Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಕೊವಿಡ್​ ಲಸಿಕೆ ಸಿದ್ಧ; ಜುಲೈ-ಅಗಸ್ಟ್​​ನಿಂದ 12 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನೇಶನ್​​

Zydus Cadila: ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ಸಲ್ಲಿಸಿದ ಅಫಿಡವಿಟ್​ನಲ್ಲಿ ಕೂಡ ಜೈಡಸ್​ ಕ್ಯಾಡಿಲಾ ಲಸಿಕೆಯ ಪ್ರಯೋಗ ಬಹುತೇಕ ಸಂಪೂರ್ಣವಾಗಿದೆ. ಈ ಕಂಪನಿ ZyCoV-D ಎಂಬ ಹೆಸರಿನ ಲಸಿಕೆ ಅಭಿವೃದ್ಧಿ ಪಡಿಸಿದ್ದು, ಭಾರತದಲ್ಲಿ ತುರ್ತು ಸಂದರ್ಭದಲ್ಲಿ ಬಳಕೆಗೆ ಲಭ್ಯವಾಗಲಿದೆ ಎಂದು ತಿಳಿಸಿದೆ.

ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಕೊವಿಡ್​ ಲಸಿಕೆ ಸಿದ್ಧ; ಜುಲೈ-ಅಗಸ್ಟ್​​ನಿಂದ 12 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನೇಶನ್​​
ಜೈಡಸ್​ ಕ್ಯಾಡಿಲಾ ಕಂಪನಿ
Follow us
TV9 Web
| Updated By: Lakshmi Hegde

Updated on: Jun 28, 2021 | 9:54 AM

ದೆಹಲಿ: ದೇಶದಲ್ಲಿ ಜುಲೈ ಅಂತ್ಯ ಅಥವಾ ಆಗಸ್ಟ್​ನಿಂದ 12-18ವರ್ಷದವರಿಗೆ ಕೊವಿಡ್​ 19 ಲಸಿಕೆ ನೀಡುವ ಅಭಿಯಾನ ಶುರುವಾಗಲಿದೆ ಎಂದು ಕೇಂದ್ರ ಸರ್ಕಾರ ಭಾನುವಾರ ತಿಳಿಸಿದೆ. ಜೈಡಸ್​ ಕ್ಯಾಡಿಲಾದ ಕೊರೊನಾ ಲಸಿಕೆ ಪ್ರಯೋಗ ಬಹುತೇಕ ಮುಕ್ತಾಯವಾಗಿದೆ. ಜುಲೈ ಅಂತ್ಯ ಅಥವಾ ಆಗಸ್ಟ್​​ನಿಂದ ಈ ಲಸಿಕೆಯನ್ನು 12-18ವರ್ಷದವರಿಗೆ ನೀಡಲು ಶುರು ಮಾಡುತ್ತೇವೆ ಎಂದು ಕೊವಿಡ್​-19 ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ (ಎನ್​​ಟಿಎಜಿಐ) ಮುಖ್ಯಸ್ಥ ಡಾ. ಎನ್​.ಕೆ.ಅರೋರಾ ತಿಳಿಸಿದ್ದಾರೆ.

ಸದ್ಯಕ್ಕೆ ದೇಶದಲ್ಲಿ 18ವರ್ಷ ಮೇಲ್ಪಟ್ಟವರಿಗೆ ಮಾತ್ರ ಕೊರೊನಾ ಲಸಿಕೆ ನೀಡಲಾಗುತ್ತಿದೆ. ದೇಶದಲ್ಲಿರುವ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆ ನೀಡುವ ಮೂಲಕ ಸೋಂಕನ್ನು ನಿಯಂತ್ರಣ ಮಾಡಲು ದಿನಕ್ಕೆ ಒಂದು ಕೋಟಿ ಡೋಸ್​​ಗಳಷ್ಟು ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಹೀಗೆ ದಿನಕ್ಕೆ ಒಂದು ಕೋಟಿ ಡೋಸ್ ಲಸಿಕೆ ನೀಡಿದರೆ ಏಳೆಂಟು ತಿಂಗಳಲ್ಲಿ ದೇಶದ ಪ್ರತಿಯೊಬ್ಬರಿಗೂ ಲಸಿಕೆ ಕೊಟ್ಟು ಮುಗಿಯಲಿದೆ. ಭಾರತದಲ್ಲಿ ಬಳಕೆಯಾಗುತ್ತಿರುವ ಎಲ್ಲ ಲಸಿಕೆಗಳೂ ಶೇ.95-96ರಷ್ಟು ಸುರಕ್ಷಿತವಾಗಿದ್ದು, ಯಾವುದೇ ರೂಮರ್​​ಗಳನ್ನೂ ನಂಬಬಾರದು ಎಂದು ತಿಳಿಸಿದ್ದಾರೆ.

ಮೂರನೇ ಅಲೆ ಇಷ್ಟು ಬೇಗ ಬರುವುದಿಲ್ಲ ಎಂದು ಐಸಿಎಂಆರ್​ (ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ) ಸಂಶೋಧನೆ ತಿಳಿಸಿದೆ. ಅದರಿಂದ ಜನರನ್ನು ರಕ್ಷಿಸಲು ಕೊವಿಡ್​ 19 ಲಸಿಕೆ ನೀಡುವುದೊಂದೇ ಮಾರ್ಗ. ಇನ್ನು ಆರರಿಂದ ಎಂಟು ತಿಂಗಳಲ್ಲಿ ಪ್ರತಿಯೊಬ್ಬರ ದೇಹದಲ್ಲೂ ರೋಗನಿರೋಧಕ ಶಕ್ತಿ ಬೆಳೆಸಬೇಕು. ಆದರೆ ಕೊರೊನಾ ಲಸಿಕೆ ಬಗ್ಗೆ ಒಂದಷ್ಟು ತಪ್ಪು ಕಲ್ಪನೆಗಳೂ ಹುಟ್ಟಿಕೊಂಡಿವೆ. ಇದರಿಂದ ಅಡ್ಡಪರಿಣಾಮಗಳಾಗುತ್ತವೆ..ಲಸಿಕೆ ಸುರಕ್ಷಿತವಲ್ಲ ಎಂಬಿತ್ಯಾದಿ ರೂಮರ್​ಗಳೂ ಹಬ್ಬಿವೆ. ಆದರೆ ಜನರು ಇದನ್ನೆಲ್ಲ ನಂಬದೆ, ಧೈರ್ಯದಿಂದ ಕೊರೊನಾ ಲಸಿಕೆ ಸ್ವೀಕರಿಸಬೇಕು ಎಂದಿದ್ದಾರೆ. ಕೊವಿಡ್​ 19 ಲಸಿಕೆ ಪಡೆದ ಶೇ.95-96ರಷ್ಟು ಜನರಲ್ಲಿ ಸಣ್ಣ ಜ್ವರ, ಮೈಕೈ ನೋವು ಕಾಣಿಸಿಕೊಳ್ಳುತ್ತಿದೆ. ಕೇವಲ 4-5 ಪರ್ಸಂಟ್​ ಜನರಿಗೆ ಮಾತ್ರ ಅಲರ್ಜಿ ಹೆಚ್ಚಾಗಿ ಆಸ್ಪತ್ರೆ ಸೇರುವ ಪರಿಸ್ಥಿತಿ ಎದುರಾಗುತ್ತಿದೆ. ಆದರೆ ಈ ವ್ಯಾಕ್ಸಿನ್​ಗಳು ಸುರಕ್ಷಿತವಾಗಿದ್ದು, ಹೆದರುವಂತಹ ಅವಶ್ಯಕತೆ ಇಲ್ಲ ಎಂದು ಅವರು ಪುನರುಚ್ಚರಿಸಿದ್ದಾರೆ.

ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್​ಗೆ ಸಲ್ಲಿಸಿದ ಅಫಿಡವಿಟ್​ನಲ್ಲಿ ಕೂಡ ಜೈಡಸ್​ ಕ್ಯಾಡಿಲಾ ಲಸಿಕೆಯ ಪ್ರಯೋಗ ಬಹುತೇಕ ಸಂಪೂರ್ಣವಾಗಿದೆ. ಅತಿ ಶೀಘ್ರದಲ್ಲೇ ಮಕ್ಕಳಿಗೆ ಇದನ್ನು ನೀಡಬಹುದಾಗಿದೆ. ಈ ಕಂಪನಿ ZyCoV-D ಎಂಬ ಹೆಸರಿನ ಲಸಿಕೆ ಅಭಿವೃದ್ಧಿ ಪಡಿಸಿದ್ದು, ಭಾರತದಲ್ಲಿ ತುರ್ತು ಸಂದರ್ಭದಲ್ಲಿ ಬಳಕೆ ಮಾಡಲು ಶೀಘ್ರದಲ್ಲೇ ಡಿಸಿಜಿಐ ಅನುಮೋದನೆ ನೀಡಲಿದೆ ಎಂದು ಹೇಳಿದೆ. ಹಾಗೇ ಈ ಲಸಿಕೆಯನ್ನು ಕೇವಲ ಮಕ್ಕಳಿಗೆ ಮಾತ್ರವಲ್ಲ ವಯಸ್ಕರಿಗೂ ನೀಡಬಹುದಾಗಿದೆ ಎಂದೂ ಕೇಂದ್ರ ಸರ್ಕಾರ ತಿಳಿಸಿದೆ.

ಇದನ್ನೂ ಓದಿ: ’ಜೈಡಸ್ ಕ್ಯಾಡಿಲಾ ಕೊವಿಡ್​ 19 ಲಸಿಕೆ ಮಕ್ಕಳ ಮೇಲಿನ ಕ್ಲಿನಿಕಲ್​ ಪ್ರಯೋಗ ಮುಕ್ತಾಯ, ಶೀಘ್ರದಲ್ಲೇ ಬಳಕೆಗೆ ಲಭ್ಯ‘

Zydus Cadila Covid 19 vaccination to children will begin from July end or August

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ