೆ ಈ ವ್ಯಾಕ್ಸಿನ್​ಗಳು ಸುರಕ್ಷಿತವಾಗಿದ್ದು, ಹೆದರುವಂತಹ ಅವಶ್ಯಕತೆ ಇಲ್ಲ ಎಂದು ಅವರು ಪುನರುಚ್ಚರಿಸಿದ್ದಾರೆ.

ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ಸಲ್ಲಿಸಿದ ಅಫಿಡವಿಟ್​ನಲ್ಲಿ ಕೂಡ ಜೈಡಸ್​ ಕ್ಯಾಡಿಲಾ ಲಸಿಕೆಯ ಪ್ರಯೋಗ ಬಹುತೇಕ ಸಂಪೂರ್ಣವಾಗಿದೆ. ಅತಿ ಶೀಘ್ರದಲ್ಲೇ ಮಕ್ಕಳಿಗೆ ಇದನ್ನು ನೀಡಬಹುದಾಗಿದೆ. ಈ ಕಂಪನಿ ZyCoV-D ಎಂಬ ಹೆಸರಿನ ಲಸಿಕೆ ಅಭಿವೃದ್ಧಿ ಪಡಿಸಿದ್ದು, ಭಾರತದಲ್ಲಿ ತುರ್ತು ಸಂದರ್ಭದಲ್ಲಿ ಬಳಕೆ ಮಾಡಲು ಶೀಘ್ರದಲ್ಲೇ ಡಿಸಿಜಿಐ ಅನುಮೋದನೆ ನೀಡಲಿದೆ ಎಂದು ಹೇಳಿದೆ. ಹಾಗೇ ಈ ಲಸಿಕೆಯನ್ನು ಕೇವಲ ಮಕ್ಕಳಿಗೆ ಮಾತ್ರವಲ್ಲ ವಯಸ್ಕರಿಗೂ ನೀಡಬಹುದಾಗಿದೆ ಎಂದೂ ಕೇಂದ್ರ ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ’ಜೈಡಸ್ ಕ್ಯಾಡಿಲಾ ಕೊವಿಡ್​ 19 ಲಸಿಕೆ ಮಕ್ಕಳ ಮೇಲಿನ ಕ್ಲಿನಿಕಲ್​ ಪ್ರಯೋಗ ಮುಕ್ತಾಯ, ಶೀಘ್ರದಲ್ಲೇ ಬಳಕೆಗೆ ಲಭ್ಯ‘

Zydus Cadila Covid 19 vaccination to children will begin from July end or August

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ